ಕನ್ನಡ ಪರ ಹೋರಾಟಗಾರರು ನಾಳೆ ಕರ್ನಾಟಕ ಬಂದ್ (Karnataka Bandh) ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಈ ವಾರ ಸಿನಿಮಾಗಳನ್ನು ಬಿಡುಗಡೆ ಮಾಡದಂತೆ ಕರ್ನಾಟಕ ನಿರ್ಮಾಪಕರ ಸಂಘದ ಉಮೇಶ್ ಬಣಕಾರ್ ತಿಳಿಸಿದ್ದಾರೆ. ಈಗಾಗಲೇ ಸಂಬಂಧ ಪಟ್ಟ ನಿರ್ಮಾಪಕರ ಜೊತೆ ಮಾತನಾಡಲಾಗಿದೆ. ಅವರು ಕೂಡ ಬೆಂಬಲ ಸೂಚಿಸಿದ್ದಾರೆ ಎಂದು ಅವರು ಹೇಳಿದರು.
ಇಂದು ಜಗ್ಗೇಶ್ ನಟನೆಯ ತೋತಾಪುರಿ 2 ಸಿನಿಮಾ ರಿಲೀಸ್ ಆಗುತ್ತಿದೆ. ನಾಳೆ ಗಣೇಶ್ ನಟನೆಯ ಬಾನದಾರಿಯಲ್ಲಿ ಚಿತ್ರ ಬಿಡುಗಡೆ ಆಗಬೇಕಿತ್ತು. ಅಲ್ಲದೇ, ಇನ್ನೂ ಹಲವು ಚಿತ್ರಗಳು ಬಿಡುಗಡೆ ಆಗಲು ತಯಾರಿ ಮಾಡಿಕೊಂಡಿದ್ದವು. ಬಂದ್ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶನಿವಾರ ಸಿನಿಮಾಗಳನ್ನು ರಿಲೀಸ್ ಮಾಡಲು ಹೊರಟಿದ್ದಾರೆ ನಿರ್ಮಾಪಕರು.
ನಾಳೆ ಸ್ಯಾಂಡಲ್ ವುಡ್ (Sandalwood) ಕೂಡ ತನ್ನ ಕೆಲಸ ನಿಲ್ಲಿಸಲಿದೆ. ಕಲಾವಿದರು ಕೂಡ ಬೀದಿಗೆ ಇಳಿದು ಹೋರಾಟ ಮಾಡಲಿದ್ದಾರೆ. ಬಹುತೇಕ ಶೂಟಿಂಗ್ ನಿಲ್ಲಿಸಲಾಗಿದೆ. ಸಿನಿಮಾ ಸಂಬಂಧಿ ಎಲ್ಲ ಚಟುವಟಿಕೆಗಳನ್ನು ನಿಲ್ಲಿಸಿ, ಬಂದ್ ನಲ್ಲಿ ಭಾಗಿಯಾಗಲಿದ್ದಾರೆ. ಇದರ ನೇತೃತ್ವವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (Film Chamber) ವಹಿಸಿದೆ.
Web Stories