Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Bengaluru City

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Public TV
Last updated: March 6, 2026 7:10 pm
Public TV
Share
3 Min Read
BY VIjayendra
SHARE

-ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ ಬಜೆಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಅವರು ತಿಳಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಒಬ್ಬ ಅನುಭವಿ ಮುಖ್ಯಮಂತ್ರಿಗಳಿದ್ದು, 17ನೇ ಬಜೆಟ್ ಮಂಡಿಸುವ ಸುವರ್ಣಾವಕಾಶ ಅವರಿಗೆ ಸಿಕ್ಕಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀರಿನಲ್ಲಿ ಹೋಮ ಮಾಡುವ ಕೆಲಸವನ್ನು ಮಾಡಿದ್ದಾರೆ. ಯಾವುದೇ ದೂರದೃಷ್ಟಿ ಇಲ್ಲದ ನೀರಸ ಬಜೆಟ್ ಇದು. ಮುಖ್ಯಮಂತ್ರಿಯವರು ಬಜೆಟ್ ಓದುವಾಗ ನಾನು ಆಡಳಿತ ಪಕ್ಷದ ಶಾಸಕರನ್ನು ಗಮನಿಸುತ್ತಿದ್ದೆ. ಯಾವುದೇ ಶಾಸಕರಲ್ಲಿ ಈ ಬಜೆಟ್ ಬಗ್ಗೆ ಆಸಕ್ತಿ ಇಲ್ಲದಿರುವುದು ಸ್ಪಷ್ಟವಾಗಿ ಕಾಣುತ್ತಿತ್ತು ಎಂದು ನುಡಿದಿದ್ದಾರೆ. ಇದನ್ನೂ ಓದಿ: ಬಜೆಟ್‌ನಲ್ಲಿ ಜನರ ಮೇಲೆ ಸಾಲದ ಹೊರೆ, ಖಾಲಿ ಚೊಂಬು ನೀಡಿದ ಕಾಂಗ್ರೆಸ್: ಆರ್.ಅಶೋಕ್

ಮುಖ್ಯಮಂತ್ರಿಗಳು ಬಜೆಟ್ ಓದಲು ಆರಂಭಿಸಿದಾಗ ಅದನ್ನು ಕೇಳುತ್ತಿದ್ದರೆ ಯಾರೋ ಸಾಹಿತಿಗಳು ಬರೆದುಕೊಟ್ಟಂತಿತ್ತು. ಕೇಳುವುದಕ್ಕೆ ತುಂಬ ಚೆನ್ನಾಗಿತ್ತು. ಓದಲೂ ಚೆನ್ನಾಗಿ ಅನಿಸಿರಬಹುದು. ಆದರೆ, ರಾಜ್ಯದ ಜನತೆಗೆ ಯಾವುದೇ ಪ್ರಯೋಜನ ಆಗಿಲ್ಲ. 17ನೇ ಬಜೆಟ್ ಮೂಲಕ ನಾಡಿನ ಜನತೆಗೆ ಚೊಂಬನ್ನು ನೀಡಿದ್ದಾರೆ. ಕಳೆದ 3 ಬಜೆಟ್ ಅನ್ನು ನೋಡಿದರೆ, ಹಿಂದಿನ ಬಜೆಟ್‌ನಲ್ಲಿ 1.16 ಲಕ್ಷ ಕೋಟಿ ರೂ. ಸಾಲ ಮಾಡಿದ್ದರು. ಈ ಬಾರಿ 2025-26ನೇ ಸಾಲಿಗೆ 1.32 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಕಳೆದ 3 ವರ್ಷಗಳಲ್ಲಿ 4.39 ಲಕ್ಷ ಕೋಟಿ ರೂ. ಸಾಲ ಮಾಡಿದ್ದೇ ಸಿದ್ದರಾಮಯ್ಯನವರ ದಾಖಲೆ ಎಂದು ಟೀಕಿಸಿದ್ದಾರೆ.

