Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಆಫರ್- ಹೊಸ ಯೋಜನೆಗಳೇನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಆಫರ್- ಹೊಸ ಯೋಜನೆಗಳೇನು?

Bengaluru City

ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಬಂಪರ್ ಆಫರ್- ಹೊಸ ಯೋಜನೆಗಳೇನು?

Public TV
Last updated: February 16, 2018 2:54 pm
Public TV
Share
4 Min Read
CM MINORITY
SHARE

ಬೆಂಗಳೂರು: 2018-19ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರ ಅಭಿವೃದ್ಧಿಗಾಗಿ 2,281 ಕೋಟಿ ರೂ. ಮೀಸಲಿಡಲಾಗಿದೆ. ಹಾಗಿದ್ರೆ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಬಜೆಟ್ ನಲ್ಲಿ ಹೇಳಲಾದ ಹೊಸ ಯೋಜನೆಗಳು ಈ ಕೆಳಗಿನಂತಿವೆ.

* ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ ವೃತ್ತಿ ಪ್ರೋತ್ಸಾಹ ಯೋಜನೆಯಡಿ ಮೆಕ್ಯಾನಿಕ್, ಕಾರ್‍ಪೆಂಟರ್, ಹಣ್ಣು ಮತ್ತು ತರಕಾರಿ ಮಾರಾಟ, ಬೇಕರಿ, ಪಂಚರ್ ಮತ್ತು ವೆಲ್ಡಿಂಗ್ ಶಾಪ್, ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ ರಿಪೇರಿ ಇತ್ಯಾದಿ ವೃತ್ತಿಗಳಿಗೆ ಬ್ಯಾಂಕ್ ಸಹಯೋಗದೊಂದಿಗೆ ಸಾಲ ಮತ್ತು ಸಹಾಯಧನ ನೀಡಲು 30 ಕೋಟಿ ರೂ.ಗಳ ಮೊತ್ತದಲ್ಲಿ ಹೊಸ ಯೋಜನೆ ಜಾರಿಗೊಳಿಸಲಾಗುವುದು.
* ಕ್ರೈಸ್ತ ಸಮುದಾಯ ಅಭಿವೃದ್ಧಿ ಹಾಗೂ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ 200 ಕೋಟಿ ರೂ.ಗಳನ್ನು ಒದಗಿಸಲಾಗುವುದು.
* ಜೈನ ಮತ್ತು ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗಾಗಿ 80 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು.
* ದಾರುಲ್ ಉಲೂಮ್ ಸಬೀಲುರ್ ರೆಹಮಾನ ರಿಷಾದ್ ಅರೆಬಿಕ್ ಕಾಲೇಜು ಬೆಂಗಳೂರು ಆವರಣದಲ್ಲಿ ಐವಾನ್-ಎ-ಅಶ್ರಫ್ ಸ್ಮಾರಕ ಭವನ ನಿರ್ಮಾಣ ಮಾಡಲು 10 ಕೋಟಿ ರೂ.ಗಳನ್ನು ಒದಗಿಸಲಾಗುವುದು.

* ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದಲ್ಲಿ (ಸೆಂಟ್ರಲ್ ಕಾಲೇಜು) ವೈವಿಧ್ಯತೆ ಮತ್ತು ಅಲ್ಪಸಂಖ್ಯಾತರ ಅಧ್ಯಯನ ಪೀಠ ಸ್ಥಾಪಿಸಲಾಗುವುದು.
* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಾದರಿಯಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ/ ವಸತಿ ಶಾಲೆಗಳಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಅತ್ಯುತ್ತಮ ಫಲಿತಾಂಶ ಗಳಿಸಿದ ವಸತಿ ಶಾಲೆ/ ಕಾಲೇಜುಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
* ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮೂಲಕ 15 ಕೋಟಿ ರೂ.ಗಳ ವೆಚ್ಚದಲ್ಲಿ ಮಹಿಳೆಯರಿಗೆ ಕಾರ್ಯಾರಂಭ ಸಾಲ ಸೌಲಭ್ಯ ಯೋಜನೆ ಜಾರಿಗೊಳಿಸಲಾಗುವುದು.
* ಮದರಸಗಳ ಆಧುನೀಕರಣ, ಔಪಚಾರಿಕ ಶಿಕ್ಷಣ ಒದಗಿಸಲು ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹಂತ ಹಂತವಾಗಿ 15 ಕೋಟಿ ರೂ.ಗಳ ಸಹಾಯಧನ ನೀಡಲಾಗುವುದು.

