Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ ಜನತೆಗೆ ಸಾಲು ಸಾಲು ರಜೆಯ ಭಾಗ್ಯವನ್ನು ಕೊಟ್ಟ ವಾಟಾಳ್ ನಾಗರಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದ ಜನತೆಗೆ ಸಾಲು ಸಾಲು ರಜೆಯ ಭಾಗ್ಯವನ್ನು ಕೊಟ್ಟ ವಾಟಾಳ್ ನಾಗರಾಜ್

Bengaluru City

ರಾಜ್ಯದ ಜನತೆಗೆ ಸಾಲು ಸಾಲು ರಜೆಯ ಭಾಗ್ಯವನ್ನು ಕೊಟ್ಟ ವಾಟಾಳ್ ನಾಗರಾಜ್

Public TV
Last updated: January 11, 2018 7:34 pm
Public TV
Share
3 Min Read
Karnataka Bandh vatal nagaraj
SHARE

ಬೆಂಗಳೂರು: ಅನ್ನ ಭಾಗ್ಯ, ಕ್ಷೀರ ಭಾಗ್ಯ, ಶಾದಿ ಭಾಗ್ಯ ಇನ್ನಿತರ ಭಾಗ್ಯಗಳನ್ನು ನೀವು ಕೇಳಿರಬಹುದು. ಆದರೆ ಈಗ ವಾಟಾಳ್ ನಾಗರಾಜ್ ಅವರು ರಾಜ್ಯದ ಜನತೆಗೆ ರಜೆಯ ಭಾಗ್ಯವನ್ನು ಕೊಟ್ಟಿದ್ದಾರೆ. ಮಹದಾಯಿ ವಿವಾದ ಬಗೆಹರಿಸುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಜನವರಿ 27 ರಂದು ಕರೆ ನೀಡಿದ್ದ ಬಂದ್ ದಿನಾಂಕ ದಿಢೀರ್ ಬದಲಾಗಿದ್ದು ಜನವರಿ 25 ರಂದು ನಡೆಸಲು ಮುಂದಾಗಿವೆ.

ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಾಟಾಳ್ ನಾಗರಾಜ್ ಪ್ರಧಾನಿ ಮೋದಿ ಅವರು ಜನವರಿ 28 ರಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಹದಾಯಿ ವಿಚಾರದಲ್ಲಿ ಅವರ ಮೌನವನ್ನು ಖಂಡಿಸಿ ಮತ್ತಿ ಶೀಘ್ರ ವಿವಾದ ಇತ್ಯರ್ಥಕ್ಕಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಮೋದಿ ಭೇಟಿಯ ಮುನ್ನ ದಿನವಾದ ಜ.27 ರಂದು ಬಂದ್ ನಡೆಸುತ್ತಿರುವುದಾಗಿ ಹೇಳಿದ್ದರು.  ಇದನ್ನೂ ಓದಿ: ಮಹದಾಯಿ ನದಿ ನೀರಿಗೆ ಗೋವಾ ಕ್ಯಾತೆ ಯಾಕೆ? ಆರಂಭದಿಂದ ಇಲ್ಲಿಯವರೆಗೆ ಏನಾಗಿದೆ? ಇಲ್ಲಿದೆ ಪೂರ್ಣ ಮಾಹಿತಿ

VATAL NAGARAJ

ಈ ಸುದ್ದಿಗೋಷ್ಠಿ ನಡೆದು ಒಂದು ದಿನ ಕಳೆಯುವಷ್ಟರಲ್ಲಿ ಗುರುವಾರ ಸಂಜೆ ದಿಢೀರ್ ಸುದ್ದಿಗೋಷ್ಠಿ ನಡೆಸಿದ ವಾಟಾಳ್ ನಾಗರಾಜ್ ಸಾಲು ಸಾಲು ರಜೆಯ ಹಿನ್ನಲೆಯಲ್ಲಿ ಬಂದ್ ದಿನಾಂಕವನ್ನು ಬದಲಾವಣೆ ಮಾಡಿದ್ದು, ಇದೇ 25 ರಂದು ಕರೆ ನೀಡಿರುವುದಾಗಿ ತಿಳಿಸಿದ್ದಾರೆ.

