ಬೆಂಗಳೂರು: ಇಂದು ಸಂಜೆಯೊಳಗೆ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಕರೆ ಕೊಟ್ಟಿದ್ದಾರೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸದನದಲ್ಲಿ ವಿಶ್ವಾಸ ಮತಯಾಚನೆ ವೇಳೆ ಮಾತನಾಡಿದ ಬಿಜೆಪಿಯ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭಾಷಣ ಮಾಡಿದ್ರು. ಅಷ್ಟೇ ಅಲ್ಲದೇ ಇಂದು ಸಂಜೆಯೊಳಗೆ ಸಾಲ ಮನ್ನಾ ಮಾಡದಿದ್ದರೆ ಸೋಮವಾರ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೇಳಿ ಸಭಾತ್ಯಾಗ ಮಾಡಿದರು. ಬಿಎಸ್ವೈ ಜೊತೆ ಬಿಜೆಪಿ ಶಾಸಕರು ಸಭಾತ್ಯಾಗ ಮಾಡಿದರು.
ಹಿರಿಯರು ಮತ್ತು ಗರ್ಭಿಣಿಯರಿಗೂ ಕುಮಾರಸ್ವಾಮಿಯವರು ಭರವಸೆ ನೀಡಿದ್ದಾರೆ. ನೀರಾವರಿಗೆ 1 ಲಕ್ಷ ಕೋಟಿ ಮೀಸಲು ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ಇದೆಲ್ಲಾ ನೀವು ಯಾವಾಗ ಈಡೇರಿಸುತ್ತೀರಿ ಎಂದು ಬಿಎಸ್ವೈ ಪ್ರಶ್ನಿಸಿದರು.
ನಮಗೆ ಎಲ್ಲಾ ಕಡೆಯಿಂದ ಒತ್ತಡ ಬರುತ್ತಿದೆ. ಆದ್ದರಿಂದ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ ಗಳ ಸಾಲ ಮನ್ನಾ ಮಾಡಬೇಕು. ಇಲ್ಲವಾರದೆ ಸೋಮವಾರ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೇಳಿ ಸಭಾತ್ಯಾಗ ಮಾಡಿದರು.