Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರಗಳಿಗೆ ಚಾಲನೆ: ದಿನೇಶ್ ಗುಂಡೂರಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರಗಳಿಗೆ ಚಾಲನೆ: ದಿನೇಶ್ ಗುಂಡೂರಾವ್

Districts

ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರಗಳಿಗೆ ಚಾಲನೆ: ದಿನೇಶ್ ಗುಂಡೂರಾವ್

Public TV
Last updated: March 11, 2024 7:59 pm
Public TV
Share
3 Min Read
Karnataka Brain Health Initiative Brain health services in district hospitals model for the country Dinesh Gundurao
SHARE

ಬೆಂಗಳೂರು: ರಾಜ್ಯದ ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಸೇವೆಗೆ (Brain Health Services) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್  (Dinesh Gundu Rao)ಇಂದು ಚಾಲನೆ ನೀಡಿದರು.

ನಿಮ್ಹಾನ್ಸ್ (NIMHANS) ಸಂಸ್ಥೆಯ ಸಹಯೋಗದಲ್ಲಿ ರಾಜ್ಯದ 33 ಸರ್ಕಾರಿ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಕೇಂದ್ರಗಳನ್ನ ತೆರೆಯಲಾಗಿದೆ.‌ ಈ ಮೂಲಕ ನಿಮ್ಹಾನ್ಸ್ ಮೇಲಿನ ಒತ್ತಡ ಕಡಿಮೆ ಮಾಡುವುದರೊಂದಿಗೆ, ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿಯೇ ಮೆದುಳು ಹಾಗೂ ನರ ಸಮಸ್ಯೆಗಳನ್ನ ಹೊಂದಿರುವ ರೋಗಿಗಳಿಗೆ ಆರೋಗ್ಯ ಸೇವೆ ಒದಗಿಸುವತ್ತ ಆರೋಗ್ಯ ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.

ಬೆಂಗಳೂರಿನ (Bengaluru) ನಿಮ್ಹಾನ್ಸ್ ನಲ್ಲಿ ಇಂದು ನೂತನ ಮೆದುಳು ಆರೋಗ್ಯ ಕೇಂದ್ರಗಳಿಗೆ ಚಾಲನೆ ನೀಡಿದ ಬಳಿಕ ದಿನೇಶ್ ಗುಂಡೂರಾವ್, ದೇಶದಲ್ಲಿ ಇದೊಂದು ಮಾದರಿ ಕಾರ್ಯಕ್ರಮವಾಗಲಿದೆ. ಮೆದುಳು ಆರೋಗ್ಯದ ವಿಚಾರದಲ್ಲಿ ಹೆಚ್ಚು ಒತ್ತು ನೀಡಬೇಕಾಗಿದೆ. ಕರ್ನಾಟಕ ಸರ್ಕಾರ ಹಾಗೂ ಆರೋಗ್ಯ ಇಲಾಖೆ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ ಎಂದರು. ಇದನ್ನೂ ಓದಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ – ಕೇಂದ್ರದಿಂದ ಅಧಿಸೂಚನೆ ಪ್ರಕಟ

 

ಮೆದುಳು ಹಾಗೂ ನರ ಸಮಸ್ಯೆಗಳಿಗೆ ರಾಜ್ಯದ ಜನರು ಬೆಂಗಳೂರಿನ ನಿಮ್ಹಾನ್ಸ್ ಗೆ ಆಗಮಿಸಬೇಕಾಗಿತ್ತು. ನಿಮ್ಹಾನ್ಸ್ ಮೇಲೆ ಹೆಚ್ಚಿನ ಒತ್ತಡ ಇತ್ತು‌. ಈ ಒತ್ತಡವನ್ನ ಕಡಿಮೆ ಮಾಡುವುದರ ಜೊತೆಗೆ, ಜಿಲ್ಲಾ ಮಟ್ಟದಲ್ಲಿಯೇ ರೋಗಿಗಳಿಗೆ ಚಿಕಿತ್ಸೆ ನೀಡಲು 33 ಮೆದುಳು ಆರೋಗ್ಯ ಕೇಂದ್ರಗಳನ್ನು ತೆರೆಯಲಾಗಿದೆ. ನಿಮ್ಹಾನ್ಸ್ ಸಹಯೋಗ ಹಾಗೂ ಸಲಹೆಗಳೊಂದಿಗೆ ಈ ಕೇಂದ್ರಗಳಲ್ಲಿ ಇನ್ಮುಂದೆ ಚಿಕಿತ್ಸೆ ದೊರೆಯಲಿದೆ ಎಂದರು. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದರೆ ನಿಮ್ಹಾನ್ಸ್ ತಜ್ಞ ವೈದ್ಯರ ಸಲಹೆ ಪಡೆದುಕೊಂಡು ಜಿಲ್ಲಾ ಕೇಂದ್ರಗಳಲ್ಲಿಯೇ ಚಿಕಿತ್ಸೆ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಪಾರ್ಶ್ವವಾಯು, ಅಪಸ್ಮಾರ, ಮರೆವಿನ ಕಾಯಿಲೆ ಮತ್ತು ತಲೆನೋವು ಸೇರಿದಂತೆ ನರವೈಜ್ಞಾನಿಕ ಕಾಯಿಲೆಗಳ ಹೊರ ಭಾರತದಲ್ಲಿ ಹೆಚ್ಚಾಗುತ್ತಿದೆ. ಇವು ಮರಣ ಮತ್ತು ಅಂಗವೈಕಲ್ಯಕ್ಕೆ ಪ್ರಮುಖ ಕಾರಣವಾಗಿವೆ. ಇದನ್ನು ಸಮರ್ಥವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಆರೋಗ್ಯ ಕೇಂದ್ರಗಳು ಸಹಕಾರಿಯಾಗಲಿವೆ. ಪ್ರತಿ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು, ಪಿಸಿಯೋಥೆರಪಿಸ್ಟ್, ಸ್ಪೀಚ್ ಥೆರಪಿಸ್ಟ್, ಮನಶ್ಯಾಸ್ತ್ರಜ್ಞರು, ನರ್ಸ್ ಮತ್ತು ಜಿಲ್ಲಾ ಸಂಯೋಜಕರನ್ನು ಒಳಗೊಂಡಿರುತ್ತದೆ.  ಇದನ್ನೂ ಓದಿ: ಡಿಕೆಸು Vs ಡಾ.ಮಂಜುನಾಥ್‌ ಸ್ಪರ್ಧೆ ಫಿಕ್ಸ್‌, ಅಧಿಕೃತ ಘೋಷಣೆ ಮಾತ್ರ ಬಾಕಿ – ಜೆಡಿಎಸ್‌ ಸಭೆಯಲ್ಲಿ ಏನು ಚರ್ಚೆ ನಡೆದಿದೆ?

 


ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ ಪ್ರಮುಖ ಅಂಶಗಳು
1. ಮೆದುಳು ಆರೋಗ್ಯ ಚಿಕಿತ್ಸಾಲಯಗಳ ಸ್ಥಾಪನೆ: ಕರ್ನಾಟಕದ 31 ಜಿಲ್ಲೆ ಮತ್ತು ಬಿಬಿಎಂಪಿಯ ಜಿಲ್ಲಾಮಟ್ಟದ ಆಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಚಿಕಿತ್ಸಾಲಯಗಳನ್ನು ಸ್ಥಾಪಿಸಲಾಗಿದೆ. ನರರೋಗಿಗಳಿಗೆ ಸಕಾಲಿಕ ಚಿಕಿತ್ಸೆಯನ್ನು ಖಾತ್ರಿಪಡಿಸುವ ಮತ್ತು ಆರೈಕೆಗಾಗಿ ನೋಡಲ್ ಕೇಂದ್ರಗಳಾಗಿ ಕಾರ್ಯನಿರ್ವಹಿಸುತ್ತಿವೆ.

2. ಸಾಮರ್ಥ್ಯ ವೃದ್ಧಿ: ನರವೈಜ್ಞಾನಿಕ ಅಸ್ವಸ್ಥತೆಗಳ ನಿರ್ವಹಣೆಯನ್ನು ಹೆಚ್ಚಿಸಲು ರಾಜ್ಯಾದ್ಯಂತ ಆಶಾ ಕಾರ್ಯಕರ್ತರು, ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೈಕೆ ವೈದ್ಯರು ಮತ್ತು ಫಿಜಿಷಿಯನ್ಸ್ ಗಳಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

3. ನರರೋಗತಜ್ಞರ ರಾಜ್ಯವ್ಯಾಪಿ ನೆಟ್ವರ್ಕ್: ಪ್ರಾಥಮಿಕ ಹಂತದಲ್ಲಿ ವಿಶೇಷ ಆರೈಕೆಯನ್ನು ಖಚಿತಪಡಿಸಿಕೊಳ್ಳಲು ತಜ್ಞರ ಸಮಾಲೋಚನೆ, ಟೆಲಿನ್ಯೂರಾಲಜಿ ಮತ್ತು ಟೆಲಿಮೆಂಟರಿಂಗ್ ಸೇವೆಗಳನ್ನು ಒದಗಿಸುವ ನರರೋಗತಜ್ಞರುಗಳನ್ನು ಸಂಯೋಜಿಸಲಾಗಿದೆ.

 

4. ಆರೋಗ್ಯ ಕೇಂದ್ರಗಳು ಮತ್ತು ಆಸ್ಪತ್ರೆಗಳ ನಡುವೆ ಸಂಬಂಧವನ್ನು ಬಲಪಡಿಸುವ ಮತ್ತು ಪ್ರಾಥಮಿಕ ಹಂತದಲ್ಲಿ ರೋಗನಿರ್ಣಯ, ಸಕಾಲಿಕ ಚಿಕಿತ್ಸೆಯನ್ನು ಸುಲಭಗೊಳಿಸಲು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಯೋಜಕರ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ.

5. ಅಂತರ್ವಿಭಾಗಿಯ ಸಮನ್ವಯ: ಅಸಾಂಕ್ರಾಮಿಕ ರೋಗಗಳು, ಮಾನಸಿಕ ಆರೋಗ್ಯ, ತಾಯಿ ಮತ್ತು ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಚಾಲ್ತಿಯಲ್ಲಿರುವ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳೊಂದಿಗೆ ನಿಬಂಧನೆಗಳ ಏಕೀಕರಣಗೊಳಿಸಿದೆ.

6. ಮೆದುಳಿನ ಆರೋಗ್ಯ ಜಾಗೃತಿ ಅಭಿಯಾನಗಳು: ಮೆದುಳಿನ ಆರೋಗ್ಯವನ್ನು ಉತ್ತೇಜಿಸಲು ವ್ಯಾಪಕವಾದ ಅಭಿಯಾನಗಳು, ತಡೆಗಟ್ಟುವಿಕೆ ಮತ್ತು ನರವೈಜ್ಞಾನಿಕ ಅಸ್ವಸ್ಥತೆಗಳ ಆರಂಭಿಕ ಗುರುತಿಸುವಿಕೆಯ ಬಗ್ಗೆ ಸಮುದಾಯಕ್ಕೆ ಅರಿವು ಮೂಡಿಸುವುದು.

7. ಡಿಜಿಟಲ್ ಡೇಟಾ ಮತ್ತು ಮಾಹಿತಿ ವ್ಯವಸ್ಥೆ : ಸಂವಹನ, ಕೆಲಸದ ಹರಿವು ಮತ್ತು ಪ್ರಭಾವದ ಮೌಲ್ಯಮಾಪನವನ್ನು ಸುಗಮಗೊಳಿಸುವ ಅತ್ಯಾಧುನಿಕ ವ್ಯವಸ್ಥೆ.

8. ಅನುಷ್ಠಾನ ಸಂಶೋಧನೆ: ರಾಜ್ಯಾದ್ಯಂತ ನರರೋಗ ಉತ್ತಮಗೊಳಿಸಲು ಸಂಶೋಧನೆಯನ್ನು ಕೂಡ ಅಡವಳಿಸಲಾಗುತ್ತಿದೆ.

TAGGED:Brain Healthdinesh gundu raohospitalkarnatakaಆರೋಗ್ಯಕರ್ನಾಟಕದಿನೇಶ್ ಗುಂಡೂರಾವ್ಮೆದುಳು
Share This Article
Facebook Whatsapp Whatsapp Telegram

Cinema news

AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema
Rajanikanth
ಸಂಕ್ರಾಂತಿ ದಿನವೇ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ತಲೈವಾ.!
Cinema Latest South cinema Top Stories
Samruddhi Ram
ಗ್ಯಾಮ್ಲಿಂಗ್‌ನಲ್ಲಿ ಹಣ ಕಳೆದುಕೊಂಡೆ, 3 ವರ್ಷಗಳಿಂದ ಮನೆಯಿಂದಾಚೆಯಿದ್ದೀನಿ, ಇವರಿಂದ ಬದುಕೋಕೆ ಆಗ್ತಿಲ್ಲ: ಸಮೃದ್ಧಿ ರಾಮ್‌ ಕಣ್ಣೀರು
Bengaluru City Cinema Districts Karnataka Latest Main Post Sandalwood
Pratibha Shetty Samriddhi Ram Karunya Ram
ಮೋಸ ಮಾಡಿದವ್ರು ಉದ್ಧಾರ ಆಗಲ್ಲ – ಸಮೃದ್ಧಿ ರಾಮ್‌ ವಿರುದ್ಧ ಪ್ರತಿಭಾ ಶೆಟ್ಟಿ ಗರಂ
Bengaluru City Cinema Crime Karnataka Latest States Top Stories

You Might Also Like

02 14
Districts

Video | ಅಗ್ನಿ ಅವಘಡ – ಶೀಟ್‌ ಮನೆಯಲ್ಲಿದ್ದ 5 ಲಕ್ಷ ನಗದು ಭಸ್ಮ!

Public TV
By Public TV
1 hour ago
Delhi Weather 1
Latest

ಬೆಚ್ಚಿ ಬೀಳಿಸಿದ ವರದಿ – ದೆಹಲಿಯಲ್ಲಿ ಒಂದೇ ವರ್ಷ 9,000 ಕ್ಕೂ ಹೆಚ್ಚು ಸಾವು!

Public TV
By Public TV
1 hour ago
Mandya Sankranti Fire
Districts

ಸಂಕ್ರಾಂತಿ ವೇಳೆ ಕಿಚ್ಚು ಹಾಯಿಸುವಾಗ ಯಡವಟ್ಟು – ಜನರ ಮೇಲೆ ಎಗರಿದ ಎತ್ತುಗಳು, ಇಬ್ಬರಿಗೆ ಗಾಯ

Public TV
By Public TV
2 hours ago
Dinesh Gundu Rao 1
Bengaluru City

ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Public TV
By Public TV
2 hours ago
Harleen Deol
Cricket

ಡಿಯೋಲ್‌ ಡಿಚ್ಚಿ, ಮುಂಬೈ ಮೇಲೆ ವಾರಿಯರ್ಸ್‌ ಸವಾರಿ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆದ್ದ ಯುಪಿ

Public TV
By Public TV
2 hours ago
supreme Court 1
Court

`ಜನನಾಯಗನ್’ ಮಧ್ಯಂತರ ಪರಿಹಾರಕ್ಕೆ ಸುಪ್ರೀಂ ನಕಾರ – KVN ಪ್ರೊಡಕ್ಷನ್ ಅರ್ಜಿ ವಜಾ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?