Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮುಡಾ ಅಕ್ರಮ ಕೇಸ್‌: ಚರ್ಚೆಗೆ ಅವಕಾಶ ಇಲ್ಲವೆಂದು ಸ್ಪೀಕರ್ ರೂಲಿಂಗ್ – ವಿಧಾನಸಭೆಯಲ್ಲಿ ಗದ್ದಲ, ಮಾತಿನ ಚಕಮಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮುಡಾ ಅಕ್ರಮ ಕೇಸ್‌: ಚರ್ಚೆಗೆ ಅವಕಾಶ ಇಲ್ಲವೆಂದು ಸ್ಪೀಕರ್ ರೂಲಿಂಗ್ – ವಿಧಾನಸಭೆಯಲ್ಲಿ ಗದ್ದಲ, ಮಾತಿನ ಚಕಮಕಿ

Bengaluru City

ಮುಡಾ ಅಕ್ರಮ ಕೇಸ್‌: ಚರ್ಚೆಗೆ ಅವಕಾಶ ಇಲ್ಲವೆಂದು ಸ್ಪೀಕರ್ ರೂಲಿಂಗ್ – ವಿಧಾನಸಭೆಯಲ್ಲಿ ಗದ್ದಲ, ಮಾತಿನ ಚಕಮಕಿ

Public TV
Last updated: July 24, 2024 4:51 pm
Public TV
Share
3 Min Read
UT Khader
SHARE

ಬೆಂಗಳೂರು: ಮುಡಾ ಅಕ್ರಮ ಪ್ರಕರಣದ (MUDA Scam Case) ಚರ್ಚೆ ಕುರಿತು ನಿಲುವಳಿ ಮಂಡನೆ ಪ್ರಸ್ತಾಪಕ್ಕೆ ವಿಧಾನಸಭೆಯಲ್ಲಿ ಬಿಜೆಪಿ – ಜೆಡಿಎಸ್ ಸದಸ್ಯರಿಗೆ (BJP – JDS Members) ಹಿನ್ನಡೆಯಾಗಿದ್ದು, ನಿಲುವಳಿ ತಿರಸ್ಕಾರ ಮಾಡಿ ಸ್ಪೀಕರ್ ಯು.ಟಿ ಖಾದರ್ (UT Khader) ರೂಲಿಂಗ್ ನೀಡಿದ್ದಾರೆ. ಎರಡು ಪಕ್ಷಗಳ ಸದಸ್ಯರ ವಾದ – ಪ್ರತಿವಾದ ಆಲಿಸಿ ಕೊನೆಗೆ ಸರ್ಕಾರದ ಆಗ್ರಹದಂತೆ ಸ್ಪೀಕರ್ ನಿಲುವಳಿ ತಿರಸ್ಕರಿಸಿದರು.

MUDA 1

ನಿಲುವಳಿ ತಿರಸ್ಕಾರದ ಬಳಿಕ ʻಶೇಮ್ ಶೇಮ್ʼ ಎಂದು ಬಿಜೆಪಿ ಸದಸ್ಯರಿಗೆ ಕಾಂಗ್ರೆಸ್ ಶಾಸಕರು ಛೇಡಿಸಿದ್ರು. ತುರ್ತು ವಿಚಾರ ಅಲ್ಲ, ಪ್ರಕರಣದ ತನಿಖೆ ವಿಚಾರಣಾ ಆಯೋಗದಲ್ಲಿದೆ. ಹಾಗಾಗಿ ನಿಲುವಳಿ ಪ್ರಸ್ತಾಪಕ್ಕೆ ಅವಕಾಶ ಇಲ್ಲ, ನಿಯಮ 69ರ ಅಡಿ ಚರ್ಚೆಗೂ ಅವಕಾಶ ಇಲ್ಲ ಎಂದು ಸ್ಪೀಕರ್ ರೂಲಿಂಗ್ ಕೊಟ್ಟು ಕಲಾಪ ಮುಂದೂಡಿದರು. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ಗೆ ಹೋಗಿ ರಾಜ್ಯ ಸರ್ಕಾರ ಬರ ಪರಿಹಾರ ಹಣ ಪಡೆದುಕೊಂಡು ಬಂದಿದೆ – ಕೃಷ್ಣಬೈರೇಗೌಡ

