Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕುಟಿಲ ಕೂಟದ ಕೋಟೆಯಲ್ಲಿ ರಾಜಾಹುಲಿ..!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Column | ಕುಟಿಲ ಕೂಟದ ಕೋಟೆಯಲ್ಲಿ ರಾಜಾಹುಲಿ..!

Column

ಕುಟಿಲ ಕೂಟದ ಕೋಟೆಯಲ್ಲಿ ರಾಜಾಹುಲಿ..!

Public TV
Last updated: February 5, 2020 8:51 pm
Public TV
Share
5 Min Read
yeddyurappa bsy serious thinking
SHARE

ದಿವಾಕರ್
ಆತ್ಮಾಭಿಮಾನ, ಆತ್ಮಗೌರವ, ಆತ್ಮಸಾಕ್ಷಿ…! ಈ ಕಾಲಘಟ್ಟದ ರಾಜಕೀಯ ಕೃಷಿಯಲ್ಲಿ ಈ ಮೂರು ಆತ್ಮಗಳಿಗೆ No vacancy..! ರಾಜಕೀಯ ಚಾಕರಿಯಲ್ಲಿ ಇವುಗಳಿಗೆ ಇಂಚಗಲ ಜಾಗವಿಲ್ಲ. ಇತ್ತೀಚಿನ ಕೆಲ ಆಂತರಿಕ ಬೆಳವಣಿಗೆಗಳಿಂದ ರೋಸಿ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಂತರಾತ್ಮವೂ ಇಂದು ಇದೇ ರೀತಿ ಚಿಂತಿಸುತ್ತಾ ವರ್ತಮಾನದ ಸ್ಥಿತಿಗತಿಗೆ ಅಯ್ಯೋ ಅಂತ ಮರಗುತ್ತಿರಬಹುದು..!

DIVAKAR Public TV

‘ಕಾಲ’ದ ಮನಸ್ಥಿತಿಯೇ ನಿಗೂಢ. ಕೆಲವೊಮ್ಮೆ ಅದು ಕರುಣಾಮಯಿಯೂ..,ಹಾಗೆ ಕೆಲವೊಮ್ಮೆ ನಿರ್ದಯಿಯೂ ಆಗಿರುತ್ತದೆ. ಕಳೆದ ವರ್ಷ 17 ಶಾಸಕರು ದಂಗೆ ಎದ್ದು ಕುಮಾರಸ್ವಾಮಿ ಅವರನ್ನು ಕುರ್ಚಿಯಿಂದ ಕೆಡವಿ, ಬಿಜೆಪಿಗೆ ಸಿಂಹಾಸನ ತಂದುಕೊಟ್ಟ ಟೈಂ ಇದ್ಯಲ್ಲ ಅದು ಯಡಿಯೂರಪ್ಪ ಪಾಲಿಗೆ ಗೋಲ್ಡನ್ ಟೈಂ. ಅಂದ್ರೆ ಬಿಎಸ್ ವೈ ವಿಚಾರದಲ್ಲಿ ಆ ವೇಳೆಯನ್ನು ದಯಾಮಯಿ ಕಾಲ ಅನ್ನಬಹುದು. ಆದ್ರೆ ಅದರ ನಂತರದ್ದು ನಿರ್ದಯಿ ಕಾಲ..!

ಹೌದು , ಯಾರೂ ನೇರಾನೇರ ಟಚ್ ಮಾಡದೇ ಇದ್ದರೂ ಯಡಿಯೂರಪ್ಪನವರ ಟೈಂ ಕೆಟ್ಟು ಬಹಳ ದಿನಗಳೇ ಆಗಿದೆ. ಯಾಕೆಂದರೆ ರಾಜಾಹುಲಿ ಬಿರುದಾಂಕಿತ ಯಡಿಯೂರಪ್ಪನವರು ಪಂಜರದಲ್ಲಿ ಬಂಧಿಯಾಗಿ ಅಥವಾ ಹೈಕಮಾಂಡ್ ‘ಪಂಜ’ ದಲ್ಲಿ ಸಿಕ್ಕಿ ನರಳುತ್ತಿರೋದು ಗುಟ್ಟಾಗೇನು ಉಳಿದಿಲ್ಲ. ಕಾಂಗ್ರೆಸ್ ನಲ್ಲಿರುವ ಜೀ ಹುಜೂರ್ ಎಂಬ ವೈರಸ್ಸು ಬಿಜೆಪಿಯಲ್ಲೂ ಸ್ಥಾನ ಭದ್ರಪಡಿಸಿಕೊಂಡಂತೆ ಭಾಸವಾಗುತ್ತಿದೆ.

