Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cricket

ಕನ್ನಡಿಗನ ಪರ ಬ್ಯಾಟ್ ಬೀಸಿ, ಮ್ಯಾನೇಜ್‍ಮೆಂಟ್ ವಿರುದ್ಧ ಕಿಡಿಕಾರಿದ ಕಪಿಲ್ ದೇವ್

Public TV
Last updated: February 25, 2020 5:36 pm
Public TV
Share
2 Min Read
Kapil Dev KL Rahul
SHARE

– ‘ರಾಹುಲ್ ತಂಡದಿಂದ ಹೊರಗಿರುವುದರಲ್ಲಿ ಅರ್ಥವೇ ಇಲ್ಲ’

ನವದೆಹಲಿ: ಕನ್ನಡಿಗ ಕೆ.ಎಲ್.ರಾಹುಲ್ ಟೀಂ ಇಂಡಿಯಾದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿ ಸಖತ್ ಮಿಂಚಿದ್ದಾರೆ. ಆದರೆ ಈಗ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವರನ್ನು ಕೈಬಿಟ್ಟಿದ್ದಕ್ಕೆ ಮಾಜಿ ಕ್ರಿಕೆಟರ್ ಕಪಿಲ್ ದೇವ್ ಟೀಂ ಇಂಡಿಯಾ ಮ್ಯಾನೇಜ್‍ಮೆಂಟ್ ವಿರುದ್ಧ ಕಿಡಿಕಾರಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ವೆಲ್ಲಿಂಗ್ಟನ್‍ನಲ್ಲಿ ನಡೆದ ಮೊದಲ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಬಳಗವು ಸೋಮವಾರ 10 ವಿಕೆಟ್‍ಗಳಿಂದ ಸೋಲು ಕಂಡಿದೆ. ಈ ಪಂದ್ಯದ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕಪಿಲ್ ದೇವ್, ಟೀಂ ಇಂಡಿಯಾವನ್ನು ಟೀಕಿಸಿದರು. ಇದನ್ನೂ ಓದಿ: ಕೆ.ಎಲ್.ರಾಹುಲ್ ‘360 ಡಿಗ್ರಿ’ ಬ್ಯಾಟ್ಸ್‌ಮನ್‌: ಮಂಜ್ರೇಕರ್

Team India pink ball Test

ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ ಕಪಿಲ್ ದೇವ್, “ನಾವು ನ್ಯೂಜಿಲೆಂಡ್ ತಂಡವನ್ನು ಹೊಗಳಬೇಕು. ಕಿವೀಸ್ ಆಟಗಾರರ ಉತ್ತಮ ಆಟವಾಡಿದ್ದಾರೆ. ಮೂರು ಏಕದಿನ ಪಂದ್ಯಗಳು ಮತ್ತು ಈ ಟೆಸ್ಟ್ ಪಂದ್ಯವು ಅತ್ಯುತ್ತಮವಾಗಿದ್ದವು. ಈ ಪಂದ್ಯವನ್ನು ವಿಮರ್ಶಾತ್ಮಕವಾಗಿ ವಿಶ್ಲೇಷಿಸಿದರೆ, ಒಬ್ಬ ಆಟಗಾರ ಎಷ್ಟು ಬದಲಾವಣೆಗೆ ಒಳಗಾಗಬಹುದು ಎನ್ನುವುದು ನನಗೆ ಅರ್ಥವಾಗುತ್ತಿಲ್ಲ. ಟೀಂ ಇಂಡಿಯಾ ಪ್ರತಿಯೊಂದು ಪಂದ್ಯದಲ್ಲೂ ಹೊಸ ತಂಡವಾಗಿತ್ತು. ತಂಡದಲ್ಲಿ ಯಾರೂ ಶಾಶ್ವತವಲ್ಲ ಎನ್ನುವಂತಿತ್ತು. ಆಟಗಾಗರ ಕ್ರಮಾಂಕ, ಜವಾಬ್ದಾರಿ ಮೇಲೆ ಯಾವುದೇ ಭದ್ರತೆ ಇಲ್ಲದಿದ್ದರೆ ಅದು ಅವರ ಸ್ವರೂಪದ ಮೇಲೆ ಪರಿಣಾಮ ಬೀರುತ್ತದೆ” ಎಂದು ಅಭಿಪ್ರಾಯಪಟ್ಟರು.