ಆಡಳಿತ ಪಕ್ಷದ ಶಾಸಕರು ಹಿರಿಯ ಶಾಸಕರ ಹತ್ತಿರ ತೆರಳಿ ಮುಖ್ಯಮಂತ್ರಿಗಳು ಪಂಗನಾಮ ಹಾಕಿದ್ದಾರೆ ಎಂದು ತಿಳಿಸಿದ್ದನ್ನು ಗಮನಿಸಿದ್ದಾಗಿ ವಿವರಿಸಿದರು. ಕೇವಲ ಏಳೆಂಟು ಸಚಿವರಷ್ಟೇ ಇದ್ದರು. ಬೇರೆ ಸಚಿವರಿಗೆ, ಆಡಳಿತ ಪಕ್ಷದ ಶಾಸಕರಿಗೆ ಈ ಬಜೆಟ್ ಬಗ್ಗೆ ಆಸಕ್ತಿ ಇರಲಿಲ್ಲ ಎಂದು ಆಕ್ಷೇಪಿಸಿದರು.

ಆದ್ಯತಾ ರಂಗ ಎನಿಸಿದ ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಕಳೆದ ಬಾರಿಗಿಂತ ಅನುದಾನ ಕಡಿಮೆ ಮಾಡಿದ್ದಾರೆ. ಕಳೆದ ಬಾರಿ ಶಿಕ್ಷಣಕ್ಕೆ ಶೇ.12 ನೀಡಿದ್ದು, ಈ ಬಾರಿ ಕಡಿಮೆ ಕೊಟ್ಟಿದ್ದಾರೆ. ಯಾವುದೇ ಆದ್ಯತಾ ರಂಗಕ್ಕೆ ಆದ್ಯತೆ ನೀಡಿಲ್ಲ. ಬಂಡವಾಳ ಹೂಡಿಕೆಗೆ ಆದ್ಯತೆ ಕೊಟ್ಟಿಲ್ಲ. ಅಭಿವೃದ್ಧಿ ದೃಷ್ಟಿ ಇಟ್ಟುಕೊಂಡು ಈ ಬಜೆಟ್ ಮಂಡಿಸಿಲ್ಲ. ಇಂತಹ ಬಜೆಟ್ ಮಂಡಿಸಿಯಾರೆಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ. ಮುಖ್ಯಮಂತ್ರಿಗಳು ರೈತರ ಬಗ್ಗೆಯೂ ಯಾವುದೇ ಕಾಳಜಿ ತೋರಿಲ್ಲ. ಯುವಜನತೆಗೆ ಆದ್ಯತೆ ಕೊಡುತ್ತಾರೆ. ಉದ್ಯೋಗ ಅವಕಾಶಕ್ಕೆ ಪೂರಕ ಬಜೆಟ್ ಕೊಡುವ ನಿರೀಕ್ಷೆ ಇತ್ತು. ಅದಕ್ಕೆ ಅವಕಾಶ ನೀಡಿಲ್ಲ. ತಮ್ಮ ಪಂಚ ಗ್ಯಾರಂಟಿಗೆ ಹಣ ಕ್ರೋಡೀಕರಿಸಲು ಸಾಧ್ಯ ಆಗದೇ ಪದೇ ಪದೇ ಅಬಕಾರಿ ಇಲಾಖೆ ಮೇಲೆ ಅವಲಂಬಿತರಾಗಿದ್ದಾರೆ ಎಂದು ದೂರಿದರು.

ಕುಡುಕರ ರಾಜ್ಯವಾಗಿ ಮಾಡಲು ಹೊರಟಿದ್ದಾರೆ:
ಈ ಬಾರಿಯೂ 45 ಸಾವಿರ ಕೋಟಿ ರೂ.ಗಳನ್ನು ಮುಖ್ಯಮಂತ್ರಿಗಳು ಅಬಕಾರಿ ಇಲಾಖೆಯಿಂದ ನಿರೀಕ್ಷೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯವನ್ನು ಕುಡುಕರ ರಾಜ್ಯವಾಗಿ ಮಾಡಲು ಹೊರಟಿದ್ದಾರೆ. ಆರೋಗ್ಯ ಇಲಾಖೆ, ನೀರಾವರಿ ಯೋಜನೆಗಳ ಕಡೆ ಗಮನ ಕೊಟ್ಟಿಲ್ಲ. ಉತ್ತರ ಕರ್ನಾಟಕದ ಅಭಿವೃದ್ಧಿಗೂ ಕಿಂಚಿತ್ತು ಕಾಳಜಿ ತೋರಿಸಿಲ್ಲ. ಮುಖ್ಯಮಂತ್ರಿಗಳಿಗೆ ಜನ್ಮ ಕೊಟ್ಟ ಮೈಸೂರು ಜಿಲ್ಲೆಗೂ ಯಾವುದೇ ಕೊಡುಗೆ ಕೊಟ್ಟಿಲ್ಲ. ಕರಾವಳಿ ಭಾಗವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕರಾವಳಿ ಭಾಗವು ಬಿಜೆಪಿಗೆ ದೊಡ್ಡ ಶಕ್ತಿಯನ್ನು ಕೊಟ್ಟಿದೆ ಎಂಬ ಒಂದೇ ಒಂದು ಕಾರಣಕ್ಕೆ ಅದರ ಉಲ್ಲೇಖವನ್ನೂ ಮಾಡಿಲ್ಲ. ಹಾಗಾಗಿ ಕರಾವಳಿ ಭಾಗ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಸೇರಿ ಇಡೀ ಕರ್ನಾಟಕದ ಅಭಿವೃದ್ಧಿಯ ದೃಷ್ಟಿಕೋನ ಇಲ್ಲದ ಬಜೆಟ್ ಇದಾಗಿದೆ ಎಂದು ತಿಳಿಸಿದರು.ಇದನ್ನೂ ಓದಿ: ಸಿದ್ದರಾಮಯ್ಯ ಬಜೆಟ್‌ ಎಫೆಕ್ಟ್‌ – ಯುನೈಟೆಡ್ ಬ್ರಿವರೀಸ್, ಯುನೈಟೆಡ್ ಸ್ಪಿರಿಟ್ಸ್ ಷೇರು ದಿಢೀರ್‌ ಭಾರೀ ಏರಿಕೆ