tmk modi bsy 5ಒಳ್ಳೆಯದ್ದೋ..ಕೆಟ್ಟದ್ದೋ..ಅಕ್ರಮವೋ..ಸಕ್ರಮವೋ..ಅದು ಬೇರೆ ವಿಚಾರ. ಒಟ್ಟಿನಲ್ಲಿ ಆ 17 ಶಾಸಕರು ಅನರ್ಹ ಅಸ್ತ್ರಕ್ಕೂ ಕೇರ್ ಮಾಡದೇ ರಾಜೀನಾಮೆ ಕೊಟ್ಟು ರಾಜಾಹುಲಿಗೆ ರಾಜಪಟ್ಟ ಕಟ್ಟದಿದ್ದರೆ , ಯಡಿಯೂರಪ್ಪ ಸಿಎಂ ಆಗುತ್ತಿದ್ದರಾ ಹೇಳಿ..! ಕೋರ್ಟು – ಕಚೇರಿ ಅಲೆದು, ಅದ್ಹೇಗೋ ಎಲೆಕ್ಷನ್ ಗೆ ನಿಲ್ಲಲು ಪರ್ಮಿಷನ್ ಪಡೆದು , ಗೆದ್ದು ಬಂದು ಎರಡು ತಿಂಗಳ ಆಗುತ್ತಾ ಬಂತು. ಇನ್ನೂ ಅಚ್ಛೇದಿನ್ ಬಂದಿಲ್ಲ.

ಗೆದ್ದ 24 ಗಂಟೆಯಲ್ಲೇ ಸಚಿವ ಸ್ಥಾನ ಪಕ್ಕಾ ಅಂತ ಮಾತು ಕೊಟ್ಟಿದ್ದ ಯಡಿಯೂರಪ್ಪ ಪಾಪ ಹೈಕಮಾಂಡ್ ಇಕ್ಕಳದಲ್ಲಿ ಸಿಕ್ಕಿ ವಿಲ ವಿಲ ಒದ್ದಾಡುತ್ತಿದ್ದಾರೆ. ಭವತಿ ಭಿಕ್ಷಾಂದೇಹಿ ಅಂತ ಭಿಕ್ಷಾ ಪಾತ್ರೆ ಹಿಡಿದು ನಿಂತಿರುವ ಅವರಿಗೆ ಮುಂದಕ್ಕೆ ಹೋಗು… ನಾಳೆ ಬಾ ಅನ್ನೋ ಸಿದ್ದ ಉತ್ತರ ಸಿಗುತ್ತಿದೆ. ಒಬ್ಬ ಶಕುನಿಯೇ ಸಾಕಾಯ್ತು ಮಹಾಭಾರತದ ಕುರುಕ್ಷೇತ್ರಕ್ಕೆ. ಇನ್ನು ಹತ್ತಾರು ಶಕುನಿಗಳ ಕುಟಿಲ ಕೂಟವಿದ್ದರೆ ಇನ್ನೇನೆಲ್ಲಾ ಆಗಬಹುದು ಊಹಿಸಿ. ರಾಜ್ಯ ಬಿಜೆಪಿಯಲ್ಲೂ ಇಂಥದ್ದೇ ಕೃತ್ರಿಮ ಕೂಟ ಇದ್ದಂತಿದೆ. ಚುನಾವಣೆಯಲ್ಲಿ ಮೂರು ಮುಕ್ಕಾಲು ಮತ ಸಂಪಾದಿಸುವ ಯೋಗ್ಯತೆ ಇಲ್ಲದಿದ್ದರೂ , ಯಡಿಯೂರಪ್ಪ ವಿರುದ್ಧ ಚಾಡಿ ಚುಚ್ಚುವ ಕೆಲಸ ಮಾಡುತ್ತಾ ಬೇಳೆ ಬೇಯಿಸಿಕೊಳ್ಳುತ್ತಿದೆ ಆ ಕುಟಿಲ ಕೂಟ.

yeddyurappa budget e1578479692458

ಯಾರು ಏನೇ ಹೇಳಲಿ.., ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಶ್ರೇಯ ಯಡಿಯೂರಪ್ಪ ಅವರಿಗೇ ಸಲ್ಲಬೇಕು. ಯಡಿಯೂರಪ್ಪ ಬಿಜೆಪಿ ಬಿಟ್ಟು ಹೊಸ ಪಕ್ಷ ಕಟ್ಟಿದಾಗ ಏನಾಯ್ತು ಅನ್ನೋದು ಎಲ್ಲರಿಗೂ ಗೊತ್ತೇ ಇದೆ. ಹೀಗಾಗಿ ಯಡಿಯೂರಪ್ಪ ರಾಜ್ಯ ಬಿಜೆಪಿಯ ಅಗ್ರನಾಯಕ ಅನ್ನೋದ್ರಲ್ಲಿ ಎಳ್ಳಷ್ಟೂ ಸಂಶಯವಿಲ್ಲ. ಹೀಗಿದ್ದೂ , ಯಡಿಯೂರಪ್ಪ ಅವರ ಬಲ ಗೊತ್ತಿದ್ದೂ ದಿಲ್ಲಿಯಲ್ಲಿ ಕುಂತವರು ಈ ರೀತಿ ವರ್ತಿಸುತ್ತಿರೋದು ಅದೆಷ್ಟು ಸರಿ..! ಯಡಿಯೂರಪ್ಪ ವಿರುದ್ಧ ಸದಾ ಕೆಂಗಣ್ಣು ಬಿಟ್ಟುಕೊಂಡು ದುರು ದುರು ಅಂತ ನೋಡೋದು ತಪ್ಪಲ್ಲವಾ..?

