Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಮುಡಾ ಅಕ್ರಮ ಕೇಸ್‌: ಚರ್ಚೆಗೆ ಅವಕಾಶ ಇಲ್ಲವೆಂದು ಸ್ಪೀಕರ್ ರೂಲಿಂಗ್ – ವಿಧಾನಸಭೆಯಲ್ಲಿ ಗದ್ದಲ, ಮಾತಿನ ಚಕಮಕಿ

Public TV
Last updated: July 24, 2024 4:51 pm
Public TV
Share
3 Min Read
UT Khader
SHARE

ಬೆಂಗಳೂರು: ಮುಡಾ ಅಕ್ರಮ ಪ್ರಕರಣದ (MUDA Scam Case) ಚರ್ಚೆ ಕುರಿತು ನಿಲುವಳಿ ಮಂಡನೆ ಪ್ರಸ್ತಾಪಕ್ಕೆ ವಿಧಾನಸಭೆಯಲ್ಲಿ ಬಿಜೆಪಿ – ಜೆಡಿಎಸ್ ಸದಸ್ಯರಿಗೆ (BJP – JDS Members) ಹಿನ್ನಡೆಯಾಗಿದ್ದು, ನಿಲುವಳಿ ತಿರಸ್ಕಾರ ಮಾಡಿ ಸ್ಪೀಕರ್ ಯು.ಟಿ ಖಾದರ್ (UT Khader) ರೂಲಿಂಗ್ ನೀಡಿದ್ದಾರೆ. ಎರಡು ಪಕ್ಷಗಳ ಸದಸ್ಯರ ವಾದ – ಪ್ರತಿವಾದ ಆಲಿಸಿ ಕೊನೆಗೆ ಸರ್ಕಾರದ ಆಗ್ರಹದಂತೆ ಸ್ಪೀಕರ್ ನಿಲುವಳಿ ತಿರಸ್ಕರಿಸಿದರು.

MUDA 1

ನಿಲುವಳಿ ತಿರಸ್ಕಾರದ ಬಳಿಕ ʻಶೇಮ್ ಶೇಮ್ʼ ಎಂದು ಬಿಜೆಪಿ ಸದಸ್ಯರಿಗೆ ಕಾಂಗ್ರೆಸ್ ಶಾಸಕರು ಛೇಡಿಸಿದ್ರು. ತುರ್ತು ವಿಚಾರ ಅಲ್ಲ, ಪ್ರಕರಣದ ತನಿಖೆ ವಿಚಾರಣಾ ಆಯೋಗದಲ್ಲಿದೆ. ಹಾಗಾಗಿ ನಿಲುವಳಿ ಪ್ರಸ್ತಾಪಕ್ಕೆ ಅವಕಾಶ ಇಲ್ಲ, ನಿಯಮ 69ರ ಅಡಿ ಚರ್ಚೆಗೂ ಅವಕಾಶ ಇಲ್ಲ ಎಂದು ಸ್ಪೀಕರ್ ರೂಲಿಂಗ್ ಕೊಟ್ಟು ಕಲಾಪ ಮುಂದೂಡಿದರು. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ಗೆ ಹೋಗಿ ರಾಜ್ಯ ಸರ್ಕಾರ ಬರ ಪರಿಹಾರ ಹಣ ಪಡೆದುಕೊಂಡು ಬಂದಿದೆ – ಕೃಷ್ಣಬೈರೇಗೌಡ

