ಚಿತ್ರರಂಗದ ದಶದಿಕ್ಕುಗಳಲ್ಲೂ ಸೌಂಡ್ ಸಿನಿಮಾ ಅಂದ್ರೆ `ಕಾಂತಾರ’ (Kantara Film) ಚಿತ್ರ. ರಿಷಬ್ ಶೆಟ್ಟಿ (Rishab Shetty) ನಿರ್ದೇಶನಕ್ಕೆ, ನಟನೆಗೆ ಇಡೀ ಭಾರತೀಯ ಚಿತ್ರರಂಗವೇ ಸಲಾಮ್ ಹೊಡೆದಿದೆ. ಸಿನಿಪ್ರೇಮಿಗಳು `ಕಾಂತಾರ’ (Kantara) ಸಿನಿಮಾವನ್ನ ನೋಡಿ, ಖುಷಿಪಟ್ಟಿದ್ದಾರೆ. ದಿನದಿಂದ ದಿನಕ್ಕೆ ಈ ಚಿತ್ರದ ಬಗ್ಗೆ ಕ್ರೇಜ್ ಕೂಡ ಹೆಚ್ಚಾಗುತ್ತಿದ್ದು, ಇದೀಗ ಪಕ್ಕದ ರಾಜ್ಯ ಆಂಧ್ರಪ್ರದೇಶದಲ್ಲಿ ತಹಶೀಲ್ದಾರ್ ಕಾಂತಾರ ದೈವದ ಗೆಟಪ್ ಹಾಕುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಕಾಂತಾರ ಚಿತ್ರಕ್ಕೆ ಕನ್ನಡ ಸಿನಿಪ್ರೇಕ್ಷಕರು ಮಾತ್ರವಲ್ಲ ದೇಶ ವಿದೇಶದಲ್ಲೂ ಚಿತ್ರಕ್ಕೆ ಸಖತ್ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪಕ್ಕದ ರಾಜ್ಯ ತೆಲುಗು ನಾಡಿನಲ್ಲೂ `ಕಾಂತಾರ’ ಹವಾ ಜೋರಾಗಿದೆ.ಇದಕ್ಕೆ ತಾಜಾ ಉದಾಹರಣೆ, ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ತಹಶೀಲ್ದಾರ್ `ಕಾಂತಾರ’ ದೈವದ ಗೆಟಪ್ ಹಾಕುವ ಮೂಲಕ ನೋಡುಗರ ಗಮನ ಸೆಳೆದಿದ್ದಾರೆ.
ಗುಂಟೂರಿನ ನಾಗಾರ್ಜುನ ಯೂನಿವರ್ಸಿಟಿಯಲ್ಲಿ ಆಂಧ್ರ ಪ್ರದೇಶ ತೆರಿಗೆ ಇಲಾಖೆಯ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಇದರಲ್ಲಿ ಹಲವು ಅಧಿಕಾರಿಗಳು ಭಾಗಿ ಆಗಿದ್ದರು. ಈ ವೇಳೆ ವಿಜಯನಗರಂ ಜಿಲ್ಲೆಯ ತಹಶೀಲ್ದಾರ್ ಪ್ರಸಾದ್ ರಾವ್ ಅವರು ಕನ್ನಡದ ಕಾಂತಾರ ಸಿನಿಮಾದ ಗೆಟಪ್ನಲ್ಲಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿದರು. ಪ್ರಸಾದ್ ರಾವ್ ಅವತಾರ ಕಂಡು ಅಲ್ಲಿದ್ದ ಎಲ್ಲರಿಗೂ ಅಚ್ಚರಿ ಪಟ್ಟರು. ವೇಷ ಮಾತ್ರವಲ್ಲದೇ ಅವರು `ಕಾಂತಾರ’ ಚಿತ್ರದ ಡೈಲಾಗ್ ಕೂಡ ಹೇಳಿ ಗಮನ ಸೆಳೆದರು. ಇದನ್ನೂ ಓದಿ:ಸಾರಾ ಜೊತೆಗಿನ ಡೇಟಿಂಗ್ ಬಗ್ಗೆ ಸ್ಪಷ್ಟನೆ ನೀಡಿದ ಕ್ರಿಕೆಟಿಗ ಶುಭಮನ್ ಗಿಲ್
ತಹಶೀಲ್ದಾರ್ ಪ್ರಸಾದ್ ರಾವ್ ಅವರಿಗೆ ಕಲೆಯಲ್ಲಿ ಹೆಚ್ಚು ಆಸಕ್ತಿ. ಹಾಗಾಗಿ ಇತ್ತೀಚೆಗೆ ವೈರಲ್ ಆಗಿರುವ ಕಾಂತಾರ ಸಿನಿಮಾದ ವೇಷ ಹಾಕಿ ಬಂದಿದ್ದರು. ಅವರನ್ನು ನೋಡಿ ಜಿಲ್ಲಾಧಿಕಾರಿಗೂ ಅಚ್ಚರಿಯಾಗಿದ್ದಲ್ಲದೇ ತಹಶೀಲ್ದಾರ್ ಜೊತೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲೂ ಸದ್ದು ಮಾಡುತ್ತಿದೆ.