ಮೊನ್ನೆ ತುಮಕೂರಿನಲ್ಲಿ ಮೋದಿ ಎದುರು ವೀರಾವೇಷದಿಂದ ಗುಡುಗಿ ಗಂಡುಗಲಿಯಾಗಿದ್ದ ಯಡಿಯೂರಪ್ಪನವರು ಅದೇಕೋ ಅಮಿತ್ ಶಾ ಬಂದಾಗ ಮೆತ್ತಗಾಗಿ ಹೋಗಿದ್ದರು. ಬೆಂಗಳೂರಿನಿಂದ ಹುಬ್ಬಳ್ಳಿವರೆಗೆ ವಿಮಾನದಲ್ಲಿ ಒಟ್ಟಿಗೆ ಹೋದರಾದರೂ, ಸಂಪುಟ ವಿಸ್ತರಣೆಗೆ ಅಮಿತ್ ಶಾ ಕರಾರುವಾಕ್ ಆಗಿ ಗ್ರೀನ್ ಸಿಗ್ನಲ್ ಕೊಡಲೇ ಇಲ್ಲ. ಆದೇಶ ನಮ್ಮ ಕೆಲಸ.. ಆ ಆದೇಶಕ್ಕಾಗಿ ಕಾಯುವುದಷ್ಟೇ ನಿಮ್ಮ ಕೆಲಸ ಅಂತ ಅಮಿತ್ ಶಾ ‘ಶಾ’ಕ್ ಕೊಟ್ಟಂತಿತ್ತು. ಬಹಳ ಅಚ್ಚರಿಯ ವಿಷಯ ಏನಂದ್ರೆ , ಮೋದಿ ಹಾಗೂ ಅಮಿತ್ ಶಾ ರಾಜ್ಯಕ್ಕೆ ಬಂದಾಗಲೆಲ್ಲಾ ಭಾಷಣದ ವೇಳೆ ಯಡಿಯೂರಪ್ಪ ಅವರನ್ನು ಅಗ್ರಗಣ್ಯ ನಾಯಕ ಅಂತಲೇ ಸಂಬೋಧಿಸುತ್ತಾರೆ. ಆದ್ರೆ ಆ ಬೆಣ್ಣೆ ಮಾತು ಆ ಸಮಯಕ್ಕಷ್ಟೇ ಸೀಮಿತ. ಮಿಕ್ಕಂತೆ ಏಕ್ ಮಾರ್ ದೋ ತುಕ್ಡಾ..!

bjp minister yeddyurppa

ರಾಜಕೀಯ ಅಂತಲ್ಲ ಯಾವುದೇ ಕ್ಷೇತ್ರವಾದರೂ ಏಕವ್ಯಕ್ತಿ ಪೂಜೆಗೆ ಆಸ್ಪದ ಕೊಡಬಾರದು. ಏಕವ್ಯಕ್ತಿ ಪ್ರಾಮುಖ್ಯತೆ…ಏಕವ್ಯಕ್ತಿ ಬಾಹುಳ್ಯತೆ ಇರಬಾರದು ನಿಜ. ಹಾಗಂತ ಒಬ್ಬ ನಾಯಕ ನೇಪಥ್ಯಕ್ಕೆ ಹೋಗುತ್ತಿದ್ದಂತೆ , ಆ ವ್ಯಕ್ತಿ ಬಿಟ್ಟ ಜಾಗ ತುಂಬಲು ನಾಲ್ಕಾರು ಮಂದಿಯಾದರೂ ಇರಬೇಕಲ್ಲವೇ..!? ಹಾಗಾದ್ರೆ ಬಿಜೆಪಿಯಲ್ಲಿ ಯಡಿಯೂರಪ್ಪ ನಂತರ ಅಂತ ಮಾಸ್ ಲೀಡರ್ ಯಾರಾದ್ರೂ ಇದ್ದಾರಾ..? ಮತಗಳನ್ನು ಬಾಚಿ ಬಾಚಿ ಬಿಜೆಪಿಯ ಬುಟ್ಟಿಗೆ ಹಾಕಿಸೋ ಧೀರೋದಾತ್ತರು , ಪ್ರಚಂಡ ಪರಾಕ್ರಮಿಗಳು , ಬಾಹುಬಲಿಗಳು ಇದ್ದಾರಾ..? ಇದ್ದರೆ ಹೇಳಿ..ನಮಗೂ ಜ್ಞಾನೋದಯವಾಗಲಿ..!!

