ಅಮಿತ್ ಶಾ ರಾಜ್ಯ ಪ್ರವಾಸದಲ್ಲಿ ಯಾವುದೇ ಅಹಿತಕರ ಘಟನೆ ಆಗದಂತೆ ಮುನ್ನೆಚ್ಚರಿಕೆ: ಅಲೋಕ್ ಕುಮಾರ್

Public TV
1 Min Read
AMIT SHAH

ಬೆಳಗಾವಿ: ಜಿಲ್ಲೆಗೆ ಕೇಂದ್ರ ಗೃಹ ಖಾತೆ ಸಚಿವ ಅಮಿತ್ ಶಾ (Amit Shah) ಭೇಟಿ ಹಿನ್ನೆಲೆ ಯಾವುದೇ ಅಹಿತಕರ ಘಟನೆ ಆಗಬಾರದು ಅಂತಾ ವ್ಯವಸ್ಥೆ ಮಾಡಿದ್ದೇವೆ. ಅದೇ ನಿಟ್ಟಿನಲ್ಲಿ ನಮ್ಮ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ನಿರ್ದೇಶನ ಕೊಟ್ಟಿದ್ದೇವೆ ಎಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ (ADGP) ಅಲೋಕ್ ಕುಮಾರ್ (Alok kumar) ಹೇಳಿದರು.

ALOKKUMAR

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜ.28 ರಂದು ಅಮಿತ್ ಶಾ ನಾಲ್ಕು ಕಡೆ ಬರುತ್ತಿದ್ದಾರೆ. ಗುರುವಾರ ರಾತ್ರಿ ಹುಬ್ಬಳ್ಳಿಯಲ್ಲಿ ಅವರದ್ದು ವಾಸ್ತವ್ಯ ಇದೆ. ನಾಳೆ ಕೆಎಲ್‍ಇ ಸಂಸ್ಥೆಯ ಭೂಮರಡ್ಡಿ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಾರೆ. ಧಾರವಾಡದಲ್ಲಿ ಒಂದು ಕಾರ್ಯಕ್ರಮ, ಇದಾದ ಬಳಿಕ ಕುಂದಗೋಳದಲ್ಲಿ ರೋಡ್ ಶೋದಲ್ಲಿ ಭಾಗಿಯಾಗುತ್ತಾರೆ. ನಂತರ ಬೆಳಗಾವಿ ಜಿಲ್ಲೆಯ ಎಂಕೆ ಹುಬ್ಬಳ್ಳಿಗೆ ಬರುತ್ತಾರೆ. ಅಲ್ಲಿಂದ ಬೆಳಗಾವಿಗೆ ಆಗಮಿಸಿ ಪಾರ್ಟಿ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ. 28 ರಂದು ರಾತ್ರಿ 10 ಗಂಟೆಗೆ ವಾಪಾಸ್ ದೆಹಲಿಗೆ ಪ್ರಯಾಣ ಬೆಳಸಲಿದ್ದಾರೆ ಎಂದರು. ಇದನ್ನೂ ಓದಿ: ಜನವರಿ 27, 28ಕ್ಕೆ ಧಾರವಾಡ, ಬೆಳಗಾವಿಗೆ ಅಮಿತ್ ಶಾ ಭೇಟಿ

ಅಮಿತ್ ಶಾ ಪ್ರವಾಸ ಹಿನ್ನೆಲೆಯಲ್ಲಿ ಡಿಐಜಿ, ಐಜಿಪಿ ಹಾಗೂ ಎಸ್‍ಪಿಗಳನ್ನು ಬೇರೆ ಬೇರೆ ಜಿಲ್ಲೆಗಳಿಂದ ಬಂದೋಬಸ್ತ್‌ಗೆ ಕರೆಸಿಕೊಳ್ಳಲಾಗಿದೆ. ಬಹಳ ದೊಡ್ಡ ಮಟ್ಟದ ಬಂದೋಬಸ್ತ್ ಇದಾಗಿದ್ದು ನಾಲ್ಕೈದು ಕಡೆ ಅವರ ವಿಸಿಟಿ (VCT) ಇದೆ. ಒಂದೂವರೆ ದಿನ ಕರ್ನಾಟಕದಲ್ಲಿ ಅವರ ಪ್ರವಾಸ ಇದೆ. ಈ ವೇಳೆ ಯಾವುದೇ ಅಹಿತಕರ ಘಟನೆ ಆಗಬಾರದು ಅಂತಾ ವ್ಯವಸ್ಥೆ ಮಾಡಿದ್ದೇವೆ. ಅದೇ ನಿಟ್ಟಿನಲ್ಲಿ ನಮ್ಮ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡಿ ನಿರ್ದೇಶನ ಕೊಟ್ಟಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಸಾಧನೆ ಮರೆಯಲು ಸಾಧ್ಯವಿಲ್ಲ: ಕೆ.ಗೋಪಾಲಯ್ಯ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *