– ಪ್ರೀಮಿಯಂ ಮದ್ಯದ ಬೆಲೆ ಪರಿಷ್ಕರಣೆ
ಬೆಂಗಳೂರು: 2025-26ನೇ ಸಾಲಿನಲ್ಲಿ 40,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ (Excise Department) ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದರು.
Advertisement
ದಾಖಲೆಯ 16ನೇ ಬಜೆಟ್ (Karnataka Budget 2025) ಮಂಡಿಸಿದ ಸಿಎಂ, 2024-25ರ ಪರಿಷ್ಕೃತ ಅಂದಾಜಿನಲ್ಲಿ ಅಬಕಾರಿ ತೆರಿಗೆಯಿಂದ ಒಟ್ಟು 36,500 ಕೋಟಿ ರೂ.ಗಳ ರಾಜಸ್ವ ನಿರೀಕ್ಷಿಸಲಾಗಿದೆ. ಅದರಂತೆ 2025-26ನೇ ಸಾಲಿಗೆ 40,000 ಕೋಟಿ ರೂ.ಗಳ ಸಂಗ್ರಹಣಾ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗಳೂರು ವಿವಿಗೆ ಪ್ರಧಾನಿ ಮನಮೋಹನ್ ಸಿಂಗ್ ಎಂದು ಮರುನಾಮಕರಣ
Advertisement
Advertisement
ಪ್ರೀಮಿಯಂ ಮದ್ಯದ ಬೆಲೆಗಳನ್ನು ನೆರೆಯ ರಾಜ್ಯಗಳಲ್ಲಿ ವಿಧಿಸುತ್ತಿರುವ ಬೆಲೆಗಳಿಗೆ ಅನುಸಾರವಾಗಿ ಪರಿಷ್ಕರಿಸುವುದರೊಂದಿಗೆ ಸರ್ಕಾರವು ಅಬಕಾರಿ ಸ್ಲ್ಯಾಬ್ಗಳನ್ನು ತರ್ಕಬದ್ಧಗೊಳಿಸಿದೆ. 2025-26ರಲ್ಲಿಯೂ ಅಬಕಾರಿ ಸ್ಲ್ಯಾಬ್ಗಳನ್ನು ತರ್ಕಬದ್ಧಗೊಳಿಸುವ ಪ್ರಕ್ರಿಯೆಯನ್ನು ಮುಂದುವರಿಸಲಾಗುವುದು ಎಂದು ವಿವರಿಸಿದರು. ಇದನ್ನೂ ಓದಿ: ಅಭಿವೃದ್ಧಿಯ ಬಜೆಟ್ ಇದು, ಗ್ಯಾರಂಟಿ ಮೀರಿ ಅಭಿವೃದ್ಧಿಗೆ ಒತ್ತು ಕೊಟ್ಟಿದ್ದೇನೆ: ಸಿಎಂ
Advertisement
ಜೊತೆಗೆ ಖಾಲಿ ಅಥವಾ ಲಭ್ಯವಿರುವ ಮದ್ಯದ ಪರವಾನಗಿಗಳನ್ನು ಪಾರದರ್ಶಕ ಇ-ಹರಾಜಿನ (ಆನ್ಲೈನ್) ಮೂಲಕ ಹಂಚಿಕೆ ಮಾಡಲು ಪ್ರಸ್ತಾಪಿಸಲಾಗಿದೆ. ಇದರಿಂದ ಹೆಚ್ಚುವರಿ ರಾಜಸ್ವ ಸಂಗ್ರಹಣೆಯಾಗುವ ನಿರೀಕ್ಷೆಯಿದೆ. ಇಲಾಖೆಯ ಎಲ್ಲಾ ಸೇವೆಗಳಿಗೆ ಸರ್ಕಾರವು ತಂತ್ರಾಂಶ ಸಿದ್ಧಪಡಿಸಿ ಆನ್ಲೈನ್ ಪ್ರಕ್ರಿಯೆಯನ್ನು ಅಭಿವೃದ್ಧಿಪಡಿಸಿದೆ. ಇದು ಆಡಳಿತದಲ್ಲಿ ದಕ್ಷತೆಯನ್ನು ಹೆಚ್ಚಿಸುತ್ತದೆ ಮತ್ತು ಸಾರ್ವಜನಿಕ ಸೇವೆಯನ್ನು ಮತ್ತಷ್ಟು ಸುಧಾರಿಸಲು ಸಹಕಾರಿಯಾಗಲಿದೆ ಎಂದು ಸಿಎಂ ತಿಳಿಸಿದರು. ಇದನ್ನೂ ಓದಿ: ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಇಲ್ಲ – ಆಹಾರ ಸಚಿವ ಮುನಿಯಪ್ಪ ಹೇಳಿದ್ದೇನು?