Karnataka Budget 2023: ಡಾ.ರಾಜ್ ಸ್ಮಾರಕದ ಬಳಿ ಸಿನಿ ವಸ್ತು ಸಂಗ್ರಹಾಲಯ

Public TV
1 Min Read
dr rajkumar samadhi

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಬಜೆಟ್ (Karnataka Budget 2023) ಮಂಡನೆ ಮಾಡಿದ್ದು, ಹಲವು ವರ್ಷಗಳ ಒಂದು ಬೇಡಿಕೆಯನ್ನು ಈಡೇರಿಸಿದ್ದಾರೆ. ಚಿತ್ರಂಗದ ಇತಿಹಾಸವನ್ನು ಸಾರುವಂತಹ ವಸ್ತು ಸಂಗ್ರಹಾಲಯ (Museum) ಬೇಕು ಎನ್ನುವುದು ಸಿನಿ ಇತಿಹಾಸಕಾರರ ಆಗ್ರಹವಾಗಿತ್ತು. ಅದನ್ನು ಈ ಬಾರಿಯ ಬಜೆಟ್ ನಲ್ಲಿ ಈಡೇರಿಸಿದ್ದಾರೆ.

siddaramaiah budget

ಬೆಂಗಳೂರಿನ ಕಂಠೀರವ ಸ್ಟುಡಿಯೋದ ಆವರಣದಲ್ಲಿರುವ ಡಾ.ರಾಜ್ ಕುಮಾರ್ ಸ್ಮಾರಕದ (Dr. Raj Kumar) ಬಳಿ ಕನ್ನಡ ಚಿತ್ರರಂಗ ಬೆಳೆದು ಬಂದ ಇತಿಹಾಸವನ್ನು ದಾಖಲಿಸುವ ವಸ್ತು ಸಂಗ್ರಹಾಲಯವನ್ನು ನಿರ್ಮಿಸುವುದಾಗಿ ಈ ಬಾರಿಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ಮೂಲಕ ಚಿತ್ರರಂಗದ ಬೆಳವಣಿಗೆ ಇತಿಹಾಸ ಪರಿಚಯಿಸಲು ಮುಂದಾಗಿದ್ದಾರೆ. ಇದನ್ನೂ ಓದಿ:ಫ್ಯಾನ್ಸ್ ಭೇಟಿಗಾಗಿ ಮಲೇಷ್ಯಾಗೆ ಹೊರಟು ನಿಂತ ರಾಕಿಭಾಯ್ ಯಶ್

 

ಡಾ.ರಾಜ್ ಕುಮಾರ್ ಸ್ಮಾರಕದ ಬಳಿ ವಸ್ತು ಸಂಗ್ರಹಾಲಯದ ಜೊತೆಗೆ ಸುಸಜ್ಜಿತದ ಥಿಯೇಟರ್ ನಿರ್ಮಾಣವಾಗಬೇಕು ಎನ್ನುವುದು ಹಲವರ ಕೋರಿಕೆಯಾಗಿತ್ತು. ಜೊತೆಗೆ ಡಾ.ರಾಜ್ ಕುಮಾರ್ ಅವರ ಕುರಿತಾಗಿಯೇ ವಸ್ತು ಸಂಗ್ರಹಾಲಯ ಇರಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಆದರೆ, ಸಮಗ್ರ ಚಿತ್ರರಂಗವನ್ನು ಒಳಗೊಳ್ಳುವಂತಹ ಸಂಗ್ರಹಾಲಯಕ್ಕೆ ಸಿದ್ದರಾಮಯ್ಯ ಸರಕಾರ ಅಸ್ತು ಎಂದಿದೆ.

Web Stories

Share This Article