ಬ್ಯಾಟಿಂಗ್ ಕ್ರಮದಲ್ಲಿ ಅನುಭವಿ ಆಟಗಾರರ ದೊಡ್ಡ ಪಟ್ಟಿಯೇ ಇದೆ. ಆದರೂ ನೀವು 2 ಇನ್ನಿಂಗ್ಸ್ ಗಳಲ್ಲಿ ಒಂದು ಬಾರಿಯೂ 200+ ರನ್ ಗಳಿಸಲು ಸಾಧ್ಯವಾಗಲಿಲ್ಲ. ಯೋಜನೆ ಮತ್ತು ಕಾರ್ಯತಂತ್ರದ ಬಗ್ಗೆ ವಿರಾಟ್ ಕೊಹ್ಲಿ ಹಾಗೂ ಮ್ಯಾನೇಜ್‍ಮೆಂಟ್ ಹೆಚ್ಚು ಗಮನ ಹರಿಸಬೇಕು ಎಂದು ಕಪಿಲ್ ದೇವ್ ಸಲಹೆ ನೀಡಿದರು. ಇದನ್ನೂ ಓದಿ: ‘ಬೇಡ ಮಗಾ ಬೇಡ, ನಾರ್ಮಲ್ ಆಡು’- ಕಿವೀಸ್ ನೆಲದಲ್ಲಿ ಕನ್ನಡ ಡಿಂಡಿಮ

kapil dev A

ನನಗೆ ಒಂದು ವಿಚಾರ ಅರ್ಥವಾಗುತ್ತಿಲ್ಲ. ನಾವು ಆಡುತ್ತಿದ್ದಾಗ ಹಾಗೂ ಈಗ ಏನಾಗುತ್ತಿದೆ ಎಂಬುದರ ನಡುವೆ ಸಾಕಷ್ಟು ವ್ಯತ್ಯಾಸವಿದೆ. ತಂಡವನ್ನು ನಿರ್ಮಿಸುವಾಗ ಆಟಗಾರರಿಗೆ ಆತ್ಮವಿಶ್ವಾಸವನ್ನು ನೀಡಬೇಕು. ಮ್ಯಾನೇಜ್‍ಮೆಂಟ್ ನಿರ್ದಿಷ್ಟ ಆಟಗಾರರನ್ನು ನಂಬುತ್ತದೆ. ಕೆ.ಎಲ್.ರಾಹುಲ್ ಉತ್ತಮ ಫಾರ್ಮ್ ನಲ್ಲಿದ್ದಾರೆ. ಆದರೂ ಅವರು ಹೊರಗೆ ಕುಳಿತಿದ್ದಾರೆ. ಈ ನಿರ್ಧಾರವೇ ನನಗೆ ಅರ್ಥವಾಗುವುದಿಲ್ಲ. ಆಟಗಾರ ಫಾರ್ಮ್ ನಲ್ಲಿದ್ದಾಗ ಆಡಬೇಕಾಗುತ್ತದೆ ಎಂದು ನಾನು ನಂಬುತ್ತೇನೆ. ಕೆ.ಎಲ್.ರಾಹುಲ್ ಅವರನ್ನು ತಂಡದಿಂದ ಹೊರಗಿಡುವುದರಲ್ಲಿ ಅರ್ಥವೇ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಕೆಎಲ್ ಅಂದ್ರೆ ಖಡಕ್ ಲಡ್ಕಾ- ರಾಹುಲ್‍ರನ್ನ ಹೊಗಳಿದ ಸೆಹ್ವಾಗ್

ಐದು ಪಂದ್ಯಗಳ ಟಿ20 ಸರಣಿಯಲ್ಲಿ ನ್ಯೂಜಿಲೆಂಡ್ ಸಂಪೂರ್ಣವಾಗಿ ವೈಟ್‍ವಾಶ್ ಆಗಿತ್ತು. ಆದಾಗ್ಯೂ, ಬಲವಾದ ಪುನರಾಗಮನವನ್ನು ಮಾಡಿದ ಕಿವೀಸ್ ಪಡೆ, ಏಕದಿನ ಸರಣಿಯ ಮೂರೂ ಪಂದ್ಯಗಳನ್ನು ಗೆದ್ದಿತ್ತು. ಈಗ ಎರಡು ಟೆಸ್ಟ್ ಸರಣಿಯಲ್ಲಿ ಮೊದಲ ಟೆಸ್ಟ್ ಪಂದ್ಯ ಗೆದ್ದು ಬೀಗಿದೆ.

