Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತಾಂತರ ನಿಷೇಧ ಮಸೂದೆ ವಿರುದ್ಧ ಸದನದ ಒಳಗೂ, ಹೊರಗೂ ಹೋರಾಟ ಮಾಡುತ್ತೇವೆ: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ಮತಾಂತರ ನಿಷೇಧ ಮಸೂದೆ ವಿರುದ್ಧ ಸದನದ ಒಳಗೂ, ಹೊರಗೂ ಹೋರಾಟ ಮಾಡುತ್ತೇವೆ: ಡಿಕೆಶಿ

Belgaum

ಮತಾಂತರ ನಿಷೇಧ ಮಸೂದೆ ವಿರುದ್ಧ ಸದನದ ಒಳಗೂ, ಹೊರಗೂ ಹೋರಾಟ ಮಾಡುತ್ತೇವೆ: ಡಿಕೆಶಿ

Public TV
Last updated: December 15, 2021 10:09 pm
Public TV
Share
2 Min Read
DK SHIVAKUMAR 2
SHARE

ಬೆಳಗಾವಿ: ಮತಾಂತರ ನಿಷೇಧ ಮಸೂದೆ ವಿರುದ್ಧ ಸದನದ ಒಳಗೂ, ಹೊರಗೂ ಹೋರಾಟ ಮಾಡುತ್ತೇವೆ. ಮೇಕೆದಾಟು ಪಾದಯಾತ್ರೆ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಪರಿಷತ್ ಚುನಾವಣೆಯಲ್ಲಿ ಪಕ್ಷ, ನಾಯಕರು ಹಾಗೂ ಕಾರ್ಯಕರ್ತರು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದು, ಎಲ್ಲರಿಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಿದ್ದಾರೆ.

vlcsnap 2021 12 14 17h51m36s069

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಸಂಘವು ಪ್ರಧಾನಿಯವರಿಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅದು ಇಡೀ ದೇಶಕ್ಕೇ ಆಶ್ಚರ್ಯ ಮೂಡಿಸಿರುವ ಪತ್ರ. ಅದು ಕೂಡ ನಮ್ಮ ಹೋರಾಟದ ಆದ್ಯತೆ ವಿಷಯಗಳಲ್ಲಿ ಒಂದು. ಅಧಿವೇಶನದಲ್ಲಿ ನಾವು ಎಲ್ಲ ವಿಚಾರಗಳನ್ನು ಒಂದೇ ದಿನ ತೆಗೆದುಕೊಳ್ಳಲು ಆಗುವುದಿಲ್ಲ. ಭ್ರಷ್ಟಾಚಾರ ಕೂಡ ಒಂದು ಪ್ರಮುಖ ವಿಚಾರ’ ಎಂದರು. ಇದನ್ನೂ ಓದಿ: ವಿದ್ಯಾರ್ಥಿಗಳೇ, ಸರ್ಕಾರಿ ಹಾಸ್ಟೆಲ್ ಮೆನುವಿನಲ್ಲಿರುವ ಈ ಆಹಾರ ನಿಮಗೆ ಸಿಗ್ತಿದೆಯಾ..?

ಮತಾಂತರ ನಿಷೇಧ ಮಸೂದೆ ವಿಚಾರವಾಗಿ ಕೇಳಿದ ಪ್ರಶ್ನೆಗೆ,’ ಸರ್ಕಾರ ಉದ್ದೇಶಪೂರ್ವಕವಾಗಿ ಈ ವಿಚಾರವನ್ನು ಅಂತಿಮ ಗಳಿಗೆಯಲ್ಲಿ ಚರ್ಚೆಗೆ ತರುತ್ತದೆ. ನಾವು ಅದಕ್ಕೆ ಸಿದ್ಧವಾಗಿದ್ದು, ಸಂಪುಟದಲ್ಲಿ ಅನುಮೋದನೆ ಪಡೆಯದೇ ಇದನ್ನು ತರಲು ಸಾಧ್ಯವಿಲ್ಲ. ಅವರು ಚುನಾವಣೆ ಸಮೀಪಿಸುತ್ತಿದ್ದಂತೆ ವಿಚಾರ ತಿರುಚಲು ಈ ರೀತಿ ಮಾಡುತ್ತಾರೆ. ನಿನ್ನೆ ಕಾನೂನು ಸಚಿವರು ಇದರಲ್ಲಿ ಎಸ್.ಸಿ ಬೌದ್ಧ ಧರ್ಮ ಸೇರಿದಂತೆ ಇತರೆ ವಿಚಾರ ಬರುತ್ತದೆ ಎಂದಿದ್ದಾರೆ. ಹೀಗಾಗಿ ಅವರು ಕೊನೆಗಳಿಗೆಯಲ್ಲಿ ತೆಗೆದುಕೊಳ್ಳುತ್ತಾರೆ. ಅವರು ಯಾವಾಗ ಬೇಕಾದರೂ ತೆಗೆದುಕೊಳ್ಳಲಿ, ಕಾಂಗ್ರೆಸ್ ಇದನ್ನು ವಿರೋಧಿಸುತ್ತದೆ. ಸದನದ ಒಳಗೆ ಹಾಗೂ ಹೊರಗೆ ನಾವು ಇದರ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕಾನೂನು ಈಗಾಗಲೇ ಇದೆ. ಅದನ್ನು ಪಾಲಿಸುವ ಬದಲು ಈ ವಿಚಾರವನ್ನು ಚುಚ್ಚಿ, ಚುಚ್ಚಿ ಹೇಳುತ್ತಿದ್ದಾರೆ. ಬೌದ್ಧ, ಸಿಖ್, ಜೈನ್, ಕ್ರೈಸ್ತ ಧರ್ಮಗಳಿದ್ದು, ಕೇವಲ ಒಂದನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿಯವರಲ್ಲೇ ಆಂತರಿಕ ಭಿನ್ನಮತ ಇದೆ. ಇದು ರಾಜ್ಯಕ್ಕೆ ಮುಂದೆ ಬರಲಿರುವ ಬಂಡವಾಳ ಹೂಡಿಕೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಹೇಳಿದರು. ಇದನ್ನೂ ಓದಿ: ಸರ್ಕಾರಿ ನೌಕರರು ಬೇಕಾಬಿಟ್ಟಿ ಸಾಮಾಜಿಕ ಜಾಲತಾಣ ಬಳಕೆ ಮಾಡಿದರೆ ಹುಷಾರ್!

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿತ್ತು ಎಂಬ ಲಖನ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಒಳಒಪ್ಪಂದವೋ ಅಥವಾ ಬೇರೆ ಏನೋ, ಸಿಎಂ ಏನು ಹೇಳಿದ್ದಾರೆ? ಅವರು ಕಾಂಗ್ರೆಸ್ ರೆಬಲ್ ಅಭ್ಯರ್ಥಿ ಎಂದಿದ್ದಾರೆ. ಯಾರು ಏನು ಬೇಕಾದರೂ ಹೇಳಿಕೊಳ್ಳಲಿ. ಅವರು ಬೇಕಾದರೆ ಸಂಪುಟ ವಿಸ್ತರಣೆ ವೇಳೆ ಲಖನ್ ಅವರನ್ನೇ ಸಚಿವರನ್ನಾಗಿ ಮಾಡಿಕೊಳ್ಳಲಿ’ ಎಂದರು.

ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಹಿಟ್ ಅಂಡ್ ರನ್ ನೀತಿ ಅನುಸರಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರದಲ್ಲಿ ಹಿಟ್ ಅಂಡ್ ರನ್ ಪ್ರಶ್ನೆಯೇ ಇಲ್ಲ. ನಾವು ಹಲವು ವಿಚಾರಗಳೊಂದಿಗೆ ಈ ವಿಷಯ ತರುತ್ತೇವೆ ಎಂದು ನುಡಿದರು. ಇದನ್ನೂ ಓದಿ: ಶ್ರೀನಿವಾಸ್ ಪೂಜಾರಿ ಒಂದು ರೂಪಾಯಿ ಖರ್ಚು ಮಾಡದೇ ಗೆದ್ದಿದ್ದಾರೆ: ಬಿ.ಎಲ್.ಸಂತೋಷ್

TAGGED:bjpcongressd k shivakumarReligious Conversion Lawಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
6 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
7 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
7 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
8 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
8 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?