Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಜಿಎಸ್‍ಟಿ ಪರಿಹಾರ 3 ವರ್ಷ ವಿಸ್ತರಿಸಿ: ರಾಜ್ಯದ ಹಣಕಾಸು ಪರಿಸ್ಥಿತಿಯ ಬಗ್ಗೆ ಸಿಎಂ ಹೇಳಿದ್ದೇನು?

Public TV
Last updated: March 4, 2022 4:39 pm
Public TV
Share
3 Min Read
GST revenue falls 12 in August at ₹86449 cr
SHARE

ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಉತ್ತಮವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಜೆಟ್ ಭಾಷಣದಲ್ಲಿ ರಾಜ್ಯಗಳಿಗೆ ಜಿಎಸ್‍ಟಿ ಪರಿಹಾರಗಳನ್ನು ಕನಿಷ್ಠ ಮೂರು ವರ್ಷಗಳವರೆಗೆ ವಿಸ್ತರಿಸಲು ಮನವಿ ಮಾಡಿದ್ದಾರೆ.

ಸಿಎಂ ಹೇಳಿದ್ದೇನು?:
ರಾಜ್ಯದ ರಾಜಸ್ವ ಸಂಪನ್ಮೂಲಗಳೂ ರಾಜ್ಯದ ಸ್ವಂತ ತೆರಿಗೆ, ತೆರಿಗೆಯೇತರ ಸ್ವೀಕೃತಿಗಳು, ಕೇಂದ್ರ ತೆರಿಗೆಗಳಿಂದ ರಾಜ್ಯದ ಪಾಲು ಮತ್ತು ಕೇಂದ್ರ ಸರ್ಕಾರದ ಸಹಾಯಾನುದಾನವನ್ನು ಒಳಗೊಂಡಿರುತ್ತದೆ. ವರ್ಷದ ಆರಂಭದಲ್ಲಿ ಕೋವಿಡ್ ಸಾಂಕ್ರಾಮಿಕದ ಎರನೇ ಅಲೆಯಿಂದಾಗಿ ರಾಜಸ್ವ ಸಂಗ್ರಹವು ಮಂದಗತಿಯಲ್ಲಿ ಪ್ರಾರಂಭವಾಯಿತು. ಆದಾಗ್ಯೂ, ಮುಂದಿನ ದಿನಗಳಲ್ಲಿ ಅದು ಹೆಚ್ಚಿದ್ದು, ಆಯವ್ಯಯದಲ್ಲಿ ಅಂದಾಜು ಮಾಡಿದ ಗುರಿಗಳನ್ನು ನಾವು ತಲುಪಲಿದ್ದೇವೆ.

BUDGET

2021-2022ನೇ ಆರ್ಥಿಕ ವರ್ಷದಲ್ಲಿ ಕೇಂದ್ರ ಸರ್ಕಾರದ ರಾಜಸ್ವ ಸಂಗ್ರಹಣೆಗಳು ಸಹ ಹೆಚ್ಚಿವೆ. ಇದರಿಂದಾಗಿ ರಾಜ್ಯಕ್ಕೆ ಕೇಂದ್ರ ತೆರಿಗೆಗಳ ಪಾಲನ್ನು ಪರಿಷ್ಕೃತ ಅಂದಾಜಿನಲ್ಲಿ, ಆಯವ್ಯಯದಲ್ಲಿ ಅಂದಾಜು ಮಾಡಿದ 24,273 ಕೋಟಿ ರೂ.ಗಳಿಂದ 27,145 ಕೋಟಿ ರೂ. ಗಳಿಗೆ ಹೆಚ್ಚಸಲಾಗಿದೆ. ಕೇಂದ್ರ ಸರ್ಕಾರವು 2022-23ನೇ ಸಾಲಿನ ತನ್ನ ಆಯವ್ಯಯದಲ್ಲಿ ಕರ್ನಾಟಕಕ್ಕೆ ತೆರಿಗೆ ಹಂಚಿಕೆಯಾಗಿ 29,783ಕೋಟಿ ರೂ.ಗಳನ್ನು ಅಂದಾಜು ಮಾಡಿದೆ.

