Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯವನ್ನು ರಕ್ಷಣೆ ಮಾಡುವ ಪಕ್ಷಕ್ಕೆ ಅಧಿಕಾರ ಕೊಡಿ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯವನ್ನು ರಕ್ಷಣೆ ಮಾಡುವ ಪಕ್ಷಕ್ಕೆ ಅಧಿಕಾರ ಕೊಡಿ: ಸಿದ್ದರಾಮಯ್ಯ

Districts

ರಾಜ್ಯವನ್ನು ರಕ್ಷಣೆ ಮಾಡುವ ಪಕ್ಷಕ್ಕೆ ಅಧಿಕಾರ ಕೊಡಿ: ಸಿದ್ದರಾಮಯ್ಯ

Public TV
Last updated: April 16, 2023 4:39 pm
Public TV
Share
2 Min Read
Siddaramaiah 1 2
SHARE

– ಕರ್ನಾಟಕದ ಬ್ಯಾಂಕ್‍ಗಳನ್ನ ನುಂಗಾಯ್ತು, ಈಗ ನಂದಿನಿ ನುಂಗಲು BJP ಹೊರಟಿದೆ

ಕೋಲಾರ: ಚುನಾವಣೆಯಲ್ಲಿ ರಾಜ್ಯವನ್ನು ರಕ್ಷಣೆ ಮಾಡುವ ಪಕ್ಷಕ್ಕೆ ಅಧಿಕಾರ ಕೊಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಕಾಂಗ್ರೆಸ್ (Congress) ಜೈಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 4 ವರ್ಷಗಳಿಂದ ಬಿಜೆಪಿ (BJP) ಸರ್ಕಾರ ಇದೆ. ಮೇ 10ರಂದು ಚುನಾವಣೆ (Election) ನಡೆಯಲಿದೆ. ರಾಜ್ಯದ ನೆಲ, ಜಲ, ಭಾಷೆಯನ್ನು ಯಾರು ರಕ್ಷಣೆ ಮಾಡುತ್ತಾರೆ ಅಂತ ನೀವು ವಿಚಾರ ಮಾಡಿ ಎಂದು ಹೇಳಿದರು.

congress

ಮೋದಿ 9 ವರ್ಷದಿಂದ ಅಧಿಕಾರ ಮಾಡುತ್ತಿದ್ದಾರೆ. ಈ 5 ವರ್ಷದಲ್ಲಿ ರಾಜ್ಯದಲ್ಲಿ 3 ಜನ ಸಿಎಂ ಆದರು. ಕುಮಾರಸ್ವಾಮಿ, ಯಡಿಯೂರಪ್ಪ, ಬೊಮ್ಮಾಯಿ ಸಿಎಂ ಆಗಿದ್ದರು. ಮೋದಿ (Narendra Modi) ಅವರು ಬೊಮ್ಮಾಯಿ ಅವರು ಡಬಲ್ ಎಂಜಿನ್ ಸರ್ಕಾರ ಅಂತಾರೆ. ಎರಡು ಕಡೆ ಸರ್ಕಾರ ಇರುವುದರಿಂದ ರಾಜ್ಯದ ಅಭಿವೃದ್ಧಿ ವೇಗವಾಗಿ ಆಗುತ್ತದೆ ಅಂತಾರೆ. ಆದರೆ ಡಬಲ್ ಎಂಜಿನ್ ಸರ್ಕಾರ ಬಂದ ಮೇಲೆ ರಾಜ್ಯ ಕೆಟ್ಟ ಹೆಸರು ತೆಗೆದುಕೊಂಡಿದೆ ಎಂದು ಕಿಡಿಕಾರಿದರು.

