Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಪಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಧೂಳಿಪಟ – ಅರಳಿದ ಕಮಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಉಪಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಧೂಳಿಪಟ – ಅರಳಿದ ಕಮಲ

Bengaluru City

ಉಪಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಧೂಳಿಪಟ – ಅರಳಿದ ಕಮಲ

Public TV
Last updated: December 9, 2019 4:49 pm
Public TV
Share
3 Min Read
BJP FLAG 2 copy
SHARE

– ಹಳ್ಳಿಹಕ್ಕಿಗೆ ಶಾಕ್, ನಿಟ್ಟುಸಿರು ಬಿಟ್ಟ ರಿಜ್ವಾನ್ ಅರ್ಷದ್
– ಅರ್ಹತಾ ಪರೀಕ್ಷೆಯಲ್ಲಿ ಪಾಸಾದ ಶಾಸಕರು
– ಹೊಸಕೋಟೆಯಲ್ಲಿ ಗೆದ್ದ ಸ್ವಾಭಿಮಾನದ ಮಂತ್ರ

ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಉಪ ಚುನಾವಣೆಯ ಅಗ್ನಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಸರ್ಕಾರವನ್ನು ಭದ್ರ ಮಾಡಿಕೊಂಡಿದ್ದಾರೆ. ಮೈತ್ರಿ ಸರ್ಕಾರ ಬೀಳಿಸಿದವರನ್ನು ಚುನಾವಣೆಯಲ್ಲಿ ಸೋಲಿಸಬೇಕೆಂದು ಪಣ ತೊಟ್ಟಿದ್ದ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಮುಖಭಂಗವಾಗಿದೆ. ಜೆಡಿಎಸ್ ತೆಕ್ಕೆಯಲ್ಲಿದ್ದ ಹುಣಸೂರನ್ನು ಕೈ ವಶ ಮಾಡಿಕೊಂಡಿದೆ. ಇತ್ತ ಶಿವಾಜಿ ನಗರದಲ್ಲಿ ಗೆಲುವು ದಾಖಲಿಸಿ ಕ್ಷೇತ್ರವನ್ನು ಉಳಿಸಿಕೊಂಡಿದೆ. ಇತ್ತ ಜೆಡಿಎಸ್ ಖಾತೆ ತರೆಯದೇ ತೀವ್ರ ಹಿನ್ನಡೆಯನ್ನು ಅನುಭವಿಸಿದೆ. ಮೊದಲ ಬಾರಿಗೆ ಜೆಡಿಎಸ್ ಕೋಟೆಯಲ್ಲಿ ಕಮಲದ ಬಾವುಟ ಹಾರಿಸಿ ಬಿಜೆಪಿ ಇತಿಹಾಸ ಸೃಷ್ಟಿಸಿದೆ. ಇದನ್ನೂ ಓದಿ: 43 ರೋಡ್ ಶೋ, 10 ಬೈಕ್ ರ‍್ಯಾಲಿ – ತವರಿನಲ್ಲಿ ಅಪ್ಪನ ಕೈಲಾಗದ್ದು ಮಗನಿಗೆ ಸಾಧ್ಯವಾಗಿದ್ದು ಹೇಗೆ?

15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 12 ಬಿಜೆಪಿ, 2 ಕಾಂಗ್ರೆಸ್ ಮತ್ತು ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಿದ್ದಾರೆ. ತನ್ನ ಮೂರು ಕ್ಷೇತ್ರಗಳನ್ನು ಉಳಿಸಿಕೊಳ್ಳಲು ಜೆಡಿಎಸ್ ವಿಫಲವಾಗಿದೆ ಕಾಂಗ್ರೆಸ್ 13ರಲ್ಲಿ 2 ಮಾತ್ರ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದನ್ನೂ ಓದಿ: ಸಿದ್ದು ಅಭಿಮಾನಿಗಳಿಗೆ ಹುಲಿಯಾ, ಮತದಾರರ ದೃಷ್ಟಿಯಲ್ಲಿ ಇಲಿಯಾ : ಸಿಟಿ ರವಿ