ಸಾಲು ಸಾಲು ರಜೆಗಳು: ಜನವರಿ 26 ಶುಕ್ರವಾರ ಗಣರಾಜ್ಯೋತ್ಸವ, 27 ನಾಲ್ಕನೇಯ ಶನಿವಾರ ಆಗಿರುವ ಕಾರಣ ಬ್ಯಾಂಕ್ ಗಳಿಗೆ ರಜೆ ಇರುತ್ತದೆ. ಶನಿವಾರ ಖಾಸಗಿ ಕಂಪೆನಿಗಳಿಗೂ ರಜೆ ಇರುತ್ತದೆ. ಇನ್ನು ಭಾನುವಾರ ಹೇಗೂ ವಾರದ ರಜೆ. ಈ ಮಧ್ಯೆ ಈಗ 25ಕ್ಕೆ ಕರ್ನಾಟಕ ಬಂದ್ ನಡೆಸಲು ತೀರ್ಮಾನಿಸಲಾಗಿದೆ. ಗುರುವಾರ ನಡೆಯಲಿರುವ ಬಂದ್ ಬೆಂಬಲ ನೀಡದ ಜನರಿಗೆ ಒಟ್ಟಿನಲ್ಲಿ ದೀರ್ಘ ರಜೆ ಸಿಗಲಿದೆ. ಹೀಗಾಗಿ ಜನವರಿ 25ರಂದು ನಡೆಯುವ ಬಂದ್ ಗೆ ಜನ ಹೇಗೆ ಬೆಂಬಲ ನೀಡುತ್ತಾರೆ ಎನ್ನುವ ಪ್ರಶ್ನೆ ಈಗ ಎದ್ದಿದೆ. ಇದನ್ನೂ ಓದಿ: ಕರ್ನಾಟಕದ ಜನರೇ ಮತ್ತೊಂದು ಬಂದ್‍ಗೆ ರೆಡಿಯಾಗಿ

ಗೋವಾ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ ವಾಟಾಳ್ ನಾಗರಾಜ್, ಪರಿಕ್ಕರ್ ಒಬ್ಬ ನಾಲಾಯಕ್. ಅವರು ಗ್ರಾಮ ಪಂಚಾಯತ್ ಸದಸ್ಯರಾಗಲು ಆರ್ಹರಲ್ಲ. ಅವರೊಬ್ಬ ಬೇಜವಾಬ್ದಾರಿ ಮುಖ್ಯಮಂತ್ರಿಯಾಗಿದ್ದು, ಮಹದಾಯಿ ವಿಚಾರದಲ್ಲಿ ಕರ್ನಾಟಕದ ಮುಖ್ಯಮಂತ್ರಿಗೆ ಪತ್ರ ಬರೆಯಬೇಕಿತ್ತು. ಗೋವಾ ಸಿಎಂ ಯಡಿಯೂರಪ್ಪಗೆ ಪತ್ರ ಬರೆದದ್ದು ತಪ್ಪು. ಗೋವಾ ಸಿಎಂ ಯಾವ ಆಧಾರದದಲ್ಲಿ ಪತ್ರ ಬರೆದಿದ್ದಾರೆ ಎನ್ನುವುದಕ್ಕೆ ಸ್ಪಷ್ಟನೆ ನೀಡಲಿ ಎಂದು ಆಗ್ರಹಿಸಿದರು.

