Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕನ್ನಡಿಗನ ಪರ ಬ್ಯಾಟ್ ಬೀಸಿ, ಮ್ಯಾನೇಜ್‍ಮೆಂಟ್ ವಿರುದ್ಧ ಕಿಡಿಕಾರಿದ ಕಪಿಲ್ ದೇವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಕನ್ನಡಿಗನ ಪರ ಬ್ಯಾಟ್ ಬೀಸಿ, ಮ್ಯಾನೇಜ್‍ಮೆಂಟ್ ವಿರುದ್ಧ ಕಿಡಿಕಾರಿದ ಕಪಿಲ್ ದೇವ್

Cricket

ಕನ್ನಡಿಗನ ಪರ ಬ್ಯಾಟ್ ಬೀಸಿ, ಮ್ಯಾನೇಜ್‍ಮೆಂಟ್ ವಿರುದ್ಧ ಕಿಡಿಕಾರಿದ ಕಪಿಲ್ ದೇವ್

Public TV
Last updated: February 25, 2020 5:36 pm
Public TV
Share
2 Min Read
Kapil Dev KL Rahul
SHARE

– ‘ರಾಹುಲ್ ತಂಡದಿಂದ ಹೊರಗಿರುವುದರಲ್ಲಿ ಅರ್ಥವೇ ಇಲ್ಲ’

ನವದೆಹಲಿ: ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿ ಸಖತ್ ಮಿಂಚಿದ್ದಾರೆ. ಆದರೆ ಈಗ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರನ್ನು ಕೈಬಿಟ್ಟಿದ್ದಕ್ಕೆ ಮಾಜಿ ಕ್ರಿಕೆಟರ್ ಕಪಿಲ್ ದೇವ್ ಟೀಂ ಇಂಡಿಯಾ ಮ್ಯಾನೇಜ್‍ಮೆಂಟ್ ವಿರುದ್ಧ ಕಿಡಿಕಾರಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ವೆಲ್ಲಿಂಗ್ಟನ್‍ನಲ್ಲಿ ನಡೆದ ಮೊದಲ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಬಳಗವು ಸೋಮವಾರ 10 ವಿಕೆಟ್‍ಗಳಿಂದ ಸೋಲು ಕಂಡಿದೆ. ಈ ಪಂದ್ಯದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕಪಿಲ್ ದೇವ್, ಟೀಂ ಇಂಡಿಯಾವನ್ನು ಟೀಕಿಸಿದರು. ಇದನ್ನೂ ಓದಿ: ಕೆ.ಎಲ್.ರಾಹುಲ್ ‘360 ಡಿಗ್ರಿ’ ಬ್ಯಾಟ್ಸ್‌ಮನ್‌: ಮಂಜ್ರೇಕರ್

Team India pink ball Test

ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ ಕಪಿಲ್ ದೇವ್, “ನಾವು ನ್ಯೂಜಿಲೆಂಡ್ ತಂಡವನ್ನು ಹೊಗಳಬೇಕು. ಕಿವೀಸ್ ಆಟಗಾರರ ಉತ್ತಮ ಆಟವಾಡಿದ್ದಾರೆ. ಮೂರು ಏಕದಿನ ಪಂದ್ಯಗಳು ಮತ್ತು ಈ ಟೆಸ್ಟ್ ಪಂದ್ಯವು ಅತ್ಯುತ್ತಮವಾಗಿದ್ದವು. ಈ ಪಂದ್ಯವನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಿದರೆ, ಒಬ್ಬ ಆಟಗಾರ ಎಷ್ಟು ಬದಲಾವಣೆಗೆ ಒಳಗಾಗಬಹುದು ಎನ್ನುವುದು ನನಗೆ ಅರ್ಥವಾಗುತ್ತಿಲ್ಲ. ಟೀಂ ಇಂಡಿಯಾ ಪ್ರತಿಯೊಂದು ಪಂದ್ಯದಲ್ಲೂ ಹೊಸ ತಂಡವಾಗಿತ್ತು. ತಂಡದಲ್ಲಿ ಯಾರೂ ಶಾಶ್ವತವಲ್ಲ ಎನ್ನುವಂತಿತ್ತು. ಆಟಗಾಗರ ಕ್ರಮಾಂಕ, ಜವಾಬ್ದಾರಿ ಮೇಲೆ ಯಾವುದೇ ಭದ್ರತೆ ಇಲ್ಲದಿದ್ದರೆ ಅದು ಅವರ ಸ್ವರೂಪದ ಮೇಲೆ ಪರಿಣಾಮ ಬೀರುತ್ತದೆ” ಎಂದು ಅಭಿಪ್ರಾಯಪಟ್ಟರು.

