Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತಿದೆ- ಸಿಎಂ ಆರೋಪಕ್ಕೆ ಬಿಜೆಪಿ ತಿರುಗೇಟು

Public TV
Last updated: September 14, 2018 8:03 pm
Public TV
Share
2 Min Read
hdk BSY
SHARE

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ದಂಧೆ ಹಣ ಬಳಕೆ ಮಾಡುತ್ತಿದೆ ಎಂಬ ಸಿಎಂ ಎಚ್‍ಡಿ ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದ್ದು, ರಾಜ್ಯದಲ್ಲಿ ಆಡಳಿತ ನಡೆಸಲು ಸಿಎಂ ಅಸಮರ್ಥರಾಗಿದ್ದಾರೆ ಎಂಬುವುದು ಸ್ಪಷ್ಟವಾಗಿದೆ ಎಂದು ಟಾಂಗ್ ನೀಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಅವರು, ಆಡಳಿತ ನಡೆಸುವಲ್ಲಿ ಸಂಪೂರ್ಣ ಅಸಮರ್ಥ ಎನ್ನುವುದು ಇಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಯಿಂದ ಸ್ಪಷ್ಟವಾಗಿದೆ. ಇಂತಹ ಅಸಮರ್ಥ ಮುಖ್ಯಮಂತ್ರಿಯಿಂದ ರಾಜ್ಯಕ್ಕೆ ಸಿಗಬೇಕಾದ ಕೊಡುಗೆಯೇನೂ ಇಲ್ಲ. ಮುಖ್ಯಮಂತ್ರಿಗಳು ಕೈಲಾಗದವರು ಮೈ ಪರಚಿಕೊಂಡರು ಎನ್ನುವಂತೆ ಹೇಳಿಕೆ ನೀಡುತ್ತಿದ್ದು. ಸಿಎಂ ಹತಾಶರಾಗಿದ್ದಾರೆ ಎನ್ನುವುದನ್ನು ಸಾಬೀತುಪಡಿಸಿದೆ ಎಂದು ಕಿಡಿಕಾರಿದ್ದಾರೆ.

BJP LOGO

ಪತ್ರಿಕಾ ಹೇಳಿಕೆಯಲ್ಲಿ ಏನಿದೆ?
ನಾಡಿನ ಆರೂವರೆ ಕೋಟಿ ಜನರಿಗೆ ನ್ಯಾಯ ದೊರೆಯಬಹುದೆಂಬ ನಿರೀಕ್ಷೆಯಲ್ಲಿದ್ದ ಜನರು ಈಗ ಭ್ರಮನಿರಸನಗೊಂಡಿದ್ದಾರೆ. ಕಷ್ಟದಲ್ಲಿರುವ ರಾಜ್ಯದ ಜನರ ಕಣ್ಣೀರು ಒರೆಸಬೇಕಾಗಿದ್ದ ಮುಖ್ಯಮಂತ್ರಿಗಳು ಆರಂಭದಲ್ಲೇ ಸ್ವತಃ ಕಣ್ಣೀರು ಹಾಕಿದ್ದರು. ಈಗ ಸರ್ಕಾರದ ಮೇಲಿನ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿರುವ ಸಿಎಂ ವೃಥಾ ಬಿಜೆಪಿ ವಿರುದ್ಧ ಆರೋಪಿಸುವುದನ್ನೇ ಕಾಯಕವನ್ನಾಗಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಆಡಳಿತ ನಡೆಸುವುದನ್ನು ಬಿಟ್ಟು ತಮ್ಮ ದಿನದ ಬಹುತೇಕ ಸಮಯವನ್ನು ಬಿಜೆಪಿ ಮತ್ತು ಅದರ ನಾಯಕರನ್ನು ನಿಂದಿಸುವುದಕ್ಕೆ ಮೀಸಲಿಟ್ಟಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ನಡುವಿನ ಹೊಂದಾಣಿಕೆಯ ಕೊರತೆಯೇ ಪ್ರಸಕ್ತ ರಾಜಕಾರಣದಲ್ಲಿ ಕೋಲಾಹಲದ ವಾತಾವರಣ ನಿರ್ಮಾಣವಾಗಲು ಕಾರಣ ಎನ್ನುವುದು ಇಡೀ ರಾಜ್ಯದ ಜನರ ಗಮನಕ್ಕೆ ಬಂದಿದೆ. ಆದರೆ ಮುಖ್ಯಮಂತ್ರಿಗಳು ಎಲ್ಲ ಗೊಂದಲಕ್ಕೂ ಬಿಜೆಪಿ ಕಾರಣ ಎನ್ನುವಂತೆ ಬಿಂಬಿಸಲು ಯತ್ನಿಸುತ್ತಿದ್ದಾರೆ.

