Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸದನದಲ್ಲಿ `ಒಂದು ಮೊಟ್ಟೆಯ ಕಥೆ’; ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸದನದಲ್ಲಿ `ಒಂದು ಮೊಟ್ಟೆಯ ಕಥೆ’; ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

Bengaluru City

ಸದನದಲ್ಲಿ `ಒಂದು ಮೊಟ್ಟೆಯ ಕಥೆ’; ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

Public TV
Last updated: July 19, 2024 1:14 pm
Public TV
Share
2 Min Read
Lakshmi Hebbalkar
SHARE

ಬೆಂಗಳೂರು: ನೀವೆಲ್ಲಾ ಮೊಟ್ಟೆ ತಿನ್ನುತ್ತೀರಿ, ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿದರು.

ಪ್ರಶ್ನೋತ್ತರ ಕಲಾಪದ ವೇಳೆ ಅಂಗನವಾಡಿ (Anganavadi Centers) ಮಕ್ಕಳಿಗೆ ಗುಣಮಟ್ಟದ ಮೊಟ್ಟೆ ಪೂರೈಕೆ ಮಾಡಬೇಕೆನ್ನುವ ವಿಚಾರ ಚರ್ಚೆ ನಡೆಯುತ್ತಿದ್ದ ವೇಳೆ ಹಾಸ್ಯ ಪ್ರಸಂಗವೊಂದು ನಡೆಯಿತು. ಇದನ್ನೂ ಓದಿ: ಸಾರ್ವಜನಿಕ ಜೀವನದಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಇಲ್ಲ ಅನ್ನೋ ಸಿದ್ದರಾಮಯ್ಯ ಮಾತನ್ನ ಯಾರೂ ನಂಬಲ್ಲ: ಸಿ.ಟಿ ರವಿ

ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ (Hemalatha Nayak), ಅಂಗನವಾಡಿಗಳಲ್ಲಿ ಆಹಾರ ಸರಿಯಿಲ್ಲ. ಕೆಟ್ಟಿರುವ ಮೊಟ್ಟೆಗಳನ್ನ ಕೊಡ್ತಿದ್ದಾರೆ. ಹಾಲು ಸರಿಯಾಗಿಲ್ಲ. ಬಾಳೆಹಣ್ಣು ಇಲ್ಲ, ಶೇಂಗಾ ಕಡಲೆ ಕೊಡ್ತಿಲ್ಲ. ಹುಳು ಬಿದ್ದ ಆಹಾರ ನೀಡ್ತಿದ್ದಾರೆ. ಆಹಾರ ಕಳೆಪಯಾಗಿದೆ, ಇದಕ್ಕೆ ಸರ್ಕಾರ ಏನು ಕ್ರಮ ಕೈಗೊಂಡಿದೆ? ಅಂತ ಪ್ರಶ್ನಿಸಿದರು. ಈ ವೇಳೆ ಅಂಗನವಾಡಿಗಳಲ್ಲಿ ತಯಾರು ಮಾಡುವ ಆಹಾರ ಪದಾರ್ಥಗಳ ಪೊಟ್ಟಣ ತೋರಿಸಲು ಮುಂದಾದರು. ಕೊನೆಗೆ ಸದನದಲ್ಲಿ ಇದೆಲ್ಲವನ್ನು ತರುವಂತಿಲ್ಲ ಅಂತ ಸಭಾಪತಿಗಳು ಸೂಚಿಸಿದರು.

ಹೇಮಲತಾ ನಾಯಕ್ ಪ್ರಶ್ನೆಗೆ ಉತ್ತರಿಸಲು ಮುಂದಾದ ಲಕ್ಷ್ಮಿ ಹೆಬ್ಬಾಳ್ಕರ್, ನೀವೆಲ್ಲಾ ಮೊಟ್ಟೆ ತಿನ್ನುತ್ತೀರಿ, ನಾನಂತೂ ತಿನ್ನಲ್ಲ. ಮೊಟ್ಟೆ ಮುಟ್ಟೋದು ಇಲ್ಲ ಎಂದು ಹೇಳಿದರು. ಇದಕ್ಕೆ ಕಾಲೆಳೆದ ಸಭಾಪತಿಗಳು `ಒಮ್ಮೆ ತಿಂದು ನೋಡ್ರಿ, ಟೇಸ್ಟ್ ಗೊತ್ತಾಗುತ್ತೆ’ ಅಂತ ಹಾಸ್ಯ ಚಟಾಕಿ ಹಾರಿಸಿದರು. ಕೆಲ ಕ್ಷಣ ಪರಿಷತ್ ಸದಸ್ಯರು ನಗೆಗಡಲಲ್ಲಿ ತೇಲಿದರು. ಇದನ್ನೂ ಓದಿ: ಹಾವೇರಿಯಲ್ಲಿ ನಿರಂತರ ಮಳೆ – ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವು, 3 ಮಂದಿ ಗಂಭೀರ