ಹಿಂದಿನ ವರ್ಷಕ್ಕೆ ಹೋಲಿಸಿದರೆ 2021-22ನೇ ಸಾಲಿನಲ್ಲಿ ರಾಜ್ಯದ ಜಿಎಸ್‍ಟಿ ಸಂಗ್ರಹಣೆಯು ಹೆಚ್ಚಾಗಿದೆ ಮತ್ತು ಚೇತರಿಕೆಯ ಹಾದಿಯಲ್ಲಿದೆ ಎಂಬುದನ್ನು ತೋರಿಸುತ್ತದೆ. ಕೇಂದ್ರ ಸರ್ಕಾರವು 2021-22ನೇ ಸಾಲಿಗೆ ಜಿಎಸ್‍ಟಿ ಪರಿಹಾರ ಮೊತ್ತ 7,158 ಕೋಟಿ ರೂ.ಗಳ ಜೊತೆಗೆ ಜಿಎಸ್‍ಟಿ ಪರಿಹಾರದ ಬದಲಾಗಿ 18,1089 ಕೋಟಿ ರೂ.ಗಳನ್ನು ಜಿಎಸ್‍ಟಿ ಸಾಲವಾಗಿ ನೀರುವ ಮೂಲಕ ರಾಜ್ಯವನ್ನು ಬೆಂಬಲಿಸಿದೆ. ಇದನ್ನು ಓದಿ: ಮೇಕೆದಾಟು ಯೋಜನೆಗೆ 1,000 ಕೋಟಿ ರೂ. ಅನುದಾನ

karnataka state budget 2022 1 1

ಇದು ಕೋವಿಡ್ ಮತ್ತು ಅದಕ್ಕೆ ಸಂಬಂಧಿಸಿದ ವೆಚ್ಚಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಮಾತ್ರವಲ್ಲದೆ ಬೆಳವಣಿಗೆಗೆ ಉತ್ತೇಜನೆಯನ್ನು ಒದಗಿಸುವ ಎಲ್ಲಾ ಅಭಿವೃದ್ಧಿ ಕಾರ್ಯಗಳು ಮತ್ತು ಕಾರ್ಯಕ್ರಮಗಳಿಗೆ ಸಮರ್ಪಕವಾಗಿ ಹಣವನ್ನು ಒದಗಿಸಲಾಗಿದೆ ಎಂದು ಖಚಿತಪಡಿಸಿಕೊಳ್ಳಲು ಸಹ ನಮಗೆ ಸಹಾಯ ಮಾಡಿದೆ.

ಜಿಎಸ್‍ಟಿ ಪರಿಹಾರವು ಜೂನ್ 2022ಕ್ಕೆ ಕೊನೆಗೊಳ್ಳಲಿದೆ. ಇದರರ್ಥ ರಾಜ್ಯವು ಹೆಚ್ಚುವರಿ ಸಂಪನ್ಮೂಲಗಳನ್ನು ಒಟ್ಟುಗೂಡಿಸಬೇಕು ಎಂಬುದಾಗಿದೆ. ನಾವು ಸ್ವಂತ ತೆರಿಗೆ ಸಂಗ್ರಹಗಳನ್ನು ಮತ್ತು ತೆರಿಗೆಯೇತರ ಸಂಗ್ರಹಗಳನ್ನು ಹೆಚ್ಚಸಲು ಪ್ರಯತ್ನಿಸಿದ್ದೇವೆ. ಭವಿಷ್ಯದ ಹೊಣೆಗಾರಿಕೆಯನ್ನು ನಿರ್ವಹಿಸಲು ರಾಜ್ಯಗಳಿಗೆ ಜಿಎಸ್‍ಟಿ ಪರಿಹಾರಗಳನ್ನು ಕನಿಷ್ಠ ಮೂರು ವರ್ಷಗಳವರೆಗೆ ವಿಸ್ತರಿಸಲು ನಾನು ಕೇಂದ್ರ ಸರ್ಕಾರವನ್ನು ವಿನಂತಿಸಿದ್ದೇನೆ. ಇದನ್ನು ಓದಿ: Karnataka Budget: ಈ ವರ್ಷ ಯಾವುದೇ ತೆರಿಗೆ ಹೆಚ್ಚಳ ಇಲ್ಲ

