`ಕಾಂತಾರ'(Kantara) ಸೂಪರ್ ಸಕ್ಸಸ್ ನಂತರ ನಾಯಕಿ ಸಪ್ತಮಿ ಗೌಡ ಕೂಡ ಫುಲ್ ಬ್ಯುಸಿಯಾಗಿದ್ದಾರೆ. ಪ್ಯಾನ್ ಇಂಡಿಯಾದ ಸ್ಟಾರ್ ನಾಯಕಿಯಾಗಿ ಮಿಂಚ್ತಿರುವ ಸಪ್ತಮಿ(Saptami Gowda) ಇದೀಗ ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ತಾಯಿ ಜೊತೆ ಭೇಟಿ ನೀಡಿದ್ದಾರೆ.
ಕನ್ನಡದ `ಕಾಂತಾರ’ ಈಗ ಗಡಿ ದಾಟಿ ಸೂಪರ್ ಸಕ್ಸಸ್ ಕಂಡಿದೆ. ಕಾಂತಾರ ಚಿತ್ರದ ಪ್ರತಿ ಕಲಾವಿದರಿಗೂ ಈಗ ಬೇಡಿಕೆ ಜಾಸ್ತಿಯಾಗಿದೆ. ಅದರಂತೆ ಚಿತ್ರದ ನಾಯಕಿ ಸಪ್ತಮಿ ಗೌಡ ಅವರಿಗೂ ಕೂಡ. ಚಿತ್ರದ ಸಕ್ಸಸ್ ನಂತರ ದೈವಿ ಕ್ಷೇತ್ರಗಳಿಗೆ ನಟಿ ಭೇಟಿ ನೀಡುತ್ತಿದ್ದಾರೆ. ಕೊರಗಜ್ಜ, ಗುಳಿಗ ಸನ್ನಿಧಿಗೆ ಭೇಟಿಯ ನಂತರ ಇದೀಗ ಕಟೀಲು ದರ್ಗಾ ಪರಮೇಶ್ವರಿ(Kateel Durga Parameshwari Temple) ಸನ್ನಿಧಿಗೆ ನಟಿ ಭೇಟಿ ನೀಡಿದ್ದಾರೆ.
ಈ ವೇಳೆ ಸಪ್ತಮಿ ತನ್ನ ತಾಯಿ ಜೊತೆ, ಕಟೀಲು ದುರ್ಗಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವರ ವಿಶೇಷ ವಸ್ತ್ರ ನೀಡಿ, ದವಳದ ಅರ್ಚಕರು ಗೌರವಿಸಿದ್ದಾರೆ. ಹಾಗೆಯೇ ಮಾಧ್ಯಮಕ್ಕೆ ನಟಿ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಸಾಕು ನಾಯಿ ನಿಧನಕ್ಕೆ ಕಂಬನಿ ಮಿಡಿದ ಅಮಿತಾಭ್ ಬಚ್ಚನ್
ʻಕಾಂತಾರʼ ಚಿತ್ರದ ಯಶಸ್ಸಿನ ಬಗ್ಗೆ ಹೆಮ್ಮೆ ಇದೆ. ತುಳುನಾಡಿನ ದೈವರಾಧನೆ ಬಗ್ಗೆ ಮೊದಲು ನನಗೆ ತಿಳಿದಿರಲಿಲ್ಲ. ಕಾಂತಾರ ಚಿತ್ರೀಕರಣದ ವೇಳೆ ಈ ಬಗ್ಗೆ ತಿಳಿದುಕೊಂಡೆ. ಇನ್ನೂ ಬೇರೆ ಬೇರೇ ಸಿನಿಮಾಗಳ ಮಾತುಕಥೆ ನಡೆಯುತ್ತಿದೆ. ಇನ್ನೂ ತುಳು ಭಾಷೆಯಲ್ಲೂ ನಟಿಸಲು ಅವಕಾಶ ಸಿಕ್ಕರೆ ಖಂಡಿತಾ ನಟಿಸುವೆ ಎಂದು ಸಪ್ತಮಿ ಮಾತನಾಡಿದ್ದಾರೆ. ಅಭಿಮಾನಿಗಳು ಈ ವೇಳೆ ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.