ಬೆಂಗಳೂರು: 2023-24ನೇ ಸಾಲಿನ ಬಜೆಟ್ಗೆ ಮುಹೂರ್ತ ಫಿಕ್ಸ್ ಆಗಿದೆ. ಫೆಬ್ರವರಿ 17 ರಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ರಾಜ್ಯ ಬಜೆಟ್ (Karnataka Budget 2023) ಮಂಡನೆ ಮಾಡಲಿದ್ದಾರೆ.
ಶುಕ್ರವಾರ ನಡೆದ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ದಿನಾಂಕ ನಿಗದಿ ಮಾಡಲಾಯ್ತು. ಕ್ಯಾಬಿನೆಟ್ ಬಳಿಕ ಸುದ್ದಿಗೋಷ್ಟಿ ನಡೆಸಿದ ಮಾಧುಸ್ವಾಮಿ (J.C.Madhuswamy) ಅಧಿವೇಶನದ ಬಗ್ಗೆ ಮಾಹಿತಿ ನೀಡಿದರು. ಚುನಾವಣೆ ವರ್ಷ ಅಗಿರುವುದರಿಂದ ಈ ಬಾರಿ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನವನ್ನ ಏಕಕಾಲದಲ್ಲಿ ನಡೆಸಲು ಸರ್ಕಾರ ನಿರ್ಧಾರ ಮಾಡಿದೆ ಎಂದು ತಿಳಿಸಿದರು.
ಫೆಬ್ರವರಿ 10 ರಂದು ಜಂಟಿ ಅಧಿವೇಶನ ಪ್ರಾರಂಭವಾಗಲಿದೆ. ರಾಜ್ಯಪಾಲ ಥಾವರ್ಚಂದ್ ಗೆಹ್ಲೊಟ್ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ 17 ರಂದು ಸಿಎಂ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: 200 ಯೂನಿಟ್ ವಿದ್ಯುತ್, ಗೃಹಿಣಿಗೆ 2 ಸಾವಿರ ರೂ.: ಗ್ಯಾರಂಟಿ ಯೋಜನೆಗೆ ಷರತ್ತು ಪ್ರಕಟಿಸಿದ ಕಾಂಗ್ರೆಸ್
ಎಷ್ಟು ದಿನ ಅಧಿವೇಶನ ನಡೆಸಬೇಕು ಅಂತ ತೀರ್ಮಾನ ಮಾಡಿಲ್ಲ. ಬಿಎಸಿ ಸಭೆಯಲ್ಲಿ ಸಮಯ ನಿಗದಿ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k