ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿರುವ, ಮುಂದಿನ ಲೋಕಸಭೆ ಚುನಾವಣೆ (Lok Sabha Election) ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿರುವ ಜಿದ್ದಾಜಿದ್ದಿನ ಅಖಾಡ ಕರ್ನಾಟಕ ವಿಧಾನಸಭೆ ಚುನಾವಣೆಯ (Karnataka Assembly Election) ಮೊದಲ ಅಂಕಕ್ಕೆ ಇಂದು ತೆರೆ ಬಿದ್ದಿದೆ.
ಬುಧವಾರ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರಕ್ಕೆ (Campaign) ತೆರೆ ಬಿದ್ದಿದೆ. ಸ್ಥಳೀಯರಲ್ಲದ ನಾಯಕರು ಕ್ಷೇತ್ರಗಳನ್ನು ತೊರೆದರೆ ರಾಷ್ಟ್ರೀಯ ಮುಖಂಡರು ರಾಜ್ಯವನ್ನು ತೊರೆದಿದ್ದಾರೆ. ಇನ್ನು ಏನೇ ಇದ್ದರೂ ಮನೆ ಮನೆ ಪ್ರಚಾರದ ಆಟವಷ್ಟೇ ಬಾಕಿ ಉಳಿದಿದೆ. ಇದನ್ನೂ ಓದಿ: ಕೊಡಗು-ಕೇರಳ ಗಡಿಯಲ್ಲಿ ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕೂಂಬಿಂಗ್
ಚುನಾವಣಾ ಅಧಿಸೂಚನೆ ಹೊರಬಿದ್ದ ಮೇ 13ರಿಂದ ಇವತ್ತು ಸಂಜೆ 6 ಗಂಟೆಯವರೆಗೆ ಮತದಾರನ ಓಲೈಕೆಗಾಗಿ ಕೇಂದ್ರ, ರಾಜ್ಯ ನಾಯಕರು ಇನ್ನಿಲ್ಲದ ಕಸರತ್ತು ನಡೆಸಿದರು. ಇದನ್ನೂ ಓದಿ: ರಾಜಸ್ಥಾನದಲ್ಲಿ ಬೃಹತ್ ಲಿಥಿಯಂ ನಿಕ್ಷೇಪ ಪತ್ತೆ – ಇದಕ್ಕಿದೆ ಭಾರತದ 80% ಬೇಡಿಕೆ ಪೂರೈಸುವ ಸಾಮರ್ಥ್ಯ
ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಿದ್ದು, ಮುಂದಿನ ಮೂರು ದಿನ ಮದ್ಯ ಸಿಗುವುದಿಲ್ಲ. ಸುಗಮ ಮತದಾನಕ್ಕೆ ಚುನಾವಣಾ ಆಯೋಗ ಸಕಲ ಸಿದ್ದತೆಗಳನ್ನು ನಡೆಸಿದೆ. ಮಂಗಳವಾರ ಚುನಾವಣಾ ಸಿಬ್ಬಂದಿ ಮತಯಂತ್ರಗಳೊಂದಿಗೆ ನಿಗದಿತ ಮತಗಟ್ಟೆಗಳಿಗೆ ಎಂಟ್ರಿ ಕೊಡಲಿದ್ದಾರೆ.