ರಾಮನಗರ: ಜಿಲ್ಲೆಯ ಐತಿಹಾಸಿಕ ಚಾಮುಂಡೇಶ್ವರಿ ಕರಗ ಮಹೋತ್ಸವದ (Karaga Mahotsava) ಹಿನ್ನೆಲೆ, ಈ ಬಾರಿಯೂ ಅದ್ಧೂರಿಯಾಗಿ ಕರಗ ಮಹೋತ್ಸವವನ್ನು ಆಚರಿಸಲಾಗುತ್ತಿದ್ದು, ಕರಗ ಮಹೋತ್ಸವಕ್ಕೆ ಶಾಸಕ ಇಕ್ಬಾಲ್ ಹುಸೇನ್ (Iqbal Hussain) ಚಾಲನೆ ನೀಡಿದ್ದಾರೆ. ಚಾಮುಂಡೇಶ್ವರಿಗೆ ಮಡಿಲಕ್ಕಿ ಸೇವೆ (Madilakki Seva) ಸಲ್ಲಿಸಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಅಲ್ಲದೇ ನಗರದ 16 ವಿವಿಧ ದೇವಾಲಯಗಳಿಗೂ ಮಡಿಲಕ್ಕಿ ನೀಡಿ ಅಲ್ಪಸಂಖ್ಯಾತ ಸಮುದಾಯದ ಶಾಸಕರಾಗಿದ್ದರೂ ಸಹ, ಸೌಹಾರ್ದತೆಯ ಸಂಕೇತವಾಗಿ ಮಡಿಲಕ್ಕಿ ಸೇವೆ ನಡೆಸುತ್ತ ಬಂದಿದ್ದಾರೆ. ಕರಗ ಮಹೋತ್ಸವದ ಅಂಗವಾಗಿ ರಾಮನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹತ್ತು ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ನಟ ಕಿಚ್ಚ ಸುದೀಪ್, ನಟ ನಿನಾಸಂ ಸತೀಶ್, ಗಿಲ್ಲಿ ನಟ ಸೇರಿ ಹಲವು ಕಲಾವಿದರು ಕಾರ್ಯಕ್ರಮಕ್ಕೆ ಮೆರುಗು ನೀಡಲಿದ್ದಾರೆ. ಇದನ್ನೂ ಓದಿ: ಟಿಬಿ ಜಯಚಂದ್ರಗೆ ಸ್ಪೀಕರ್ ಪಟ್ಟ – ಡಿಕೆಶಿ ಸಂಪುಟದಲ್ಲಿ ಯಾರಿಗೆ ಮಂತ್ರಿಗಿರಿ?
ಮಂಗಳವಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾ ರೆಡ್ಡಿ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸೇರಿ ಹಲವು ಶಾಸಕರು ಭಾಗವಹಿಸಲಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ 1,500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಾಡಿಗೆ ಮನೆಯಲ್ಲಿದ್ದು ಮನೆ ಮಾಲಕಿ ಸ್ನಾನದ ವಿಡಿಯೋ ಮಾಡಿದ ವಿಕೃತ ಕಾಮಿ ಟೆಕ್ಕಿ