MINORITY

* ಕರ್ನಾಟಕ ರಾಜ್ಯ ವಕ್ಫ್ ಪರಿಷತ್ತಿನ ರಜತ ಮಹೋತ್ಸವ ಅಂಗವಾಗಿ ಮುಂದಿನ 5 ವರ್ಷಗಳಲ್ಲಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು. ಈ ಉದ್ದೇಶಕ್ಕಾಗಿ ಪರಿಷತ್ತಿನ ಕಾರ್ಪಸ್ ಫಂಡ್‍ಗೆ 2018-19ನೇ ಸಾಲಿನಲ್ಲಿ 20 ಕೋಟಿ ರೂ.ಗಳನ್ನು ಒದಗಿಸಲಾಗುವುದು.
* 25 ಹೊಸ ಮೊರಾರ್ಜಿ ದೇಸಾಯಿ ವಸತಿ ಶಾಲೆ, 5 ಪದವಿ ಪೂರ್ವ ಮಹಿಳಾ ವಸತಿ ಕಾಲೇಜು, 2 ಮಾದರಿ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.
* ಎಂ.ಎಸ್.ಡಿ.ಪಿ. ಯೋಜನೆಯಡಿಯಲ್ಲಿ ಸ್ವಂತ ಕಟ್ಟಡ ನಿರ್ಮಿಸಲಾಗಿರುವ 25 ಸ್ಥಳಗಳಲ್ಲಿ ವಿದ್ಯಾರ್ಥಿನಿಲಯ/ಮಾದರಿ/ಆದರ್ಶ ಶಾಲೆ/ ವಸತಿ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು.
*25 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ತಲಾ 25 ದಾಖಲಾತಿ ಸಂಖ್ಯೆ ಹೆಚ್ಚಿಸುವುದು. ಎಲ್ಲಾ ಮೆಟ್ರಿಕ್ ಪೂರ್ವ/ನಂತರ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪರಸ್ಪರ ಪ್ರವೇಶ ನೀಡಲಾಗುವುದು. ಐದು ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳನ್ನು ಮೇಲ್ದರ್ಜೆಗೇರಿಸಲಾಗುವುದು.

* 5 ಮೊರಾರ್ಜಿ ದೇಸಾಯಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಸ್ತುತ ವಿಜ್ಞಾನ ವಿಭಾಗವಿದ್ದು, ಜೊತೆಗೆ ವಾಣಿಜ್ಯ ವಿಭಾಗ ಪ್ರಾರಂಭಿಸಲಾಗುವುದು. 10 ಮೊರಾರ್ಜಿ ದೇಸಾಯಿ ವಸತಿ ಶಾಲೆ ದಾಖಲಾತಿ ಸಂಖ್ಯಾಬಲ 50 ರಿಂದ 60ಕ್ಕೆ ಹೆಚ್ಚಿಸಲಾಗುವುದು.
* ದಾಖಲಾತಿ ಪಡೆಯಲು ಪೋಷಕರ ವರಮಾನ ವಿದ್ಯಾರ್ಥಿನಿಲಯಗಳಿಗೆ 44,500 ರೂ ಹಾಗೂ ವಸತಿ ಶಾಲೆಗಳಿಗೆ 1 ಲಕ್ಷ ರೂ. ಇದ್ದು, ಇದನ್ನು 2.50 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು.
* ಅಲ್ಪಸಂಖ್ಯಾತರ ವಿದ್ಯಾರ್ಥಿನಿಲಯ ಮತ್ತು ವಸತಿ ಶಾಲಾ/ಕಾಲೇಜುಗಳ ವಿದ್ಯಾರ್ಥಿಗಳಿಗೆ ಕ್ರೈಸ್ ಮಾದರಿಯಲ್ಲಿ ದುರ್ಘಟನೆಗೆ ಪರಿಹಾರ ನೀಡಲಾಗುವುದು.

* ಸರ್ಕಾರಿ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಎಲ್ಲಾ ವಸತಿ ಶಾಲೆಯ/ಕಾಲೇಜುಗಳ ಪ್ರತಿ ವಿದ್ಯಾರ್ಥಿಗೆ ಆಹಾರ ಭತ್ಯೆಯನ್ನು ಮಾಸಿಕ 100 ರೂ.ಗಳಷ್ಟು ಹೆಚ್ಚಿಸಲಾಗುವುದು. ಖಾಸಗಿ ಅನುದಾನಿತ ಅನಾಥಾಲಯ/ ವಿದ್ಯಾರ್ಥಿಗಳ ಭೋಜನಾ ವೆಚ್ಚದ ದರಗಳನ್ನು ಮಾಹೆಯಾನ 750 ರೂ.ಗಳಿಂದ 800 ರೂ.ಗಳಿಗೆ ಹೆಚ್ಚಿಸಲಾಗುವುದು.
* ಎಸ್.ಎಸ್.ಎಲ್.ಸಿ. ಮತ್ತು 2ನೇ ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಗೆ 2000 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು.