ಬ್ಯಾಟಿಂಗ್ ಕ್ರಮದಲ್ಲಿ ಅನುಭವಿ ಆಟಗಾರರ ದೊಡ್ಡ ಪಟ್ಟಿಯೇ ಇದೆ. ಆದರೂ ನೀವು 2 ಇನ್ನಿಂಗ್ಸ್ ಗಳಲ್ಲಿ ಒಂದು ಬಾರಿಯೂ 200+ ರನ್ ಗಳಿಸಲು ಸಾಧ್ಯವಾಗಲಿಲ್ಲ. ಯೋಜನೆ ಮತ್ತು ಕಾರ್ಯತಂತ್ರದ ಬಗ್ಗೆ ವಿರಾಟ್ ಕೊಹ್ಲಿ ಹಾಗೂ ಮ್ಯಾನೇಜ್‍ಮೆಂಟ್ ಹೆಚ್ಚು ಗಮನ ಹರಿಸಬೇಕು ಎಂದು ಕಪಿಲ್ ದೇವ್ ಸಲಹೆ ನೀಡಿದರು. ಇದನ್ನೂ ಓದಿ: ‘ಬೇಡ ಮಗಾ ಬೇಡ, ನಾರ್ಮಲ್ ಆಡು’- ಕಿವೀಸ್ ನೆಲದಲ್ಲಿ ಕನ್ನಡ ಡಿಂಡಿಮ

kapil dev A

ನನಗೆ ಒಂದು ವಿಚಾರ ಅರ್ಥವಾಗುತ್ತಿಲ್ಲ. ನಾವು ಆಡುತ್ತಿದ್ದಾಗ ಹಾಗೂ ಈಗ ಏನಾಗುತ್ತಿದೆ ಎಂಬುದರ ನಡುವೆ ಸಾಕಷ್ಟು ವ್ಯತ್ಯಾಸವಿದೆ. ತಂಡವನ್ನು ನಿರ್ಮಿಸುವಾಗ ಆಟಗಾರರಿಗೆ ಆತ್ಮವಿಶ್ವಾಸವನ್ನು ನೀಡಬೇಕು. ಮ್ಯಾನೇಜ್‍ಮೆಂಟ್ ನಿರ್ದಿಷ್ಟ ಆಟಗಾರರನ್ನು ನಂಬುತ್ತದೆ. ಕೆ.ಎಲ್.ರಾಹುಲ್ ಉತ್ತಮ ಫಾರ್ಮ್ ನಲ್ಲಿದ್ದಾರೆ. ಆದರೂ ಅವರು ಹೊರಗೆ ಕುಳಿತಿದ್ದಾರೆ. ಈ ನಿರ್ಧಾರವೇ ನನಗೆ ಅರ್ಥವಾಗುವುದಿಲ್ಲ. ಆಟಗಾರ ಫಾರ್ಮ್ ನಲ್ಲಿದ್ದಾಗ ಆಡಬೇಕಾಗುತ್ತದೆ ಎಂದು ನಾನು ನಂಬುತ್ತೇನೆ. ಕೆ.ಎಲ್.ರಾಹುಲ್ ಅವರನ್ನು ತಂಡದಿಂದ ಹೊರಗಿಡುವುದರಲ್ಲಿ ಅರ್ಥವೇ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಕೆಎಲ್ ಅಂದ್ರೆ ಖಡಕ್ ಲಡ್ಕಾ- ರಾಹುಲ್‍ರನ್ನ ಹೊಗಳಿದ ಸೆಹ್ವಾಗ್

ಐದು ಪಂದ್ಯಗಳ ಟಿ20 ಸರಣಿಯಲ್ಲಿ ನ್ಯೂಜಿಲೆಂಡ್ ಸಂಪೂರ್ಣವಾಗಿ ವೈಟ್‍ವಾಶ್ ಆಗಿತ್ತು. ಆದಾಗ್ಯೂ, ಬಲವಾದ ಪುನರಾಗಮನವನ್ನು ಮಾಡಿದ ಕಿವೀಸ್ ಪಡೆ, ಏಕದಿನ ಸರಣಿಯ ಮೂರೂ ಪಂದ್ಯಗಳನ್ನು ಗೆದ್ದಿತ್ತು. ಈಗ ಎರಡು ಟೆಸ್ಟ್ ಸರಣಿಯಲ್ಲಿ ಮೊದಲ ಟೆಸ್ಟ್ ಪಂದ್ಯ ಗೆದ್ದು ಬೀಗಿದೆ.