Team India Main 2

ಅನುಭವಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರನ್ನು ಹೊಂದಿರುವ ಟೀಂ ಇಂಡಿಯಾ ವೆಲ್ಲಿಗ್ಟನ್ ನಲ್ಲಿ ನಡೆದ ಎರಡೂ ಇನ್ನಿಂಗ್ಸ್ ಗಳಲ್ಲಿ ಹೆಚ್ಚು ರನ್ ಕಲೆಹಾಕುವಲ್ಲಿ ವಿಫಲವಾಗಿತ್ತು. ಇದೇ ಮೊದಲ ಟೆಸ್ಟ್ ಸೋಲಿಗೆ ಕಾರಣ ಎಂದು ಕೊಹ್ಲಿ ಸ್ವತಃ ಒಪ್ಪಿಕೊಂಡಿದ್ದರು.

ಕ್ರೈಸ್ಟ್‌ಚರ್ಚ್ ನ ಹ್ಯಾಗ್ಲಿ ಓವಲ್ ಸ್ಟೇಡಿಯಂನಲ್ಲಿ ನ್ಯೂಜಿಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯವು ಶನಿವಾರ ಆರಂಭವಾಗಲಿದೆ. ಈ ಪಂದ್ಯವನ್ನು ಭಾರತ ಗೆಲ್ಲಬೇಕಿದೆ. ಒಂದು ವೇಳೆ  ಸೋತರೆ ಟೀಂ ಇಂಡಿಯಾ ಟೆಸ್ಟ್ ನಲ್ಲಿಯೂ ವೈಟ್‍ವಾಶ್ ತುತ್ತಾಗಲಿದೆ.

Virat Kohli KL Rahul

TAGGED:ಕಪೀಲ್ ದೇವ್ಕೆ.ಎಲ್.ರಾಹುಲ್ಟೀಂ ಇಂಡಿಯಾಟೆಸ್ಟ್ನ್ಯೂಜಿಲೆಂಡ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema Updates

pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
3 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
3 hours ago
Kamal Haasan Sudha rani
ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಮಾತಾಡಿದ್ರೂ ಒಪ್ಪಲ್ಲ: ಸುಧಾರಾಣಿ
4 hours ago
Rachita Ram
ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್
6 hours ago

You Might Also Like

rinku singh priya saroj
Cricket

ಸಂಸದೆ ಜೊತೆ ಎಂಗೇಜ್‌ಮೆಂಟ್‌ ಆಗ್ತಿದ್ದಾರೆ ರಿಂಕು ಸಿಂಗ್‌ – ಕ್ರಿಕೆಟಿಗನ ಕೈ ಹಿಡಿಯೋ ಚೆಲುವೆ ಯಾರು?

Public TV
By Public TV
4 minutes ago
Canadian Man Claims His Ex Girlfriend Stole CA5 Million Lottery Winnings Ran Away With Lover
Crime

ಗೆಳೆಯ ಲಾಟರಿಯಲ್ಲಿ ಗೆದ್ದ 30 ಕೋಟಿ ರೂ. ಕದ್ದು ಲವ್ವರ್‌ ಜೊತೆ ಕೇಡಿ ಲೇಡಿ ಎಸ್ಕೇಪ್‌

Public TV
By Public TV
20 minutes ago
MB Patil
Districts

ವಿಜಯಪುರದ ರಸ್ತೆ, ರೈಲು, ವಾಯುಮಾರ್ಗ ಎಲ್ಲವೂ ಅಭಿವೃದ್ಧಿಯಾಗಲಿದೆ: ಎಂ.ಬಿ ಪಾಟೀಲ್

Public TV
By Public TV
23 minutes ago
lovers arrested for gold chain stealing in chikkaballapur
Chikkaballapur

ಸಂಸಾರ ಸಾಗಿಸೋಕೆ ಸರಗಳ್ಳತನ ಮಾಡಿದ್ದ ಲವರ್ಸ್ ಅರೆಸ್ಟ್!

Public TV
By Public TV
28 minutes ago
Raichuru Hatti Gold Mine Blast
Crime

ಹಟ್ಟಿ ಚಿನ್ನದಗಣಿ | 2,800 ಅಡಿ ಆಳದಲ್ಲಿ ಏರ್ ಬ್ಲಾಸ್ಟ್ – ಕಾರ್ಮಿಕ ದುರ್ಮರಣ

Public TV
By Public TV
2 hours ago
nigeria flood
Latest

ರೌದ್ರರೂಪ ತಾಳಿದ ನೈಜೀರಿಯಾ ನದಿಗಳು – ಜಲಪ್ರಳಯಕ್ಕೆ 150ಕ್ಕೂ ಅಧಿಕ ಮಂದಿ ಬಲಿ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?