Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ತವರು ಕ್ಷೇತ್ರಕ್ಕೆ ಬರ್ತಿದ್ದಾರೆ ಸಿದ್ದು – ನೇರ ಎದುರಾಳಿಗಳಾಗ್ತಿದ್ದಾರೆ `ಗುಡ್ ಓಲ್ಡ್ ಫ್ರೆಂಡ್ಸ್’…!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ತವರು ಕ್ಷೇತ್ರಕ್ಕೆ ಬರ್ತಿದ್ದಾರೆ ಸಿದ್ದು – ನೇರ ಎದುರಾಳಿಗಳಾಗ್ತಿದ್ದಾರೆ `ಗುಡ್ ಓಲ್ಡ್ ಫ್ರೆಂಡ್ಸ್’…!

Districts

ತವರು ಕ್ಷೇತ್ರಕ್ಕೆ ಬರ್ತಿದ್ದಾರೆ ಸಿದ್ದು – ನೇರ ಎದುರಾಳಿಗಳಾಗ್ತಿದ್ದಾರೆ `ಗುಡ್ ಓಲ್ಡ್ ಫ್ರೆಂಡ್ಸ್’…!

Public TV
Last updated: September 5, 2017 2:50 pm
Public TV
Share
3 Min Read
siddaramaiah gt devegowda
SHARE

ಕೆ.ಪಿ.ನಾಗರಾಜ್
ಮೈಸೂರು: ರಾಜ್ಯ ರಾಜಕೀಯದಲ್ಲಿ ನೂರಾರು ಉಪಚುನಾವಣೆಗಳು ನಡೆದಿವೆ. ಆಯಾ ಆಯಾ ಜಿಲ್ಲೆ ಮಟ್ಟಿಗೆ ಮತ್ತು ಆ ದಿನಗಳ ಮಟ್ಟಿಗೆ ಮಾತ್ರ ಉಪ ಚುನಾವಣೆಗಳು ದೊಡ್ಡ ಸದ್ದು ಮಾಡಿವೆ. ಆದರೆ, ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಉಪ ಚುನಾವಣೆಯಷ್ಟು ದೊಡ್ಡ ಸದ್ದು, ಗದ್ದಲ, ರೋಚಕತೆ ಸೃಷ್ಟಿಸಿದ ಉಪ ಚುನಾವಣೆ ನಡೆದಿಲ್ಲ. ಅಷ್ಟರ ಮಟ್ಟಿಗೆ ಚಾಮುಂಡೇಶ್ವರಿ ಕ್ಷೇತ್ರದ ಉಪಚುನಾವಣೆ ರಾಜ್ಯ ರಾಜಕೀಯದಲ್ಲಿ ಆ ಕಾಲಕ್ಕೆ ಸಂಚಲನವನ್ನೇ ಸೃಷ್ಟಿಸಿತ್ತು. ಇದಕ್ಕೆಲ್ಲ ಕಾರಣವಾಗಿದ್ದು ಇವತ್ತಿನ ಸಿಎಂ ಸಿದ್ದರಾಮಯ್ಯ.!.

ಜೆಡಿಎಸ್ ತೊರೆದು ಹೊರ ಬಂದು ಉಪ ಚುನಾವಣೆ ಎದುರಿಸಿದ್ದ ಸಿದ್ದರಾಮಯ್ಯಗೆ ಆ ಚುನಾವಣೆ ಇಡೀ ಜೀವನದ ದೊಡ್ಡ ಅಗ್ನಿಪರೀಕ್ಷೆ. ಅವತ್ತು, ಚಾಮುಂಡೇಶ್ವರಿ ಕ್ಷೇತ್ರದ ಮತದಾರ ಅವರನ್ನು ಕೈ ಹಿಡಿಯದೆ ಇದ್ದಿದ್ದರೆ ಸಿದ್ದರಾಮಯ್ಯ ರಾಜಕೀಯ ಜೀವನಕ್ಕೆ ಎಂಥಹ ಪೆಟ್ಟು ಬೀಳುತ್ತಿತ್ತು ಎಂಬುದು ಊಹೆಗೆ ಸಿಗುವುದಿಲ್ಲ. ಹೀಗೆ, ಜೀವದಾನ ಕೊಟ್ಟಂತಹ ಕ್ಷೇತ್ರವನ್ನು ಸಿದ್ದರಾಮಯ್ಯ ಕ್ಷೇತ್ರ ಪುನರ್ ವಿಂಗಡಣೆಯ ತರುವಾಯ ಬಿಟ್ಟು ಹೊಸದಾಗಿ ಸೃಷ್ಟಿಯಾದ ವರುಣಾ ಕ್ಷೇತ್ರಕ್ಕೆ ಜಿಗಿದರು.

