ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯಿಂದ ಬೆಳ್ಳಾರೆ ಉದ್ವಿಗ್ನಗೊಂಡಿದ್ದು ಬಿಜೆಪಿ ನಾಯಕರಿಗೆ ಹಿಂದೂ ಕಾರ್ಯಕರ್ತರು ದಿಗ್ಬಂಧನ ಹಾಕಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಸುನೀಲ್ಕುಮಾರ್, ಅಂಗಾರ, ಹರೀಶ್ ಪೂಂಜಾ ಅವರನ್ನು ಸುತ್ತುವರೆದು ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ನಳಿನ್ ಕುಮಾರ್ ಅವರ ಕಾರನ್ನು ಕಾರ್ಯಕರ್ತರು ಮೇಲಕ್ಕೆ ಎತ್ತಲು ಪ್ರಯತ್ನಿಸಿದ್ದಾರೆ. ಇದನ್ನೂ ಓದಿ: ನಮ್ಮ ಕಾರ್ಯಕರ್ತರ ರಕ್ಷಣೆ ನಮ್ಮ ಕೈಯಲ್ಲೇ ಆಗ್ತಿಲ್ಲ ಅಂತ ಒಪ್ಪಿಕೊಳ್ತೇನೆ: ಈಶ್ವರಪ್ಪ
ಆರ್ಎಸ್ಎಸ್ ಮುಖಂಡ ಪ್ರಭಾಕರ ಭಟ್ ಅವರಿಗೂ ಪ್ರತಿಭಟನೆಯ ಬಿಸಿ ತಟ್ಟಿದೆ. ನಮಗೆ ನ್ಯಾಯ ಬೇಕು ನ್ಯಾಯ ಬೇಕು ಎಂಬ ಘೋಷಣೆ ಕೂಗುತ್ತಿರುವ ಕಾರ್ಯಕರ್ತರು ಆರೋಪಿಗಳನ್ನು ಕೂಡಲೇ ಬಂಧಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಆಕ್ರೋಶಿತ ಗುಂಪನ್ನು ಸಮಾಧಾನಪಡಿಸಲು ಪೊಲೀಸರು ಹರಸಾಹಸ ಮಾಡುತ್ತಿದ್ದಾರೆ.
ಪ್ರತಿಭಟನೆ ಜೋರಾಗುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಪೊಲೀಸರ ಲಾಠಿ ಏಟಿಗೆ ಕಾರ್ಯಕರ್ತರು ದಿಕ್ಕಾಪಾಲಾಗಿ ಓಡಿದ್ದಾರೆ.