Team India Main 2

ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರನ್ನು ಹೊಂದಿರುವ ಟೀಂ ಇಂಡಿಯಾ ವೆಲ್ಲಿಗ್ಟನ್ ನಲ್ಲಿ ನಡೆದ ಎರಡೂ ಇನ್ನಿಂಗ್ಸ್ ಗಳಲ್ಲಿ ಹೆಚ್ಚು ರನ್ ಕಲೆಹಾಕುವಲ್ಲಿ ವಿಫಲವಾಗಿತ್ತು. ಇದೇ ಮೊದಲ ಟೆಸ್ಟ್ ಸೋಲಿಗೆ ಕಾರಣ ಎಂದು ಕೊಹ್ಲಿ ಸ್ವತಃ ಒಪ್ಪಿಕೊಂಡಿದ್ದರು.

ಕ್ರೈಸ್ಟ್‌ಚರ್ಚ್ ನ ಹ್ಯಾಗ್ಲಿ ಓವಲ್ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯವು ಶನಿವಾರ ಆರಂಭವಾಗಲಿದೆ. ಈ ಪಂದ್ಯವನ್ನು ಭಾರತ ಗೆಲ್ಲಬೇಕಿದೆ. ಒಂದು ವೇಳೆ  ಸೋತರೆ ಟೀಂ ಇಂಡಿಯಾ ಟೆಸ್ಟ್ ನಲ್ಲಿಯೂ ವೈಟ್‍ವಾಶ್ ತುತ್ತಾಗಲಿದೆ.

Virat Kohli KL Rahul

TAGGED:ಕಪೀಲ್ ದೇವ್ಕೆ.ಎಲ್.ರಾಹುಲ್ಟೀಂ ಇಂಡಿಯಾಟೆಸ್ಟ್ನ್ಯೂಜಿಲೆಂಡ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

Pratyusha 3
Court

ನಟಿ ಪ್ರತ್ಯುಷಾ ಪ್ರಕರಣ – ಆತ್ಮಹತ್ಯೆಗೆ ಪರಸ್ಪರ ಒಪ್ಪಿದ್ದ ಸಂದರ್ಭದಲ್ಲಿ ಬದುಕುಳಿದವರು ಶಿಕ್ಷಾರ್ಹರು: ಸುಪ್ರೀಂ

Public TV
By Public TV
13 minutes ago
Vijayapura Murder
Crime

ಸಾಲದ ವಿಷಯಕ್ಕೆ ದಂಪತಿ ಮಧ್ಯೆ ಜಗಳ – ರಾಡ್‌ನಿಂದ ಪತ್ನಿಯ ಹತ್ಯೆಗೈದು ಮನೆಯಲ್ಲೇ ಹೂತುಹಾಕಿದ್ದ ಹಂತಕ ಪತಿ

Public TV
By Public TV
13 minutes ago
Hours After Valentines Day Dinner Chartered Accountant Slits Wifes Throat
Crime

ವ್ಯಾಲೆಂಟೈನ್ಸ್ ಡೇ ಸೆಲಬ್ರೇಟ್‌ ಮಾಡಿ ಗರ್ಭಿಣಿ ಪತ್ನಿ ಕೊಂದ ಪತಿ – ದರೋಡೆಯಂತೆ ನಾಟಕ, ವಿಚಾರಣೆ ವೇಳೆ ಸತ್ಯ ಬಯಲು

Public TV
By Public TV
31 minutes ago
DK Shivakumar
Bengaluru City

ವಿಜಯೇಂದ್ರ, ಅಶೋಕ್‌ ಮನೆ ಮುಂದೆನೇ ಕಸ ಹಾಕಿಸ್ತೀನಿ: ಡಿಕೆಶಿ ವಾರ್ನಿಂಗ್‌

Public TV
By Public TV
34 minutes ago
retired isro employee kills wife bengaluru
Bengaluru City

ನಾನು ಸತ್ರೆ ಒಂಟಿಯಾಗ್ತಾಳೆ – ನಿವೃತ್ತ ಇಸ್ರೋ ಉದ್ಯೋಗಿಯಿಂದ ಕತ್ತು‌ಹಿಸುಕಿ ಪತ್ನಿಯ ಕೊಲೆ

Public TV
By Public TV
37 minutes ago
Chikkodi Accident
Belgaum

ಲಾರಿ-ಬೈಕ್ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ಮೂವರು ದುರ್ಮರಣ

Public TV
By Public TV
54 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?