ರಾಜ್ಯದ ಗೌರವವನ್ನು, ಮಾನ ಮರ್ಯಾದೆಯನ್ನು ಕಾಂಗ್ರೆಸ್ ಅವರು ಹಾಳು ಮಾಡಿದ್ದಾರೆ ಎಂದು ಬಾಯಿ ತಪ್ಪಿ ಹೇಳಿದ ಅವರು, 40% ಕಮಿಷನ್ ಹೊಡೆದಿದ್ದಾರೆ. ಇಂತಹ ಭ್ರಷ್ಟ ಸರ್ಕಾರ ಕರ್ನಾಟಕದ ಇತಿಹಾಸದಲ್ಲಿ ಬಂದಿಲ್ಲ ಅಂತ ಜನ ಹೇಳುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

bjp flag

ಕರ್ನಾಟಕದ ಬ್ಯಾಂಕ್‍ಗಳನ್ನು ನುಂಗಿದ್ದು ಆಯ್ತು. ಈಗ ನಂದಿನಿ ನುಂಗಲು ಹೊರಟಿದ್ದಾರೆ. ಲಕ್ಷಾಂತರ ರೈತರು ಹಾಲು ಉತ್ಪಾದನೆ ಮಾಡಿ ಬದುಕು ಕಟ್ಟಿಕೊಳ್ಳುತ್ತಿದ್ದಾರೆ. ಅಮಿತ್ ಶಾ ಅವರು ಸಹಕಾರ ಮಂತ್ರಿ ಆದ ಮೇಲೆ ಕೆಎಂಎಫ್ ಅನ್ನ ಅಮೂಲ್‍ನಲ್ಲಿ ಮರ್ಜ್ ಮಾಡುವ ಪ್ರಯತ್ನ ಮಾಡಿದರು. ಈಗ ಅಮೂಲ್ ಪ್ರಾಡಕ್ಟ್‌ಗಳನ್ನ ಕರ್ನಾಟಕದ ಮಾರುಕಟ್ಟೆಗೆ ತಂದು ನಂದಿನ ಪ್ರಾಡಕ್ಟ್‌ಗಳನ್ನ ಮಾರಾಟ ಮಾಡದಂತೆ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಕರ್ನಾಟಕದಲ್ಲಿ ನಂದಿನಿ ಪ್ರಾಡಕ್ಟ್‌ಗಳು ದೊರೆಯುತ್ತಿಲ್ಲ. ಕೃತಕ ಅಭಾವ ನಿರ್ಮಾಣ ಮಾಡಿ ಅಮೂಲ್ ಕರ್ನಾಟಕಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ಇವತ್ತು ಹಾಲು ಉತ್ಪಾದನೆ 81 ಲಕ್ಷ ಲೀಟರ್‌ಗೆ ಇಳಿದಿದೆ. ಕನ್ನಡಿಗರಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಈ ದುಷ್ಟ ಪ್ರಯತ್ನವನ್ನ ನಾವು ತಡೆಯಬೇಕು. ಇದು ಕನ್ನಡಿಗರ ಮರ್ಯಾದೆ ಪ್ರಶ್ನೆ. ನಾವೆಲ್ಲರೂ ಕನ್ನಡಿಗರು. ಅಮೂಲ್ ಪದಾರ್ಥಗಳನ್ನ ಕೊಂಡುಕೊಳ್ಳಬಾರದು. ನಂದಿನಿ ಪ್ರಾಡಕ್ಟ್ ಮಾತ್ರ ಖರೀದಿ ಮಾಡುತ್ತೇವೆ ಅಂತ ಶಪಥ ಮಾಡಬೇಕು. ಆ ಮೂಲಕ ಕೇಂದ್ರದ ಹುನ್ನಾರ, ಶಾ ಹುನ್ನಾರ ತಡೆಗಟ್ಟಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಅಭ್ಯರ್ಥಿ ಚಿಂಚನಸೂರ್ ಆರೋಗ್ಯ ವಿಚಾರಿಸಿದ ಬಿಜೆಪಿ, ಜೆಡಿಎಸ್ ಅಭ್ಯರ್ಥಿಗಳು

