ಬಾಲಿವುಡ್ ನೊಂದಿಗೆ ಭೂಗತ ಜಗತ್ತಿನ ನಂಟಿದೆ ಎಂದು ಹಲವು ವರ್ಷಗಳಿಂದ ಕೇಳುತ್ತಲೇ ಬಂದಿದ್ದೇವೆ. ಬಾಲಿವುಡ್ ನಟ ನಟಿಯರು, ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ಆಗಾಗ್ಗೆ ಅವರು ಜೀವ ಬೆದರಿಕೆ ಹಾಕುತ್ತಲೇ ಇರುತ್ತಾರೆ. ಅನೇಕ ಬಾರಿಗೆ ಹಣಕ್ಕಾಗಿ ಬೇಡಿಕೆ ಇಟ್ಟಿದ್ದೂ ಇದೆ. ಇದನ್ನು ಬಗ್ಗು ಬಡಿಯಲು ನಾನಾ ತಂತ್ರಗಳನ್ನು ಪೊಲೀಸ್ ಇಲಾಖೆ ಮಾಡುತ್ತಲೇ ಬಂದಿದೆ. ಆದರೆ, ಇನ್ನೂ ಆ ಬೆದರಿಕೆ ಕರೆಗಳು ನಿಂತಿಲ್ಲ ಎನ್ನುವುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ.
ಇತ್ತೀಚೆಗಷ್ಟೇ ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಹಾಕಿರುವ ವಿಚಾರ ಬಿಟೌನ್ ನಲ್ಲಿ ಭಾರೀ ಸದ್ದು ಮಾಡಿತ್ತು. ಅದರಲ್ಲೂ ಈ ಬೆದರಿಕೆ ಪತ್ರದ ಹಿಂದೆ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಮತ್ತು ಆತನ ಗ್ಯಾಂಗ್ ಇದೆ ಎಂದು ಹೇಳಲಾಗಿತ್ತು. ಈ ಗ್ಯಾಂಗ್ ನ ಹಲವು ಸದಸ್ಯರನ್ನು ಈಗಾಗಲೇ ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ತನಿಖೆಯಲ್ಲಿ ಹಲವು ರೋಚಕ ಮತ್ತು ಆಘಾತಕಾರಿ ಅಂಶಗಳು ಬೆಳಕಿಗೆ ಬರುತ್ತಿವೆ. ಇದನ್ನೂ ಓದಿ: ವೈರಲ್ ಆಯ್ತು ಪರಿಣಿತಿ ಚೋಪ್ರಾ ಸ್ಕೂಬಾ ಡೈವಿಂಗ್ ವಿಡಿಯೋ
ಸಲ್ಮಾನ್ ಖಾನ್ ಜೀವ ಬೆದರಿಕೆಯ ಪ್ರಮುಖ ಆರೋಪಿ ಲಾರೆನ್ಸ್ ಬಿಷ್ಣೋಯಿಯ ಗ್ಯಾಂಗಿನ ಸದಸ್ಯ ಸಿದ್ಧೇಶ್ ಕಾಂಬ್ಳೆ ಅನ್ನು ವಶಕ್ಕೆ ಪಡೆದಿರುವ ಪೊಲೀಸ್ ಅಧಿಕಾರಿಗಳು, ಎಲ್ಲ ರೀತಿಯಿಂದಲೂ ಬಾಯಿ ಬಿಡಿಸುತ್ತಿದ್ದಾರೆ. ಹಾಗಾಗಿ ಆತ ಕೆಲವು ವಿಚಾರಗಳನ್ನು ಪೊಲೀಸ್ ರ ಮುಂದೆ ಬಾಯ್ಬಿಟ್ಟಿದ್ದಾನೆ ಎನ್ನಲಾಗುತ್ತಿದೆ. ತಮ್ಮ ಹಿಟ್ ಲಿಸ್ಟ್ ನಲ್ಲಿ ನಿರ್ಮಾಪಕ, ನಿರ್ದೇಶಕ, ನಟ ಕರಣ್ ಜೋಹರ್ ಕೂಡ ಇದ್ದರು ಎಂದು ಸ್ಫೋಟಕ ಹೇಳಿಕೆ ನೀಡಿದ್ದಾನೆ.
ಹಾಲಿವುಡ್ ನಿರ್ಮಾಪಕರಿಗೆ ಜೀವ ಬೆದರಿಕೆ ಹಾಕಿ, ಹಣ ವಸೂಲಿ ಮಾಡಲು ದೊಡ್ಡದೊಂದು ಪಟ್ಟಿಯನ್ನೇ ಸಿದ್ಧ ಪಡಿಸುತ್ತಿದ್ದರಿಂದ ಲಾರೆನ್ಸ್ ಅಂಡ್ ಗ್ಯಾಂಗ್. ಈ ಲಿಸ್ಟ್ ನಲ್ಲಿ ಕರಣ್ ಜೋಹರ್ ಹೆಸರು ಪ್ರಮುಖವಾಗಿ ಇತ್ತು ಎಂದು ಹೇಳಿದ್ದಾರೆ. ಬರೋಬ್ಬರಿ ಐದು ಕೋಟಿಗೂ ಅಧಿಕ ಹಣವನ್ನು ವಸೂಲಿ ಮಾಡಲು ಈ ಗ್ಯಾಂಗ್ ಪ್ಲ್ಯಾನ್ ಮಾಡಲಾಗಿತ್ತಂತೆ.