rizwan arshad App

ಸಿದ್ದರಾಮಯ್ಯನವರ ಏಕಾಂಗಿ ಪ್ರಚಾರ ಮತ್ತು ತಂತ್ರಗಳು ಬುಡಮೇಲಾಗಿದ್ದು, ಬಿಜೆಪಿ ರಾಜಕೀಯ ಲೆಕ್ಕಾಚಾರಗಳು ಕೆಲಸ ಮಾಡಿವೆ. ಕೆ.ಆರ್.ಪೇಟೆ ಮತ್ತು ಯಶವಂತಪುರದಲ್ಲಿ ಬಿಜೆಪಿಗೆ ತೀವ್ರ ಸ್ಪರ್ಧೆ ನೀಡಿದ್ದ ಜೆಡಿಎಸ್ ಕೊನೆಯ ಹಂತದಲ್ಲಿ ಕೈ ಚೆಲ್ಲಿತು. ಶಿವಾಜಿ ನಗರದಲ್ಲಿ ಬಿಜೆಪಿಯ ಸರವಣರನ್ನು ಕಟ್ಟಿ ಹಾಕಿ ರಿಜ್ವಾನ್ ಅರ್ಷದ್ ನಿಟ್ಟುಸಿರು ಬಿಟ್ಟಿದ್ದಾರೆ. ಹುಣಸೂರಿನಲ್ಲಿ ಗೆಲ್ಲುತ್ತೇನೆ ಎಂಬ ವಿಶ್ವಾಸದಲ್ಲಿದ್ದ ಹೆಚ್.ವಿಶ್ವನಾಥ್ ಅವರಿಗೆ ಮತದಾರರು ಶಾಕ್ ನೀಡಿದ್ದು, ಕೈ ಅಭ್ಯರ್ಥಿ ಮಂಜುನಾಥ್ ಅವರನ್ನು ಗೆಲ್ಲಿಸಿದ್ದಾರೆ. ಇದನ್ನೂ ಓದಿ: ಸಿಎಲ್‍ಪಿ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಹೊಸಕೋಟೆಯಲ್ಲಿ ಬಿಜೆಪಿಯಿಂದ ಹೊರ ಬಂದಿದ್ದ ಶರತ್ ಬಚ್ಚೇಗೌಡ ಗೆಲುವಿನ ಮಾಲೆ ಧರಿಸಿದ್ದಾರೆ. ತಮ್ಮ ಪ್ರಚಾರದುದ್ದಕ್ಕೂ ಸ್ವಾಭಿಮಾನ ಮಂತ್ರವನ್ನೇ ಶರತ್ ಬಚ್ಚೇಗೌಡರು ಜಪಿಸಿದ್ದರು. ನಾನೇ ಗೆಲ್ಲೋದು ಎಂದು ಹೇಳುತ್ತಿದ್ದ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅನರ್ಹರಾಗಿಯೇ ಉಳಿದುಕೊಂಡಿದ್ದಾರೆ. ಕಾಂಗ್ರೆಸ್ ನಿಂದ ಕಣಕ್ಕಿಳಿದಿದ್ದ ಶಾಸಕ ಬೈರತಿ ಸುರೇಶ್ ಪತ್ನಿ ಪದ್ಮಾವತಿ ಸುರೇಶ್ ಮೂರನೇ ಸ್ಥಾನ ತಲುಪಿದ್ದಾರೆ. ಇದನ್ನೂ ಓದಿ: ‘ಪವಿತ್ರ’ ಮತ್ತು ‘ಸುಭದ್ರ’ ಸರ್ಕಾರಕ್ಕೆ ಮುದ್ರೆ ಒತ್ತಿದ್ದಕ್ಕೆ ಅಭಿನಂದನೆಗಳು- ಹೆಚ್‍ಡಿಕೆ ಲೇವಡಿ