CM HDK 1

ಆಪರೇಷನ್ ಕಮಲದ ಮೂಲಕ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎನ್ನುವ ಮುಖ್ಯಮಂತ್ರಿಗಳ ಹೇಳಿಕೆ ಬೇಜಾಬ್ದಾರಿಯ ಪರಮಾವಧಿ. ಸಮ್ಮಿಶ್ರ ಸರ್ಕಾರದೊಳಗಿನ ಸಮಸ್ಯೆಗಳನ್ನು ನಿಭಾಯಿಸುವ ಸಾಮಥ್ರ್ಯವಲ್ಲದೇ ಅವರು ಬಿಜೆಪಿ ಮೇಲೆ ಗೂಬೆ ಕೂರಿಸುವ ಯತ್ನ ನಡೆಸಿದ್ದಾರೆ. ಮುಖ್ಯಮಂತ್ರಿಗಳಿಗೆ ಖಚಿತ ಮಾಹಿತಿ ಇದ್ದರೆ ನೇರವಾಗಿ ಕ್ರಮ ಜರುಗಿಸಬಹುದಾದ ಉನ್ನತ ಸ್ಥಾನದಲ್ಲಿ ಅವರಿದ್ದಾರೆ. ಆದರೆ ಅವರೀಗ ಸಾಮಾನ್ಯ ವ್ಯಕ್ತಿಯಂತೆ ಬೀದಿಯಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಾ ಓಡಾಡುತ್ತಿದ್ದಾರೆ. ಇದು ಅವರ ಹತಾಶೆಯ ಪ್ರತೀಕ ಕಾಂಗ್ರೆಸ್ ಶಾಸಕರನ್ನು ನಿಭಾಯಿಸುವುದು ಮುಖ್ಯಮಂತ್ರಿಗಳಿಗೆ ಸವಾಲಿನ ಕೆಲಸವಾಗಿದೆ. ಅಷ್ಟೇ ಅಲ್ಲ ಸ್ವತಃ ತಮ್ಮ ಪಕ್ಷದ ಶಾಸಕರ ಮೇಲೂ ಅವರು ನಿಯಂತ್ರಣ ಕಳೆದುಕೊಂಡಿರುವುದರ ಸೂಚನೆ ಇದು ಎಂದು ವಿವರಿಸಿದ್ದಾರೆ.

