ಬೆಂಗಳೂರು: ರಾಜ್ಯದಲ್ಲಿರುವ 40 ಸಾವಿರಕ್ಕೂ ಅಧಿಕ ವಕ್ಫ್ (Waqf Property) ಆಸ್ತಿಗಳ ರಕ್ಷಣೆ ಹಾಗೂ ಅಭಿವೃದ್ಧಿಗೆ 50 ಕೋಟಿ ರೂ. ಹಣವನ್ನು ಸಿದ್ದರಾಮಯ್ಯ ಬಜೆಟ್ನಲ್ಲಿ (Karnataka Budget 2023) ಮೀಸಲಿಟ್ಟಿದ್ದಾರೆ.
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನವನ್ನು (1 ರಿಂದ 8ನೇ ತರಗತಿಯವರೆಗೆ) ಕೇಂದ್ರ ಸರ್ಕಾರವು ಸ್ಥಗಿತಗೊಳಿಸಿರುತ್ತದೆ. ಇದರಿಂದ ಅಲ್ಪಸಂಖ್ಯಾತ ಸಮುದಾಯದ ಬಡ ವಿದ್ಯಾರ್ಥಿಗಳಿಗೆ ತೊಂದರೆಯಾಗಿರುವುದನ್ನು ಮನಗಂಡು ಈ ಯೋಜನೆಯನ್ನು ಮುಂದುವರಿಸಲು 60 ಕೋಟಿ ರೂ. ಅನುದಾನವನ್ನು ಒದಗಿಸಲಿದೆ ಎಂದು ಸಿಎಂ ಹೇಳಿದರು.
- Advertisement3
ಅಲ್ಪಸಂಖ್ಯಾತರ ಪದವಿ ಪೂರ್ವ ವಸತಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಥಮ ವರ್ಷದಿಂದಲೇ ನೀಟ್, ಜೆಇಇ, ಸಿಇಟಿ ಹಾಗೂ ಇತರೆ ಪ್ರವೇಶ ಪರೀಕ್ಷೆಗಳ ತಯಾರಿಗಾಗಿ ಪ್ರತಿಷ್ಠಿತ ಸಂಸ್ಥೆಗಳಿಂದ 2 ವರ್ಷಗಳ ತರಬೇತಿಯನ್ನು ನೀಡಲು 8 ಕೋಟಿ ರೂ. ಗಳ ಅನುದಾನ ನೀಡುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಇದನ್ನೂ ಓದಿ: ಮತ್ತಷ್ಟು ದುಬಾರಿಯಾಗಲಿದೆ ಎಣ್ಣೆ – ಈಗ ಎಷ್ಟು ಸುಂಕವಿದೆ? ಎಷ್ಟು ಏರಿಕೆಯಾಗುತ್ತೆ?
- Advertisement
ಬೆಂಗಳೂರು ನಗರದಲ್ಲಿರುವ ಹಜ್ ಭವನದಲ್ಲಿ (Haj Bhavan) ಐಎಎಸ್ (IAS) ಹಾಗೂ ಕೆಎಎಸ್ (KAS) ಮತ್ತು ಇತರೆ ಸ್ಪರ್ದಾತ್ಮಕ ಪರೀಕ್ಷೆಗಳ ತರಬೇತಿಗಳನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಪ್ರಾರಂಭ ಮಾಡಲಾಗುವುದು. ವಿದೇಶದಲ್ಲಿ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶೂನ್ಯ ಬಡ್ಡಿಯಲ್ಲಿ 20 ಲಕ್ಷ ಸಾಲ ನೀಡಲಾಗುವುದಾಗಿ ಇದೇ ವೇಳೆ ತಿಳಿಸಿದರು.
126 ಶಾದಿ ಮಹಲ್ (Shaadi Mahal) ಮತ್ತು ಸಮುದಾಯ ಭವನ ನಿರ್ಮಾಣಕ್ಕೆ 54 ಕೋಟಿ ಮೀಸಲಿಡಲಾಗುವುದು. ಅಲ್ಪಸಂಖ್ಯಾತ 10 ಸಾವಿರ ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಸಲುವಾಗಿ 20% ರಷ್ಟು ಅಥವಾ ಗರಿಷ್ಠ 1 ಲಕ್ಷದವರೆಗೆ ಸಹಾಯಧನ ನೀಡಲಾಗುವುದು ಎಂದು ಸಿಎಂ ಹೇಳಿದರು.
Web Stories