ಕೋವಿಡ್ ಪ್ರಭಾವದಿಂದಾಗಿ ಆರ್ಥಿಕ ಹಿಂಜರಿಕೆಯನ್ನು ನಿವಾರಿಸಲುಯ ರಾಜ್ಯಗಳಿಗೆ ಬೆಂಬಲವಾಗಿ 2021-22ನೇ ಸಾಲಿನ ಅವಧಿಯಲ್ಲಿ ಜಿಎಸ್‍ಡಿಪಿಯ ಶೇ.4ರವರೆಗೆ ಸಾಲವನ್ನು ಪಡೆಯಲುಯ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಅನುಕೂಲ ಕಲ್ಪಿಸಿದೆ. ಅದರಂತೆ, ಈ ಸೌಲಭ್ಯವನ್ನು ಪಡೆಯಲು ರಾಜ್ಯ ಸರ್ಕಾರವು ಕರ್ನಾಟಕ ವಿತ್ತಿಯ ಹೊಣೆಗಾರಿಕೆ ಅಧಿನಿಯಮ, 2002ಅನ್ನು ತಿದ್ದುಪಡಿ ಮಾಡಿದೆ. 2022-23ನೇ ಸಾಲಿಗೆ ಕೇಮದ್ರ ಸರ್ಕಾರವು ತನ್ನ ಕೇಂದ್ರ ಆಯವ್ಯಯದಲ್ಲಿ ವಿತ್ತೀಯ ಕೊರತೆಯನ್ನು ಶೇ. 3.5ರವರೆಗೆ ಹೆಚ್ಚಿಸಲು ರಾಜ್ಯಗಳಿಗೆ ಅವಕಾಶ ನೀಡಿದ್ದರೂ ಸಹ ನಮ್ಮ ಸರ್ಕಾರವು ಇದನ್ನು ಶೇ.3.26ಕ್ಕೆ ಸಿಮೀತಗೊಳಿಸುವ ಮೂಲಕ ಆರ್ಥಿಕ ಶಿಸ್ತು ಮತ್ತು ಮುಂದಾಲೋಚನೆಯನ್ನು ಪ್ರದರ್ಶಿಸಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರವು ಕಳೆದ 2 ವರ್ಷಗಳಲ್ಲಿ ಹೆಚ್ಚುವರಿ ಸಾಲವನ್ನು ಅನುಮತಿಸಿದಾಗ ನಾವು ಸಾಲವನ್ನು ನಿಯಂತ್ರಣದಲ್ಲಿಡುವಲ್ಲಿ ಯಶಸ್ವಿಯಾಗಿದ್ದೇವೆ. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಆಯವ್ಯದ 67,100 ಕೋಟಿ ರೂ.ಗಳ ಬದಲಿಗೆ 63,100ಕೀಓಟಿ ರೂ.ಗಳಿಗೆ ಸಾಲವನ್ನು ನಿರ್ಬಂಧಿಸಲು ಪ್ರಸ್ತಾಪಿಸಿದ್ದೇನೆ. 2022-23ನೇ ಸಾಲಿನಲ್ಲಿ 72,000ಕೋಟಿ ರೂ.ಗಳ ಸಾಲವನ್ನು ಪಡೆಯಲು ಯೋಜಿಸಿದ್ದೇವೆ ಎಂದರು.

