Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತಾಂತರ ನಿಷೇಧ ಮಸೂದೆ ವಿರುದ್ಧ ಸದನದ ಒಳಗೂ, ಹೊರಗೂ ಹೋರಾಟ ಮಾಡುತ್ತೇವೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮತಾಂತರ ನಿಷೇಧ ಮಸೂದೆ ವಿರುದ್ಧ ಸದನದ ಒಳಗೂ, ಹೊರಗೂ ಹೋರಾಟ ಮಾಡುತ್ತೇವೆ: ಡಿಕೆಶಿ

Belgaum

ಮತಾಂತರ ನಿಷೇಧ ಮಸೂದೆ ವಿರುದ್ಧ ಸದನದ ಒಳಗೂ, ಹೊರಗೂ ಹೋರಾಟ ಮಾಡುತ್ತೇವೆ: ಡಿಕೆಶಿ

Public TV
Last updated: December 15, 2021 10:09 pm
Public TV
Share
2 Min Read
DK SHIVAKUMAR 2
SHARE

ಬೆಳಗಾವಿ: ಮತಾಂತರ ನಿಷೇಧ ಮಸೂದೆ ವಿರುದ್ಧ ಸದನದ ಒಳಗೂ, ಹೊರಗೂ ಹೋರಾಟ ಮಾಡುತ್ತೇವೆ. ಮೇಕೆದಾಟು ಪಾದಯಾತ್ರೆ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಪರಿಷತ್ ಚುನಾವಣೆಯಲ್ಲಿ ಪಕ್ಷ, ನಾಯಕರು ಹಾಗೂ ಕಾರ್ಯಕರ್ತರು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದು, ಎಲ್ಲರಿಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

vlcsnap 2021 12 14 17h51m36s069

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘವು ಪ್ರಧಾನಿಯವರಿಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅದು ಇಡೀ ದೇಶಕ್ಕೇ ಆಶ್ಚರ್ಯ ಮೂಡಿಸಿರುವ ಪತ್ರ. ಅದು ಕೂಡ ನಮ್ಮ ಹೋರಾಟದ ಆದ್ಯತೆ ವಿಷಯಗಳಲ್ಲಿ ಒಂದು. ಅಧಿವೇಶನದಲ್ಲಿ ನಾವು ಎಲ್ಲ ವಿಚಾರಗಳನ್ನು ಒಂದೇ ದಿನ ತೆಗೆದುಕೊಳ್ಳಲು ಆಗುವುದಿಲ್ಲ. ಭ್ರಷ್ಟಾಚಾರ ಕೂಡ ಒಂದು ಪ್ರಮುಖ ವಿಚಾರ’ ಎಂದರು. ಇದನ್ನೂ ಓದಿ: ವಿದ್ಯಾರ್ಥಿಗಳೇ, ಸರ್ಕಾರಿ ಹಾಸ್ಟೆಲ್ ಮೆನುವಿನಲ್ಲಿರುವ ಈ ಆಹಾರ ನಿಮಗೆ ಸಿಗ್ತಿದೆಯಾ..?

ಮತಾಂತರ ನಿಷೇಧ ಮಸೂದೆ ವಿಚಾರವಾಗಿ ಕೇಳಿದ ಪ್ರಶ್ನೆಗೆ,’ ಸರ್ಕಾರ ಉದ್ದೇಶಪೂರ್ವಕವಾಗಿ ಈ ವಿಚಾರವನ್ನು ಅಂತಿಮ ಗಳಿಗೆಯಲ್ಲಿ ಚರ್ಚೆಗೆ ತರುತ್ತದೆ. ನಾವು ಅದಕ್ಕೆ ಸಿದ್ಧವಾಗಿದ್ದು, ಸಂಪುಟದಲ್ಲಿ ಅನುಮೋದನೆ ಪಡೆಯದೇ ಇದನ್ನು ತರಲು ಸಾಧ್ಯವಿಲ್ಲ. ಅವರು ಚುನಾವಣೆ ಸಮೀಪಿಸುತ್ತಿದ್ದಂತೆ ವಿಚಾರ ತಿರುಚಲು ಈ ರೀತಿ ಮಾಡುತ್ತಾರೆ. ನಿನ್ನೆ ಕಾನೂನು ಸಚಿವರು ಇದರಲ್ಲಿ ಎಸ್.ಸಿ ಬೌದ್ಧ ಧರ್ಮ ಸೇರಿದಂತೆ ಇತರೆ ವಿಚಾರ ಬರುತ್ತದೆ ಎಂದಿದ್ದಾರೆ. ಹೀಗಾಗಿ ಅವರು ಕೊನೆಗಳಿಗೆಯಲ್ಲಿ ತೆಗೆದುಕೊಳ್ಳುತ್ತಾರೆ. ಅವರು ಯಾವಾಗ ಬೇಕಾದರೂ ತೆಗೆದುಕೊಳ್ಳಲಿ, ಕಾಂಗ್ರೆಸ್ ಇದನ್ನು ವಿರೋಧಿಸುತ್ತದೆ. ಸದನದ ಒಳಗೆ ಹಾಗೂ ಹೊರಗೆ ನಾವು ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕಾನೂನು ಈಗಾಗಲೇ ಇದೆ. ಅದನ್ನು ಪಾಲಿಸುವ ಬದಲು ಈ ವಿಚಾರವನ್ನು ಚುಚ್ಚಿ, ಚುಚ್ಚಿ ಹೇಳುತ್ತಿದ್ದಾರೆ. ಬೌದ್ಧ, ಸಿಖ್, ಜೈನ್, ಕ್ರೈಸ್ತ ಧರ್ಮಗಳಿದ್ದು, ಕೇವಲ ಒಂದನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿಯವರಲ್ಲೇ ಆಂತರಿಕ ಭಿನ್ನಮತ ಇದೆ. ಇದು ರಾಜ್ಯಕ್ಕೆ ಮುಂದೆ ಬರಲಿರುವ ಬಂಡವಾಳ ಹೂಡಿಕೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರಿ ನೌಕರರು ಬೇಕಾಬಿಟ್ಟಿ ಸಾಮಾಜಿಕ ಜಾಲತಾಣ ಬಳಕೆ ಮಾಡಿದರೆ ಹುಷಾರ್!

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿತ್ತು ಎಂಬ ಲಖನ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಒಳಒಪ್ಪಂದವೋ ಅಥವಾ ಬೇರೆ ಏನೋ, ಸಿಎಂ ಏನು ಹೇಳಿದ್ದಾರೆ? ಅವರು ಕಾಂಗ್ರೆಸ್ ರೆಬಲ್ ಅಭ್ಯರ್ಥಿ ಎಂದಿದ್ದಾರೆ. ಯಾರು ಏನು ಬೇಕಾದರೂ ಹೇಳಿಕೊಳ್ಳಲಿ. ಅವರು ಬೇಕಾದರೆ ಸಂಪುಟ ವಿಸ್ತರಣೆ ವೇಳೆ ಲಖನ್ ಅವರನ್ನೇ ಸಚಿವರನ್ನಾಗಿ ಮಾಡಿಕೊಳ್ಳಲಿ’ ಎಂದರು.

ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಹಿಟ್ ಅಂಡ್ ರನ್ ನೀತಿ ಅನುಸರಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರದಲ್ಲಿ ಹಿಟ್ ಅಂಡ್ ರನ್ ಪ್ರಶ್ನೆಯೇ ಇಲ್ಲ. ನಾವು ಹಲವು ವಿಚಾರಗಳೊಂದಿಗೆ ಈ ವಿಷಯ ತರುತ್ತೇವೆ ಎಂದು ನುಡಿದರು. ಇದನ್ನೂ ಓದಿ: ಶ್ರೀನಿವಾಸ್ ಪೂಜಾರಿ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ: ಬಿ.ಎಲ್.ಸಂತೋಷ್

TAGGED:bjpcongressd k shivakumarReligious Conversion Lawಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿ
Share This Article
Facebook Whatsapp Whatsapp Telegram

Cinema news

ashwini gowda gilli nata
ಗಿಲ್ಲಿ ನಿಜವಾದ ಬಡವ ಅಲ್ಲ, ಬಡವನ ಥರ ಗೆಟಪ್‌ ಹಾಕ್ಕೊಂಡು ಗೆದ್ದಿದ್ದಾರೆ: ಅಶ್ವಿನಿ ಗೌಡ
Cinema Latest Main Post TV Shows
ashwini gowda 1
ನಾನು ವಿನ್ನರ್‌ ಆಗುವ ನಿರೀಕ್ಷೆ ಹೆಚ್ಚಿತ್ತು: 2ನೇ ರನ್ನರ್‌ ಅಪ್‌ ಅಶ್ವಿನಿ ಗೌಡ ರಿಯಾಕ್ಷನ್‌
Cinema Latest Main Post TV Shows
Gilli Nata 5
BBK 12 | ಕಾವ್ಯನ್ನ ಮದ್ವೆ ಆಗ್ತೀರಾ ಅಂದಿದ್ದಕ್ಕೆ ಗಿಲ್ಲಿ ಕೊಟ್ಟ ಉತ್ತರ ಏನು?
Cinema Latest Main Post TV Shows
gilli nata bigg boss
ಬಿಗ್ ಬಾಸ್ ಸೀಸನ್ 12 ಗೆದ್ದ ಗಿಲ್ಲಿ – ಇಂದು ಮಳವಳ್ಳಿಯಿಂದ ಹುಟ್ಟೂರು ದಡದಪುರಕ್ಕೆ ಅದ್ದೂರಿ ಮೆರವಣಿಗೆ
Cinema Latest Mandya Top Stories TV Shows

You Might Also Like

Karachi Mall Fire 2
Latest

ಕರಾಚಿಯ ಶಾಪಿಂಗ್ ಮಾಲ್‌ ಧಗಧಗ – 14 ಮಂದಿ ಸಾವು, 60 ಕ್ಕೂ ಹೆಚ್ಚು ಜನ ನಾಪತ್ತೆ!

Public TV
By Public TV
16 minutes ago
Zameer Ahmed House Allocation Meeting
Dharwad

ಮನೆ ಹಂಚಿಕೆ ವಿಚಾರ – ಅಧಿಕಾರಿಗಳ ಜೊತೆ ಸಚಿವ ಜಮೀರ್ ಸಭೆ

Public TV
By Public TV
27 minutes ago
DGP Ramachandra Rao Parameshwara
Bengaluru City

ತಿರುಚಿದ ವಿಡಿಯೋ ಎಂದ ಡಿಜಿಪಿ – ಭೇಟಿಗೆ ಅನುಮತಿ ನೀಡದ ಪರಮೇಶ್ವರ್‌

Public TV
By Public TV
37 minutes ago
ramachandra rao
Bengaluru City

ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್‌ ರಾಸಲೀಲೆ – ವಿಡಿಯೋ ವೈರಲ್‌

Public TV
By Public TV
39 minutes ago
udupi paryaya dc
Latest

ಉಡುಪಿ ಪರ್ಯಾಯ ಮೆರವಣಿಗೆಗೆ ಕೇಸರಿ ಧ್ವಜ ತೋರಿಸಿ ಚಾಲನೆಗೆ ಆಕ್ಷೇಪ – ಡಿಸಿ ಸ್ಪಷ್ಟನೆ

Public TV
By Public TV
52 minutes ago
siddaramaiah
Bengaluru City

ರಾಮಚಂದ್ರ ರಾವ್ ರಾಸಲೀಲೆ ಕೇಸ್‌ – ಗೃಹ ಇಲಾಖೆಗೆ ವರದಿ ನೀಡಲು ಸಿಎಂ ಸೂಚನೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?