Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೈವಾರಾಧನೆ ಪವಿತ್ರವಾದದ್ದು.. ಅದನ್ನು ಅಪಹಾಸ್ಯ ಮಾಡಬೇಡಿ: ಪ್ರೇಕ್ಷಕರಿಗೆ ಹೊಂಬಾಳೆ ಫಿಲ್ಮ್ಸ್‌ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ದೈವಾರಾಧನೆ ಪವಿತ್ರವಾದದ್ದು.. ಅದನ್ನು ಅಪಹಾಸ್ಯ ಮಾಡಬೇಡಿ: ಪ್ರೇಕ್ಷಕರಿಗೆ ಹೊಂಬಾಳೆ ಫಿಲ್ಮ್ಸ್‌ ಮನವಿ

Cinema

ದೈವಾರಾಧನೆ ಪವಿತ್ರವಾದದ್ದು.. ಅದನ್ನು ಅಪಹಾಸ್ಯ ಮಾಡಬೇಡಿ: ಪ್ರೇಕ್ಷಕರಿಗೆ ಹೊಂಬಾಳೆ ಫಿಲ್ಮ್ಸ್‌ ಮನವಿ

Public TV
Last updated: October 7, 2025 7:35 pm
Public TV
Share
2 Min Read
kantara chapter 1 3
SHARE

– ಕಾಂತಾರ ಚಾಪ್ಟರ್‌ 1 ವೀಕ್ಷಣೆ ವೇಳೆ ಅಭಿಮಾನಿಗಳ ಹುಚ್ಚಾಟಕ್ಕೆ ಬೇಸರ

ದೈವಾರಾಧನೆ ಅತ್ಯಂತ ಪವಿತ್ರವಾದ ಆಧ್ಯಾತ್ಮಿಕ ಸಂಪ್ರದಾಯ. ಅದನ್ನು ಹಾಸ್ಯಾಸ್ಪದವಾಗಿ ಅಣಕು ಪ್ರದರ್ಶನ ಮಾಡಬೇಡಿ ಎಂದು ‘ಕಾಂತಾರ ಚಾಪ್ಟರ್‌ 1’ ಸಿನಿಮಾ ಪ್ರೇಕ್ಷಕರಲ್ಲಿ ಹೊಂಬಾಳೆ ಫಿಲ್ಮ್ಸ್‌ ಮನವಿ ಮಾಡಿಕೊಂಡಿದೆ.

ಕಾಂತಾರ ಚಾಪ್ಟರ್‌ 1 ಸಿನಿಮಾ ಥಿಯೇಟರ್‌ಗಳಲ್ಲಿ ಕೆಲ ಪ್ರೇಕ್ಷಕರ ಅನುಚಿತ ವರ್ತನೆಗೆ ಹೊಂಬಾಳೆ ಫಿಲ್ಮ್ಸ್‌ ಬೇಸರ ವ್ಯಕ್ತಪಡಿಸಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದೆ.

 

View this post on Instagram

 

A post shared by Hombale Films (@hombalefilms)

ಪೋಸ್ಟ್‌ನಲ್ಲಿ ಏನಿದೆ?
‘ತುಳುನಾಡಿನ ಸಂಸ್ಕೃತಿಯ ಪ್ರೌಢತೆಯ ಸಂಕೇತವಾದ ದೈವಾರಾಧನೆ ನಮ್ಮ ನಂಬಿಕೆ, ಭಕ್ತಿ ಹಾಗೂ ತಾಯ್ನಾಡಿನ ಹೆಮ್ಮೆಯ ಪ್ರತಿರೂಪವಾಗಿದೆ. ಕಾಂತಾರ ಮತ್ತು ಕಾಂತಾರ ಚಾಪ್ಟರ್‌ 1 ಚಿತ್ರಗಳನ್ನು ನಾವು ಗೌರವದೊಂದಿಗೆ ದೈವಗಳ ಮಹಿಮೆಯನ್ನು ಕೊಂಡಾಡುವ ಸದುದ್ದೇಶದಿಂದ ನಿರ್ಮಿಸಿದ್ದೇವೆ. ದೈವಾರಾಧನೆ ಗೌರವ ಹಾಗೂ ಅಚಲ ಭಕ್ತಿಯನ್ನು ಉಳಿಸಿಕೊಳ್ಳುವ ಸಲುವಾಗಿ ನಾವು ಶ್ರಮಪಟ್ಟು ಕೆಲಸ ಮಾಡಿದ್ದೇವೆ. ಇದರೊಂದಿಗೆ ತುಳುನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಮಹತ್ವವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾರಿ ಯಶಸ್ವಿಯಾಗಿದ್ದೇವೆ. ಪ್ರೇಕ್ಷಕರಿಂದ ಬಂದಿರುವ ಅಪಾರವಾದ ಪ್ರೀತಿಗೆ ಹಾಗೂ ಪ್ರೋತ್ಸಾಹಕ್ಕೆ ನಾವು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ.

ಆದಾಗ್ಯೂ, ಇತ್ತೀಚೆಗೆ ಕೆಲವು ಜನರು ಚಿತ್ರದಲ್ಲಿ ತೋರಿಸಿದ ದೈವಪಾತ್ರಗಳನ್ನು ಅನುಕರಿಸುತ್ತಾ, ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಕಾರ್ಯಕ್ರಮಗಳಲ್ಲಿ ಅಸಭ್ಯ ರೀತಿಯಲ್ಲಿ ವರ್ತಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಚಿತ್ರಗಳಲ್ಲಿ ತೋರಿಸಲಾದ ದೈವಾರಾಧನೆ ಅಥವಾ ದೈವಪೂಜೆ ಅತ್ಯಂತ ಪವಿತ್ರವಾದ ಆಧ್ಯಾತ್ಮಿಕ ಸಂಪ್ರದಾಯಕ್ಕೆ ಆಧಾರಿತವಾಗಿದೆ. ಇದನ್ನು ಹಾಸ್ಯಾಸ್ಪದವಾಗಿ ಅಣುಕು ಪ್ರದರ್ಶನ ಮಾಡುವಂತಿಲ್ಲ. ಇಂತಹ ಕೃತ್ಯಗಳು ನಮ್ಮ ನಂಬಿಕೆ ಮತ್ತು ಧಾರ್ಮಿಕ ಸಂವೇದನೆಯನ್ನು ಹೀನಗೊಳಿಸುತ್ತವೆ ಮತ್ತು ತುಳುನಾಡಿನ ಜನರ ಭಾವನೆಗಳಿಗೆ ತೀವ್ರ ನೋವುಂಟು ಮಾಡುತ್ತವೆ.

