Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮನೆಯೊಂದು ಮೂರು ಬಾಗಿಲು – ಶಾ ರಾಜ್ಯ ಭೇಟಿ ಸಂದರ್ಭದಲ್ಲೇ ಬಿಜೆಪಿ ಭಿನ್ನಮತ ತಾರಕಕ್ಕೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಮನೆಯೊಂದು ಮೂರು ಬಾಗಿಲು – ಶಾ ರಾಜ್ಯ ಭೇಟಿ ಸಂದರ್ಭದಲ್ಲೇ ಬಿಜೆಪಿ ಭಿನ್ನಮತ ತಾರಕಕ್ಕೆ!

Karnataka

ಮನೆಯೊಂದು ಮೂರು ಬಾಗಿಲು – ಶಾ ರಾಜ್ಯ ಭೇಟಿ ಸಂದರ್ಭದಲ್ಲೇ ಬಿಜೆಪಿ ಭಿನ್ನಮತ ತಾರಕಕ್ಕೆ!

Public TV
Last updated: June 20, 2025 6:43 pm
Public TV
Share
3 Min Read
Karnataka BJP rebels meeting V Somanna
SHARE

– ವಿಜಯೇಂದ್ರ ಬದಲಾವಣೆಗೆ ಭಿನ್ನರು ಮತ್ತೆ ಪಟ್ಟು, ಪ್ರತ್ಯೇಕ ಸಭೆ
– ರೆಬೆಲ್ಸ್ ಜತೆ ಬಹಿರಂಗವಾಗಿ ಗುರುತಿಸಿಕೊಂಡ ವಿ ಸೋಮಣ್ಣ

ಬೆಂಗಳೂರು: ಬಿಜೆಪಿ (BJP) ಮನೆಯಲ್ಲಿ ಮತ್ತೆ ಭಿನ್ನಮತ ವಿರಾಟ್ ದರ್ಶನ. ಹೌದು, ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ಸುಳಿವು ಸಿಕ್ಕ ಕೂಡಲೇ ಭಿನ್ನರು ಅಲರ್ಟ್ ಆಗಿದ್ದಾರೆ. ಗುರುವಾರ ತಡರಾತ್ರಿ ರೆಬೆಲ್ಸ್ ತಂಡ ವಿಜಯೇಂದ್ರ (BY Vijayendra) ಬದಲಾವಣೆ ಆಗಲೇಬೇಕೆಂಬ ಸಂದೇಶ ರವಾನಿಸಿದೆ. ರೆಬೆಲ್ಸ್‌ ಜತೆ ಕೇಂದ್ರ ಸಚಿವ ವಿ ಸೋಮಣ್ಣ (V Somanna) ಬಹಿರಂಗವಾಗಿಯೇ ಗುರುತಿಸಿಕೊಂಡಿದ್ದು ಗೊಂದಲ ಮತ್ತಷ್ಟು ಸಂಕೀರ್ಣವಾದಂತಿದೆ. ಅಮಿತ್ ಶಾ (Amit Shah) ರಾಜ್ಯ ಭೇಟಿ ಸಂದರ್ಭದಲ್ಲೇ ಗುಂಪುಗಾರಿಕೆ ತಾರಕಕ್ಕೇರಿದೆ.

ಬಿಜೆಪಿ ಗೊಂದಲ ಮುಗಿದಿದೆ ಎಂದು ಒಂದು ಕಡೆ ಹೈಕಮಾಂಡ್ ರಾಜ್ಯಾಧ್ಯಕ್ಷರ ಚುನಾವಣೆ ನಡೆಸುವ ಸುಳಿವು ಕೊಟ್ಟಿದೆ. ಆದರೆ ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷೀಲಿ ಎನ್ನುವಂತೆ ಕಮಲ ಪಾಳಯದಲ್ಲಿ ಮತ್ತೆ ಭಿನ್ನಮತೀಯ ಚಟುವಟಿಕೆ ತೀವ್ರಗೊಂಡಿದೆ. ಯತ್ನಾಳ್ (Basangouda Patil Yatnal) ಉಚ್ಛಾಟನೆ ಬಳಿಕ ಮೌನವಾಗಿದ್ದ ಭಿನ್ನರ ಪಡೆ ಈಗ ಬೇರೊಂದು ರೂಪದಲ್ಲಿ ಪುಟಿದೆದ್ದಿದೆ. ಇದನ್ನೂ ಓದಿ: ನಮ್ಮ ಪಕ್ಷದಲ್ಲಿ ಕೆಲವರಿಗೆ ಅತೃಪ್ತಿ ಇರೋದು ಸತ್ಯ – ಬಿವೈವಿ

