Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತಿದೆ- ಸಿಎಂ ಆರೋಪಕ್ಕೆ ಬಿಜೆಪಿ ತಿರುಗೇಟು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತಿದೆ- ಸಿಎಂ ಆರೋಪಕ್ಕೆ ಬಿಜೆಪಿ ತಿರುಗೇಟು

Bengaluru City

ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತಿದೆ- ಸಿಎಂ ಆರೋಪಕ್ಕೆ ಬಿಜೆಪಿ ತಿರುಗೇಟು

Public TV
Last updated: September 14, 2018 8:03 pm
Public TV
Share
2 Min Read
hdk BSY
SHARE

ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಬಿಜೆಪಿ ದಂಧೆ ಹಣ ಬಳಕೆ ಮಾಡುತ್ತಿದೆ ಎಂಬ ಸಿಎಂ ಎಚ್‍ಡಿ ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ತಿರುಗೇಟು ನೀಡಿದ್ದು, ರಾಜ್ಯದಲ್ಲಿ ಆಡಳಿತ ನಡೆಸಲು ಸಿಎಂ ಅಸಮರ್ಥರಾಗಿದ್ದಾರೆ ಎಂಬುವುದು ಸ್ಪಷ್ಟವಾಗಿದೆ ಎಂದು ಟಾಂಗ್ ನೀಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಅವರು, ಆಡಳಿತ ನಡೆಸುವಲ್ಲಿ ಸಂಪೂರ್ಣ ಅಸಮರ್ಥ ಎನ್ನುವುದು ಇಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಯಿಂದ ಸ್ಪಷ್ಟವಾಗಿದೆ. ಇಂತಹ ಅಸಮರ್ಥ ಮುಖ್ಯಮಂತ್ರಿಯಿಂದ ರಾಜ್ಯಕ್ಕೆ ಸಿಗಬೇಕಾದ ಕೊಡುಗೆಯೇನೂ ಇಲ್ಲ. ಮುಖ್ಯಮಂತ್ರಿಗಳು ಕೈಲಾಗದವರು ಮೈ ಪರಚಿಕೊಂಡರು ಎನ್ನುವಂತೆ ಹೇಳಿಕೆ ನೀಡುತ್ತಿದ್ದು. ಸಿಎಂ ಹತಾಶರಾಗಿದ್ದಾರೆ ಎನ್ನುವುದನ್ನು ಸಾಬೀತುಪಡಿಸಿದೆ ಎಂದು ಕಿಡಿಕಾರಿದ್ದಾರೆ.

BJP LOGO

ಪತ್ರಿಕಾ ಹೇಳಿಕೆಯಲ್ಲಿ ಏನಿದೆ?
ನಾಡಿನ ಆರೂವರೆ ಕೋಟಿ ಜನರಿಗೆ ನ್ಯಾಯ ದೊರೆಯಬಹುದೆಂಬ ನಿರೀಕ್ಷೆಯಲ್ಲಿದ್ದ ಜನರು ಈಗ ಭ್ರಮನಿರಸನಗೊಂಡಿದ್ದಾರೆ. ಕಷ್ಟದಲ್ಲಿರುವ ರಾಜ್ಯದ ಜನರ ಕಣ್ಣೀರು ಒರೆಸಬೇಕಾಗಿದ್ದ ಮುಖ್ಯಮಂತ್ರಿಗಳು ಆರಂಭದಲ್ಲೇ ಸ್ವತಃ ಕಣ್ಣೀರು ಹಾಕಿದ್ದರು. ಈಗ ಸರ್ಕಾರದ ಮೇಲಿನ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿರುವ ಸಿಎಂ ವೃಥಾ ಬಿಜೆಪಿ ವಿರುದ್ಧ ಆರೋಪಿಸುವುದನ್ನೇ ಕಾಯಕವನ್ನಾಗಿಸಿಕೊಂಡಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರು ಆಡಳಿತ ನಡೆಸುವುದನ್ನು ಬಿಟ್ಟು ತಮ್ಮ ದಿನದ ಬಹುತೇಕ ಸಮಯವನ್ನು ಬಿಜೆಪಿ ಮತ್ತು ಅದರ ನಾಯಕರನ್ನು ನಿಂದಿಸುವುದಕ್ಕೆ ಮೀಸಲಿಟ್ಟಿದ್ದಾರೆ. ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ನಡುವಿನ ಹೊಂದಾಣಿಕೆಯ ಕೊರತೆಯೇ ಪ್ರಸಕ್ತ ರಾಜಕಾರಣದಲ್ಲಿ ಕೋಲಾಹಲದ ವಾತಾವರಣ ನಿರ್ಮಾಣವಾಗಲು ಕಾರಣ ಎನ್ನುವುದು ಇಡೀ ರಾಜ್ಯದ ಜನರ ಗಮನಕ್ಕೆ ಬಂದಿದೆ. ಆದರೆ ಮುಖ್ಯಮಂತ್ರಿಗಳು ಎಲ್ಲ ಗೊಂದಲಕ್ಕೂ ಬಿಜೆಪಿ ಕಾರಣ ಎನ್ನುವಂತೆ ಬಿಂಬಿಸಲು ಯತ್ನಿಸುತ್ತಿದ್ದಾರೆ.

CM HDK 1

ಆಪರೇಷನ್ ಕಮಲದ ಮೂಲಕ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ ಎನ್ನುವ ಮುಖ್ಯಮಂತ್ರಿಗಳ ಹೇಳಿಕೆ ಬೇಜಾಬ್ದಾರಿಯ ಪರಮಾವಧಿ. ಸಮ್ಮಿಶ್ರ ಸರ್ಕಾರದೊಳಗಿನ ಸಮಸ್ಯೆಗಳನ್ನು ನಿಭಾಯಿಸುವ ಸಾಮಥ್ರ್ಯವಲ್ಲದೇ ಅವರು ಬಿಜೆಪಿ ಮೇಲೆ ಗೂಬೆ ಕೂರಿಸುವ ಯತ್ನ ನಡೆಸಿದ್ದಾರೆ. ಮುಖ್ಯಮಂತ್ರಿಗಳಿಗೆ ಖಚಿತ ಮಾಹಿತಿ ಇದ್ದರೆ ನೇರವಾಗಿ ಕ್ರಮ ಜರುಗಿಸಬಹುದಾದ ಉನ್ನತ ಸ್ಥಾನದಲ್ಲಿ ಅವರಿದ್ದಾರೆ. ಆದರೆ ಅವರೀಗ ಸಾಮಾನ್ಯ ವ್ಯಕ್ತಿಯಂತೆ ಬೀದಿಯಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಾ ಓಡಾಡುತ್ತಿದ್ದಾರೆ. ಇದು ಅವರ ಹತಾಶೆಯ ಪ್ರತೀಕ ಕಾಂಗ್ರೆಸ್ ಶಾಸಕರನ್ನು ನಿಭಾಯಿಸುವುದು ಮುಖ್ಯಮಂತ್ರಿಗಳಿಗೆ ಸವಾಲಿನ ಕೆಲಸವಾಗಿದೆ. ಅಷ್ಟೇ ಅಲ್ಲ ಸ್ವತಃ ತಮ್ಮ ಪಕ್ಷದ ಶಾಸಕರ ಮೇಲೂ ಅವರು ನಿಯಂತ್ರಣ ಕಳೆದುಕೊಂಡಿರುವುದರ ಸೂಚನೆ ಇದು ಎಂದು ವಿವರಿಸಿದ್ದಾರೆ.

ಈ ಹಿಂದೆ ಜೆಡಿಎಸ್ ಮುಖಂಡರಾದ ಸಚಿವ ಎಚ್.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಅವರೇ ಜೆಡಿಎಸ್‍ನಲ್ಲಿ ಸೂಟ್‍ಕೇಸ್ ರಾಜಕೀಯ ನಡೆಯುತ್ತಿದೆ ಎಂದು ದೂರಿದ್ದರು. ಮುಖ್ಯಮಂತ್ರಿಗಳು ಇದನ್ನು ಮರೆತಿದ್ದಾರೆ. ಸೂಟ್‍ಕೇಸ್ ಪಕ್ಷ ಯಾವುದು ಎನ್ನುವುದು ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಜೆಡಿಎಸ್ ಪಕ್ಷದ ಮುಖಂಡರೇ ಇದನ್ನು ಬಯಲು ಮಾಡಿದ್ದರೂ, ಮುಖ್ಯಮಂತ್ರಿಗಳಿಗೆ ಬುದ್ಧಿ ಬಂದಿಲ್ಲ. ಸರ್ಕಾರದ ಮೇಲೆ ಸಂಪೂರ್ಣ ಹತೋಟಿ ಕಳೆದುಕೊಂಡಿರುವ ಮುಖ್ಯಮಂತ್ರಿಗಳು ಜನರನ್ನು ದಾರಿ ತಪ್ಪಿಸುವ ಹೇಳಿಕೆ ನೀಡುತ್ತಲೇ ನಾಡಿನ ಆರುವರೆ ಕೋಟಿ ಜನರಿಗೆ ದ್ರೋಹ ಬಗೆಯುತ್ತಿದ್ದಾರೆ. ಮಾನಸಿಕ ಹತೋಟಿಯನ್ನು ಕಳೆದುಕೊಂಡವರಂತೆ ಹೊಣೆಗೇಡಿತನದಿಂದ ಮಾತನಾಡುವುದು ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ. ವಸ್ತುಸ್ಥಿತಿ ಅರಿತು ಜವಾಬ್ದಾರಿಯಿಂದ ಮಾತನಾಡುವುದನ್ನು ಮುಖ್ಯಮಂತ್ರಿ ಇನ್ನಾದರೂ ಅಭ್ಯಾಸ ಮಾಡಿಕೊಳ್ಳಲಿ ಬಿಜೆಪಿಯೇ ಗೊಂದಲ ಮೂಡಿಸುತ್ತಿದೆ ಎನ್ನುವ ರೀತಿಯಲ್ಲಿ ನಿರಾಧಾರವಾಗಿ ಮಾತನಾಡುವ ಮುಖ್ಯಮಂತ್ರಿ ವರ್ತನೆ ಖಂಡನಾರ್ಹ. ಇಂತಹ ಹೊಣೆಗೇಡಿ ವರ್ತನೆ ತೋರುವ ಮುಖ್ಯಮಂತ್ರಿ ವಿರುದ್ಧ ಬಿಜೆಪಿ ಬೀದಿಗಳಿದು ಹೋರಾಟ ಮಾಡಬೇಕಾದೀತು ಎಂದು ಎಚ್ಚರಿಕೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

bsy

TAGGED:bengalurubjpCM KumaraswamycongressjdsPublic TVState Governmentಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿಬೆಂಗಳೂರುರಾಜ್ಯ ಸರ್ಕಾರಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

vijay thalapathy
ಕರೂರ್‌ ಕಾಲ್ತುಳಿತ ಕೇಸ್‌ – CBI ಮುಂದೆ ವಿಚಾರಣೆಗೆ ಹಾಜರಾದ ವಿಜಯ್‌
Cinema Latest Main Post South cinema
Anushka Shetty
ಸ್ವೀಟಿ ಅನುಷ್ಕಾಗೆ ಕಂಕಣ ಭಾಗ್ಯ – ಬೆಂಗಳೂರು ಮೂಲದ ಉದ್ಯಮಿ ಜೊತೆ ಮದ್ವೆ?
Cinema Latest South cinema
Hansika Motwani Sohael Khaturiya
ಉದ್ಯಮಿ‌ ಸೊಹೇಲ್‌ ಜೊತೆಗಿನ 4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ‘ಬಿಂದಾಸ್‌’ ನಟಿ
Cinema Latest South cinema Top Stories
d53acfe5 1562 41db 9d81 d5b390041c73
ಪ್ರಿಯಕರ ಫರ್ಮಾನ್‌ ಖಾನ್‌ ಜೊತೆ ಕುಂಭಮೇಳದ ವೈರಲ್‌ ತಾರೆ ಮೊನಾಲಿಸಾ ಮದುವೆ
Cinema Latest Main Post

You Might Also Like

lpg cylinders
Bengaluru City

ಅಕ್ರಮ ಸಿಲಿಂಡರ್‌ ದಾಸ್ತಾನು – ಬೆಂಗಳೂರಲ್ಲಿ 4 ಕೇಸ್‌ ದಾಖಲು

Public TV
By Public TV
6 minutes ago
Iran strikes US airbase in Saudi Arabia
Latest

ಸೌದಿ ಅರೇಬಿಯಾದಲ್ಲಿರುವ ಅಮೆರಿಕದ ವಾಯುನೆಲೆಯ ಮೇಲೆ ಇರಾನ್ ದಾಳಿ

Public TV
By Public TV
56 minutes ago
Yelahanka Suicide
Bengaluru City

ಬೆಂಗಳೂರಲ್ಲಿ ವಿವಾಹಿತೆ ಅನುಮಾನಾಸ್ಪದ ಸಾವು – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
2 hours ago
gyanesh kumar election commission
Latest

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತ.ನಾಡು, ಪುದುಚೇರಿ – ಇಂದು ಚುನಾವಣಾ ದಿನಾಂಕ ಪ್ರಕಟ ಸಾಧ್ಯತೆ

Public TV
By Public TV
3 hours ago
chitradurga accident
Chitradurga

ನಿಂತಿದ್ದ ಲಾರಿಗೆ ಕಾರು ಡಿಕ್ಕಿ – ಮೂವರು RSIಗಳು ಸ್ಥಳದಲ್ಲೇ ದುರ್ಮರಣ

Public TV
By Public TV
3 hours ago
Hassan Patla Betta Wild Elephant
Districts

ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳ ಹಿಂಡು – ಪ್ರವಾಸಿಗರಿಗೆ ನಿಷೇಧ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?