mys vishwanath

ಲೋಕಸಭಾ ಚುನಾವಣೆಯಲ್ಲಿ ಎರಡು ಬಾರಿ ಬೆಂಗಳೂರು ಕೇಂದ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದ ರಿಜ್ವಾನ್ ಅರ್ಷದ್ ಅವರನ್ನು ಕಾಂಗ್ರೆಸ್ ಶಿವಾಜಿ ನಗರದಿಂದ ಕಣಕ್ಕಿಳಿಸಿತ್ತು. ಹಲವರ ವಿರೋಧದ ನಡುವೆಯೂ ಟಿಕೆಟ್ ಪಡೆದಿದ್ದ ರಿಜ್ವಾನ್ ಅರ್ಷದ್ ಅವರಿಗೆ ಉಪ ಚುನಾವಣೆಯ ಗೆಲುವು ರಾಜಕೀಯ ಅಸ್ತಿತ್ವದ ಪ್ರಶ್ನೆಯಾಗಿತ್ತು. ಮಾಜಿ ಸಚಿವ ರೋಷನ್ ಬೇಗ್ ಕಾಂಗ್ರೆಸ್ ಕಾರ್ಪೋರೇಟರ್ ಗಳನ್ನು ಬಿಜೆಪಿಯತ್ತ ಸೆಳೆದು, ರಿಜ್ವಾನ್ ಅರ್ಷದ್ ಗೆ ಶಾಕ್ ನೀಡಿದ್ದರು. ಶಿವಾಜಿನಗರದ ಉಪಚುನಾವಣೆಯಲ್ಲಿ ಗೆಲ್ಲುವ ಮೂಲಕ ರಿಜ್ವಾನ್ ಅರ್ಷದ್ ದೀರ್ಘವಾದ ಉಸಿರು ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ

HDK 3

15ರಲ್ಲಿ 12 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದ ಜೆಡಿಎಸ್ ಉಪ ಚುನಾವಣೆಯಲ್ಲಿ ಶೂನ್ಯ ಸುತ್ತಿದೆ. ಹೊಸಕೋಟೆಯಲ್ಲಿ ಪಕ್ಷೇತರ ಅಭ್ಯರ್ಥಿಗೆ ಶರತ್ ಬಚ್ಚೇಗೌಡರಿಗೆ ಜೆಡಿಎಸ್ ಬೆಂಬಲ ನೀಡಿ ಯಾರನ್ನು ಕಣಕ್ಕಿಳಿಸಿರಲಿಲ್ಲ. ಅಥಣಿ ಮತ್ತು ಹಿರೇಕೆರೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದುಕೊಂಡಿದ್ದರು. ಚಿಕ್ಕಬಳ್ಳಾಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್, ಕೆ.ಆರ್.ಪೇಟೆಯಲ್ಲಿ ಜೆಡಿಎಸ್ ಭರ್ಜರಿ ಪ್ರಚಾರ ನಡೆಸಿತ್ತು. ಇದನ್ನೂ ಓದಿ: ಅಗ್ನಿ ಪರೀಕ್ಷೆಯಲ್ಲಿ ಬಿಎಸ್‍ವೈ ಪಾಸ್ – ಯಾವ ಕ್ಷೇತ್ರದಲ್ಲಿ ಎಷ್ಟು ವೋಟ್ ಬಿದ್ದಿದೆ? ಅಂತರ ಎಷ್ಟು ಹೆಚ್ಚಾಗಿದೆ?