ಈ ಹಿಂದೆ ಜೆಡಿಎಸ್ ಮುಖಂಡರಾದ ಸಚಿವ ಎಚ್.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರೇ ಜೆಡಿಎಸ್‍ನಲ್ಲಿ ಸೂಟ್‍ಕೇಸ್ ರಾಜಕೀಯ ನಡೆಯುತ್ತಿದೆ ಎಂದು ದೂರಿದ್ದರು. ಮುಖ್ಯಮಂತ್ರಿಗಳು ಇದನ್ನು ಮರೆತಿದ್ದಾರೆ. ಸೂಟ್‍ಕೇಸ್ ಪಕ್ಷ ಯಾವುದು ಎನ್ನುವುದು ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಜೆಡಿಎಸ್ ಪಕ್ಷದ ಮುಖಂಡರೇ ಇದನ್ನು ಬಯಲು ಮಾಡಿದ್ದರೂ, ಮುಖ್ಯಮಂತ್ರಿಗಳಿಗೆ ಬುದ್ಧಿ ಬಂದಿಲ್ಲ. ಸರ್ಕಾರದ ಮೇಲೆ ಸಂಪೂರ್ಣ ಹತೋಟಿ ಕಳೆದುಕೊಂಡಿರುವ ಮುಖ್ಯಮಂತ್ರಿಗಳು ಜನರನ್ನು ದಾರಿ ತಪ್ಪಿಸುವ ಹೇಳಿಕೆ ನೀಡುತ್ತಲೇ ನಾಡಿನ ಆರುವರೆ ಕೋಟಿ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ. ಮಾನಸಿಕ ಹತೋಟಿಯನ್ನು ಕಳೆದುಕೊಂಡವರಂತೆ ಹೊಣೆಗೇಡಿತನದಿಂದ ಮಾತನಾಡುವುದು ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ. ವಸ್ತುಸ್ಥಿತಿ ಅರಿತು ಜವಾಬ್ದಾರಿಯಿಂದ ಮಾತನಾಡುವುದನ್ನು ಮುಖ್ಯಮಂತ್ರಿ ಇನ್ನಾದರೂ ಅಭ್ಯಾಸ ಮಾಡಿಕೊಳ್ಳಲಿ ಬಿಜೆಪಿಯೇ ಗೊಂದಲ ಮೂಡಿಸುತ್ತಿದೆ ಎನ್ನುವ ರೀತಿಯಲ್ಲಿ ನಿರಾಧಾರವಾಗಿ ಮಾತನಾಡುವ ಮುಖ್ಯಮಂತ್ರಿ ವರ್ತನೆ ಖಂಡನಾರ್ಹ. ಇಂತಹ ಹೊಣೆಗೇಡಿ ವರ್ತನೆ ತೋರುವ ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಬೀದಿಗಳಿದು ಹೋರಾಟ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

bsy

TAGGED:bengalurubjpCM KumaraswamycongressjdsPublic TVState Governmentಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುರಾಜ್ಯ ಸರ್ಕಾರಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema Updates

ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
12 hours ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ ಪಡುಕೋಣೆ
15 hours ago
Kamal Hassan Surya 2
ನಟ ಸೂರ್ಯ ಜೊತೆಗೆ ಬಿಗ್‌ ಬಜೆಟ್‌ ಸಿನಿಮಾಗೆ ಕಮಲ್‌ ಪ್ಲ್ಯಾನ್‌
18 hours ago
Nandamuri Balakrishna
ಬಾಲಯ್ಯ ಜನ್ಮದಿನಕ್ಕೆ `ಅಖಂಡ-2′ ಟೀಸರ್ ರಿಲೀಸ್ – ಮಾಸ್ ಅವತಾರದಲ್ಲಿ ಅಬ್ಬರಿಸಿದ ನಂದಮೂರಿ ಬಾಲಕೃಷ್ಣ
18 hours ago

You Might Also Like

XFG
Health

ಜೆಎನ್‌1 ಬೆನ್ನಲ್ಲೇ ಕೊರೊನಾ ಹೊಸ ರೂಪಾಂತರಿ XFG ಸೋಂಕು ಪತ್ತೆ – ಎಷ್ಟು ಅಪಾಯಕಾರಿ?

Public TV
By Public TV
7 hours ago
Meghalaya Honeymoon
Latest

ಹನಿಮೂನ್ ಮರ್ಡರ್ | ಪತಿ ಹತ್ಯೆಗೆ 20 ಲಕ್ಷ ನೀಡುವುದಾಗಿ ಆಫರ್ ನೀಡಿದ್ದ ಹಂತಕಿ

Public TV
By Public TV
7 hours ago
Madhu Bangarappa
Bagalkot

ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿ ಫೇಶಿಯಲ್ ಅಟೆಂಡೆನ್ಸ್ : ಮಧು ಬಂಗಾರಪ್ಪ

Public TV
By Public TV
8 hours ago
01 6
Big Bulletin

ಬಿಗ್‌ ಬುಲೆಟಿನ್‌ 10 June 2025 ಭಾಗ-1

Public TV
By Public TV
8 hours ago
02 7
Big Bulletin

ಬಿಗ್‌ ಬುಲೆಟಿನ್‌ 10 June 2025 ಭಾಗ-2

Public TV
By Public TV
8 hours ago
03 6
Big Bulletin

ಬಿಗ್‌ ಬುಲೆಟಿನ್‌ 10 June 2025 ಭಾಗ-3

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?