Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ

Bengaluru City

ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ

Public TV
Last updated: June 21, 2023 5:04 pm
Public TV
Share
3 Min Read
ut khader 1
SHARE

ಬೆಂಗಳೂರು: 16ನೇ ವಿಧಾನಸಭೆಗೆ (Assembly) ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಜೂ.26 ರಿಂದ ಜೂ.28ರವರೆಗೆ 3 ದಿನಗಳ ಕಾಲ ನಡೆಯುವ ತರಬೇತಿ ಶಿಬಿರದಲ್ಲಿ ನೂತನ ಶಾಸಕರಿಗೆ ಆರೋಗ್ಯ ಸುಸ್ಥಿರತೆ ಮತ್ತು ಜ್ಞಾನಾಭಿವೃದ್ಧಿ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ (U.T Khader) ಅವರು ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಯುವ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಸದೀಯ ಕಲಾಪಗಳಲ್ಲಿ (Session) ಸಕ್ರಿಯವಾಗಿ ಭಾಗವಹಿಸುವ ಉದ್ದೇಶದಿಂದ ಈ ತರಬೇತಿ ಆಯೋಜಿಸಲಾಗಿದೆ. ಯುವಜನರ ಆಲೋಚನೆಗಳು, ದೂರದೃಷ್ಟಿ, ಪ್ರತಿಭೆಯನ್ನು ಬಿಂಬಿಸಲು ಪ್ರಕೃತಿಯ ಜೊತೆಗೆ ತರಬೇತಿ ಆಯೋಜಿಸಲಾಗಿದೆ. ನೆಲಮಂಗಲದ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ಈ ಶಿಬಿರ ನಡೆಯಲಿದೆ. ಈಗಾಗಲೇ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ ಶಾಸಕರಿಗೆ ಮಾಹಿತಿ ನೀಡಲಾಗಿದೆ. ಸಕ್ರಿಯವಾಗಿ ಈ ತರಬೇತಿ ಶಿಬಿರದಲ್ಲಿ ಭಾಗವಹಿಸುವ ಮೂಲಕ ಈ ತರಬೇತಿ ಶಿಬಿರವನ್ನು ಸದ್ಭಳಕೆ ಮಾಡಿಕೊಳ್ಳಬೆಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಅಕ್ರಮ ಮುಚ್ಚಲು ಕಾಂಗ್ರೆಸ್‌ನಿಂದಲೇ ಸ್ತ್ರೀ ಶಕ್ತಿ ಸಂಘಗಳ ಪ್ರತಿಭಟನೆ: ಎಚ್‌ಡಿಕೆ ಬಾಂಬ್

ಜೂ.25ರಂದು ಸಂಜೆ ಕ್ಷೇಮವನದಲ್ಲಿ ನೂತನ ಶಾಸಕರು ಆಗಮಿಸಿ ನೋಂದಣಿ ಮಾಡಿಕೊಳ್ಳಲಿದ್ದಾರೆ. ಜೂ.26ರಿಂದ ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ ಬೆಳಗ್ಗೆ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಡೆಯಲಿವೆ. ಬೆಳಗ್ಗೆ 10ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ. ಜೂ.26ರಂದು ಮಧ್ಯಾಹ್ನ 12ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ಪಾಲ್ಗೊಳ್ಳಲಿದ್ದಾರೆ. ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ನೂತನ ಶಾಸಕರ ಜೊತೆಗೆ ಸಂವಾದ ಏರ್ಪಡಿಸಲಾಗಿದೆ.

ಶಾಸಕರ ಹಕ್ಕುಗಳು ಮತ್ತು ಕರ್ತವ್ಯಗಳು, ಶಾಸನಗಳ ರಚನೆ ಮತ್ತು ಸದಸ್ಯರ ಭಾಗವಹಿಸುವಿಕೆ, ಶೂನ್ಯವೇಳೆ, ಪ್ರಶ್ನೋತ್ತರ, ಜನಮೆಚ್ಚಿಸುವ ಶಾಸಕನಾಗುವುದು ಹೇಗೆ, ವಿಧಾನಮಂಡಲದ ಸಮಿತಿಗಳು ಮತ್ತು ಸದಸ್ಯರ ಭಾಗವಹಿಸುವಿಕೆ ಕುರಿತಾಗಿ ಚರ್ಚೆ ನಡೆಯಲಿದೆ. ವಿಧಾನಮಂಡಲದ ಕಾರ್ಯ ಕಲಾಪಗಳು ಮತ್ತು ಶಾಸಕರ ಜವಾಬ್ದಾರಿಗಳ ಕುರಿತು ಹಿರಿಯ ಸದಸ್ಯರು ತರಬೇತಿ ಶಿಬಿರದಲ್ಲಿ ತಮ್ಮ ಅನುಭವಗಳನ್ನ ಹಂಚಿಕೊಳ್ಳಲಿದ್ದಾರೆ. ಒಟ್ಟಾರೆಯಾಗಿ ಗುಣಮಟ್ಟದ ಅಧಿವೇಶನ ಮತ್ತು ಸದ್ಭಳಕೆ ಕುರಿತು ಶಾಸಕರಲ್ಲಿ ಜಾಗೃತಿ ಮೂಡಿಸುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ. ದೈಹಿಕ, ಮಾನಸಿಕ ಆರೋಗ್ಯ, ಸದೃಢತೆ ಜೊತೆಗೆ ಅತ್ಯಂತ ಆತ್ಮವಿಶ್ವಾಸದಿಂದ ಸದನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಸದಸ್ಯರಿಗೆ ತರಬೇತಿ ಅಗತ್ಯ ಎಂದು ಅವರು ಹೇಳಿದ್ದಾರೆ.

ಜುಲೈ 3ರಿಂದ ಅಧಿವೇಶನ ಆರಂಭ:
16ನೇ ವಿಧಾನಸಭೆಯ 1ನೇ ಅಧಿವೇಶನದ ಮುಂದುವರಿದ ಉಪವೇಶನ ಇದೇ ಜು.3ರಿಂದ ಆರಂಭವಾಗಲಿದೆ. ಜು.14 ರವರೆಗೆ 10 ದಿನಗಳ ಕಾಲ ನಡೆಯಲಿದೆ. ಜು.3ರಂದು ಮಧ್ಯಾಹ್ನ 12ಕ್ಕೆ ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಅಧಿವೇಶನದಲ್ಲಿ ಮುಖ್ಯವಾಗಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆ ನಡೆಯಲಿದೆ. ಇದಾದ ನಂತರ ನಿರ್ಣಯ ಅಂಗೀಕಾರವಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.7ರಂದು 2023-24ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ. ಆಯವ್ಯಯದ ಮೇಲೆ ಸಾಮಾನ್ಯ ಚರ್ಚೆ ನಡೆದ ನಂತರ ಅನುದಾನದ ಬೇಡಿಕೆಗಳನ್ನು ಅಂಗೀಕರಿಸಲಾಗುತ್ತದೆ.

ಈ ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾದ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. ಒಟ್ಟು 8 ದಿನಗಳ ಕಾಲ ಪ್ರಶ್ನೋತ್ತರ ಕಲಾಪ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳು ಕಾರ್ಯಕಲಾಪಗಳನ್ನು ನಡೆಸಲಾಗುವುದು ಎಂದು ಸ್ಪೀಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿರುವುದು ಸತ್ಯ, ಈಗ ಮಾತಾಡಿದರೆ ಬೆಂಕಿ ಹಚ್ಚಿದಂತೆ: ಸಿ.ಪಿ ಯೋಗೇಶ್ವರ್

TAGGED:assemblykarnatakasessionUT Khaderಅಧಿವೇಶನಕಲಾಪಬಜೆಟ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

subbareddy 1
Bengaluru City

ಬಾಗೇಪಲ್ಲಿ `ಕೈ’ ಶಾಸಕ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ 

Public TV
By Public TV
42 seconds ago
vinay kulkarni
Court

ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ – ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

Public TV
By Public TV
11 minutes ago
PM Modi Arvind Bellad
Bengaluru City

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ – ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ್‌

Public TV
By Public TV
20 minutes ago
Hatti Gold Mine 2
Districts

ಹಟ್ಟಿ ಚಿನ್ನದ ಗಣಿ ಮುಖ್ಯ ದ್ವಾರದ ಬಳಿ 15ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆ!

Public TV
By Public TV
37 minutes ago
ಸಾಂರ್ದಭಿಕ ಚಿತ್ರ
Bengaluru City

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ – ಅಕ್ರಮ ತಡೆಗೆ ಪರೀಕ್ಷಾ ಬೋರ್ಡ್ ಹದ್ದಿನ ಕಣ್ಣು

Public TV
By Public TV
45 minutes ago
Arvind Kejriwal Manish Sisodia
Latest

ಮದ್ಯನೀತಿ ಹಗರಣ ಕೇಸ್‌ನಲ್ಲಿ ಕೇಜ್ರಿವಾಲ್‌, ಸಿಸೋಡಿಯಾ ಕಳಂಕ ಮುಕ್ತ – ಕಣ್ಣೀರಿಟ್ಟ ಮಾಜಿ ಸಿಎಂ

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?