2021-22ನೇ ಸಾಲಿಗೆ ಮಂಡಿಸಲಾದ ಆಯವ್ಯ ಆಗ ಇದ್ದ ನಿರ್ಬಂಧಗಳಿಂದಾಗಿ ವೆಚ್ಚವನ್ನು ಕಡಿಮೆ ಮಾಡುವ ಮತ್ತು ಹೊಸ ಯೋಜನೆಗಳನ್ನು ಘೋಷಿಸುವಲ್ಲಿ ಸಂಯಮವನ್ನು ಪ್ರದರ್ಶಿಸುವ ಮೂಲಕ ತೊಂದರೆಗಳನ್ನು ಎದುರಿಸುವ ಆಯವ್ಯಯ ಆಗಿತ್ತು. 2022-23ನೇ ಆಯವ್ಯಯವು ಒಂದು ಭರವಸೆಯಾಗಿದ್ದು, ಇದು ಅಭಿವೃದ್ಧಿ ಮತ್ತು ಉತ್ತಮ ಭವಿಷ್ಯದ ಭರವಸೆಯಾಗಿದೆ ಎಂದು ತಿಳಿಸಿದರು.

TAGGED:Basavaraj BommaibengaluruBommai Budgetkarnataka budgetಕರ್ನಾಟಕ ಬಜೆಟ್ಬಸವರಾಜ ಬೊಮ್ಮಾಯಿಬೆಂಗಳೂರುಬೊಮ್ಮಾಯಿ ಬಜೆಟ್‌
Share This Article
Facebook Whatsapp Whatsapp Telegram

You Might Also Like

Iran
Latest

ಇಸ್ರೇಲ್‌ ನಿಲ್ಲಿಸಿದರೆ ಮಾತ್ರ ದಾಳಿ ನಿಲ್ಲಿಸುತ್ತೇವೆ: ಕದನ ವಿರಾಮ ಒಪ್ಪದ ಇರಾನ್‌

Public TV
By Public TV
11 minutes ago
basmati exports
Latest

ಇರಾನ್‌, ಇಸ್ರೇಲ್‌ ಸಂಘರ್ಷ – ಭಾರತದ ಬಂದರುಗಳಲ್ಲಿ ಉಳಿದ 1 ಲಕ್ಷ ಟನ್ ಬಾಸ್ಮತಿ ಅಕ್ಕಿ

Public TV
By Public TV
45 minutes ago
donald trump 2
Latest

ಇಸ್ರೇಲ್‌- ಇರಾನ್‌ ಯುದ್ಧ ಮುಕ್ತಾಯ | ಕದನ ವಿರಾಮ ಘೋಷಿಸಿದ ಟ್ರಂಪ್‌

Public TV
By Public TV
52 minutes ago
daily horoscope dina bhavishya
Astrology

ದಿನ ಭವಿಷ್ಯ 24-06-2025

Public TV
By Public TV
1 hour ago
Khameni Logo
Latest

ಖಮೇನಿ ಕೈ ಬೆರಳಲ್ಲಿರೋ ನೀಲಿ ಕಲ್ಲಿನ ಉಂಗುರದ ರಹಸ್ಯವೇನು? ಇದು ಇರೋವರೆಗೂ ಸೋಲೇ ಇಲ್ವಾ?

Public TV
By Public TV
7 hours ago
Iran Fires Missiles
Latest

ಸುರಕ್ಷಿತ ಸ್ಥಳಗಳಲ್ಲೇ ಇರಿ – ಇರಾನ್‌ ಮಿಸೈಲ್‌ ದಾಳಿ ಬೆನ್ನಲ್ಲೇ ಕತಾರ್‌ನಲ್ಲಿರೋ ಭಾರತೀಯರಿಗೆ ಎಚ್ಚರಿಕೆ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?