Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಆರೋಗ್ಯ ಇಲಾಖೆಗೆ 14 ಸಾವಿರ ಕೋಟಿ ಮೀಸಲು- ಏನೇನು ಹೊಸ ಯೋಜನೆಗಳಿವೆ?

Public TV
Last updated: July 7, 2023 3:08 pm
Public TV
Share
3 Min Read
doctor
SHARE

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ಮಂಡಿಸಿರುವ ಬಜೆಟ್‍ನಲ್ಲಿ (Karnataka Budget 2023) ಆರೋಗ್ಯ ಮತ್ತು ಕುಟುಂಬ ಕಲ್ಯಾಣಕ್ಕೆ 14 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ.

ನಮ್ಮ ಸರ್ಕಾರದ ಹಿಂದಿನ ಅವಧಿಯಲ್ಲಿ ಬಡವರಿಗೆ ಉಚಿತ ಡಯಾಲಿಸಿಸ್ ಸೌಲಭ್ಯ ಒದಗಿಸಲು ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಏಕಬಳಕೆಯ ಡಯಾಲೈಸರ್ ಗಳನ್ನು ಎಲ್ಲಾ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸುವ ಮೂಲಕ ಸೇವೆಯ ಗುಣಮಟ್ಟವನ್ನು ಸುಧಾರಿಸಲಾಗುವುದು. ಇದರೊಂದಿಗೆ ರಾಜ್ಯದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ 173 ಡಯಾಲಿಸಿಸ್ ಕೇಂದ್ರಗಳನ್ನು 219ಕ್ಕೆ ಹೆಚ್ಚಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 92 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.

SIDDARAMAIAH 2

ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಈಗಾಗಲೇ 23 ಮೇಲ್ದರ್ಜೆಗೇರಿಸಲಾಗಿದೆ. ಪಿಹೆಚ್‍ಸಿ ಗಳನ್ನು ಈ ಸಿಹೆಚ್‍ಸಿಗಳನ್ನು ಕಾರ್ಯಗತಗೊಳಿಸಲು ಬೇಕಿರುವ ಅಗತ್ಯ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸಲು 70 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದರು. ಇದನ್ನೂ ಓದಿ: Karnataka Budget 2023: ಸಿನಿಮಾ ರಂಗಕ್ಕೆ ಸಿಕ್ಕಿದ್ದೇನು? ಸಂಪೂರ್ಣ ಮಾಹಿತಿ

ರಾಜ್ಯದಲ್ಲಿ ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು, ಗರ್ಭಿಣಿಯರು, ತಾಯಂದಿರು ಮತ್ತು ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆಯನ್ನು ನಿವಾರಿಸಲು ಸಮಗ್ರವಾದ ಪರೀಕ್ಷೆ, ಚಿಕಿತ್ಸೆ, ಅರಿವು ಮೂಡಿಸುವಿಕೆ ಮತ್ತು ಆರೋಗ್ಯ ಕಾರ್ಯಕರ್ತರ ಸಾಮರ್ಥ್ಯ ಬಲವರ್ಧನೆಗೆ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು. ಇದಕ್ಕಾಗಿ 25 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಸಿಎಂ ಹೇಳಿದರು.

ರಾಜ್ಯವು ಕಳೆದ ವರ್ಷ ನಿಮ್ಹಾನ್ಸ್ ಸಹಯೋಗದೊಂದಿಗೆ ಮೆದುಳಿನ ಆರೋಗ್ಯ ಆರೈಕೆ ಸೇವೆಗಳನ್ನು ಉತ್ತೇಜಿಸಲು ಮೂರು ಜಿಲ್ಲೆಗಳಲ್ಲಿ ‘ಬ್ರೈನ್ ಹೆಲ್ತ್ ಇನಿಶಿಯೇಟಿವ್’ (Brain Health Initiative) ಎಂಬ ವಿಶಿಷ್ಟ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಯಶಸ್ವಿ ಪ್ರಾಯೋಗಿಕ ಅನುಷ್ಠಾನದ ನಂತರ ಈ ಯೋಜನೆಯನ್ನು ಇಡೀ ರಾಜ್ಯಕ್ಕೆ ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ 25 ಕೋಟಿ ರೂ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಿದರು.

“ಆಶಾಕಿರಣ” ಎಂಬ ಕಾರ್ಯಕ್ರಮದಡಿಯಲ್ಲಿ ಅಭಿಯಾನ ರೂಪದಲ್ಲಿ ಕಣ್ಣಿನ ಶಿಬಿರಗಳು, ಕನ್ನಡಕ ವಿತರಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಳ ಚಟುವಟಿಕೆಗಳನ್ನು ಹಂತ ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲಾಗುವುದು. 2023-24ನೇ ಸಾಲಿನಲ್ಲಿ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದರು.

