ಉಪಚುನಾವಣೆಗೆ ಬಿಜೆಪಿ ಉಸ್ತುವಾರಿ ನಾಯಕರ ಪಟ್ಟಿ

Public TV
2 Min Read
Arvind Limbavali

ಬೆಂಗಳೂರು: ಉಪಚುನಾವಣಾ ಅಖಾಡಕ್ಕೆ ಬಿಜೆಪಿ ಸಿದ್ಧಗೊಂಡಿದ್ದು, 15 ವಿಧಾನಸಭಾ ಕ್ಷೇತ್ರಗಳಿಗೆ ಉಸ್ತುವಾರಿ ನಾಯಕರ ಪಟ್ಟಿಯನ್ನು ಕಮಲ ಪಾಳಯ ಸಿದ್ಧ ಮಾಡಿಕೊಂಡಿದೆ.

ಅನರ್ಹ ಶಾಸಕರಿಗೆ ಗಿಫ್ಟ್ ಮೇಲೆ ಗಿಫ್ಟ್ ಸಿಗುತ್ತಿದೆ. ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಎಲ್ಲ 15 ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ಬಹುತೇಕ ಪಕ್ಕಾ ಆಗಿದೆ. ಶುಕ್ರವಾರವೇ ರೆಬಲ್ ಶಾಸಕರು ಬಿಜೆಪಿ ಸೇರಲಿದ್ದಾರೆ. ಎಲ್ಲೆಲ್ಲಿ ಆಕ್ಷೇಪ ಅಸಮಾಧಾನ ಕಾಣುತ್ತಿದೆಯೋ ಅಲ್ಲಿ ಮಾತುಕತೆ ನಡೆಸಿ ಶಮನಗೊಳಿಸುವಂತೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

BSY Rebel MLAs

ಚುನಾವಣೆ ನಡೆಯುವ ಕ್ಷೇತ್ರಗಳಿಗೆ ಉಸ್ತುವಾರಿ ನೇಮಿಸಲಾಗಿದ್ದು, ಡಿಸಿಎಂ ಲಕ್ಷ್ಮಣ ಸವದಿಗೆ ಅಥಣಿ ಕ್ಷೇತ್ರದ ಟಿಕೆಟ್ ಕೊಟ್ಟಿಲ್ಲ. ಬದಲಿಗೆ ಅಥಣಿ ಕ್ಷೇತ್ರದ ಉಸ್ತುವಾರಿ ವಹಿಸಲಾಗಿದೆ. ಲಕ್ಷ್ಮಣ ಸವದಿ ವಿಚಾರದಿಂದ ಬಂಡಾಯ ಎದ್ದಿದ್ದ ಉಮೇಶ್ ಕತ್ತಿ ಅವರಿಗೆ ಯಾವ ಉಸ್ತುವಾರಿಯನ್ನೂ ನೀಡಿಲ್ಲ.

ಉಪಚುನಾವಣೆಗೆ ಬಿಜೆಪಿ ಉಸ್ತುವಾರಿ
1. ಅಥಣಿ – ಸಚಿವ ಕೆ.ಎಸ್. ಈಶ್ವರಪ್ಪ, ಡಿಸಿಎಂ ಲಕ್ಷ್ಮಣ ಸವದಿ, ಸಂಸದ ಅಣ್ಣಾ ಸಾಹೇಬ್ ಜೊಲ್ಲೆ
2. ಕಾಗವಾಡ – ಸಚಿವ ಸಿ.ಸಿ.ಪಾಟೀಲ್, ವಿಧಾನ ಪರಿಷತ್ ಮುಖ್ಯ ಸಚೇತಕ ಮಹಾಂತೇಶ್ ಕವಟಗಿಮಟ, ಶಾಸಕರಾದ ಪಿ. ರಾಜೀವ್, ಅರವಿಂದ ಬೆಲ್ಲದ್
3. ಗೋಕಾಕ್ – ಕೇಂದ್ರ ಸಚಿವ ಸುರೇಶ್ ಅಂಗಡಿ, ಸಚಿವೆ ಶಶಿಕಲಾ ಜೊಲ್ಲೆ, ಶಾಸಕರಾದ ಅಭಯ ಪಾಟೀಲ್, ಎ.ಎಸ್.ಪಾಟೀಲ್ ನಡಹಳ್ಳಿ
4. ಯಲ್ಲಾಪುರ – ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ಅನಂತಕುಮಾರ್ ಹೆಗಡೆ, ಶಾಸಕರಾದ ಸುನೀಲ್ ಕುಮಾರ್, ಹರೀಶ್ ಪೂಂಜಾ
5. ಹಿರೇಕೆರೂರು – ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಯು.ಬಿ. ಬಣಕಾರ್
6. ರಾಣೆಬೆನ್ನೂರು – ಸಚಿವ ಜಗದೀಶ್ ಶೆಟ್ಟರ್, ಸಚಿವ ಪ್ರಭು ಚೌಹಾಣ್, ಸಂಸದ ಜಿ.ಎಂ. ಸಿದ್ದೇಶ್ವರ, ಶಿವಮೊಗ್ಗ ಬಿಜೆಪಿ ಮುಖಂಡ ಗಿರೀಶ್ ಪಟೇಲ್
7. ವಿಜಯನಗರ – ಡಿಸಿಎಂ ಗೋವಿಂದ ಕಾರಣಜೋಳ, ಎಂಎಲ್‍ಸಿ ರವಿಕುಮಾರ್, ಸಂಸದ ಸಂಗಣ್ಣ ಕರಡಿ, ಬಿಜೆಪಿ ಪರಾಜಿತ ಅಭ್ಯರ್ಥಿ ಗವಿಯಪ್ಪ