ವಿಜಯೇಂದ್ರ ಬದಲಾವಣೆಗೆ ಪಟ್ಟು ತೀವ್ರಗೊಳಿಸಿರುವ ರೆಬೆಲ್ಸ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ನೇತೃತ್ವದಲ್ಲಿ ತಡರಾತ್ರಿ ಪ್ರತ್ಯೇಕ ಸಭೆ ನಡೆಸಿದೆ. ವಿಶೇಷ ಅಂದ್ರೆ ಈ ಸಭೆಯಲ್ಲಿ ಭಾಗವಹಿಸುವ ಮೂಲಕ ಕೇಂದ್ರ ಸಚಿವ ವಿ ಸೋಮಣ್ಣ ಇದೇ ಮೊದಲ ಬಾರಿಗೆ ಭಿನ್ನರ ಜತೆ ಬಹಿರಂಗವಾಗಿ ಗುರುತಿಸಿಕೊಂಡಿದ್ದಾರೆ. ಮಾಜಿ ಸಂಸದ ಜಿಎಂ ಸಿದ್ದೇಶ್ವರ್ ಅವರ ಬೆಂಗಳೂರಿನ ಫ್ಲ್ಯಾಟ್‌ನಲ್ಲಿ ಸಭೆ ನಡೆಸಿದ್ದ ಭಿನ್ನರು ಶತಾಯಗತಾಯ ವಿಜಯೇಂದ್ರ ಬದಲಾಗಲೇಬೇಕೆಂಬ ಸಂದೇಶ ರವಾನಿಸಿದ್ದಾರೆ. ವಿ ಸೋಮಣ್ಣ ಮೂಲಕ ಅಮಿತ್ ಶಾ ಅವರಿಗೆ ಭಿನ್ನರು ಈ ಸಂದೇಶ ತಲುಪಿಸಿದ್ದಾರೆ ಎನ್ನಲಾಗಿದೆ. ಜತೆಗೆ ಇದೇ ಜೂ.23, 24 ರಂದು ದೆಹಲಿಗೂ ಹೋಗಲು ರೆಬೆಲ್ಸ್ ನಿರ್ಣಯಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ಕಚೇರಿಗೆ ದಿಢೀರ್ ಭೇಟಿ – ಅಸಮಾಧಾನಿತರ ಜೊತೆ ಮಾತುಕತೆಗೆ ಸಿದ್ಧ ಎಂದ ಬಿಎಸ್‌ವೈ

ಗೃಹ ಸಚಿವ ಅಮಿತ್ ಶಾ ಬಿಜಿಎಸ್ ಮೆಡಿಕಲ್ ಕಾಲೇಜು ಉದ್ಘಾಟನೆಗೆ ಬೆಂಗಳೂರಿಗೆ ಬಂದಿದ್ದರು. ಅಮಿತ್ ಶಾ ಬಂದ ಸಂದರ್ಭದಲ್ಲೇ ಭಿನ್ನ ರಾಗ ಮೊಳಗಿದ್ದು ಉದ್ದೇಶಪೂರ್ವಕವಾಗಿಯೇ ಎನ್ನಲಾಗ್ತಿದೆ. ಈ ನಡುವೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ಭಿನ್ನರ ಜತೆ ಸಂಧಾನ ಸಭೆ ನಡೆಸಿದರೂ ಅದು ಯಶಸ್ಸಾಗಲಿಲ್ಲ. ಭಿನ್ನರು ತಮ್ಮ ಪಟ್ಟು ಸಡಿಲಿಸಿಲ್ಲ.

 

ಭಿನ್ನರ ಸಭೆ ಬಗ್ಗೆ ಮಾತಾಡಿರುವ ವಿಜಯೇಂದ್ರ, ಕೆಲವರಿಗೆ ತಮ್ಮ ವಿಚಾರದಲ್ಲಿ ಅತೃಪ್ತಿ ಇದೆ. ಎಲ್ಲವೂ ಶೀಘ್ರದಲ್ಲೇ ಸರಿ ಹೋಗಲಿದೆ. ಪ್ರಮುಖರು ಕೂತು ಸರಿಪಡಿಸ್ತೇವೆ. ಒಳಜಗಳ ಬಿಟ್ಟು ಎಲ್ರೂ ಒಟ್ಟಾಗಬೇಕಿದೆ. ಅವರ ಮನವೊಲಿಕೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ವಿಜಯೇಂದ್ರ ವಿರುದ್ಧ ಕಳೆದೊಂದು ವಾರದಿಂದಲೂ ಭಿನ್ನರು,ಬಿಜೆಪಿ ತಟಸ್ಥರು ಹಾಗೂ ಹಿರಿಯರ ಬೆಂಬಲ ಪಡೆಯುವ ಕಸರತ್ತಿಗಿಳಿದಿದ್ರು. ಈಗಾಗಲೇ ಬೊಮ್ಮಾಯಿ, ಆರ್ ಅಶೋಕ್, ಡಿವಿಎಸ್, ವಿ ಸೋಮಣ್ಣ, ಶೋಭಾ ಕರಂದ್ಲಾಜೆ ಭೇಟಿ ಮಾಡಿ ಸಮಾಲೋಚಿಸಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿಯೊಳಗೆ ವಿಜಯೇಂದ್ರ ಪರ ಅನೇಕರು ಇಲ್ಲ ಎಂಬ ಸಂದೇಶ ಹೈಕಮಾಂಡ್‌ಗೆ ರವಾನಿಸುವ ಪ್ರಯತ್ನ ನಡೆಸಿದ್ದಾರೆ.

ಇದೆಲ್ಲದರ ಮಧ್ಯೆ ಮಾಜಿ ಸಿಎಂ ಯಡಿಯೂರಪ್ಪ ಪುತ್ರನ ಪರ ಅಖಾಡಕ್ಕಿಳಿದಿದ್ದಾರೆ. ಗುರುವಾರ ತಡರಾತ್ರಿ ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ ಅಮಿತ್ ಶಾ ಭೇಟಿ ಮಾಡಿದ ಯಡಿಯೂರಪ್ಪ ಪಕ್ಷದ ಆಂತರಿಕ ವಿಚಾರ ಚರ್ಚೆ ಮಾಡಿದ್ದಾರೆ. ವಿಜಯೇಂದ್ರ ಸಾರಥ್ಯ ಸಾಧನೆ ಬಗ್ಗೆಯೂ ಅಮಿತ್ ಶಾಗೆ ಬಿಎಸ್‌ವೈ ಸೂಕ್ಷ್ಮವಾಗಿ ಹೇಳಿದ್ದಾರೆ ಎನ್ನಲಾಗಿದೆ.

TAGGED:bjpramesh jarkiholiV.SomannaVijayendraಅಮಿತ್ ಶಾರಮೇಶ್ ಜಾರಕಿಹೊಳಿವಿ.ಸೋಮಣ್ಣವಿಜಯೇಂದ್ರ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Siddaramaiah HD Kumaraswamy
Latest

ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

Public TV
By Public TV
17 minutes ago
seemanth kumar singh 2
Bengaluru City

ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯಾ ವಿಜಯ್‌ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್‌

Public TV
By Public TV
38 minutes ago
10th student from Kerala Missing In Chikkamagaluru Mullayanagiri
Chikkamagaluru

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

Public TV
By Public TV
50 minutes ago
nitish kumar
Latest

ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ – ಶೀಘ್ರವೇ ಬಿಹಾರಕ್ಕೆ ನೂತನ ಸಿಎಂ

Public TV
By Public TV
56 minutes ago
Delhi Judge House Fire
Court

ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ ಕೇಸ್‌ – ಹೈಕೋರ್ಟ್‌ ನ್ಯಾ.ಯಶವಂತ್ ವರ್ಮಾ ರಾಜೀನಾಮೆ

Public TV
By Public TV
1 hour ago
Madhya Pradesh Murder
Crime

ಲವ್ವರ್‌ ಜೊತೆ ಸೇರಿ ಗಂಡನ ಕೊಲೆ – ದರೋಡೆಕೋರರ ಕೃತ್ಯ ಅಂತ ಬಿಂಬಿಸಿದ್ದ ಖತರ್ನಾಕ್‌ ಪತ್ನಿ ಬಂಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?