ಸಮಾಜದ ದುರ್ಬಲ ವರ್ಗಗಳಲ್ಲಿ ಕ್ಷಯರೋಗವನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಸಮುದಾಯ ಆಧಾರಿತ ತಪಾಸಣಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ, ಪ್ರತಿ ಜಿಲ್ಲೆಗೆ ಎರಡರಂತೆ ಕೈಚಾಲಿತ-ಕ್ಷ-ಕಿರಣ (Hand Held X-ray) ಉಪಕರಣವನ್ನು ಒದಗಿಸಲಾಗುವುದು. ಪ್ರತಿ X-ray ಯಂತ್ರಕ್ಕೆ 20 ಲಕ್ಷ ರೂ. ದಂತೆ ಒಟ್ಟು ಮೂರು ಕೋಟಿ ರೂ. ಒದಗಿಸಲಾಗುವುದು ಎಂದು ಸಿಎಂ ಘೋಷಿಸಿದರು.

ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳನ್ನು ಪತ್ತೆಹಚ್ಚಲು ಮತ್ತು ಅಗತ್ಯ ಔಷಧಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಪ್ರಾಯೋಗಿಕವಾಗಿ ರಾಜ್ಯದ ನಾಲ್ಕು ವಿಭಾಗಗಳ ಎಂಟು ಜಿಲ್ಲೆಗಳಲ್ಲಿ ಸಮಗ್ರ ತಪಾಸಣೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು ಎಂದರು.

ಕರ್ನಾಟಕ ರತ್ನ ಡಾ. ಪುನೀತ್ ರಾಜ್‍ಕುಮಾರ್‍ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಹೇಳಿದರು.

ರಾಜ್ಯದಲ್ಲಿ 15 ಸಿ.ಟಿ ಸ್ಕ್ಯಾನಿಂಗ್ ಮತ್ತು ಆರು ಎಂ.ಆರ್.ಐ ಸ್ಕ್ಯಾನಿಂಗ್ ಕೇಂದ್ರಗಳನ್ನು ಕೆಲವು ಜಿಲ್ಲಾಸ್ಪತ್ರೆಗಳಲ್ಲಿ ಈಗಾಗಲೇ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಿ, ಉಚಿತ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತಿದೆ. ಈ ಸೇವೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು. ಹಾಗೂ ರಾಜ್ಯವು ಈಗಾಗಲೇ ಮಾಹಿತಿ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವಂತೆ ಆರೋಗ್ಯ ತಂತ್ರಜ್ಞಾನದ ಆವಿಷ್ಕಾರಗಳ ಅಳವಡಿಕೆಯಲ್ಲಿಯೂ ಪ್ರಮುಖ ಕೇಂದ್ರವಾಗುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಎಂಟು ಕೋಟಿ ರೂ.ಗಳ ವೆಚ್ಚದಲ್ಲಿ ಕರ್ನಾಟಕ ಆರೋಗ್ಯ ತಂತ್ರಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು ಎಂದು ನುಡಿದರು.

ರಾಜ್ಯದಲ್ಲಿ ಆಯುಷ್ಮಾನ್ ಭಾರತ್ (Ayushman bharat) ಡಿಜಿಟಲ್ ಮಿಷನ್ ಯೋಜನೆ ಹಾಗೂ ಆರೋಗ್ಯ ದಾಖಲಾತಿಗಳ ಡಿಜಿಟಲೀಕರಣ ಸೇರಿದಂತೆ ಇಲಾಖೆಯ ಇನ್ನಿತರ ಎಲ್ಲಾ ಅಂತರ್ಜಾಲ ಉಪಕ್ರಮಗಳನ್ನು ಅನುಷ್ಠಾನ ಮಾಡಲು ಕರ್ನಾಟಕ ಡಿಜಿಟಲ್ ಹೆಲ್ತ್ ಸೊಸೈಟಿಯನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ವಿವರಿಸಿದರು.

