Karnataka Bandh: ಫಿಲ್ಮ್ ಚೇಂಬರ್ ಮುಂದೆ ಕಲಾವಿದರ ಪ್ರತಿಭಟನೆಗೆ ಸಿದ್ಧತೆ

Public TV
1 Min Read
Film Chamber

ಕಾವೇರಿ (Cauvery) ನದಿ ವಿವಾದ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಕನ್ನಡ ಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ (Karnataka Bandh) ಕರೆಗೆ ಸ್ಯಾಂಡಲ್ ವುಡ್ ಕೂಡ ಬೆಂಬಲ ಸೂಚಿಸಿದೆ. ಇಂದು ಬೆಳಗ್ಗೆ 11 ಗಂಟೆಯಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ (Film Chamber) ಪಕ್ಕದಲ್ಲಿ ಸಿದ್ಧವಾಗಿರುವ ಬೃಹತ್ ವೇದಿಕೆಯಲ್ಲಿ ಪ್ರತಿಭಟನೆಯನ್ನು ಮಾಡಲಾಗುತ್ತಿದೆ.

karnataka bandh 1

ಈ ಹೋರಾಟದ ನೇತೃತ್ವವನ್ನು ಹಿರಿಯ ನಟ ಶಿವರಾಜ್ ಕುಮಾರ್ ವಹಿಸುತ್ತಿದ್ದು, ಅನೇಕ ಕಲಾವಿದರು ಈ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ. ಧ್ರುವ ಸರ್ಜಾ, ದುನಿಯಾ ವಿಜಯ್, ನಿಖಿಲ್, ಕೋಮಲ್, ರವಿಶಂಕರ್, ಸಾಧು ಕೋಕಿಲ, ಪೂಜಾ ಗಾಂಧಿ, ರಾಘವೇಂದ್ರ ರಾಜಕುಮಾರ್, ನಿಖಿಲ್ ಕುಮಾರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಿ ಆಗಲಿದ್ದಾರೆ.

Nikhil Kumar

ಈ ನಡುವೆ ಅನೇಕ ಕಲಾವಿದರು ಸೋಷಿಯಲ್ ಮೀಡಿಯಾ ಮೂಲಕ ಬಂದ್ ಗೆ ಬೆಂಬಲವನ್ನು ವ್ಯಕ್ತ ಪಡಿಸಿದ್ದಾರೆ. ಕೆಲ ಕಲಾವಿದರು ಹೊರ ರಾಜ್ಯಗಳಲ್ಲಿ ಮತ್ತು ವಿದೇಶಗಳಲ್ಲಿ ಇರುವುದರಿಂದ ಅವರು ಹೋರಾಟದಲ್ಲಿ ಭಾಗಿ ಆಗುತ್ತಿಲ್ಲ. ಆದರೆ, ನೈತಿಕ ಬೆಂಬಲವನ್ನೂ ಅವರೆಲ್ಲರೂ ಸೂಚಿಸಿದ್ದಾರೆ.

 

ಫಿಲ್ಮ್ ಚೇಂಬರ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನಿನ್ನೆಯಷ್ಟೇ ಬಹುತೇಕ ಕಲಾವಿದರನ್ನು ಸಂಪರ್ಕಿಸಿ, ಹೋರಾಟದಲ್ಲಿ ಭಾಗಿ ಆಗುವಂತೆ ವಿನಂತಿಸಿದ್ದಾರೆ. ಸಾಕಷ್ಟು ಕಲಾವಿದರು ಈ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ, ಕಿರುತೆರೆ ಕಲಾವಿದರು ಕೂಡ  ಈ  ಬಂದ್ ನಲ್ಲಿ ಭಾಗಿಯಾಗಲಿದ್ದಾರೆ.

Web Stories

Share This Article