ಬಳಿಕ ಕಳಪೆ ಆಹಾರ ಪೂರೈಕೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ನಾವು ಸ್ಥಳೀಯವಾಗಿ ಮೊಟ್ಟೆ ಖರೀದಿ ಮಾಡುತ್ತೇವೆ. ಮಾರ್ಕೆಟ್ ನಲ್ಲಿ 8 ರೂಪಾಯಿ ಇದೆ. ಸೃಷ್ಟಿ ಯೋಜನೆ ಅಡಿ ಮೊಟ್ಟೆ ಕೊಡಲಾಗ್ತಿದೆ. ಮಕ್ಕಳಿಗೆ ಪೌಷ್ಟಿಕಾಂಶ ನೀಡಲು ಮೊಟ್ಟೆ ಕೊಡ್ತಿದ್ದೇವೆ. ಕಳೆದ 8 ವರ್ಷಗಳಿಂದ ಒಂದು ಮಗುವಿಗೆ 8 ರೂಪಾಯಿ ಮಾತ್ರ ಕೇಂದ್ರ ಸರ್ಕಾರ ಕೊಡ್ತಿದೆ. ಕೇಂದ್ರ ಸರ್ಕಾರ ಬೆಲೆ ಪರಿಷ್ಕರಣೆ ಮಾಡಿಲ್ಲ. ಆದರೂ ನಾವು ಗುಣಮಟ್ಟದ ಮೊಟ್ಟೆ, ಆಹಾರ ನೀಡಲು ಕ್ರಮವಹಿಸುತ್ತಿದ್ದೇವೆ. ಎಲ್ಲಾದ್ರು ಇಂತಹ ಸಮಸ್ಯೆ ಆಗಿದ್ರೆ ಕ್ರಮ ತೆಗೆದುಕೊಳ್ತೀವಿ ಎಂದು ಉತ್ತರಿಸಿದರು. ಇದನ್ನೂ ಓದಿ: ಭವಿಷ್ಯದ ದೃಷ್ಟಿಯಿಂದ ಇಬ್ಬರೂ ಬೇರೆಯಾಗುತ್ತಿದ್ದೇವೆ: ಡಿವೋರ್ಸ್‌ ಖಚಿತಪಡಿಸಿದ ನತಾಶಾ

ಇದೇ ವೇಳೆ ಅಂಗನವಾಡಿ ಕಟ್ಟಡಗಳ ಸುರಕ್ಷತೆ ಬಗ್ಗೆಯೂ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು. ರಾಜ್ಯದಲ್ಲಿ ಒಟ್ಟು 69,919 ಅಂಗನವಾಡಿ ಕೇಂದ್ರಗಳಿವೆ. ಇದರಲ್ಲಿ 47,236 ಸ್ವಂತ ಕಟ್ಟಡದಲ್ಲಿ ಇವೆ. 12,653 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ಇವೆ. 30 ವರ್ಷ ಮೇಲ್ಪಟ್ಟ ಅಂಗನವಾಡಿ ಕಟ್ಟಡ ಮತ್ತು ದುಸ್ಥಿತಿಯಲ್ಲಿರೋ ಕಟ್ಟಡಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಂಗನವಾಡಿ ಕೇಂದ್ರಗಳ ಕಲ್ಪನೆ ಪ್ರಾರಂಭವಾಗಿ 49 ವರ್ಷ ಆಗಿದೆ. ಇಂದಿರಾಗಾಂಧಿ ಅವರು ಅಂಗನವಾಡಿ ಕೇಂದ್ರ ಪ್ರಾರಂಭ ಮಾಡಿದ್ರು. ಈವರೆಗೂ ಯಾವುದೇ ಅನಾಹುತ ಆಗಿಲ್ಲ. 30 ವರ್ಷ ಮೇಲ್ಪಟ್ಟ ಕಟ್ಟಡಗಳನ್ನೂ ನಾನು ಶೀಘ್ರವೇ ತಪಾಸಣೆ ನಡೆಸಲು ಕ್ರಮ ವಹಿಸುತ್ತೇನೆ ಎಂದು ಭರವಸೆ ನೀಡಿದರು.

TAGGED:ಅಂಗನವಾಡಿ ಕೇಂದ್ರಮೊಟ್ಟೆಲಕ್ಷ್ಮಿ ಹೆಬ್ಬಾಳ್ಕರ್ವಿಧಾನಮಂಡಲ ಅಧಿವೇಶನಹೇಮಲತಾ ನಾಯಕ್‌
Share This Article
Facebook Whatsapp Whatsapp Telegram

Cinema news

Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories

You Might Also Like

Crude Oil 2
Latest

ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್

Public TV
By Public TV
28 minutes ago
Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
2 hours ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
2 hours ago
Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
3 hours ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
3 hours ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?