Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಅನರ್ಹ ಶಾಸಕರಿಗೆ ಬಿಜೆಪಿಯಿಂದ ಬಂಪರ್ ಆಫರ್ – 1 ಕ್ಷೇತ್ರದ ಬಗ್ಗೆ ಮುಗಿಯದ ಗೊಂದಲ

Public TV
Last updated: September 25, 2019 2:24 pm
Public TV
Share
3 Min Read
rebel final
SHARE

ಬೆಂಗಳೂರು: ಅನರ್ಹ ಶಾಸಕರಿಗೆ ಬಿಜೆಪಿ ಬಂಪರ್ ಆಫರ್ ಪ್ರಕಟಿಸಿದೆ. ಒಂದು ಕ್ಷೇತ್ರ ಹೊರತುಪಡಿಸಿ ಘೋಷಣೆ ಆಗಿರುವ 14 ಕ್ಷೇತ್ರಗಳಿಗೆ ಅನರ್ಹರಿಗೆ ಅಥವಾ ಅವರ ಸಂಬಂಧಿಗೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.

ಇವತ್ತು ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಿ ಕಳುಹಿಸುವಂತೆ ಹೈಕಮಾಂಡ್ ಬಿಜೆಪಿ ನಾಯಕರಿಗೆ ಸೂಚನೆ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ವಿಚಾರವಾಗಿ ಬಿಜೆಪಿ ಬಳಿ ಎರಡು ಆಯ್ಕೆಗಳಿವೆ. ಒಂದು ಅನರ್ಹರನ್ನೇ ಕಣಕ್ಕೆ ಇಳಿಸುವುದು.  ಇವರ ನಾಮಪತ್ರದ ಜೊತೆಗೆ ಅನರ್ಹರು ಸೂಚಿಸಿದ ವ್ಯಕ್ತಿಗಳಿಂದ ನಾಮಪತ್ರ ಸಲ್ಲಿಸುವುದು. ಸುಪ್ರೀಂನಲ್ಲಿ ಪರ ತೀರ್ಪು ಬಂದರೆ ಅನರ್ಹರೇ ಸ್ಪರ್ಧಿಸಲಿದ್ದಾರೆ. ಒಂದು ವೇಳೆ ವಿರುದ್ಧ ತೀರ್ಪು ಬಂದರೆ ಅನರ್ಹರು ಯಾರನ್ನು ಸೂಚಿಸುತ್ತಾರೋ ಅವರನ್ನೇ ಕಣಕ್ಕೆ ಇಳಿಸಿ ಎಂದು ಹೈಕಮಾಂಡ್ ಸೂಚನೆ ನೀಡಿದೆ.

Bjp flag 3

ಅಥಣಿ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಗೊಂದಲ ಮುಂದುವರಿದಿದ್ದು, ಮಹೇಶ್ ಕುಮಟಹಳ್ಳಿ ಪರಿಷತ್ ಸದಸ್ಯ ಸ್ಥಾನಕ್ಕೆ ಒಪ್ಪಿದರೆ ಮಾತ್ರ ಡಿಸಿಎಂ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಾಗುತ್ತದೆ. ಈ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ಇನ್ನು ಚೌಕಾಶಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ಅನರ್ಹ ಶಾಸಕರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್, ಪ್ರತಾಪ್‍ಗೌಡ ಪಾಟೀಲ್, ರಮೇಶ್ ಜಾರಕಿಹೊಳಿ ದೆಹಲಿಯಿಂದ ಬೆಂಗಳೂರಿಗೆ ಮರಳಿದ್ದರು. ಇದನ್ನೂ ಓದಿ: ಕರ್ನಾಟಕದ 2 ಕ್ಷೇತ್ರಗಳಿಗೆ ಉಪಚುನಾವಣೆ ಇಲ್ಲ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರ ಬಂದ ಅನರ್ಹ ಶಾಸಕರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ್ದರು. ಸ್ವಲ್ಪ ಸಮಯದ ಬಳಿಕ ಮಾತನಾಡಿದ ಅನರ್ಹ ಶಾಸಕ ಭೈರತಿ ಬಸವರಾಜ್, ನಾವು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ. ನಾವೇನೂ ತಪ್ಪು ಮಾಡಿಲ್ಲ. ಸುಪ್ರೀಂಕೋರ್ಟ್ ತೀರ್ಪು ನಮ್ಮ ಪರವಾಗಿಯೇ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

Rebel MLAs B 1

ಉಪ ಚುನಾವಣೆ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಟಿಕೆಟ್ ಕೊಡುವುದಿಲ್ಲ ಅಂತ ಎಲ್ಲಿಯೂ ಹೇಳಿಕೊಂಡಿಲ್ಲ. ಅವರು ಟಿಕೆಟ್ ಕೊಡದಿದ್ದರೆ ಮುಂದೆ ನೋಡೋಣ ಎಂದು ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದರು.