5 ಬಾರಿ ಚಾಮುಂಡೇಶ್ವರಿ ಕ್ಷೇತ್ರದಿಂದ ಆಯ್ಕೆಯಾಗಿ ಎರಡು ಬಾರಿ ಸೋಲು ಕಂಡಿದ್ದ ಕ್ಷೇತ್ರವನ್ನು ತೊರೆದು ವರುಣಾ ಕ್ಷೇತ್ರಕ್ಕೆ ಹೋದ ಸಿದ್ದರಾಮಯ್ಯ ಅಲ್ಲೂ ಎರಡು ಬಾರಿ ಗೆದ್ದಿದ್ದಾರೆ. ಈಗ, ಸಿದ್ದರಾಮಯ್ಯ ಮತ್ತೆ ತಮ್ಮ ತವರು ಕ್ಷೇತ್ರವಾದ ಚಾಮುಂಡೇಶ್ವರಿಗೆ ಬರಲು ಮುಂದಾಗಿದ್ದಾರೆ. ತಮ್ಮ ಪಾಲಿಗೆ ಬಹಳ ಸೇಫ್ ಆಗಿರುವ ವರುಣಾ ಕ್ಷೇತ್ರವನ್ನು ಮಗ ಡಾ.ಯತೀಂದ್ರ ಅವರಿಗೆ ಬಿಟ್ಟು ತಾವು ಪುನಃ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರಲು ಪ್ಲಾನ್ ಮಾಡುತ್ತಿದ್ದಾರೆ. ಅಲ್ಲದೆ, ಈ ವಿಚಾರವನ್ನು ಅವರೇ ಎಲ್ಲಾ ಕಡೆ ಹೇಳುತ್ತಿದ್ದಾರೆ. ಅಲ್ಲಿಗೆ, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವರ್ಸಸ್ ಜಿ.ಟಿ. ದೇವೇಗೌಡ ಅನ್ನೋದು ಫಿಕ್ಸ್ ಆದಂತೆ ಕಾಣುತ್ತಿದೆ.

ಸಿದ್ದರಾಮಯ್ಯ ಮತ್ತು ಜಿ.ಟಿ. ದೇವೇಗೌಡ ಇಬ್ಬರು 1983ರಿಂದ ಜೊತೆಯಾಗಿದ್ದವರು. 2006ರಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ ಸೇರಿದರು. ಜಿಟಿಡಿ ಜೆಡಿಎಸ್ ನಲ್ಲೇ ಉಳಿದಿದ್ದರು. ಹುಣಸೂರು ಕ್ಷೇತ್ರ ಪ್ರತಿನಿಧಿಸುತ್ತಿದ್ದ ಜಿ.ಟಿ. ದೇವೇಗೌಡ, ಬಿಜೆಪಿಯಿಂದ ಅಲ್ಲಿ ಸ್ಪರ್ಧಿಸಿ ಸೋಲು ಕಂಡ ಮೇಲೆ ಕಳೆದ ಚುನಾವಣೆ ವೇಳೆ ಮತ್ತೆ ಜೆಡಿಎಸ್‍ಗೆ ಬಂದು ಚಾಮುಂಡೇಶ್ವರಿ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಇಡೀ ಕ್ಷೇತ್ರವನ್ನು ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಳ್ಳುವಲ್ಲಿ ಜಿಟಿಡಿ ಯಶಸ್ವಿಯಾಗಿದ್ದಾರೆ. ಈ ಆತ್ಮವಿಶ್ವಾಸ ಇರುವ ಕಾರಣಕ್ಕೆ ತಮ್ಮ ವಿರುದ್ಧ ಸಿಎಂ ಸ್ಪರ್ಧಿಸಿದರೂ ನನಗೆ ಭಯವಿಲ್ಲ. ಅವರಿಗೆ ಸ್ವಾಗತ ಕೋರುತ್ತೇನೆ ಅಂತಾ ಸಿಎಂ ಎದುರೇ ಸಾರ್ವಜನಿಕವಾಗಿ ಹೇಳಿದ್ದಾರೆ.

