Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯವನ್ನು ರಕ್ಷಣೆ ಮಾಡುವ ಪಕ್ಷಕ್ಕೆ ಅಧಿಕಾರ ಕೊಡಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯವನ್ನು ರಕ್ಷಣೆ ಮಾಡುವ ಪಕ್ಷಕ್ಕೆ ಅಧಿಕಾರ ಕೊಡಿ: ಸಿದ್ದರಾಮಯ್ಯ

Districts

ರಾಜ್ಯವನ್ನು ರಕ್ಷಣೆ ಮಾಡುವ ಪಕ್ಷಕ್ಕೆ ಅಧಿಕಾರ ಕೊಡಿ: ಸಿದ್ದರಾಮಯ್ಯ

Public TV
Last updated: April 16, 2023 4:39 pm
Public TV
Share
2 Min Read
Siddaramaiah 1 2
SHARE

– ಕರ್ನಾಟಕದ ಬ್ಯಾಂಕ್‍ಗಳನ್ನ ನುಂಗಾಯ್ತು, ಈಗ ನಂದಿನಿ ನುಂಗಲು BJP ಹೊರಟಿದೆ

ಕೋಲಾರ: ಚುನಾವಣೆಯಲ್ಲಿ ರಾಜ್ಯವನ್ನು ರಕ್ಷಣೆ ಮಾಡುವ ಪಕ್ಷಕ್ಕೆ ಅಧಿಕಾರ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಕಾಂಗ್ರೆಸ್ (Congress) ಜೈಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 4 ವರ್ಷಗಳಿಂದ ಬಿಜೆಪಿ (BJP) ಸರ್ಕಾರ ಇದೆ. ಮೇ 10ರಂದು ಚುನಾವಣೆ (Election) ನಡೆಯಲಿದೆ. ರಾಜ್ಯದ ನೆಲ, ಜಲ, ಭಾಷೆಯನ್ನು ಯಾರು ರಕ್ಷಣೆ ಮಾಡುತ್ತಾರೆ ಅಂತ ನೀವು ವಿಚಾರ ಮಾಡಿ ಎಂದು ಹೇಳಿದರು.

congress

ಮೋದಿ 9 ವರ್ಷದಿಂದ ಅಧಿಕಾರ ಮಾಡುತ್ತಿದ್ದಾರೆ. ಈ 5 ವರ್ಷದಲ್ಲಿ ರಾಜ್ಯದಲ್ಲಿ 3 ಜನ ಸಿಎಂ ಆದರು. ಕುಮಾರಸ್ವಾಮಿ, ಯಡಿಯೂರಪ್ಪ, ಬೊಮ್ಮಾಯಿ ಸಿಎಂ ಆಗಿದ್ದರು. ಮೋದಿ (Narendra Modi) ಅವರು ಬೊಮ್ಮಾಯಿ ಅವರು ಡಬಲ್ ಎಂಜಿನ್ ಸರ್ಕಾರ ಅಂತಾರೆ. ಎರಡು ಕಡೆ ಸರ್ಕಾರ ಇರುವುದರಿಂದ ರಾಜ್ಯದ ಅಭಿವೃದ್ಧಿ ವೇಗವಾಗಿ ಆಗುತ್ತದೆ ಅಂತಾರೆ. ಆದರೆ ಡಬಲ್ ಎಂಜಿನ್ ಸರ್ಕಾರ ಬಂದ ಮೇಲೆ ರಾಜ್ಯ ಕೆಟ್ಟ ಹೆಸರು ತೆಗೆದುಕೊಂಡಿದೆ ಎಂದು ಕಿಡಿಕಾರಿದರು.

ರಾಜ್ಯದ ಗೌರವವನ್ನು, ಮಾನ ಮರ್ಯಾದೆಯನ್ನು ಕಾಂಗ್ರೆಸ್ ಅವರು ಹಾಳು ಮಾಡಿದ್ದಾರೆ ಎಂದು ಬಾಯಿ ತಪ್ಪಿ ಹೇಳಿದ ಅವರು, 40% ಕಮಿಷನ್ ಹೊಡೆದಿದ್ದಾರೆ. ಇಂತಹ ಭ್ರಷ್ಟ ಸರ್ಕಾರ ಕರ್ನಾಟಕದ ಇತಿಹಾಸದಲ್ಲಿ ಬಂದಿಲ್ಲ ಅಂತ ಜನ ಹೇಳುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