MUDA

ಇದಕ್ಕೂ‌ ಮುನ್ನ ಕಲಾಪ ಆರಂಭವಾಗುತ್ತಿದಂತೆ ನಿಲುವಳಿ ಪ್ರಸ್ತಾಪಕ್ಕೆ ಬಿಜೆಪಿ ಆಗ್ರಹಿಸಿತು. ಆದರೆ ಪ್ರಶ್ನೋತ್ತರ ಕಲಾಪದ ಬಳಿಕ‌ ನಿರ್ಣಯ ತೆಗೆದುಕೊಳ್ಳುವುದಾಗಿ ಸ್ಪೀಕರ್ ಭರವಸೆ ನೀಡಿದರು. ಆಗ ಸದನದಲ್ಲಿ ವಾಕ್ಸಮರವೇ ನಡೆಯಿತು. ಮುಖ್ಯಮಂತ್ರಿಗಳೇ ಇದರಲ್ಲಿ ನೇರ ಪಾಲುದಾರರು ಇದ್ದಾರೆ, ಚರ್ಚೆ ಆಗಬೇಕು ಎಂದು ಆರ್‌‌.ಅಶೋಕ್ (R Ashoka) ಆಗ್ರಹಿಸಿದರೆ, ರಾಜ್ಯದ ಜನರೇ ನೋಡ್ತಿದ್ದಾರೆ, ಸಿಎಂ ಮೇಲೆಯೇ ಆರೋಪ ಇರೋದ್ರಿಂದ ಚರ್ಚೆಗೆ ತಗೊಳ್ಳಿ ಅಂತ ಅಶ್ವಥ್ ನಾರಾಯಣ್ ಒತ್ತಾಯಿಸಿದರು. ಆಗ ಸಚಿವ ಬೈರತಿ ಸುರೇಶ್ (Byrathi Suresh) ಆಕ್ರೋಶ ಹೊರಹಾಕಿ, ಮುಡಾದಲ್ಲಿ ನಿಮ್ಮದು ಭ್ರಷ್ಟಾಚಾರ ಇದೆ, ಚರ್ಚೆಗೆ ಕೊಡಿ‌. ನನ್ನ ಹತ್ರನೂ ದಾಖಲೆ ಇದೆ. ಇಲ್ಲಿ ಕುಳಿತಿರುವ ಮಹಾನುಭಾವರದ್ದು ಇದೆ, ಬರೀ ಒಬ್ಬರದ್ದೇ ಹೇಳೋದು ಅಲ್ಲ, ನಮಗೂ ಅವಕಾಶ ಕೊಡಿ, ನಾವು ಚರ್ಚೆ ಮಾಡ್ತೀವಿ ಎಂದು ಸುರೇಶ್ ಅಬ್ಬರಿಸಿದರು.

ಎಲ್ಲರದ್ದೂ ಬಯಲಿಗೆ ಬರಲಿ, ರಾಜ್ಯ ಲೂಟಿ ಹೊಡೆದಿರುವ ಎಲ್ಲರ ಹೆಸರು ಹೊರಗೆ ಬರಲಿ, ಕ್ಲೀನ್ ಇಂಡಿಯಾ, ಕ್ಲೀನ್ ಕರ್ನಾಟಕ, ಕ್ಲೀನ್ ಆಲ್ ಪಾರ್ಟಿ ಎಂದು ಯತ್ನಾಳ್ ಗುಡುಗಿದರೆ, ಹೊರಗೆ ಬರಬೇಕು, ಎಲ್ಲ ತೆಗೆಯಿರಿ, ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಅಂತಾರೆ, ಅದು ಹೊರಗೆ ಬರಲಿ ಎಂದು ಅಶ್ವಥ್‌ ನಾರಾಯಣ್ (Ashwath Narayan) ಆಗ್ರಹಿಸಿದರು. ಆಗ ಸದನದಲ್ಲಿ ಮಾತಿನ ಚಕಮಕಿ, ಗದ್ದಲ ಉಂಟಾಯಿತು. ಇದನ್ನೂ ಓದಿ: ಡಿಕೆಶಿ ಭಾಷಣದ ವೇಳೆ ‘ಡಿ ಬಾಸ್.. ಡಿ ಬಾಸ್’ ಘೋಷಣೆ ಕೂಗಿದ ದರ್ಶನ್ ಅಭಿಮಾನಿಗಳು

ಸರ್ಕಾರದ ಪರವಾಗಿ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಹೆಚ್‌.ಕೆ ಪಾಟೀಲ್, ಸದನದ ನಿಯಮಾನುಸಾರ ಚರ್ಚೆಗೆ ತಗೊಳ್ಳೋಕೆ ಸಾಧ್ಯವಿಲ್ಲ. ಕಾರ್ಯವಿಧಾನ, ನಡವಳಿಕೆಯಲ್ಲಿ ಅವಕಾಶ ಇಲ್ಲ. ಈಗಾಗಲೇ ನಿವೃತ್ತ ನ್ಯಾಯಾಧೀಶರಾದ P.N ದೇಸಾಯಿ ಏಕಸದಸ್ಯ ಆಯೋಗದಿಂದ ವಿಚಾರಣೆ ನಡೆಯುತ್ತಿದೆ. ಆರು ತಿಂಗಳ ಒಳಗೆ ಸರ್ಕಾರಕ್ಕೆ ವರದಿ ಒಪ್ಪಿಸುವ ನಿರೀಕ್ಷೆ ಇದೆ. 2006 ರಿಂದ 2024ರ ವರೆಗೆ ನಡೆದಿರುವ ಅಕ್ರಮದ ಬಗ್ಗೆ ತನಿಖೆ ಆಗ್ತಿದೆ. ಹೀಗಾಗಿ ನಿಯಮ 63ರ ಪ್ರಕಾರ ಇದನ್ನು ಚರ್ಚೆಗೆ ತಗೊಳ್ಳೋಕೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ತುಳುವನ್ನ 2ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಿ – ಕಾಂಗ್ರೆಸ್‌ ಶಾಸಕ ಅಶೋಕ್ ರೈ ಒತ್ತಾಯ; ತುಳುವಿನಲ್ಲೇ ಮನವಿ‌

ಇದಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ಷೇಪಿಸಿ, ನಿನ್ನೆ ಶಿವಲಿಂಗೇಗೌಡ ಜಾರಿ ನಿರ್ದೇಶನಾಲಯದ ಬಗ್ಗೆ ಸದನದಲ್ಲಿ ಚರ್ಚೆ ಮಾಡಿದ್ರಲ್ಲ ಹೇಗೆ ಅನುಮತಿ ಕೊಟ್ರಿ? ಎಂದು ಗುಡುಗಿದರು. ಸದನ ಆರಂಭವಾಗುವ ಹಿಂದಿನ ದಿನ ಸರ್ಕಾರ ‌ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಿದೆ. ಅಂದರೆ ಸದನದಲ್ಲಿ ಇದರ ಬಗ್ಗೆ ಚರ್ಚೆ ಆಗಬಾರದೆಂದು ಮೊದಲೇ ನಿರೀಕ್ಷಣಾ ಜಾಮೀನು ಪಡೆದುಕೊಂಡಿದೆ ಅಂತ ಶಾಸಕ ಸುರೇಶ್ ಕುಮಾರ್ ಆರೋಪಿಸಿದರು. ನಂತರ ಮುಖ್ಯಮಂತ್ರಿಗಳ ಮನೆಯವರಿಗೆ 14 ಫ್ಲಾಟ್‌ಗಳನ್ನು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆರೋಪಿಸಿದರು. ಇದಕ್ಕೆ ಕೈ ಸದಸ್ಯರಿಂದ ಆಕ್ಷೇಪ ವ್ಯಕ್ತವಾಯಿತು. ಒಟ್ಟಾಗಿ ನಿಂತು ಬಿಜೆಪಿ ಶಾಸಕರಿಗೆ ಕೈ ಸದಸ್ಯರು ತಿರುಗೇಟು ನೀಡಿದ್ರು. ಅಂತಿಮವಾಗಿ ಸ್ಪೀಕರ್ ಚರ್ಚೆಗೆ ಅವಕಾಶ ಕೊಡದೇ ರೂಲಿಂಗ್ ಕೊಟ್ಟು, ಸದನ ಮುಂದೂಡಿದರು.

TAGGED:karnataka assembly sessionMUDA ScammysuruR. AshokasiddaramaiahUT Khaderಆರ್. ಅಶೋಕ್‍ಇಂಡಿಮೈಸೂರು ಮುಡಾ ಹಗರಣಯು ಟಿ ಖಾದರ್ವಿಧಾನಸಭೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories
Samantha Ruth Prabhu
ಶಿವಮೊಗ್ಗ | ಹೊಸನಗರದಲ್ಲಿ ಹೋಳಿಯಾಡಿದ ಸಮಂತಾ
Cinema Latest Shivamogga South cinema Top Stories

You Might Also Like

Gujarat Girls Suicide
Crime

ದೇವಾಲಯದ ಸ್ನಾನಗೃಹದಲ್ಲಿ ಇಬ್ಬರು ಹುಡುಗಿಯರ ಮೃತದೇಹ ಪತ್ತೆ

Public TV
By Public TV
21 minutes ago
Train
Latest

ಟಿ20 ವಿಶ್ವಕಪ್‌ಗೆ ದೆಹಲಿಯಿಂದ ಅಹಮದಾಬಾದ್‌ಗೆ ವಿಶೇಷ ರೈಲು

Public TV
By Public TV
46 minutes ago
Iranian President Masoud Pezeshkian
Latest

ನೆರೆ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸುತ್ತೇನೆ: ಇರಾನ್‌ ಅಧ್ಯಕ್ಷ ಮಸೌದ್‌

Public TV
By Public TV
1 hour ago
UP DCM Keshav Prasad Maurya
Latest

ಯುಪಿ ಡಿಸಿಎಂ ಕೇಶವಪ್ರಸಾದ್ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ಸಮಸ್ಯೆ – ಲಕ್ನೋದಲ್ಲಿ ತುರ್ತು ಭೂಸ್ಪರ್ಶ

Public TV
By Public TV
1 hour ago
DK Shivakumar 11
Bengaluru City

ಸಿಎಂ ಬಜೆಟ್‌ ಮಂಡನೆ ಬೆನ್ನಲ್ಲೇ ದೆಹಲಿಗೆ ತೆರಳಲಿದ್ದಾರೆ ಡಿಕೆಶಿ

Public TV
By Public TV
1 hour ago
UPSC Exam Public Hero Sannappas son Kiran Kamate is number 1 for Karnataka
Belgaum

ಯುಪಿಎಸ್‌ಸಿ ಪರೀಕ್ಷೆ| ಪಬ್ಲಿಕ್ ಹೀರೋ ಸಣ್ಣಪ್ಪ ಪುತ್ರ ರಾಜ್ಯಕ್ಕೆ ಮೊದಲ ಸ್ಥಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?