MUDA

ಇದಕ್ಕೂ‌ ಮುನ್ನ ಕಲಾಪ ಆರಂಭವಾಗುತ್ತಿದಂತೆ ನಿಲುವಳಿ ಪ್ರಸ್ತಾಪಕ್ಕೆ ಬಿಜೆಪಿ ಆಗ್ರಹಿಸಿತು. ಆದರೆ ಪ್ರಶ್ನೋತ್ತರ ಕಲಾಪದ ಬಳಿಕ‌ ನಿರ್ಣಯ ತೆಗೆದುಕೊಳ್ಳುವುದಾಗಿ ಸ್ಪೀಕರ್ ಭರವಸೆ ನೀಡಿದರು. ಆಗ ಸದನದಲ್ಲಿ ವಾಕ್ಸಮರವೇ ನಡೆಯಿತು. ಮುಖ್ಯಮಂತ್ರಿಗಳೇ ಇದರಲ್ಲಿ ನೇರ ಪಾಲುದಾರರು ಇದ್ದಾರೆ, ಚರ್ಚೆ ಆಗಬೇಕು ಎಂದು ಆರ್‌‌.ಅಶೋಕ್ (R Ashoka) ಆಗ್ರಹಿಸಿದರೆ, ರಾಜ್ಯದ ಜನರೇ ನೋಡ್ತಿದ್ದಾರೆ, ಸಿಎಂ ಮೇಲೆಯೇ ಆರೋಪ ಇರೋದ್ರಿಂದ ಚರ್ಚೆಗೆ ತಗೊಳ್ಳಿ ಅಂತ ಅಶ್ವಥ್ ನಾರಾಯಣ್ ಒತ್ತಾಯಿಸಿದರು. ಆಗ ಸಚಿವ ಬೈರತಿ ಸುರೇಶ್ (Byrathi Suresh) ಆಕ್ರೋಶ ಹೊರಹಾಕಿ, ಮುಡಾದಲ್ಲಿ ನಿಮ್ಮದು ಭ್ರಷ್ಟಾಚಾರ ಇದೆ, ಚರ್ಚೆಗೆ ಕೊಡಿ‌. ನನ್ನ ಹತ್ರನೂ ದಾಖಲೆ ಇದೆ. ಇಲ್ಲಿ ಕುಳಿತಿರುವ ಮಹಾನುಭಾವರದ್ದು ಇದೆ, ಬರೀ ಒಬ್ಬರದ್ದೇ ಹೇಳೋದು ಅಲ್ಲ, ನಮಗೂ ಅವಕಾಶ ಕೊಡಿ, ನಾವು ಚರ್ಚೆ ಮಾಡ್ತೀವಿ ಎಂದು ಸುರೇಶ್ ಅಬ್ಬರಿಸಿದರು.

ಎಲ್ಲರದ್ದೂ ಬಯಲಿಗೆ ಬರಲಿ, ರಾಜ್ಯ ಲೂಟಿ ಹೊಡೆದಿರುವ ಎಲ್ಲರ ಹೆಸರು ಹೊರಗೆ ಬರಲಿ, ಕ್ಲೀನ್ ಇಂಡಿಯಾ, ಕ್ಲೀನ್ ಕರ್ನಾಟಕ, ಕ್ಲೀನ್ ಆಲ್ ಪಾರ್ಟಿ ಎಂದು ಯತ್ನಾಳ್ ಗುಡುಗಿದರೆ, ಹೊರಗೆ ಬರಬೇಕು, ಎಲ್ಲ ತೆಗೆಯಿರಿ, ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ ಅಂತಾರೆ, ಅದು ಹೊರಗೆ ಬರಲಿ ಎಂದು ಅಶ್ವಥ್‌ ನಾರಾಯಣ್ (Ashwath Narayan) ಆಗ್ರಹಿಸಿದರು. ಆಗ ಸದನದಲ್ಲಿ ಮಾತಿನ ಚಕಮಕಿ, ಗದ್ದಲ ಉಂಟಾಯಿತು. ಇದನ್ನೂ ಓದಿ: ಡಿಕೆಶಿ ಭಾಷಣದ ವೇಳೆ ‘ಡಿ ಬಾಸ್.. ಡಿ ಬಾಸ್’ ಘೋಷಣೆ ಕೂಗಿದ ದರ್ಶನ್ ಅಭಿಮಾನಿಗಳು

ಸರ್ಕಾರದ ಪರವಾಗಿ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಹೆಚ್‌.ಕೆ ಪಾಟೀಲ್, ಸದನದ ನಿಯಮಾನುಸಾರ ಚರ್ಚೆಗೆ ತಗೊಳ್ಳೋಕೆ ಸಾಧ್ಯವಿಲ್ಲ. ಕಾರ್ಯವಿಧಾನ, ನಡವಳಿಕೆಯಲ್ಲಿ ಅವಕಾಶ ಇಲ್ಲ. ಈಗಾಗಲೇ ನಿವೃತ್ತ ನ್ಯಾಯಾಧೀಶರಾದ P.N ದೇಸಾಯಿ ಏಕಸದಸ್ಯ ಆಯೋಗದಿಂದ ವಿಚಾರಣೆ ನಡೆಯುತ್ತಿದೆ. ಆರು ತಿಂಗಳ ಒಳಗೆ ಸರ್ಕಾರಕ್ಕೆ ವರದಿ ಒಪ್ಪಿಸುವ ನಿರೀಕ್ಷೆ ಇದೆ. 2006 ರಿಂದ 2024ರ ವರೆಗೆ ನಡೆದಿರುವ ಅಕ್ರಮದ ಬಗ್ಗೆ ತನಿಖೆ ಆಗ್ತಿದೆ. ಹೀಗಾಗಿ ನಿಯಮ 63ರ ಪ್ರಕಾರ ಇದನ್ನು ಚರ್ಚೆಗೆ ತಗೊಳ್ಳೋಕೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ತುಳುವನ್ನ 2ನೇ ಹೆಚ್ಚುವರಿ ಭಾಷೆಯಾಗಿ ಘೋಷಿಸಿ – ಕಾಂಗ್ರೆಸ್‌ ಶಾಸಕ ಅಶೋಕ್ ರೈ ಒತ್ತಾಯ; ತುಳುವಿನಲ್ಲೇ ಮನವಿ‌

ಇದಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ಷೇಪಿಸಿ, ನಿನ್ನೆ ಶಿವಲಿಂಗೇಗೌಡ ಜಾರಿ ನಿರ್ದೇಶನಾಲಯದ ಬಗ್ಗೆ ಸದನದಲ್ಲಿ ಚರ್ಚೆ ಮಾಡಿದ್ರಲ್ಲ ಹೇಗೆ ಅನುಮತಿ ಕೊಟ್ರಿ? ಎಂದು ಗುಡುಗಿದರು. ಸದನ ಆರಂಭವಾಗುವ ಹಿಂದಿನ ದಿನ ಸರ್ಕಾರ ‌ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಿದೆ. ಅಂದರೆ ಸದನದಲ್ಲಿ ಇದರ ಬಗ್ಗೆ ಚರ್ಚೆ ಆಗಬಾರದೆಂದು ಮೊದಲೇ ನಿರೀಕ್ಷಣಾ ಜಾಮೀನು ಪಡೆದುಕೊಂಡಿದೆ ಅಂತ ಶಾಸಕ ಸುರೇಶ್ ಕುಮಾರ್ ಆರೋಪಿಸಿದರು. ನಂತರ ಮುಖ್ಯಮಂತ್ರಿಗಳ ಮನೆಯವರಿಗೆ 14 ಫ್ಲಾಟ್‌ಗಳನ್ನು ಕೊಟ್ಟಿದ್ದಾರೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ್ ಆರೋಪಿಸಿದರು. ಇದಕ್ಕೆ ಕೈ ಸದಸ್ಯರಿಂದ ಆಕ್ಷೇಪ ವ್ಯಕ್ತವಾಯಿತು. ಒಟ್ಟಾಗಿ ನಿಂತು ಬಿಜೆಪಿ ಶಾಸಕರಿಗೆ ಕೈ ಸದಸ್ಯರು ತಿರುಗೇಟು ನೀಡಿದ್ರು. ಅಂತಿಮವಾಗಿ ಸ್ಪೀಕರ್ ಚರ್ಚೆಗೆ ಅವಕಾಶ ಕೊಡದೇ ರೂಲಿಂಗ್ ಕೊಟ್ಟು, ಸದನ ಮುಂದೂಡಿದರು.

TAGGED:karnataka assembly sessionMUDA ScammysuruR. AshokasiddaramaiahUT Khaderಆರ್. ಅಶೋಕ್‍ಇಂಡಿಮೈಸೂರು ಮುಡಾ ಹಗರಣಯು ಟಿ ಖಾದರ್ವಿಧಾನಸಭೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Ballary Suicide
Bellary

ಕೌಟುಂಬಿಕ ಕಲಹ ಶಂಕೆ – ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

Public TV
By Public TV
8 minutes ago
safari EV bus
Bengaluru City

ದೇಶದಲ್ಲೇ ಮೊದಲು – ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ ಬಸ್‌ಗೆ ಚಾಲನೆ

Public TV
By Public TV
34 minutes ago
Turkey Air Ballon
Crime

ಟರ್ಕಿಯಲ್ಲಿ 2 ಏರ್ ಬಲೂನ್ ಅವಘಡ- ಪೈಲಟ್ ಸಾವು, 31 ಪ್ರವಾಸಿಗರಿಗೆ ಗಾಯ

Public TV
By Public TV
1 hour ago
Air India Flight 3
Latest

ಜ್ವಾಲಾಮುಖಿ ಸ್ಫೋಟ – ದೆಹಲಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ವಾಪಸ್

Public TV
By Public TV
2 hours ago
Siddaramaiah 7
Bengaluru City

ಇಂಧನ ಇಲಾಖೆಯ 35 ಸಾವಿರ ಖಾಲಿ ಹುದ್ದೆ ಹಂತ ಹಂತವಾಗಿ ಭರ್ತಿ: ಸಿದ್ದರಾಮಯ್ಯ

Public TV
By Public TV
2 hours ago
ಎಐ ಚಿತ್ರ
Bengaluru City

SSLC ಫಲಿತಾಂಶ ಕಡಿಮೆ ಬಂದ್ರೆ ಶಿಕ್ಷಕರ ವಾರ್ಷಿಕ ವೇತನ ಬಡ್ತಿಗೆ ತಡೆ – ಶಾಲೆಯ ಅನುದಾನ ಬಂದ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?