ಚಾಮರಾಜನಗರ: ಯಾವನ್ ರೀ ಅವನು ಪ್ರತಾಪ್ ಸಿಂಹ ಇಲ್ಲಿ ಯಾಕೆ ಬಂದು ಪ್ರಚಾರ ಮಾಡುತ್ತಿದ್ದಾರೆ. ಇದು ಚಾಮರಾಜನಗರ ಲೋಕಸಭಾ ಕ್ಷೇತ್ರ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹ (Pratap Simha) ಪ್ರತಿನಿಧಿಸುವ ಕ್ಷೇತ್ರ ವ್ಯಾಪ್ತಿಯಲ್ಲಿ ಅವರಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ ಇಲ್ಲಿಗೆ ಬಂದು ಓಡಾಡುತ್ತಿದ್ದಾನೆ. ನನಗ್ಯಾಕೆ ಸೋಲಿನ ಭಯ. ಒಳ ಒಪ್ಪಂದ ಮಾಡಿಕೊಂಡವರು ಬಿಜೆಪಿ (BJP), ಜೆಡಿಎಸ್ನವರು (JDS). ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರ ಕ್ಷೇತ್ರ ನೋಡಿಕೊಳ್ಳಿ. ನಾವು ಯಾರೊಂದಿಗೂ ಮೈತ್ರಿ ಮಾಡಿಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ವರುಣಾ ಕ್ಷೇತ್ರ ಮತದಾರರು ಹಿಂದೆಂದಿಗಿಂತಲೂ ಹೆಚ್ಚಿನ ಪ್ರೀತಿ ವಿಶ್ವಾಸ ತೋರಿಸುತ್ತಿದ್ದಾರೆ. ಆ ಕಾರಣ ಚುನಾವಣೆಯಲ್ಲಿ ಅಂತಹ ವ್ಯತ್ಯಾಸ ಕಾಣಿಸುತ್ತಿಲ್ಲ. 1978ರಿಂದಲೂ ನಾನು ವರುಣಾ ಹೋಬಳಿ ಪ್ರತಿನಿಧಿಸುತ್ತಿದ್ದೇನೆ. ಇಲ್ಲಿನ ಜನ ನನ್ನ ಮೇಲೆ ಪ್ರೀತಿ ಇರಿಸಿಕೊಂಡಿದ್ದಾರೆ ಎಂದರು. ಇದನ್ನೂ ಓದಿ: ಭಯ, ಆ ಭಯ ಇರಬೇಕು ಸಿದ್ದರಾಮಯ್ಯನವರೇ: ಪ್ರತಾಪ್ ಸಿಂಹ
ಬಿ.ಎಲ್. ಸಂತೋಷ್ಗೂ, ವರುಣಾಕ್ಕೂ ಏನು ಸಂಬಂಧ? ಅವರೇನು ಇಲ್ಲಿ ಶಾಸಕರಾಗಿದ್ರಾ? ಯಾವ ತಂತ್ರ ಕುತಂತ್ರನೂ ಕೆಲಸ ಮಾಡಲ್ಲ. ಜನ ನನ್ನ ಮೇಲೆ ವಿಶ್ವಾಸ ಇಟ್ಟಿದ್ದಾರೆ ನಾನು ಗೆದ್ದೇ ಗೆಲ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಳೇ ಮೈಸೂರು ಮೇಲೆ ಕಣ್ಣು – ಏ.30ಕ್ಕೆ ಕುಮಾರಸ್ವಾಮಿ ಅಡ್ಡದಲ್ಲಿ ಮೋದಿ ಸಮಾವೇಶ