ಕರ್ನಾಟಕದ ಜನ ಈ ತೀರ್ಮಾನ ಮಾಡಬೇಕು. ಕೇಂದ್ರದ ಹುನ್ನಾರ ಬಯಲಿಗೆ ಎಳೆಯಬೇಕು. ಬಿಜೆಪಿ ಸರ್ಕಾರವನ್ನು ಚುನಾವಣೆಯಲ್ಲಿ ಕಿತ್ತು ಎಸೆದು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರುವ ಪ್ರಯತ್ನ ಮಾಡಬೇಕು. ಆಗ ಕೆಎಂಎಫ್ ಉಳಿಯುತ್ತದೆ. ರೈತರ ಬದುಕು ಉಳಿಯುತ್ತೆ. ನಾವು 4 ಗ್ಯಾರಂಟಿ ಕೊಟ್ಟಿದ್ದೇವೆ. ತೆರಿಗೆ ಹಾಕಿ ಜನರನ್ನ ಸುಲಿಗೆ ಮಾಡ್ತಿದ್ದಾರೆ. 2 ಸಾವಿರ ಮಹಿಳೆಯರಿಗೆ ಹಣ ಕೊಡುತ್ತೇವೆ. 10 ಕೆಜಿ ಅಕ್ಕಿ ಕೊಡುತ್ತೇವೆ. ಯುವಕರಿಗೆ ಯುವ ನಿಧಿ ಯೋಜನೆ ಜಾರಿ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಹೋಗುವವರು ಹೋಗಲಿ ಪಕ್ಷ ಸ್ವಚ್ಛವಾಗುತ್ತದೆ: ಶೆಟ್ಟರ್ ವಿರುದ್ಧ ಜಾರಕಿಹೊಳಿ ಕಿಡಿ

TAGGED:bjpcongresselectionsiddaramaiahಕಾಂಗ್ರೆಸ್ಚುನಾವಣೆಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

01 16
Latest

Video | ಡಿಕೆಶಿ ಇದ್ದ ವಿಮಾನ ಲ್ಯಾಂಡಿಂಗ್ ವೇಳೆ ಏಕಾಏಕಿ ಟೇಕಾಫ್‌ – ಆತಂಕಕ್ಕೆ ಒಳಗಾದ ಪ್ರಯಾಣಿಕರು!

Public TV
By Public TV
1 hour ago
Petrol 4
Bagalkot

ಕೊಲ್ಲಿ ಯುದ್ಧದ ಮಧ್ಯೆ ಕರ್ನಾಟಕದಲ್ಲಿ ತೈಲಾತಂಕ – ಡ್ರಮ್, ಕ್ಯಾನ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ತುಂಬಿಸಿಕೊಂಡ ಜನ

Public TV
By Public TV
2 hours ago
IPL RCB
Bengaluru City

Breaking | 17 ಸಾವಿರ ಕೋಟಿಗೆ ಆರ್‌ಸಿಬಿ ಸೇಲ್‌

Public TV
By Public TV
2 hours ago
Kalaburagi Youth Death Due To Thunder
Districts

ಕಬ್ಬು ನಾಟಿ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

Public TV
By Public TV
2 hours ago
Haveri Tomb Of Early Humans Found In Ranebennur
Districts

ರಾಣೇಬೆನ್ನೂರಿನಲ್ಲಿ 3,200 ವರ್ಷಗಳ ಹಿಂದಿನ ಆದಿ ಮಾನವರ ಸಮಾಧಿ ಪತ್ತೆ

Public TV
By Public TV
3 hours ago
Chitradurga Murder
Chitradurga

ಎರಡು ಕುಟುಂಬದ ಮಧ್ಯೆ ಆಸ್ತಿ ವೈಷಮ್ಯ – ಅಪ್ರಾಪ್ತನಿಂದ ವ್ಯಕ್ತಿಯ ಕೊಲೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?