– ಮೈಸೂರು ಏರ್ಪೋರ್ಟ್ ರನ್ ವೇ ವಿಸ್ತರಣೆ ಭೂಸ್ವಾಧೀನಕ್ಕೆ 319 ಕೋಟಿ ಘೋಷಣೆ
ಮೈಸೂರು: ತಮ್ಮ 16ನೇ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿಗೆ ಭರಪೂರ ಯೋಜನೆಗಳನ್ನ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ ನಿರ್ಮಾಣಕ್ಕೆ 500 ಕೋಟಿ ಮೀಸಲಿಡುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆಗೆ ಭೂಸ್ವಾಧೀನಕ್ಕೆ 319 ಕೋಟಿ ರೂ. ಅನುದಾನ, 100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ಹತ್ತು ಹಲವು ಯೋಜನೆಗಳನ್ನ ಘೋಷಿಸಿದ್ದಾರೆ.
ಬಜೆಟ್ನಲ್ಲಿ ಮೈಸೂರಿಗೆ ಸಿಕ್ಕಿದ್ದೇನು?
Advertisement
* ಅಂತಾರಾಷ್ಟ್ರೀಯ ಮಾದರಿ ʻಚಿತ್ರ ನಗರಿʼ ಸ್ಥಾಪನೆಗೆ 500 ಕೋಟಿ ರೂ. ಮೀಸಲು
* ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಮೂರು ಕೋಟಿ ರೂ.
* ಪ್ರೊ. ನಂಜುಂಡಸ್ವಾಮಿ ಸಂಶೋಧನ ಪೀಠ ಸ್ಥಾಪನೆ.
* ರೇಷ್ಮೆಗೂಡು ಮಾರುಕಟ್ಟೆ ಸ್ಥಾಪನೆ.
* 100 ಕೋಟಿ ರೂ. ವೆಚ್ಚದಲ್ಲಿ ನಿಮ್ಹಾನ್ಸ್ ಮಾದರಿ ಆಸ್ಪತ್ರೆ ನಿರ್ಮಾಣ.
* ಕ್ರೀಡಾ ವಿಜ್ಞಾನ ಕೇಂದ್ರ ಸ್ಥಾಪನೆ.
* ಬನ್ನಿ ಮಂಟಪದಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಬಸ್ ನಿಲ್ದಾಣ ಸ್ಥಾಪನೆ.
* ರಾಜ್ಯ ಮಟ್ಟದ ವಸ್ತು ಸಂಗ್ರಹಾಲಯ.
* ಮೈಸೂರು ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ – ಭೂ ಸ್ವಾಧೀನಕ್ಕಾಗಿ 319 ಕೋಟಿ ರೂ.
* ಕ್ರೀಡಾ, ವಿಜ್ಞಾನ ಕೇಂದ್ರ ಸ್ಥಾಪನೆ. 7 ಕೋಟಿ ರೂ.
* ಕುಸ್ತಿ, ವಾಲಿಬಾಲ್, ಖೋ ಖೋ ಅಕಾಡೆಮಿ ಸ್ಥಾಪನೆಗೆ 2 ಕೋಟಿ ರೂ. ಮೀಸಲು
* ಪ್ರವಾಸಿಗರಿಗೆ ಪೌಷ್ಠಿಕ ಮೀನು ಖಾದ್ಯ ಒದಗಿಸಲು ಹೈಟೆಕ್ ಮತ್ಸದರ್ಶಿನಿ ಆರಂಭ.
* ಮೈಸೂರು ಜಿಲ್ಲೆಯ ತಗಡೂರು ಸಮುದಾಯ ಆರೋಗ್ಯ ಕೇಂದ್ರ 100 ಹಾಸಿಗೆ ಆಸ್ಪತ್ರೆಯಾಗಿ ಮೇಲ್ದರ್ಜೆಗೆ.
* ಎಂಡೋಕ್ರೈನಾಲಜಿ ಕೇಂದ್ರ ಸ್ಥಾಪನೆ.
* ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳ ಉನ್ನತೀಕರಣಕ್ಕೆ 5 ಕೋಟಿ ರೂ.
* ಬುಡಕಟ್ಟು ಜನಾಂಗದ ವಿದ್ಯಾರ್ಥಿಗಳ ಐದು ವಸತಿ ಶಾಲೆ ಮೇಲ್ದರ್ಜೆಗೆ.
* ವರುಣದಲ್ಲಿ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರ ಸ್ಥಾಪನೆಗೆ 60 ಕೋಟಿ ರೂ. ಮೀಸಲು.
* ಮೈಸೂರು ವಿವಿಯಲ್ಲಿ ತಾಳೆಗರಿ ಹಸ್ತಪ್ರತಿ ಡಿಜಿಟಲೀಕರಣಕ್ಕೆ 1 ಕೋಟಿ ರೂ.
* ಮೈಸೂರಿನ ರಂಗಾಯಣಕ್ಕೆ 2 ಕೋಟಿ ರೂ. ಅನುದಾನ.
* ಟಿ. ನರಸೀಪುರ ತಾಲ್ಲೂಕು ಕ್ರೀಡಾಂಗಣಕ್ಕೆ ಆರು ಕೋಟಿ ರೂ.
* ಮೈಸೂರಿನಲ್ಲಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ ಸ್ಥಾಪನೆ.
* ಕಬಿನಿ ನದಿಗೆ ಅಡ್ಡಲಾಗಿ ಹಾಗೂ ಕಪ್ಪಡಿ ಗ್ರಾಮದ ಬಳಿ ಕಾವೇರಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಮಾಡುವುದಾಗಿ ಘೋಷಿಸಿದರು.
Advertisement