ಕರ್ನಾಟಕ ಸರಕಾರ ಕನ್ನಡದ (Sandalwood) ಸಿನಿಮಾಗಳಿಗೆ ನೀಡುತ್ತಿದ್ದ ಸಹಾಯಧನವನ್ನು (Subsidy) ಕಳೆದ ಮೂರು ವರ್ಷಗಳಿಂದ ನೀಡಿರಲಿಲ್ಲ. ನಾನಾ ರೀತಿಯ ಕಾರಣಗಳನ್ನು ಕೊಡುತ್ತಲೇ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗಿತ್ತು. ಮತ್ತೆ ಸಹಾಯಧನವನ್ನು ನೀಡಲು ಕ್ರಮ ಕೈಗೊಳ್ಳುವುದಾಗಿ ಬಜೆಟ್ ನಲ್ಲಿ (Karnataka Budget 2023) ತಿಳಿಸಿದ್ದಾರೆ ಮುಖ್ಯಮಂತ್ರಿ ಸಿದ್ದರಾಮಯ್ಯ.
‘ಕಳೆದ ಮೂರು ವರ್ಷಗಳಿಂದ ಕನ್ನಡದ ಗುಣಾತ್ಮಕ ಚಿತ್ರಗಳಿಗೆ (Film) ಸಹಾಯಧನ ನೀಡುವ ಯೋಜನೆ ಸ್ಥಗಿತಗೊಂಡಿತ್ತು. ಈ ಬಾರಿ ಆಯ್ಕೆ ಸಮಿತಿಗಳನ್ನು ರಚಿಸಿ, ಸಹಾಯಧನ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಬಜೆಟ್ ಘೋಷಣೆ ಮಾಡಿದ್ದಾರೆ ಮುಖ್ಯಮಂತ್ರಿಗಳು. ಈ ಮೂಲಕ ಗುಣಾತ್ಮಕ ಕನ್ನಡ ಚಿತ್ರಗಳ ನಿರ್ಮಾಪಕರ ಸಹಾಯಕ್ಕೆ ನಿಂತಿದ್ದಾರೆ. ಇದನ್ನೂ ಓದಿ:ನೀಲಿ ತಾರೆ ಮಿಯಾ ತೆಲುಗಿನ ಡೈರೆಕ್ಟರ್ ಆರ್ಜಿವಿ
ಮೊನ್ನೆಯಷ್ಟೇ ಸಿನಿಮಾ ಸಬ್ಸಡಿ ಮತ್ತು ಸಿನಿಮಾ ಪ್ರಶಸ್ತಿಗೆ ಸಂಬಂಧಿಸಿದಂತೆ ನಿಯೋಗವೊಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿತ್ತು. 2018 ರಿಂದ ಸಿನಿಮಾ ಪ್ರಶಸ್ತಿಯನ್ನು ನೀಡಿಲ್ಲ ಮತ್ತು ಸಬ್ಸಿಡಿ ಕೂಡ ಸ್ಥಗಿತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಗಿತ್ತು. ಮನವಿಗೆ ಸ್ಪಂದಿಸಿರುವ ಸಿದ್ದರಾಮಯ್ಯ ಅವರು ಈ ಬಾರಿ ಬಜೆಟ್ ನಲ್ಲಿ ಸಬ್ಸಿಡಿ ಕುರಿತಾಗಿ ಉಲ್ಲೇಖಿಸಿದ್ದಾರೆ. ಪ್ರಶಸ್ತಿಯ ಮನವಿಯನ್ನು ಪುರಸ್ಕರಿಸಿಲ್ಲ.
Web Stories