TAGGED:Budget 2026BY Vijayendracongresskarnatakaಕರ್ನಾಟಕಕಾಂಗ್ರೆಸ್ಬಜೆಟ್ 2026ಬಿಜೆಪಿಬಿವೈ ವಿಜಯೇಂದ್ರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories

You Might Also Like

Abhishek Sharma 3
Cricket

ಹೈದ್ರಾಬಾದ್‌ನಲ್ಲಿ ಸನ್‌ ರೈಸರ್ಸ್‌ ದರ್ಬಾರ್, ಶತಕ ಸಿಡಿಸಿ ಮೆರೆದಾಡಿದ ಅಭಿ – SRHಗೆ 47 ರನ್‌ಗಳ ಭರ್ಜರಿ ಜಯ

Public TV
By Public TV
3 hours ago
NIA 2
Bengaluru City

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಕೇಸ್ – ಪ್ರಕರಣದ 3ನೇ ಅಪರಾಧಿಗೆ 6 ವರ್ಷ ಜೈಲು

Public TV
By Public TV
3 hours ago
mojtaba khamenei and trump
Latest

ಅಮೆರಿಕ ಇರಾನ್‌ ನಡುವೆ ಶಾಂತಿ ಮಾತುಕತೆ – ಇಸ್ಲಾಮಾಬಾದ್‌ನಲ್ಲಿ ಕೌಂಟ್‌ಡೌನ್ ಶುರು

Public TV
By Public TV
4 hours ago
Rahul Gandhi 1
Latest

ರಾಹುಲ್‌ ಗಾಂಧಿ ಕೋಲ್ಕತ್ತಾ ಭೇಟಿ ರದ್ದು – ಅನುಮತಿ ನಿರಾಕರಣೆಗೆ ದೀದಿ ಸರ್ಕಾರವೇ ಕಾರಣ: ಕಾಂಗ್ರೆಸ್ ಆರೋಪ

Public TV
By Public TV
4 hours ago
Odisha dog
Latest

30 ಮಕ್ಕಳ ರಕ್ಷಣೆಗೆ ವಿಷಪೂರಿತ ಹಾವಿನೊಂದಿಗೆ ಕಾದಾಡಿ ನಾಯಿ ಸಾವು – ಮೆರವಣಿಗೆ ಮಾಡಿ, ಗ್ರಾಮಸ್ಥರಿಂದ ಅಂತ್ಯಕ್ರಿಯೆ

Public TV
By Public TV
4 hours ago
Bengaluru 2
Bengaluru City

ಫಾರಿನ್ ಸ್ಟೈಲಲ್ಲಿ ಪ್ರಪೋಸ್‌ ಮಾಡ್ತೀನಿ ಅಂತ ಸೀಮೆ ಎಣ್ಣೆ ಸುರಿದು ಪ್ರಿಯಕರನಿಗೆ ಬೆಂಕಿ ಹಚ್ಚಿ ಕೊಂದ ಪ್ರೇಯಸಿ..!

Public TV
By Public TV
6 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?