ಉತ್ತರ ಕನ್ನಡ ಜಿಲ್ಲೆಗೆ ಭರ್ಜರಿ ಕೊಡುಗೆ – ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಘೋಷಣೆ

Public TV
2 Min Read
hospital Basavaraj Bommai

ಕಾರವಾರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್‍ನಲ್ಲಿ (State Budget) ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (Super Speciality Hospital) ನಿರ್ಮಾಣ ಮಾಡುವುದಾಗಿ ಘೋಷಿಸಿದ್ದಾರೆ.

ಈ ಬಾರಿ ಆರೋಗ್ಯ ಕ್ಷೇತ್ರಕ್ಕೆ 15,151 ಕೋಟಿ ರೂ. ಅನುದಾನ ಘೋಷಿಸಿದ್ದಾರೆ. ಈ ವೇಳೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ತಾಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಅಷ್ಟೇ ಅಲ್ಲದೇ ಕಾರವಾರದಲ್ಲಿ (Karwar) ಪ್ರಗತಿಯಲ್ಲಿರುವ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳ ನಿರ್ಮಾಣವನ್ನು ಪ್ರಸಕ್ತ ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದ್ದಾರೆ.

doctor

ಜಿಲ್ಲೆಯ ಜನರು ಸೂಕ್ತ ಆಸ್ಪತ್ರೆಯಿಲ್ಲದೇ ಪರದಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ರೋಗಿಗಳಿಗೆ ತೊಂದರೆಯಾದಾಗಲೆಲ್ಲ ದೂರದ ಮಣಿಪಾಲ, ಗೋವಾ, ಮಂಗಳೂರು ಮತ್ತಿತರ ಕಡೆ ಹೋಗಬೇಕು. ಇದರಿಂದ ತುಂಬಾ ಸಮಸ್ಯೆ ಆಗುತ್ತಿತ್ತು. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಆಸ್ಪತ್ರೆಗಾಗಿ ಹತ್ತಾರು ಹೋರಾಟಗಳು ನಡೆದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇದನ್ನೂ ಓದಿ: ರಾಜ್ಯ ಬಜೆಟ್: ಬಿಪಿಎಲ್ ಕಾರ್ಡ್‌ದಾರರಿಗೆ ಅಕ್ಕಿ 5 ರಿಂದ 6 ಕೆ.ಜಿಗೆ ಹೆಚ್ಚಳ

Kidney Hospital 2

ಈ ಹಿಂದೆ ಹೊನ್ನಾವರದ ರೋಗಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್ ಭೀಕರ ಅಪಘಾತಕ್ಕೊಳಗಾಗಿತ್ತು. ಈ ಘಟನೆ ಬಳಿಕ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಕೂಗು ಜೋರಾಗಿದ್ದು, ಸಾಮಾಜಿಕ ಜಾಲತಾಣ ಸೇರಿದಂತೆ ಅನೇಕ ರೀತಿಯಲ್ಲಿ ಅಭಿಯಾನ ನಡೆಸಲಾಗಿತ್ತು. ಕೊನೆಗೂ ಉತ್ತರ ಕನ್ನಡ ಜಿಲ್ಲೆಯ ಜನರ ಒತ್ತಡಕ್ಕೆ ಮಣಿದ ಸರ್ಕಾರ, ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ತಾತ್ವಿಕ ಒಪ್ಪಿಗೆ ನೀಡಿತ್ತು. ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಉತ್ತರ ಕನ್ನಡ ಭಾಗದ ಜನಪ್ರತಿನಿಧಿಗಳ ಜೊತೆ ಸಭೆ ಕೂಡ ನಡೆಸಿದ್ದರು. ಇದನ್ನೂ ಓದಿ: ಎಣ್ಣೆ ಬೇಗ ಕೊಡದಿದ್ದಕ್ಕೆ ಬಾರ್ ಹುಡುಗನ ಮೇಲೆ ಹಲ್ಲೆ- 23 ದಿನಗಳ ಬಳಿಕ ಸಾವು

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *