ಪಕ್ಷೇತರರಿಗೆ ಸ್ಥಾನ ನೀಡಿ ಆಪರೇಷನ್ ಕಮಲಕ್ಕೆ ಬ್ರೇಕ್: ಸಚಿವ ಬಂಡೆಪ್ಪ ಕಾಶೆಂಪುರ

Public TV
1 Min Read
BANDEAPPA KASHEMPURA

ಬೀದರ್: ಮೈತ್ರಿ ಸರ್ಕಾರದಲ್ಲಿ ಇಬ್ಬರು ಪಕ್ಷೇತರರಿಗೆ ಸಚಿವ ಸ್ಥಾನ ನೀಡುವ ಮೂಲಕ ಆಪರೇಷನ್ ಕಮಲಕ್ಕೆ ಬ್ರೇಕ್ ಹಾಕಿದ್ದೇವೆ ಎಂದು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶೆಂಪೂರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯವರು ಆಪರೇಷನ್ ಕಮಲ ಮಾಡುವ ಪ್ರಯತ್ನ ಮಾಡಿದ್ದರು. ಆದರೆ ಈಗ ಅವರಿಗೆ ಸೆಟ್ ಬ್ಯಾಕ್ ಆಗಿದ್ದು, ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಪಕ್ಷದಲ್ಲಿ, ಜೆಡಿಎಸ್ ಶಾಸಕರು ಜೆಡಿಎಸ್ ಪಕ್ಷದಲೇ ಇರುತ್ತಾರೆ. ಇಬ್ಬರು ಪಕ್ಷೇತರರು ನಮ್ಮ ಕಡೆ ಬಂದ ಕಾರಣ ಈ ಸರ್ಕಾರ ಸುಭದ್ರವಾಗಿದೆ ಎಂದರು.

ಶಾಸಕ ಸುಧಾಕರ್ ಹಾಗೂ ಬಿಸಿ ಪಾಟೀಲ್ ಸಚಿವ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನಗೊಂಡ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಚಿವರಾಗಬೇಕೆಂಬ ಅಪೇಕ್ಷೆ ಎಲ್ಲರಿಗೂ ಇರುತ್ತೆ. ಈ ಅಸಮಾಧಾನವನ್ನು ಎರಡು ಪಕ್ಷದ ಹೈಕಮಾಂಡ್ ಸರಿಪಡಿಸಲಿದ್ದಾರೆ ಎಂದರು.

rajabhavana oath

Share This Article
Leave a Comment

Leave a Reply

Your email address will not be published. Required fields are marked *