* ವೈದ್ಯಕೀಯ ಹಾಗೂ ತಾಂತ್ರಿಕ ಕೋರ್ಸುಗಳಲ್ಲಿ 1ನೇ ವರ್ಷದಲ್ಲಿ ಪ್ರವೇಶ ಹೊಂದಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಟಡಿ ಕಿಟ್ ಯೋಜನೆಯಡಿ 25 ಸಾವಿರ ರೂ.ಗಳನ್ನು ನೀಡಲಾಗುವುದು.
* ಬಿ.ಎಡ್. ಹಾಗೂ ಡಿ.ಎಡ್. ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿಶೇಷ ಪ್ರೋತ್ಸಾಹ ಧನ ನೀಡಲಾಗುವುದು.
* ವಿದ್ಯಾಸಿರಿ ಯೋಜನೆಯಡಿ 2018-19ನೇ ಸಾಲಿನಿಂದ ಫಲಾನುಭವಿಗಳ ಸಂಖ್ಯೆಯನ್ನು 25,000ಕ್ಕೆ ಹೆಚ್ಚಿಸಲಾಗುವುದು.
* ನದಾಫ್/ಪಿಂಜಾರ್ ಸಮುದಾಯದ ರಾಜ್ಯಮಟ್ಟದ ಸಂಘಕ್ಕೆ 2 ಕೋಟಿ ರೂ.ಗಳನ್ನು ಮತ್ತು ದಿ ಬ್ಯಾರಿ ವೆಲ್‍ಫೇರ್ ಅಸೋಸಿಯೇಷನ್‍ಗೆ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ಧಿಗೆ 2 ಕೋಟಿ ರೂ.ಗಳ ಸಹಾಯಧನ ನೀಡಲಾಗುವುದು.

CM BUDGET 2

* ಮೈಸೂರಿನಲ್ಲಿ ದಿವಂಗತ ಅಜೀಜ್ ಸೇಠ್ ಸ್ಮಾರಕ ಸಮುದಾಯ ಭವನ ನಿರ್ಮಿಸಲು 3 ಕೋಟಿ ರೂ.ಗಳ ಅನುದಾನ ನೀಡಲಾಗುವುದು.
* ಕಾನೂನು ಪದವೀಧರರಿಗೆ ಸಮಾಜ ಕಲ್ಯಾಣ ಇಲಾಖೆ ಮಾದರಿಯಲ್ಲಿ ಮಾಸಿಕ ತರಬೇತಿ ಭತ್ಯೆಯನ್ನು 4000 ರೂ.ಗಳಿಂದ 5000 ರೂ.ಗಳಿಗೆ ಹೆಚ್ಚಿಸಲಾಗುವುದು.
* ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವಿದ್ಯಾರ್ಥಿನಿಲಯಗಳಲ್ಲಿರುವ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಸಿ.ಇ.ಟಿ., NEET ಪಠ್ಯಪುಸ್ತಕಗಳನ್ನು ಪೂರೈಸಲಾಗುವುದು.
* ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಉಚಿತವಾಗಿ JEE, NEET, GATE, GMAT ಇತ್ಯಾದಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ನೀಡಲಾಗುವುದು.

* ಭಾರತದ ಪುರಾತತ್ವ ಸಮೀಕ್ಷೆ ಮತ್ತು ಕರ್ನಾಟಕ ರಾಜ್ಯದ ಪುರಾತತ್ವ ಸಮೀಕ್ಷೆ ಅಧೀನದಲ್ಲಿರುವ ವಕ್ಫ್ ಆಸ್ತಿಗಳ ಸಂರಕ್ಷಣೆ ಹಾಗೂ ಅತೀ ಸೂಕ್ಷ್ಮ ವಕ್ಫ್ ಆಸ್ತಿಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ 15 ಕೋಟಿ ರೂ.ಗಳನ್ನು ಒದಗಿಸಲಾಗುವುದು.
* ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯವನ್ನು ಒದಗಿಸಲು 800 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು.

TAGGED:bengalurubudgetcm siddaramaiahminoritypublictvstatetbudget2018ಅಲ್ಪ ಸಂಖ್ಯಾತಪಬ್ಲಿಕ್ ಟಿವಿಬಜೆಟ್ಬೆಂಗಳೂರುರಾಜ್ಯ ಬಜೆಟ್ 2018ಸಿಎಂ ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
8 seconds ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
23 minutes ago
bmtc bus accident engineering student dies in bengaluru
Bengaluru City

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Public TV
By Public TV
60 minutes ago
CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
1 hour ago
kundapura temple theft
Crime

ಕುಂದಾಪುರ ದೇವಸ್ಥಾನದಲ್ಲಿ ಕಳವು ಕೇಸ್‌ – ಇಬ್ಬರು ಆರೋಪಿಗಳ ಬಂಧನ

Public TV
By Public TV
2 hours ago
cha
Crime

ಕಾನ್‌ಸ್ಟೆಬಲ್‌ ಪ್ರೇಯಸಿಯಿಂದ ರಾದ್ಧಾಂತ; ಪೊಲೀಸ್‌ ಮನೆಗೆ ನುಗ್ಗಿ ಆತನ ಪತ್ನಿ, ಮಗನಿಗೆ ಚಾಕುವಿನಿಂದ ಇರಿದು ಹತ್ಯೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?