Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ

Bengaluru City

ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ

Public TV
Last updated: June 21, 2023 5:04 pm
Public TV
Share
3 Min Read
ut khader 1
SHARE

ಬೆಂಗಳೂರು: 16ನೇ ವಿಧಾನಸಭೆಗೆ (Assembly) ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಜೂ.26 ರಿಂದ ಜೂ.28ರವರೆಗೆ 3 ದಿನಗಳ ಕಾಲ ನಡೆಯುವ ತರಬೇತಿ ಶಿಬಿರದಲ್ಲಿ ನೂತನ ಶಾಸಕರಿಗೆ ಆರೋಗ್ಯ ಸುಸ್ಥಿರತೆ ಮತ್ತು ಜ್ಞಾನಾಭಿವೃದ್ಧಿ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ (U.T Khader) ಅವರು ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಯುವ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಸದೀಯ ಕಲಾಪಗಳಲ್ಲಿ (Session) ಸಕ್ರಿಯವಾಗಿ ಭಾಗವಹಿಸುವ ಉದ್ದೇಶದಿಂದ ಈ ತರಬೇತಿ ಆಯೋಜಿಸಲಾಗಿದೆ. ಯುವಜನರ ಆಲೋಚನೆಗಳು, ದೂರದೃಷ್ಟಿ, ಪ್ರತಿಭೆಯನ್ನು ಬಿಂಬಿಸಲು ಪ್ರಕೃತಿಯ ಜೊತೆಗೆ ತರಬೇತಿ ಆಯೋಜಿಸಲಾಗಿದೆ. ನೆಲಮಂಗಲದ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ಈ ಶಿಬಿರ ನಡೆಯಲಿದೆ. ಈಗಾಗಲೇ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ ಶಾಸಕರಿಗೆ ಮಾಹಿತಿ ನೀಡಲಾಗಿದೆ. ಸಕ್ರಿಯವಾಗಿ ಈ ತರಬೇತಿ ಶಿಬಿರದಲ್ಲಿ ಭಾಗವಹಿಸುವ ಮೂಲಕ ಈ ತರಬೇತಿ ಶಿಬಿರವನ್ನು ಸದ್ಭಳಕೆ ಮಾಡಿಕೊಳ್ಳಬೆಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಅಕ್ರಮ ಮುಚ್ಚಲು ಕಾಂಗ್ರೆಸ್‌ನಿಂದಲೇ ಸ್ತ್ರೀ ಶಕ್ತಿ ಸಂಘಗಳ ಪ್ರತಿಭಟನೆ: ಎಚ್‌ಡಿಕೆ ಬಾಂಬ್

ಜೂ.25ರಂದು ಸಂಜೆ ಕ್ಷೇಮವನದಲ್ಲಿ ನೂತನ ಶಾಸಕರು ಆಗಮಿಸಿ ನೋಂದಣಿ ಮಾಡಿಕೊಳ್ಳಲಿದ್ದಾರೆ. ಜೂ.26ರಿಂದ ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ ಬೆಳಗ್ಗೆ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಡೆಯಲಿವೆ. ಬೆಳಗ್ಗೆ 10ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ. ಜೂ.26ರಂದು ಮಧ್ಯಾಹ್ನ 12ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ಪಾಲ್ಗೊಳ್ಳಲಿದ್ದಾರೆ. ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ನೂತನ ಶಾಸಕರ ಜೊತೆಗೆ ಸಂವಾದ ಏರ್ಪಡಿಸಲಾಗಿದೆ.

ಶಾಸಕರ ಹಕ್ಕುಗಳು ಮತ್ತು ಕರ್ತವ್ಯಗಳು, ಶಾಸನಗಳ ರಚನೆ ಮತ್ತು ಸದಸ್ಯರ ಭಾಗವಹಿಸುವಿಕೆ, ಶೂನ್ಯವೇಳೆ, ಪ್ರಶ್ನೋತ್ತರ, ಜನಮೆಚ್ಚಿಸುವ ಶಾಸಕನಾಗುವುದು ಹೇಗೆ, ವಿಧಾನಮಂಡಲದ ಸಮಿತಿಗಳು ಮತ್ತು ಸದಸ್ಯರ ಭಾಗವಹಿಸುವಿಕೆ ಕುರಿತಾಗಿ ಚರ್ಚೆ ನಡೆಯಲಿದೆ. ವಿಧಾನಮಂಡಲದ ಕಾರ್ಯ ಕಲಾಪಗಳು ಮತ್ತು ಶಾಸಕರ ಜವಾಬ್ದಾರಿಗಳ ಕುರಿತು ಹಿರಿಯ ಸದಸ್ಯರು ತರಬೇತಿ ಶಿಬಿರದಲ್ಲಿ ತಮ್ಮ ಅನುಭವಗಳನ್ನ ಹಂಚಿಕೊಳ್ಳಲಿದ್ದಾರೆ. ಒಟ್ಟಾರೆಯಾಗಿ ಗುಣಮಟ್ಟದ ಅಧಿವೇಶನ ಮತ್ತು ಸದ್ಭಳಕೆ ಕುರಿತು ಶಾಸಕರಲ್ಲಿ ಜಾಗೃತಿ ಮೂಡಿಸುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ. ದೈಹಿಕ, ಮಾನಸಿಕ ಆರೋಗ್ಯ, ಸದೃಢತೆ ಜೊತೆಗೆ ಅತ್ಯಂತ ಆತ್ಮವಿಶ್ವಾಸದಿಂದ ಸದನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಸದಸ್ಯರಿಗೆ ತರಬೇತಿ ಅಗತ್ಯ ಎಂದು ಅವರು ಹೇಳಿದ್ದಾರೆ.

ಜುಲೈ 3ರಿಂದ ಅಧಿವೇಶನ ಆರಂಭ:
16ನೇ ವಿಧಾನಸಭೆಯ 1ನೇ ಅಧಿವೇಶನದ ಮುಂದುವರಿದ ಉಪವೇಶನ ಇದೇ ಜು.3ರಿಂದ ಆರಂಭವಾಗಲಿದೆ. ಜು.14 ರವರೆಗೆ 10 ದಿನಗಳ ಕಾಲ ನಡೆಯಲಿದೆ. ಜು.3ರಂದು ಮಧ್ಯಾಹ್ನ 12ಕ್ಕೆ ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಅಧಿವೇಶನದಲ್ಲಿ ಮುಖ್ಯವಾಗಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆ ನಡೆಯಲಿದೆ. ಇದಾದ ನಂತರ ನಿರ್ಣಯ ಅಂಗೀಕಾರವಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.7ರಂದು 2023-24ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ. ಆಯವ್ಯಯದ ಮೇಲೆ ಸಾಮಾನ್ಯ ಚರ್ಚೆ ನಡೆದ ನಂತರ ಅನುದಾನದ ಬೇಡಿಕೆಗಳನ್ನು ಅಂಗೀಕರಿಸಲಾಗುತ್ತದೆ.

ಈ ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾದ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. ಒಟ್ಟು 8 ದಿನಗಳ ಕಾಲ ಪ್ರಶ್ನೋತ್ತರ ಕಲಾಪ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳು ಕಾರ್ಯಕಲಾಪಗಳನ್ನು ನಡೆಸಲಾಗುವುದು ಎಂದು ಸ್ಪೀಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿರುವುದು ಸತ್ಯ, ಈಗ ಮಾತಾಡಿದರೆ ಬೆಂಕಿ ಹಚ್ಚಿದಂತೆ: ಸಿ.ಪಿ ಯೋಗೇಶ್ವರ್

TAGGED:assemblykarnatakasessionUT Khaderಅಧಿವೇಶನಕಲಾಪಬಜೆಟ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

Shreyas Iyer
Cricket

IPL 2026 | ಜಿಟಿ ವಿರುದ್ಧ ಗೆಲುವಿನ ಬೆನ್ನಲ್ಲೇ ಶ್ರೇಯಸ್ ಅಯ್ಯರ್‌ಗೆ 12 ಲಕ್ಷ ದಂಡ

Public TV
By Public TV
2 minutes ago
Digital Census India
31 Districts

Census 2027 | ಈ ಸುದ್ದಿ ಓದಿ ಮನೆಯಲ್ಲೇ ಕುಳಿತೇ 15 ನಿಮಿಷದ ಒಳಗಡೆ ನಿಮ್ಮ ವಿವರವನ್ನು ಭರ್ತಿ ಮಾಡಿ!

Public TV
By Public TV
12 minutes ago
ABVP 1 1
Bengaluru City

ಮಹಾರಾಣಿ ವಿವಿಯಲ್ಲಿ ಭಾರೀ ಭ್ರಷ್ಟಾಚಾರ – ವಿದೇಶದಲ್ಲಿ ಪಾಠ ಮಾಡೋ ಉಪನ್ಯಾಸಕರಿಗೆ ವಿವಿಯಿಂದ ಸಂಬಳ: ಎಬಿವಿಪಿ ಆರೋಪ

Public TV
By Public TV
21 minutes ago
wild elephant attack on bike in chikkamagaluru
Chikkamagaluru

ಬೈಕ್ ಅಡ್ಡಗಟ್ಟಿ ತುಳಿದು ಹಾಕಿದ ಪುಂಡಾನೆ – ಸವಾರ ಜಸ್ಟ್ ಮಿಸ್

Public TV
By Public TV
1 hour ago
Russia Military Plane
Latest

Russian Military Plane Crash – ವಿಮಾನದಲ್ಲಿದ್ದ 29 ಪ್ರಯಾಣಿಕರು ಸಾವು, ತಾಂತ್ರಿಕ ದೋಷ ಶಂಕೆ

Public TV
By Public TV
1 hour ago
ABVP Gopi Rangaswamy
Bengaluru City

ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಜಾರಿ ಮಾಡೋ ಮೊದಲು ಸರ್ಕಾರ ತಜ್ಞರ ಸಮಿತಿ ರಚನೆ ಮಾಡಬೇಕು: ಎಬಿವಿಪಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?