ಜಾತಿ ಲೆಕ್ಕಾಚಾರ: ಕ್ಷೇತ್ರದಲ್ಲಿ ಒಕ್ಕಲಿಗರ ಸಂಖ್ಯೆ ಹೆಚ್ಚಿದೆ. ನಂತರದ ಸ್ಥಾನದಲ್ಲಿ ಕುರುಬರು, ನಾಯಕರು, ಲಿಂಗಾಯತರು, ದಲಿತರು ಹಾಗೂ ಇತರೆ ಹಿಂದುಳಿದ ವರ್ಗದವರು ಇದ್ದಾರೆ. ಜಾತಿ ಸಮೀಕರಣ ನೋಡಿದರೆ ಸಿಎಂಗೆ ಚಾಮುಂಡೇಶ್ವರಿ ಕ್ಷೇತ್ರಕ್ಕಿಂತಾ ವರುಣಾ ಕ್ಷೇತ್ರ ಬಹಳ ಸೇಫ್. ಜೊತೆಗೆ, ವರುಣಾ ಕ್ಷೇತ್ರದಲ್ಲಿ ಸಿಎಂಗೆ ಪೈಪೋಟಿ ಕೊಡುವಂತಹ ಅಭ್ಯರ್ಥಿಗಳು ಯಾವುದೇ ಪಕ್ಷದಲ್ಲೂ ಇಲ್ಲ. ಆದರೂ, ಮಗನ ರಾಜಕೀಯ ಹಿತದೃಷ್ಟಿಯಿಂದ ವರುಣಾವನ್ನು ಮಗನಿಗೆ ಬಿಟ್ಟುಕೊಟ್ಟು ತವರು ಕ್ಷೇತ್ರಕ್ಕೆ ಮರಳಿ ತಮ್ಮ ಚುನಾವಣಾ ರಾಜಕೀಯದ ಕೊನೆ ಆಟ ಆಡಲಿದ್ದಾರೆ.

ಸಿದ್ದರಾಮಯ್ಯ ಪಾಲಿಗೆ ಚಾಮುಂಡೇಶ್ವರಿ ಕ್ಷೇತ್ರ ರಾಜಕೀಯ ಹುಟ್ಟು ಮತ್ತು ರಾಜಕೀಯದ ಪುನರ್ಜನ್ಮ ನೀಡಿದ ಕ್ಷೇತ್ರ. ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಚಾಮುಂಡೇಶ್ವರಿ ಕ್ಷೇತ್ರ ಮೊದಲಿನಂತೆ ಸಿದ್ದರಾಮಯ್ಯ ಪಾಲಿಗೆ ಸಾಲೀಸಾಗಿ ಇಲ್ಲ. ಇದು ಅವರಿಗೂ ಕೂಡ ಗೊತ್ತಿದೆ. ಸಿಎಂ ಆಗಿ ಕ್ಷೇತ್ರಕ್ಕೆ ಮಾಡಿದ ಕೆಲಸ, ಇಲ್ಲೇ ಚುನಾವಣೆ ರಾಜಕೀಯ ಶುರುವಾಗಿದ್ದು, ಇಲ್ಲೇ ಗೆಲುವಿನೊಂದಿಗೆ ಚುನಾವಣಾ ರಾಜಕೀಯ ಮುಗಿಸೋದು ನನ್ನ ಆಸೆ ಅನ್ನೋ ಸೆಂಟಿಮೆಂಟ್ ಮಾತು ವರ್ಕ್ ಆಗುತ್ತೆ ಅನ್ನೋದು ಸಿಎಂ ನಂಬಿಕೆ.

ಇನ್ನು ಜಿ.ಟಿ.ದೇವೇಗೌಡ ಕೂಡ, ನಾನು ಕ್ಷೇತ್ರದ ಅಭಿವೃದ್ಧಿ ಮಾಡಿದ್ದೇನೆ. ಒಕ್ಕಲಿಗರು, ನಾಯಕರು, ಲಿಂಗಾಯತರ ಬೆಂಬಲ ಸಿಗುತ್ತೆ. ಅಲ್ಲದೆ, ಕಾಂಗ್ರೆಸ್ ಒಳಗಿನ ಸಿದ್ದರಾಮಯ್ಯ ವಿರೋಧಿ ಅಲೆಯ ಲಾಭ ಕೂಡ ಆಗುತ್ತೆ. ಸಿದ್ದರಾಮಯ್ಯ ಸೋಲಲೇ ಬೇಕು ಅಂತಾ ಕಮಲ ಪಾಳಯದ ಬೆಂಬಲವೂ ಸಿಗುತ್ತೆ. ಇದರಿಂದ ನನ್ನ ಗೆಲವು ಇನ್ನೂ ಸುಲಭ ಅನ್ನೋ ವಿಶ್ವಾಸದಲ್ಲಿದ್ದಾರೆ. ಯಾರ ವಿಶ್ವಾಸ, ಲೆಕ್ಕಾಚಾರ ಏನೇ ಆಗಿರಲಿ. 2018 ಚುನಾವಣೆಯ ಸ್ಟಾರ್ ಕ್ಷೇತ್ರಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರ ಮೊದಲನೆಯದಂತೂ ಆಗುತ್ತದೆ ಎನ್ನುವುದು ಸುಳ್ಳಲ್ಲ.