MNG MODI 3

ಈ ವೇಳೆ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದ್ ಅವರು, ಕರ್ನಾಟಕ ಬಂದ್ ಗೆ ಚಿತ್ರರಂಗ ಕೂಡ ಸಂಪೂರ್ಣ ಬೆಂಬಲ ನೀಡಲಿದೆ. ಅಂದು ಯಾವುದೇ ಚಿತ್ರ ಪ್ರದರ್ಶನ ಹಾಗೂ ಚಿತ್ರೀಕರಣ ಸೇರಿದಂತೆ ಚಿತ್ರರಂಗದ ಎಲ್ಲಾ ಚಟುವಟಿಕೆಗಳು ಇರುವುದಿಲ್ಲ. ಪ್ರಧಾನಿ ಮೋದಿ ಕರ್ನಾಟಕದ ಕುಡಿಯೋ ನೀರಿನ ಬಗ್ಗೆ ಮೌನವಾಗಿದ್ದಾರೆ. ಕರ್ನಾಟಕದ ಜನರು ಮೋದಿಯವರ ಗುಲಾಮರಲ್ಲ. ಮಹದಾಯಿ ಯೋಜನೆಯನ್ನು ಮೋದಿಯವರು ಕಡೆಗಣಿಸಿದ್ದಾರೆ. ಹೀಗಾಗಿ ಮೋದಿ ರಾಜ್ಯಕ್ಕೆ ಬರುವ ದಿನ ವಿರುದ್ಧ ಕಪ್ಪು ಬಾವುಟ ಪ್ರದರ್ಶನ ಮಾಡಿ ತೀವ್ರ ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಜನವರಿ 31ರ ಒಳಗಡೆ ಮಹದಾಯಿ ವಿವಾದ ಇತ್ಯರ್ಥಗೊಳಿಸಿ: ರಾಜಕೀಯ ಪಕ್ಷಗಳಿಗೆ ಡೆಡ್‍ಲೈನ್

ಬಿಜೆಪಿಯ 75 ದಿನಗಳ ನವ ಕರ್ನಾಟಕ ಪರಿವರ್ತನಾ ಯಾತ್ರೆಗೆ ರಾಷ್ಟ್ರಿಯ ಅಧ್ಯಕ್ಷ ಅಮಿತ್ ಶಾ ನವೆಂಬರ್ 2ರಂದು ಬೆಂಗಳೂರಿನ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮೈದಾನದಲ್ಲಿ ಚಾಲನೆ ನೀಡಿದ್ದರು. ಯಾತ್ರೆಯ ಸಮಾರೋಪ ಸಮಾರಂಭ ಜನವರಿ 28ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಇದನ್ನೂ ಓದಿ:  ಮಹದಾಯಿ ನದಿ ಮೇಲೆ 3 ರಾಜ್ಯದ ಹಕ್ಕಿದೆ, ಬೇರೆ ನದಿಪಾತ್ರಕ್ಕೆ ನೀರು ಹರಿಸಲು ಸಾಧ್ಯವಿಲ್ಲ: ಮನೋಹರ್ ಪರಿಕ್ಕರ್

Mahadayi River 5

Mahadayi River 1

Mahadayi River 4

Mahadayi River 3

Mahadayi protest 2

Mahadayi protest 1

BJP Mahadayi 3

BJP Mahadayi 2

BJP Mahadayi 4

MAHADAYI 1

mahadayi 1

Mahadayi Protest 8 
TAGGED:bengaluruKannada Associationskarnataka bandhMahadaiPublic TVಕನ್ನಡ ಸಂಘಟನೆಗಳುಕರ್ನಾಟಕ ಬಂದ್ಪಬ್ಲಿಕ್ ಟಿವಿಬೆಂಗಳೂರುಮಹದಾಯಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
30 minutes ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
34 minutes ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
60 minutes ago
Vinay Kulkarni 2
Bengaluru City

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಶಾಸಕ ಸ್ಥಾನ ರದ್ದು

Public TV
By Public TV
2 hours ago
Raichur 1
Districts

ರಾಯಚೂರಿನಲ್ಲಿ ಬಿಸಿಲಿನ ಬೇಗೆ – 44.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು

Public TV
By Public TV
2 hours ago
Vinay Kulkarni 1 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?