ಆದ್ದರಿಂದ, ಹೊಂಬಾಳೆ ಫಿಲ್ಮ್ಸ್‌, ಜನತೆ ಹಾಗೂ ಪ್ರೇಕ್ಷಕರಿಗೆ ಮನವಿ ಮಾಡಿಕೊಳ್ಳುತ್ತದೆ. ದೈವಪಾತ್ರಗಳನ್ನು ಅನುಕರಿಸುವುದು, ಧ್ವನಿಯನ್ನು ಹೋಲುವುದು ಅಥವಾ ಅವರ ರೂಪ-ವೇಷಧಾರಣೆ ಮಾಡುವುದು ಸೇರಿದಂತೆ ಯಾವುದೇ ರೀತಿಯ ಕೃತ್ಯಗಳಿಂದ ದೂರವಿರಿ. ಇದನ್ನು ಚಿತ್ರಮಂದಿರಗಳಲ್ಲಿ ಆಗಲಿ, ಸಾರ್ವಜನಿಕ ಸ್ಥಳಗಳಲ್ಲಿ ಆಗಲಿ ಎಲ್ಲೂ ಮಾಡುವಂತಿಲ್ಲ. ದೈವಾರಾಧನೆಯ ಪವಿತ್ರತೆಯನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ಆರಾಧನೆಯ ಆಧ್ಯಾತ್ಮಿಕ ಮಹತ್ವವನ್ನು ಎಲ್ಲರೂ ಗುರುತಿಸಿ, ಗೌರವದಿಂದ ನಡೆದುಕೊಳ್ಳಬೇಕು. ನಮ್ಮ ಚಿತ್ರಗಳ ಮೂಲಕ ನಾವು ಸಂಭ್ರಮಿಸಿದ ನಂಬಿಕೆಯನ್ನು ಯಾವುದೇ ಸಂದರ್ಭದಲ್ಲಿ ಹಾಸ್ಯಾಸ್ಪದವಾಗಲು ಅವಕಾಶ ನೀಡಬಾರದು. ಈ ಅಮೂಲ್ಯ ಸಾಂಸ್ಕೃತಿಕ ಪರಂಪರೆಯ ಪವಿತ್ರತೆಯನ್ನು ಕಾಪಾಡಲು ನೀವು ನೀಡುತ್ತಿರುವ ನಿರಂತರ ಪ್ರೋತ್ಸಾಹ ಮತ್ತು ಸಹಕಾರಕ್ಕೆ ನಮ್ಮ ಹೃತ್ಪೂರ್ವಕ ಧನ್ಯವಾದಗಳು’ ಎಂದು ಹೊಂಬಾಳೆ ಫಿಲ್ಮ್ಸ್‌ ಮನವಿ ಮಾಡಿಕೊಂಡಿದೆ.

ದೇಶ-ವಿದೇಶಗಳಲ್ಲಿ ಅ.2 ರಂದು ರಿಲೀಸ್‌ ಆದ ಕಾಂತಾರ ಚಾಪ್ಟರ್‌ 1 ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಎಲ್ಲೆಡೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್‌ ಸಿಗುತ್ತಿದೆ. ಸಿನಿಮಾ ನೋಡಿ ಕೆಲ ಪ್ರೇಕ್ಷಕರು ಭಾವೋದ್ವೇಗಕ್ಕೆ ಒಳಗಾಗಿ, ದೈವದಂತೆ ನರ್ತಿಸುವುದು, ಕೂಗುವುದು.. ಹೀಗೆ ಹಾಸ್ಯಾಸ್ಪದ ರೀತಿಯಲ್ಲಿ ಅಣಕು ಪ್ರದರ್ಶನ ಮಾಡುತ್ತಿದ್ದಾರೆ. ಇದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ದೈವಗಳ ವಿಚಾರವಾಗಿ ಹೀಗೆ ಹುಚ್ಚಾಟ ಮಾಡುವವರಿಗೆ ಬುದ್ಧಿ ಹೇಳಿ ಎಂದು ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರಿಗೆ ತುಳುಕೂಟ ಪತ್ರ ಬರೆದಿತ್ತು. ಅದರಂತೆ ಹೊಂಬಾಳೆ ಫಿಲ್ಮ್ಸ್‌ ಪೋಸ್ಟ್‌ವೊಂದನ್ನು ಹಂಚಿಕೊಂಡಿದೆ.

TAGGED:daivaDhaivaradhaneHombale FilmsKantara Chapter 1rishab shettyಕಾಂತಾರ ಚಾಪ್ಟರ್ 1ದೈವದೈವಾರಾಧನೆರಿಷಬ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
8 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
1 hour ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
1 hour ago
Illicit Relations
Bengaluru City

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Public TV
By Public TV
2 hours ago
Auto Gas
Bengaluru City

ಗ್ಯಾಸ್ ಅಭಾವದಿಂದ ನಲುಗಿದ ಆಟೋ ಚಾಲಕರು – ಸಚಿವ ಮುನಿಯಪ್ಪ ಮನೆಗೆ ಮುತ್ತಿಗೆ.. ಮನವಿ

Public TV
By Public TV
2 hours ago
America China AI
Latest

ಯುಎಸ್ ಸೇನೆ ಮಾಹಿತಿ ಇರಾನ್‌ಗೆ ಮಾರಿದ ಚೀನಾ: ಅಮೆರಿಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?