Rebel MLAs Sofitel 0

8. ಚಿಕ್ಕಬಳ್ಳಾಪುರ – ಸಚಿವ ಸಿ.ಟಿ.ರವಿ, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಸಂಸದ ಪಿ.ಸಿ. ಮೋಹನ್, ಸಂಸದ ಬಿ.ಎನ್.ಬಚ್ಚೇಗೌಡ, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಮಂಜುನಾಥ್
9. ಕೆ.ಆರ್.ಪುರಂ – ಸಚಿವ ಆರ್.ಅಶೋಕ್, ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಶಾಸಕ ಸತೀಶ್ ರೆಡ್ಡಿ
10. ಯಶವಂತಪುರ – ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಎಂ.ಕೃಷ್ಣಪ್ಪ, ಮಾಜಿ ಎಂಎಲ್‍ಸಿಗಳಾದ ಅಶ್ವಥ್ ನಾರಾಯಣ, ಜಗ್ಗೇಶ್
11. ಮಹಾಲಕ್ಷ್ಮಿಲೇಔಟ್ – ಸಚಿವ ವಿ. ಸೋಮಣ್ಣ, ಸಚಿವ ಸುರೇಶ್ ಕುಮಾರ್, ಬಿಜೆಪಿ ರಾಜ್ಯ ಖಜಾಂಚಿ ಸುಬ್ಬನರಸಿಂಹ
12. ಶಿವಾಜಿನಗರ – ಬೆಂಗಳೂರು ಮಹಾನಗರ ಅಧ್ಯಕ್ಷ ಪಿ.ಎನ್. ಸದಾಶಿವ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಎಸ್. ಮುನಿರಾಜು, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನಾ, ಶಾಸಕ ಎಸ್. ರಘು
13. ಹೊಸಕೋಟೆ – ಡಿಸಿಎಂ ಡಾ.ಅಶ್ವಥ್ ನಾರಾಯಣ, ಸಿಎಂ ರಾಜಕೀಯ ಕಾರ್ಯದರ್ಶ ಎಸ್. ಅರ್. ವಿಶ್ವನಾಥ್, ಎಂಎಲ್ಸಿ ವೈ.ಎ. ನಾರಾಯಣಸ್ವಾಮಿ
14. ಕೆ.ಆರ್. ಪೇಟೆ – ಸಚಿವ ಜೆ.ಸಿ. ಮಾಧುಸ್ವಾಮಿ, ಯುವ ಮೋರ್ಛಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ, ಶಾಸಕ ಪ್ರೀತಂಗೌಡ
15. ಹುಣಸೂರು – ಸಚಿವ ಶ್ರೀರಾಮುಲು, ಮಾಜಿ ಸಚಿವ ವಿಜಯ್ ಶಂಕರ್, ಸಂಸದ ಪ್ರತಾಪ್ ಸಿಂಹ, ಶಾಸಕ ಅಪ್ಪಚ್ಚು ರಂಜನ್

Share This Article
Leave a Comment

Leave a Reply

Your email address will not be published. Required fields are marked *