bjp flag

ಕರ್ನಾಟಕದ ಬ್ಯಾಂಕ್‍ಗಳನ್ನು ನುಂಗಿದ್ದು ಆಯ್ತು. ಈಗ ನಂದಿನಿ ನುಂಗಲು ಹೊರಟಿದ್ದಾರೆ. ಲಕ್ಷಾಂತರ ರೈತರು ಹಾಲು ಉತ್ಪಾದನೆ ಮಾಡಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಅಮಿತ್ ಶಾ ಅವರು ಸಹಕಾರ ಮಂತ್ರಿ ಆದ ಮೇಲೆ ಕೆಎಂಎಫ್ ಅನ್ನ ಅಮೂಲ್‍ನಲ್ಲಿ ಮರ್ಜ್ ಮಾಡುವ ಪ್ರಯತ್ನ ಮಾಡಿದರು. ಈಗ ಅಮೂಲ್ ಪ್ರಾಡಕ್ಟ್‌ಗಳನ್ನ ಕರ್ನಾಟಕದ ಮಾರುಕಟ್ಟೆಗೆ ತಂದು ನಂದಿನ ಪ್ರಾಡಕ್ಟ್‌ಗಳನ್ನ ಮಾರಾಟ ಮಾಡದಂತೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕರ್ನಾಟಕದಲ್ಲಿ ನಂದಿನಿ ಪ್ರಾಡಕ್ಟ್‌ಗಳು ದೊರೆಯುತ್ತಿಲ್ಲ. ಕೃತಕ ಅಭಾವ ನಿರ್ಮಾಣ ಮಾಡಿ ಅಮೂಲ್ ಕರ್ನಾಟಕಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಇವತ್ತು ಹಾಲು ಉತ್ಪಾದನೆ 81 ಲಕ್ಷ ಲೀಟರ್‌ಗೆ ಇಳಿದಿದೆ. ಕನ್ನಡಿಗರಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಈ ದುಷ್ಟ ಪ್ರಯತ್ನವನ್ನ ನಾವು ತಡೆಯಬೇಕು. ಇದು ಕನ್ನಡಿಗರ ಮರ್ಯಾದೆ ಪ್ರಶ್ನೆ. ನಾವೆಲ್ಲರೂ ಕನ್ನಡಿಗರು. ಅಮೂಲ್ ಪದಾರ್ಥಗಳನ್ನ ಕೊಂಡುಕೊಳ್ಳಬಾರದು. ನಂದಿನಿ ಪ್ರಾಡಕ್ಟ್ ಮಾತ್ರ ಖರೀದಿ ಮಾಡುತ್ತೇವೆ ಅಂತ ಶಪಥ ಮಾಡಬೇಕು. ಆ ಮೂಲಕ ಕೇಂದ್ರದ ಹುನ್ನಾರ, ಶಾ ಹುನ್ನಾರ ತಡೆಗಟ್ಟಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಚಿಂಚನಸೂರ್ ಆರೋಗ್ಯ ವಿಚಾರಿಸಿದ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು

ಕರ್ನಾಟಕದ ಜನ ಈ ತೀರ್ಮಾನ ಮಾಡಬೇಕು. ಕೇಂದ್ರದ ಹುನ್ನಾರ ಬಯಲಿಗೆ ಎಳೆಯಬೇಕು. ಬಿಜೆಪಿ ಸರ್ಕಾರವನ್ನು ಚುನಾವಣೆಯಲ್ಲಿ ಕಿತ್ತು ಎಸೆದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುವ ಪ್ರಯತ್ನ ಮಾಡಬೇಕು. ಆಗ ಕೆಎಂಎಫ್ ಉಳಿಯುತ್ತದೆ. ರೈತರ ಬದುಕು ಉಳಿಯುತ್ತೆ. ನಾವು 4 ಗ್ಯಾರಂಟಿ ಕೊಟ್ಟಿದ್ದೇವೆ. ತೆರಿಗೆ ಹಾಕಿ ಜನರನ್ನ ಸುಲಿಗೆ ಮಾಡ್ತಿದ್ದಾರೆ. 2 ಸಾವಿರ ಮಹಿಳೆಯರಿಗೆ ಹಣ ಕೊಡುತ್ತೇವೆ. 10 ಕೆಜಿ ಅಕ್ಕಿ ಕೊಡುತ್ತೇವೆ. ಯುವಕರಿಗೆ ಯುವ ನಿಧಿ ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಹೋಗುವವರು ಹೋಗಲಿ ಪಕ್ಷ ಸ್ವಚ್ಛವಾಗುತ್ತದೆ: ಶೆಟ್ಟರ್ ವಿರುದ್ಧ ಜಾರಕಿಹೊಳಿ ಕಿಡಿ

TAGGED:bjpcongresselectionsiddaramaiahಕಾಂಗ್ರೆಸ್ಚುನಾವಣೆಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post
Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories

You Might Also Like

shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
9 minutes ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
50 minutes ago
AI Image
Crime

ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Public TV
By Public TV
1 hour ago
SpiceJet
Latest

ಎಂಜಿನ್ ವೈಫಲ್ಯದಿಂದಾಗಿ ಲೇಹ್‌ಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನ ದೆಹಲಿಗೆ ವಾಪಸ್

Public TV
By Public TV
1 hour ago
US Snowstorm
Latest

ಅಮೆರಿಕದಲ್ಲಿ ಭಾರಿ ಹಿಮಪಾತ; 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು – ಶಾಲೆಗಳಿಗೆ ರಜೆ

Public TV
By Public TV
1 hour ago
hunsur gold robbery
Crime

ಹುಣಸೂರಿನಲ್ಲಿ ಕದ್ದ 10 ಕೋಟಿ ಮೌಲ್ಯದ ಚಿನ್ನವನ್ನ ನೇಪಾಳದಲ್ಲಿ ಮಾರಿದ ದರೋಡೆಕೋರರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?