Web Stories

ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ..
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಯೋಗ ದಿನದಂದು ನಟಿ ಪ್ರಣಿತಾ ಯೋಗ…
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್

TAGGED:bengaluruKarnataka Budget 2023siddaramaiahstate budget 2023ಕರ್ನಾಟಕ ಬಜೆಟ್ 2023ಬೆಂಗಳೂರುರಾಜ್ಯ ಬಜೆಟ್ 2023ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

darshan renukaswamy pavithra gowda
ಥಾಯ್ಲೆಂಡ್‌ನಲ್ಲಿ ಜಾಲಿ ಮೂಡಲ್ಲಿರೋ ದರ್ಶನ್‌ ಬೇಲ್‌ ಭವಿಷ್ಯ ಇಂದು?
Cinema Court Karnataka Latest Main Post
Prakash Raj Vijay Deverakonda
ಬೆಟ್ಟಿಂಗ್‌ ಆ್ಯಪ್‌ ಕೇಸ್‌; ನಟ ಪ್ರಕಾಶ್‌ ರಾಜ್‌ ಸೇರಿ ನಾಲ್ವರಿಗೆ ಇ.ಡಿ ಸಮನ್ಸ್‌
Cinema Latest South cinema Top Stories
Upendra
ಇನ್ಮುಂದೆ ಉಪ್ಪಿ ʻನೆಕ್ಸ್ಟ್‌ ಲೆವೆಲ್‌ʼ – ಸದ್ದಿಲ್ಲದೇ ಸೆಟ್ಟೇರುತ್ತಿದೆ ಹೊಸ ಸಿನಿಮಾ
Cinema Latest Sandalwood
Pavithra Gowda Insta Profile
ಟೆನ್ಷನ್ ಹೊತ್ತಲ್ಲಿ ಬದಲಾಯ್ತು ಪವಿತ್ರಾ ಗೌಡ ಪ್ರೊಫೈಲ್
Cinema Latest Top Stories
S O Muttanna
ದೇವರಾಜ್ ಪುತ್ರ ಪ್ರಣಂ ಸಿನಿಮಾ ಹಾಡಿಗೆ ಸಂಜಿತ್ ಹೆಗ್ಡೆ ದನಿ
Cinema Latest Sandalwood Top Stories

You Might Also Like

raichuru tatappa child marriage
Crime

ಪತಿಯನ್ನ ಪತ್ನಿ ನದಿಗೆ ತಳ್ಳಿದ್ದ ಆರೋಪ ಪ್ರಕರಣಕ್ಕೆ ಟ್ವಿಸ್ಟ್ – ಪತಿ ವಿರುದ್ಧ ಮಹಿಳಾ ಠಾಣೆಯಲ್ಲಿ ಕೇಸ್ ದಾಖಲು

Public TV
By Public TV
30 minutes ago
biker is missing after he was hit by a speeding car and fell into the Krishna River
Crime

ಕಾರು ಡಿಕ್ಕಿಯಾದ ರಭಸಕ್ಕೆ ಕೃಷ್ಣಾ ನದಿಗೆ ಹಾರಿಬಿದ್ದ ಬೈಕ್ ಸವಾರ ಕಣ್ಮರೆ

Public TV
By Public TV
1 hour ago
Plastic Road
Latest

ದೇಶದಲ್ಲಿ ನಿರ್ಮಾಣವಾಗಿದೆ ವಿಶ್ವದ ಮೊದಲ ಪ್ಲಾಸ್ಟಿಕ್‌ ಹೈವೇ – ಪ್ಲಾಸ್ಟಿಕ್‌ ಮರುಬಳಕೆಗೆ ಸಿಕ್ಕೇಬಿಡ್ತು ಮಾರ್ಗೋಪಾಯ

Public TV
By Public TV
7 hours ago
Bidar rain
Bidar

ಬೀದರ್ | ಸತತ 1 ಗಂಟೆ ಧಾರಾಕಾರ ಮಳೆ – ರಸ್ತೆಗಳು ಸಂಪೂರ್ಣ ಜಲಾವೃತ

Public TV
By Public TV
9 hours ago
CRIME
Crime

ಮನೆಯಲ್ಲಿದ್ದ ಮಹಿಳೆಯರ ಮೇಲೆ ಅಪರಿಚಿತ ವ್ಯಕ್ತಿಯಿಂದ ಹಲ್ಲೆ; ಹಿಡಿದು ಪೊಲೀಸರಿಗೊಪ್ಪಿಸಿದ ಜನ

Public TV
By Public TV
9 hours ago
Hassan 3 Suspended For celebrating Birthday In Govt Office
Districts

ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಯ ಹುಟ್ಟುಹಬ್ಬ ಆಚರಣೆ – ಮೂವರು ಸಾರಿಗೆ ಅಧಿಕಾರಿಗಳ ಅಮಾನತು

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಯಮ್ಮೊ ಯಮ್ಮೊ.. ಹೇಗ್‌ ಕಾಣ್ತಾರ್‌ ನೋಡಿ.. ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
Welcome Back!

Sign in to your account

Username or Email Address
Password

Lost your password?