ಶಿವರಾಮ್ ಹೆಬ್ಬಾರ್ ಅವರು, ಇನ್ನೆರಡು ದಿನ ಕಾದು ನೋಡಿ ಎಲ್ಲವೂ ನಿಮಗೆ ಗೊತ್ತಾಗುತ್ತದೆ. ಈಗಲೇ ಎಲ್ಲವ್ನೂ ಹೇಳಲು ಸಾಧ್ಯವಿಲ್ಲ ಎಂದಿದ್ದರೆ ಇತ್ತ ಪ್ರತಾಪ್‍ಗೌಡ ಪಾಟೀಲ್ ಅವರು, ಉಪ ಚುನಾವಣೆಗೆ ಹೋಗುವುದೇ ನಮ್ಮ ನಡೆ ಅಷ್ಟೇ. ಇದನ್ನು ಬಿಟ್ಟು ಏನನ್ನೂ ಹೇಳಲ್ಲ ಎಂದು ಕಾರ್ ಹತ್ತಿ ಹೊರಟು ಹೋಗಿದ್ದರು.

ಶಾಸಕ ಸ್ಥಾನದ ಅನರ್ಹತೆಯನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟಿನಲ್ಲಿ ಅನರ್ಹರು ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ತ್ವರಿತ ವಿಚಾರಣೆಗೆ ನಿರಾಕರಿಸಿತ್ತು. ಅಲ್ಲದೇ ಸೆ. 16ರಂದು ಪ್ರಕರಣ ವಿಚಾರಣೆಗೆ ಬಂದರೂ ಕೂಡ ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದ ಪರಿಣಾಮ ಪ್ರಕರಣ ವಿಚಾರಣೆ ಮುಂದೂಡಲಾಗಿತ್ತು. ಈಗ ಸೆ.22 ರಿಂದ ವಿಚಾರಣೆ ಆರಂಭಗೊಂಡಿದೆ.

Rebel MLA 1

ರಾಜ್ಯಗಳಲ್ಲಿ 15 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ನಾಮಪತ್ರ ಸಲ್ಲಿಕೆ ಮಾಡಲು ಸೆ.30 ಅಂತಿಮ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 3 ಕಡೆಯ ದಿನಾಂಕವಾಗಿದೆ. ಅಕ್ಟೋಬರ್ 21 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅ.24 ರಂದು ಫಲಿತಾಂಶ ಲಭ್ಯವಾಗಲಿದೆ. ಹೀಗಾಗಿ ಸೆ.30ರ ಒಳಗಡೆ ಪ್ರಕರಣ ಇತ್ಯರ್ಥವಾಗದಿದ್ದರೆ ಅನರ್ಹರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಚುನಾವಣಾ ಆಯೋಗದ ಘೋಷಣೆಯಂತೆ ಹಿರೇಕೆರೂರು ಅನರ್ಹ ಶಾಸಕರಾದ ಬಿ.ಸಿ.ಪಾಟೀಲ್, ಯಶವಂತಪುರದ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟಿನ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು  ನಾರಾಯಣಗೌಡರ ಕೆ.ಆರ್.ಪೇಟೆಯ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ.

TAGGED:bjpelectionskannada newskarnatakaSupreme Courtಅನರ್ಹ ಶಾಸಕರುಚುನಾವಣಾ ಆಯೋಗಟಿಕೆಟ್ನಾಮಪತ್ರ ಸಲ್ಲಿಕೆಬಿಜೆಪಿ
Share This Article
Facebook Whatsapp Whatsapp Telegram

Cinema Updates

SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post

You Might Also Like

Joe Root
Cricket

ವಿಕೆಟ್‌ ಪಡೆಯಲು ಪರದಾಡಿದ ಬೌಲರ್‌ಗಳು – ಭರ್ಜರಿ 186 ರನ್‌ ಮುನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
39 minutes ago
An intelligence department constable committed suicide in Chikkamagaluru
Chikkamagaluru

ಚಿಕ್ಕಮಗಳೂರು | ಡೆತ್‌ನೋಟ್‌ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Public TV
By Public TV
1 hour ago
Veda Krishnamurthy
Chikkamagaluru

ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ

Public TV
By Public TV
1 hour ago
Mallikarjun Kharge 2
Latest

ಆರ್‌ಎಸ್‌ಎಸ್‌ ವಿಷವಿದ್ದಂತೆ ರುಚಿ ನೋಡಿದ್ರೆ ಸತ್ತು ಹೋಗ್ತೀರಿ: ಮಲ್ಲಿಕಾರ್ಜುನ ಖರ್ಗೆ

Public TV
By Public TV
1 hour ago
Davanagere Drugs Arrest
Crime

ದಾವಣಗೆರೆ | ಮಾದಕ ವಸ್ತು ಮಾರಾಟ ಜಾಲ – ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಐವರು ಬಂಧನ

Public TV
By Public TV
2 hours ago
Siddaramaiah 10
Latest

ಎಐಸಿಸಿ ಒಬಿಸಿ ವಿಭಾಗದ `ಭಾಗೀಧಾರಿ ನ್ಯಾಯ ಸಮ್ಮೇಳನ’ದ ಉದ್ದೇಶ ವಿವರಿಸಿದ ಸಿಎಂ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?