TAGGED:chamundeshwari constituencycongreselections 2018GT Devegowdajdssiddaramaiahಕಾಂಗ್ರೆಸ್ಚಾಮುಂಡೇಶ್ವರಿಚುನಾವಣೆಜಿ.ಟಿ.ದೇವೇಗೌಡಜೆಡಿಎಸ್ಬಿಜೆಪಿಮೈಸೂರುವರುಣಾ
Share This Article
Facebook Whatsapp Whatsapp Telegram

Cinema news

Toxic
ಕೊನೇ ಕ್ಷಣದಲ್ಲಿ ಫ್ಯಾನ್ಸ್‌ಗೆ ಶಾಕ್ ಕೊಟ್ಟ ಯಶ್ – ಮಾ.19ಕ್ಕೆ ರಿಲೀಸ್‌ ಆಗಲ್ಲ ʻಟಾಕ್ಸಿಕ್ʼ – ಮತ್ಯಾವಾಗ?
Bollywood Cinema Latest Main Post Sandalwood
mandana Karimi
ಇಲ್ಲಿನ ಜನ ನನ್ನನ್ನ ತುಚ್ಛವಾಗಿ ನಿಂದಿಸಿದ್ದಾರೆ, ಆಡಳಿತ ಬದಲಾದ ಬಳಿಕ ಇರಾನ್‌ಗೆ ತೆರಳುತ್ತೇನೆ – ನಟಿ ಮಂದನಾ ಕರಿಮಿ
Bollywood Cinema Latest National Top Stories
samhita vinya
ಲಕ್ಕಿ ಹೀರೋಯಿನ್ ಸಂಹಿತಾ ವಿನ್ಯಾ ಮಿಂಚಿಂಗು
Cinema Latest Sandalwood Top Stories
Rakshita Prem and saptami gowda
ಪಾಪರಾಜಿಗಳ ವಿರುದ್ಧ ಸಿಡಿದೆದ್ದ ಚಂದನವನದ ತಾರೆಯರು
Cinema Latest Sandalwood Top Stories

You Might Also Like

5 thousand people participated Hindu Virata procession in Bagalkote
Bagalkot

ಬಾಗಲಕೋಟೆಯಲ್ಲಿ ವಿರಾಟ್‌ ಹಿಂದೂ ಶೋಭಾಯಾತ್ರೆ – 5 ಸಾವಿರ ಮಂದಿ ಭಾಗಿ

Public TV
By Public TV
5 minutes ago
homestay gokarna
Latest

ವಿದೇಶಿ‌ ಟೂರಿಸ್ಟ್ ಮಾಹಿತಿ ನೀಡದ ಹೋಂ ಸ್ಟೇ; FIR ದಾಖಲಿಸಿದ ಪೋಲಿಸರು

Public TV
By Public TV
37 minutes ago
teacher dies of heart attack in classroom in hassan
Districts

ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ – ವಿದ್ಯಾರ್ಥಿಗಳ ಎದುರೇ ದುರ್ಮರಣ

Public TV
By Public TV
49 minutes ago
Aga Syed Ruhullah Mehdi Kashmir MP
Latest

ಖಮೇನಿ ಹತ್ಯೆ ಪ್ರತಿಭಟನೆಗಳ ಬಗ್ಗೆ ಪೋಸ್ಟ್‌ – ಕಾಶ್ಮೀರ ಸಂಸದರ ವಿರುದ್ಧ ಎಫ್‌ಐಆರ್‌

Public TV
By Public TV
1 hour ago
IRGC
Latest

ಕತಾರ್‌ನಲ್ಲಿ 10 ಶಂಕಿತ ಐಆರ್‌ಜಿಸಿ ಗೂಢಚಾರರ ಬಂಧನ

Public TV
By Public TV
1 hour ago
Chandan Kumar Shootout at Canada Accused
Bengaluru City

ಕೆನಡಾದಲ್ಲಿ ಕನ್ನಡಿಗನ ಗುಂಡಿಟ್ಟು ಹತ್ಯೆ ಪ್ರಕರಣ – ಆರೋಪಿ ಭಾವಚಿತ್ರ ಬಿಡುಗಡೆ ಮಾಡಿದ ಟೊರಂಟೊ ಪೊಲೀಸರು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?