ಬೆಳಗಾವಿ: ಅಥಣಿ ಕ್ಷೇತ್ರದ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ (Laxman Savadi) ರಾಜೀನಾಮೆ ನೀಡಿದ್ದು ಕಾಂಗ್ರೆಸ್ (Congress) ಸೇರುವ ಸಾಧ್ಯತೆಯಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಖಂಡಿತವಾಗಿಯೂ ತೀರ್ಮಾನ ಮಾಡಿದ್ದೇನೆ. ಭಿಕ್ಷೆ ಪಾತ್ರೆ ಇಟ್ಟುಕೊಂಡು ತಿರುಗುವನು ನಾನಲ್ಲ. ನಾನು ಸ್ವಾಭಿಮಾನಿ ರಾಜಕಾರಣಿ ಲಜ್ಜೆಗಟ್ಟ ರಾಜಕಾರಣಿ ಅಲ್ಲ. ಅಧಿಕಾರಿದ ಅಮಲಿನಲ್ಲಿ ನಾನಿಲ್ಲ. ಜಿಲ್ಲೆಯಲ್ಲಿ ಯಾರು ಬೆನ್ನಿಗೆ ಚೂರಿ ಹಾಕಿಲ್ಲ ಎಂದು ರಮೇಶ ಜಾರಕಿಹೊಳಿ ವಿರುದ್ಧ ಅಸಮಾಧಾನ ಹೊರಹಾಕಿದರು.
ಕೊನೆ ಗಳಿಗೆವರೆಗೂ ನಿನ್ನ ಜೊತೆ ಇದ್ದೇವೆ ಎಂದು ಬಿಜೆಪಿ (BJP) ನಾಯಕರು ಹೇಳಿದರು. ನನ್ನ ಜೊತೆಗೆ ಇದ್ದಾರೆ ಎಂದು ಭಾವಿಸಿದ್ದೆ. ಬಿಜೆಪಿ ಮುಖಂಡರು ನಿಷ್ಠಾವಂತ ಕಾರ್ಯಕರ್ತ. ಪಕ್ಷವನ್ನ ತಾಯಿಯ ಸ್ಥಾನದಲ್ಲಿ ಇಟ್ಟಿದ್ದೆ, ವಿಷ ಕೊಡುವುದಿಲ್ಲ ಎಂದಿದ್ದೆ. ಆದರೆ ತಾಯಿ ಕೂಡ ಭ್ರಷ್ಟಳಾಗಿದ್ದಾಳೆ ಎನ್ನುವ ಭಾವನೆ ಬರುತ್ತಿದೆ. ಅವತ್ತಿನ ಬಿಜೆಪಿ ಇಂದಿನ ಬಿಜೆಪಿಗೆ ಬಹಳ ವ್ಯತ್ಯಾಸ ಇದೆ. ತತ್ವ ಸಿದ್ಧಾಂತಗಳು ಬಿಜೆಪಿ ಪಕ್ಷದಲ್ಲಿ ಉಳಿದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಕಾಂಗ್ರೆಸ್ ನಾಯಕರ ಎದೆ ನಡುಗಿಸುವಂತಿದೆ ಬಿಜೆಪಿ ಪಟ್ಟಿ: ಈಶ್ವರಪ್ಪ
ಪಕ್ಷದಲ್ಲಿ ನಿಷ್ಠಾವಂತರನ್ನ ದೂರ ಮಾಡುವ ಕೆಲಸ ಆರಂಭವಾಗಿದೆ. ಇದು ಪಕ್ಷದ ದೂರ ದೃಷ್ಟಿ ಇರಬಹದು ಎಂದು ನನ್ನ ಅನಿಸಿಕೆಯಾಗಿದೆ. ಭಾರತೀಯ ಜನತಾ ಪಕ್ಷದ ನಾಯಕರಿಗೆ 20 ವರ್ಷಗಳ ಕಾಲ ಸಹಕಾರ ಆಶ್ರಯ ನೀಡಿದ್ದಕ್ಕೆ, ಪ್ರಧಾನಿ ಅವರಿಂದ ಹಿಡಿದು ಸಿಪಾಯಿವರೆಗೆ ಎಲ್ಲರೂ ಗೌರವದಿಂದ ನಡೆದುಕೊಂಡಿದ್ದಾರೆ. ನಿಮ್ಮ ಸಹಕಾರಕ್ಕೆ ಋಣಿಯಾಗಿರುತ್ತೇನೆ ಎಂದರು.
ಅನಂತಕುಮಾರ ಅವರಿಗೆ ನಮನ ಸಲ್ಲಿಸುತ್ತೇನೆ. ಪ್ರಶ್ನಾತೀತ ನಾಯಕ ಆ ಒಂದು ಹಿರಿಯ ಜೀವಿಗೆ ಯಡಿಯೂರಪ್ಪ ಅವರಿಗೂ ತಲೆಬಾಗಿ ನಮಸ್ಕಾರ. ನಮ್ಮ ತಂದೆ ತೀರಿ ಹೋದಾಗ ಸಾಂತ್ವಾನ ಹೇಳಿದ್ದರು. ಯಡಿಯೂರಪ್ಪ ಅವರಿಗೆ ವಿನಂತಿ ಮಾಡಿದ್ದೆ ನಿಮ್ಮನ್ನ ತಂದೆ ಸ್ಥಾನದಲ್ಲಿ ಇಡುತ್ತೇನೆ ಎಂದು ಹೇಳಿದ್ದೆ. ಅವರ ಬಗ್ಗೆ ಗೌರವವಿದೆ ಎಂದು ತಿಳಿಸಿದರು. ಇದನ್ನೂ ಓದಿ: 2 ಕಡೆ ಟಿಕೆಟ್ ಕೊಡ್ತಾರೆ ಅಂತ ಕನಸಲ್ಲೂ ಅನ್ಕೊಂಡಿರಲಿಲ್ಲ: ಸೋಮಣ್ಣ
ಬೊಮ್ಮಾಯಿ ಈ ಹಿಂದೆ ಕಾಂಗ್ರೆಸ್ ಸೇರಕು ಮುಂದಾಗಿದ್ದರು. ಸಿಸಿ ಪಾಟೀಲ್, ನಾನು ವಿನಂತಿ ಮಾಡಿ ಬಿಜೆಪಿಗೆ ಕರೆ ತಂದಿದ್ದೇವು. ನಮ್ಮ ವಿನಂತಿಗೆ ಅವರು ಬಿಜೆಪಿಗೆ ಬಂದಿದ್ದರು. ಆದರೆ ಅವರಿಗೆ ಎರಡನೇ ಬಾರಿಗೆ ಸಿಎಂ ಆಗುವ ಸೌಭಾಗ್ಯವಿಲ್ಲ. ಪ್ರಧಾನಿ ಆಗುವ ಯೋಗ ಅವರಿಗಿದೆ. ಬೊಮ್ಮಾಯಿ ಅವರಿಗೆ ಪ್ರಧಾನಿ ಆಗುವ ಶಕ್ತಿ ಭಗವಂತ ಕೊಡಲಿ. ಬೊಮ್ಮಾಯಿ ಅವರಿಗೆ ಪಿಎಂ ಆಗುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಸಿಎಂ ವಿರುದ್ಧ ¸ ವ್ಯಂಗ್ಯವಾಡಿದರು.