ಉಪಚುನಾವಣೆಯಲ್ಲಿ ಗೆದ್ದು ಬೀಗಿದ ಅಭ್ಯರ್ಥಿಗಳು
1. ಯಶವಂತಪುರ- ಎಸ್.ಟಿ.ಸೋಮಶೇಖರ್ (ಬಿಜೆಪಿ)
2. ಮಹಾಲಕ್ಷ್ಮಿ ಲೇಔಟ್- ಕೆ.ಗೋಪಾಲಯ್ಯ (ಬಿಜೆಪಿ)
3. ಕೆ.ಆರ್.ಪುರಂ- ಬೈರತಿ ಬಸವರಾಜು (ಬಿಜೆಪಿ)
4. ಶಿವಾಜಿ ನಗರ- ರಿಜ್ವಾನ್ ಅರ್ಷದ್ (ಕಾಂಗ್ರೆಸ್)
5. ಹೊಸಕೋಟೆ- ಶರತ್ ಬಚ್ಚೇಗೌಡ (ಪಕ್ಷೇತರ)
6. ಚಿಕ್ಕಬಳ್ಳಾಪುರ – ಸುಧಾಕರ್ ಕೆ. (ಬಿಜೆಪಿ)
7. ಕೆ.ಆರ್.ಪೇಟೆ – ನಾರಾಯಣ ಗೌಡ (ಬಿಜೆಪಿ)
8. ಹುಣಸೂರು – ಹೆಚ್.ಪಿ.ಮಂಜುನಾಥ್ (ಕಾಂಗ್ರೆಸ್)
9. ಹಿರೇಕೆರೂರು- ಬಿ.ಸಿ.ಪಾಟೀಲ್ (ಬಿಜೆಪಿ)
10. ರಾಣೇಬೆನ್ನೂರು – ಅರುಣ್ ಕುಮಾರ್ (ಬಿಜೆಪಿ)
11. ಕಾಗವಾಡ – ಶ್ರೀಮಂತ್ ಪಾಟೀಲ್ (ಬಿಜೆಪಿ)
12. ಅಥಣಿ- ಮಹೇಶ್ ಕುಮಟಳ್ಳಿ (ಬಿಜೆಪಿ)
13. ಗೋಕಾಕ್ – ರಮೇಶ್ ಜಾರಕಿಹೊಳಿ (ಬಿಜೆಪಿ)
14. ವಿಜಯನಗರ – ಆನಂದ್ ಸಿಂಗ್ (ಬಿಜೆಪಿ)
15. ಯಲ್ಲಾಪುರ – ಶಿವರಾಂ ಹೆಬ್ಬಾರ್ (ಬಿಜೆಪಿ)

TAGGED:bjpBy Election ResultcongressjdsKarnataka By ElectionPublic TVಉಪಚುನಾವಣೆ ಫಲಿತಾಂಶಕರ್ನಾಟಕ ಉಪಚುನಾವಣೆಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Virtual Court Proceedings
Court

ದೆಹಲಿ ಹೈಕೋರ್ಟ್ ಸಿಜೆಐ ಪೀಠದ ವರ್ಚುವಲ್‌ ವಿಚಾರಣೆ ವೇಳೆ ಕಾಣಿಸಿದ ಅಶ್ಲೀಲ ವೀಡಿಯೋ

Public TV
By Public TV
7 minutes ago
exit polls
Latest

Exit Polls 2026 Live: ಬಿಜೆಪಿ ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲಿ BJP ಹ್ಯಾಟ್ರಿಕ್;‌ ತ.ನಾಡಲ್ಲಿ ಡಿಎಂಕೆಗೆ ಮತ್ತೆ ಅಧಿಕಾರ

Public TV
By Public TV
8 minutes ago
TVK Vijay
Latest

Axis my India Exit Poll Results | ತನ್ನ ಚೊಚ್ಚಲ ಚುನಾವಣೆಯಲ್ಲೇ ವಿಜಯ್‌ ಮ್ಯಾಜಿಕ್ – ದಳಪತಿಗೆ ಪಟ್ಟ!

Public TV
By Public TV
11 minutes ago
Siddaramaiah 4
Bengaluru City

ಬೌರಿಂಗ್‌ ಆಸ್ಪತ್ರೆಯ ಗೋಡೆ ಕುಸಿದು 7 ಮಂದಿ ಸಾವು – ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
26 minutes ago
NDA To Get Second Straight Term In Puducherry With 16 20 Of 30 Seats Exit Poll
Latest

Exit Polls – ಪುದುಚೇರಿಯಲ್ಲಿ ಮತ್ತೆ ಎನ್‌ಡಿಎ ಅಧಿಕಾರಕ್ಕೆ

Public TV
By Public TV
43 minutes ago
pm modi 5
Latest

Exit Poll| ಪಶ್ಚಿಮ ಬಂಗಾಳದಲ್ಲಿ ಫಸ್ಟ್‌ ಟೈಂ ಬಿಜೆಪಿ ಅಧಿಕಾರಕ್ಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?