ಕರವೇ ಪ್ರತಿಭಟನೆ – ಮಹಾರಾಷ್ಟ್ರ ಪಾಸಿಂಗ್ ಇದ್ದ ವಾಹನಕ್ಕೆ ಕಪ್ಪು ಮಸಿ ಬಳಿದು ವೈಪರ್ ಮುರಿದು ಆಕ್ರೋಶ

Public TV
1 Min Read
BELAGAVI PROTEST 1

ಬೆಳಗಾವಿ: ನಗರದ ಮಹಾಂತೇಶ್ ನಗರದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರ (Maharashtra) ಪಾಸಿಂಗ್ ಹೊಂದಿದ ಗೂಡ್ಸ್ ವಾಹನದ ಮೇಲೆ ಏಕಾಏಕಿ ಕರವೇ ಕಾರ್ಯಕರ್ತರು (Karave Protest)  ದಾಳಿ ನಡೆಸಿ ವಾಹನದ ಗಾಜು ಒಡೆಯಲು ಯತ್ನಿಸಿದರು. ಈ ವೇಳೆ ಪೊಲೀಸರು ಹಾಗೂ ಕರವೇ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆಯಿತು.

BELAGAVI PROTEST 2

ಮಹಾರಾಷ್ಟ್ರದಲ್ಲಿ ಕರ್ನಾಟಕದ (Karnataka) ಬಸ್‍ಗಳ (Bus) ಮೇಲೆ ಕಲ್ಲು ತೂರಾಟ ಹಿನ್ನೆಲೆ ಬೆಳಗಾವಿಯಲ್ಲಿ (Belagavi) ಕರವೇ ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಯಿತು. ಈ ವೇಳೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹಾಗೂ ಡಿಸಿಎಂ ದೇವೇಂದ್ರ ಫಡ್ನವಿಸ್ ಪ್ರತಿಕೃತಿ ದಹನ ಮಾಡಿದರು. ಮುಂಜಾಗ್ರತಾ ಕ್ರಮವಾಗಿ ಡಿಸಿಪಿ ರವೀಂದ್ರ ಗಡಾದಿ, ಮಾರ್ಕೆಟ್ ಎಸಿಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಪ್ರತಿಭಟನಾ ಸ್ಥಳದಲ್ಲೇ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು. ಈ ವೇಳೆ ಮಹಾರಾಷ್ಟ್ರ ಸರ್ಕಾರ ಹಾಗೂ ಸಿಎಂ ಏಕನಾಥ್ ಶಿಂಧೆ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮೈಸೂರು, ಬೆಂಗ್ಳೂರಿನಲ್ಲಿ ಕೊರಗಜ್ಜ ದೈವದ ಹೆಸರಲ್ಲಿ ದಂಧೆ – ಆರೋಪ

BELAGAVI PROTEST 2 1

ಪ್ರತಿಭಟನೆ ಮಾಡುತ್ತಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಥಳದಲ್ಲೇ ಮಹಾರಾಷ್ಟ್ರ ಪಾಸಿಂಗ್ ಇದ್ದ ವಾಹನಕ್ಕೆ ಕಪ್ಪು ಮಸಿ ಬಳಿದು ವೈಪರ್ ಮುರಿದು ಆಕ್ರೋಶ ವ್ಯಕ್ತಪಡಿಸಿದರು. ಗೂಡ್ಸ್ ವಾಹನದ ಮುಂಭಾಗದ ಗಾಜು ಒಡೆಯಲು ಕರವೇ ಕಾರ್ಯಕರ್ತರ ಯತ್ನಿಸಿದರು. ಬಳಿಕ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಿದರು. ಇದನ್ನೂ ಓದಿ: ನಮ್ಮನ್ನು ಕರ್ನಾಟಕಕ್ಕೆ ಸೇರಿಸಿ – ಮಹಾರಾಷ್ಟ್ರದ 42 ಗ್ರಾಮಗಳ ಒಕ್ಕೊರಲಿನ ಮನವಿ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *