Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸದಾಗಿ ರಸ್ತೆಗಿಳಿಯಲಿವೆ 6450 ಬಸ್ – ಬೆಂಗ್ಳೂರು, ಮೈಸೂರಿಗೆ ಬರುತ್ತೆ ಎಲೆಕ್ಟ್ರಿಕ್ ಬಸ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೊಸದಾಗಿ ರಸ್ತೆಗಿಳಿಯಲಿವೆ 6450 ಬಸ್ – ಬೆಂಗ್ಳೂರು, ಮೈಸೂರಿಗೆ ಬರುತ್ತೆ ಎಲೆಕ್ಟ್ರಿಕ್ ಬಸ್!

Bengaluru City

ಹೊಸದಾಗಿ ರಸ್ತೆಗಿಳಿಯಲಿವೆ 6450 ಬಸ್ – ಬೆಂಗ್ಳೂರು, ಮೈಸೂರಿಗೆ ಬರುತ್ತೆ ಎಲೆಕ್ಟ್ರಿಕ್ ಬಸ್!

Public TV
Last updated: March 15, 2017 6:48 pm
Public TV
Share
2 Min Read
ELECTRIC BUS
SHARE

ಬೆಂಗಳೂರು: ರಾಜ್ಯದ ಬಸ್ ಪ್ರಯಾಣಿಕರ ಸುಗಮ ಸಂಚಾರಕ್ಕೆ ಮತ್ತಷ್ಟು ಬಸ್‍ಗಳು ಈ ವರ್ಷ ರಸ್ತೆಗಿಳಿಯಲಿವೆ. ಒಟ್ಟಾರೆ 6,450 ಬಸ್‍ಗಳು ರಾಜ್ಯದಲ್ಲಿ ಸಂಚಾರ ಆರಂಭಿಸಲಿದೆ. ಸಾರಿಗೆ ಇಲಾಖೆಗೆ ಒಟ್ಟಾರೆಯಾಗಿ 2,354 ಕೋಟಿ ರೂ.ಗಳನ್ನು ರಾಜ್ಯ ಬಜೆಟ್‍ನಲ್ಲಿ ಸಿಎಂ ಸಿದ್ದರಾಮಯ್ಯ ಮೀಸಲಿರಿಸಿದ್ದಾರೆ.

ಬಿಎಂಟಿಸಿ: ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ವಿಶ್ವಾಸಾರ್ಹ ಸಾರಿಗೆ ವ್ಯವಸ್ಥೆ ಕಲ್ಪಿಸಲು ಬಿ.ಎಂ.ಟಿ.ಸಿ.ಗೆ ಬಸ್‍ಗಳ ಸಂಖ್ಯೆಯನ್ನು ಗಣನೀಯವಾಗಿ ಹೆಚ್ಚಿಸಲು ಉದ್ದೇಶಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ 3000 ಹೊಸ ಬಸ್‍ಗಳನ್ನು ಸೇರ್ಪಡೆ ಮಾಡಿಕೊಳ್ಳಲಿದೆ. ಇದರಲ್ಲಿ 1500 ಹೊಸ ಬಸ್ ಖರೀದಿ ಮೂಲಕ ಮತ್ತು ಉಳಿದ 1500 ಬಸ್‍ಗಳನ್ನು ಗುತ್ತಿಗೆ ಮೂಲಕ ಪಡೆಯಲಾಗುವುದು. ಬಿಎಂಟಿಸಿಯು ಬಸ್‍ಗಳನ್ನು ಖರೀದಿಸಲು ಪಡೆಯುವ ಸಾಲ ಹಾಗೂ ಬಡ್ಡಿಯ ಮರುಪಾವತಿ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಮೂಲಕ ಸರ್ಕಾರವು ಬಸ್ ಖರೀದಿ ಪ್ರಕ್ರಿಯೆಯನ್ನು ಬೆಂಬಲಿಸಲಿದೆ.

170315kpn91

ಸಾರಿಗೆ ನಿಗಮ: 2017-18ನೇ ಸಾಲಿನಲ್ಲಿ ಸಾರಿಗೆ ನಿಗಮಗಳಿಗೆ ಒಟ್ಟು 3,250 ಹೊಸ ಬಸ್‍ಗಳನ್ನು ಖರೀದಿಸಲಾಗುವುದು. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು 1050 ಬಸ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು 700 ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು 1,500 ಬಸ್‍ಗಳನ್ನು ಖರೀದಿಸಲಿವೆ.

ರಾಜ್ಯಕ್ಕೆ ಬರಲಿವೆ ಎಲೆಕ್ಟ್ರಿಕ್ ಬಸ್: ಕೇಂದ್ರ ಅನುದಾನಗಳೊಂದಿಗೆ ಬೆಂಗಳೂರು ನಗರದಲ್ಲಿ 150 ಎಲೆಕ್ಟ್ರಿಕ್ ಬಸ್‍ಗಳು ಮತ್ತು ಮೈಸೂರು ನಗರದಲ್ಲಿ 50 ಎಲೆಕ್ಟ್ರಿಕ್ ಬಸ್‍ಗಳನ್ನು ಸಂಚಾರಕ್ಕೆ ಬಿಡಲು ಉದ್ದೇಶಿಸಲಾಗಿದೆ. ಕಾರ್ಯದಕ್ಷತೆಯನ್ನು ಸುಧಾರಿಸಲು ಶಿವಮೊಗ್ಗದಲ್ಲಿ ಹೊಸ ವಿಭಾಗವನ್ನು ಆರಂಭಿಸಲಾಗುವುದು. ಎಲ್ಲ ಸಾರಿಗೆ ನಿಗಮಗಳ ಮೂಲಕ 44 ಹೊಸ ಬಸ್ ನಿಲ್ದಾಣಗಳನ್ನು, 14 ಹೊಸ ಬಸ್ ಡಿಪೋಗಳನ್ನು ಮತ್ತು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ರಾಜ್ಯದ ಗೋವಾ ಸ್ವಾತಂತ್ರ್ಯ ಹೋರಾಟಗಾರರಿಗೆ ಉಚಿತ ಬಸ್ ಪಾಸ್, ಅರ್ಜುನ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಉಚಿತ ಬಸ್ ಪಾಸ್‍ಗಳನ್ನು ನೀಡಲಾಗುವುದು.

37 Transport

ಮಹಿಳಾ ಸುರಕ್ಷತೆಗೆ ಒತ್ತು: ಮಹಿಳಾ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಒದಗಿಸುವ ಸಲುವಾಗಿ ಬಿ.ಎಂ.ಟಿ.ಸಿ. ಮೊಬೈಲ್ ಅಪ್ಲಿಕೇಷನ್‍ನಲ್ಲಿ ಹೊಸದಾಗಿ ಎಸ್‍ಒಎಸ್ ಬಟನ್ ಮತ್ತು ಟ್ರಾಕಿಂಗ್ ಸೌಲಭ್ಯವನ್ನು ಅಳವಡಿಸಲಾಗುವುದು. ಉಚಿತ ಹಾಗೂ ರಿಯಾಯಿತಿ ದರದ ಪಾಸ್‍ಗಳನ್ನು ಹೊಂದಿರುವ ಫಲಾನುಭವಿಗಳಿಗೆ ಸ್ಮಾರ್ಟ್ ಕಾರ್ಡ್‍ಗಳನ್ನು ನೀಡಲಾಗುವುದು. ಚಾಲಕರು ಮತ್ತು ಮೆಕ್ಯಾನಿಕ್‍ಗಳಿಗೆ ಸಾಮರ್ಥ್ಯವೃದ್ಧಿಗಾಗಿ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಜೊತೆಗೆ ಈಗಿರುವ ಕೇಂದ್ರಗಳನ್ನು ಸಹ ಪ್ರತಿ ವರ್ಷ 25,000 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅನುವಾಗುವಂತೆ ಮೇಲ್ದರ್ಜೆಗೇರಿಸಲಾಗುವುದು.

ರೈತ ಸಾರಥಿ: ಈ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಟ್ರ್ಯಾಕ್ಟರ್ ಮತ್ತು ಟ್ರೈಲರ್‍ಗಳ ಚಾಲಕರ ಅನುಕೂಲಕ್ಕಾಗಿ ರೈತರಿಗೆ ತರಬೇತಿ ಮತ್ತು ಕಲಿಕಾ ಲೈಸೆನ್ಸ್ ನೀಡಲಾಗುವುದು. ಜೊತೆಗೆ ದ್ವಿಚಕ್ರ ವಾಹನ ಲೈಸೆನ್ಸ್ ನೀಡಿಕೆ ಹಾಗೂ ರಸ್ತೆ ಸುರಕ್ಷಾ ಕ್ರಮಗಳ ಬಗ್ಗೆ ಅರಿವು ಮೂಡಿಸುವ ತರಬೇತಿಗಾಗಿ 2 ಕೋಟಿ ರೂ.ಗಳನ್ನು ನೀಡಿದ್ದಾರೆ. ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ಮತ್ತು ರಸ್ತೆ ಸುರಕ್ಷತೆಯನ್ನು ಸುಧಾರಿಸಲು, ರಾಜ್ಯ ರಸ್ತೆ ಸುರಕ್ಷತೆ ಪ್ರಾಧಿಕಾರವನ್ನು ರಚಿಸಲಾಗುವುದು. ಇದಕ್ಕಾಗಿ 5 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಬೆಂಗಳೂರಿನಲ್ಲಿ ವಾಯು ಮತ್ತು ಶಬ್ದ ಮಾಲಿನ್ಯವನ್ನು ಕಡಿಮೆ ಮಾಡಲು 2018ರ ಏಪ್ರಿಲ್ 1ರಿಂದ ಜಾರಿಗೆ ಬರುವಂತೆ 2 ಸ್ಟ್ರೋಕ್ ಆಟೋ ರಿಕ್ಷಾಗಳನ್ನು ರದ್ದುಗೊಳಿಸಿ ಅದರ ಬದಲು 4 ಸ್ಟ್ರೋಕ್ ಎಲ್‍ಪಿಜಿಯ 10,000 ಆಟೋ ರಿಕ್ಷಾಗಳಿಗೆ ಪ್ರತಿ ಆಟೋ ರಿಕ್ಷಾಗೆ 30,000 ರೂ.ಗಳ ಸಹಾಯಧನಕ್ಕಾಗಿ 30 ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಸಿದ್ದರಾಮಯ್ಯ ನೀಡಿದ್ದಾರೆ. ಅಲ್ಲದೇ ಚಿಂತಾಮಣಿ, ರಾಣೆಬೆನ್ನೂರು ಮತ್ತು ಬಂಟ್ವಾಳದಲ್ಲಿ 3 ಹೊಸ ಆರ್‍ಟಿಒ ಕಚೇರಿಗಳು ಪ್ರಾರಂಭವಾಗಲಿವೆ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

170315kpn90

ಕೆಎಸ್ ಆರ್ ಟಿಸಿಗೆ 3,250 ಹೊಸ ಬಸ್ ಸೇರ್ಪಡೆ. ಬೆಂಗಳೂರು ನಗರಕ್ಕೆ 150 ಎಲೆಕ್ಟ್ರಿಕ್ ಬಸ್.#JanaparaBudget pic.twitter.com/YZn96offS2

— Karnataka Congress (@INCKarnataka) March 15, 2017

TAGGED:BMTCelectrical buskarnataka budgetksrtcsiddu budgetಎಲೆಕ್ಟ್ರಿಕ್ ಬಸ್ಕೆಎಸ್‍ಆರ್‍ಟಿಸಿಬಿಎಂಟಿಸಿರಾಜ್ಯ ಬಜೆಟ್ಸಾರಿಗೆಸಿದ್ದು ಬಜೆಟ್
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

asia cup india pakistan toss
Cricket

ಭಾರತ, ಪಾಕ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ?

Public TV
By Public TV
4 hours ago
Bengaluru Car Seize
Bengaluru City

ಬೆಂಗ್ಳೂರಿನಲ್ಲಿ ಮನಸೋ ಇಚ್ಛೆ ಮಾರ್ಪಡಿಸಿದ ಐಷಾರಾಮಿ ಕಾರು ಸೀಜ್‌

Public TV
By Public TV
4 hours ago
USA Cricket Team
Cricket

ನೆದರ್‌ಲ್ಯಾಂಡ್‌ ವಿರುದ್ಧ 93 ರನ್‌ಗಳ ಭರ್ಜರಿ ಜಯ – ವಿಶ್ವಕಪ್‌ನಲ್ಲಿ ಅಮೆರಿಕಗೆ ಮೊದಲ ಗೆಲುವು

Public TV
By Public TV
5 hours ago
Siddaramaiah 15
Bengaluru City

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫ್ಟ್ – ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಕ್ರಮ: ಸಿಎಂ

Public TV
By Public TV
5 hours ago
siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
5 hours ago
S.G. Nanjayyanamath
Districts

ಒಂದೂವರೆ ವರ್ಷದಲ್ಲಿ ರಾಯಚೂರು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಎಸ್.ಜಿ.ನಂಜಯ್ಯನಮಠ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?