ಇನ್ನು , ಅರ್ಹರಿಗೆ ಅಧಿಕಾರ ಹಂಚುವ ವಿಚಾರದಲ್ಲಿ ಬಿಜೆಪಿಯಲ್ಲಿ ಏಕಾಭಿಪ್ರಾಯವಿಲ್ಲ. ಭಿನ್ನಾಭಿಪ್ರಾಯವೇ ಹೆಚ್ಚು. ಅವರಿಂದಾಗಿಯೇ ಅಧಿಕಾರ ಪಡೆದು ಮಂತ್ರಿ ಆದ ಕೆಲ ಮಹೋದಯರು ಬೇಕಾಬಿಟ್ಟಿ ಮಾತುಗಳನ್ನಾಡುತ್ತಾ ಬೇಕಂತಲೇ ತಿಳಿಯಾದ ಕೊಳಕ್ಕೆ ಕಲಹದ ಕಲ್ಲುಗಳನ್ನು ತೂರುತ್ತಿದ್ದಾರೆ.

Yeddyurppa Vidhansabha Session 3

ಇಲ್ಲಿ ಯಡಿಯೂರಪ್ಪ ಅವರಲ್ಲೂ ಸಮಸ್ಯೆ ಇದ್ದಂತಿದೆ. ದಿಲ್ಲಿ ದೊರೆಗಳ ನಿಲುವನ್ನು ದೊಡ್ಡ ಧ್ವನಿಯಲ್ಲಿ ಆಕ್ಷೇಪಿಸುವುದಿಲ್ಲ.ಖಂಡತುಂಡವಾಗಿ ವಿರೋಧಿಸುವುದಿಲ್ಲ. ಎಲ್ಲಾ ಅಧಿಕಾರ ವ್ಯಾಮೋಹ ಎಂಬ ಮಾಯಾಜಾಲ. ಮೊನ್ನೆ ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ಆಗ್ರಹಿಸಿದ ವಚನಾನಂದ ಶ್ರೀಗಳಿಗೆ ವೇದಿಕೆ ಮೇಲೆಯೇ ಬಿಸಿ ಮುಟ್ಟಿಸಿದ್ದರು ಯಡಿಯೂರಪ್ಪ. ಸಂಪುಟ ವಿಸ್ತರಣೆ ವಿಳಂಬ ವಿಚಾರದಲ್ಲಿ ಯಡಿಯೂರಪ್ಪ ಅವರ ಒಳಬೇಗುದಿ ಯಾವ ಪ್ರಮಾಣದಲ್ಲಿದೆ ಅನ್ನೋದರ ಸುಸ್ಪಷ್ಟ ಉದಾಹರಣೆಯಂತಿತ್ತು ಈ ಇಡೀ ವೃತ್ತಾಂತ.

ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತದೆ ಎಂಬ ಮಾತು ಕೆಲವೇ ವರ್ಷಗಳ ಹಿಂದೆ ಚಾಲ್ತಿಯಲ್ಲಿತ್ತು. ಆದ್ರೀಗ ಆ ಗುಡುಗು ಅಡಗಿದಂತಿದೆ. ವರಿಷ್ಠರ ಪಾಲಿಗೆ ಅವರೀಗ ಒಂದು ರೀತಿ ಒಲ್ಲದ ಶಿಶು. ಯಡಿಯೂರಪ್ಪ ಅವರನ್ನು ಈ ಪರಿ ಸತಾಯಿಸುತ್ತಾ ಅಗೌರವ ತೋರುವುದು ಆ ಹಿರಿಯ ಮನಸ್ಸಿನ ಮೇಲೆ ಮಾಡಿದ ಅಮಾನುಷ ಹಲ್ಲೆ ಅನ್ನೋದು ಹಲವು ರಾಜಕೀಯ ಪಂಡಿತರ ಅಭಿಮತ.

ಆತ್ಮಾಭಿಮಾನಕ್ಕೆ ಪದೇ ಪದೇ ಪೆಟ್ಟು ಬೀಳುತ್ತಿದ್ದರೂ , ಯಡಿಯೂರಪ್ಪ ಅವರದ್ದೀಗ ಆತ್ಮಸಂಯಮ. ‘ಗಗನಚುಂಬಿ’ ಆಶೋತ್ತರಗಳು ಕಣ್ಣೆದುರೇ ನೆಲೆಸಮವಾಗುತ್ತಿದ್ದರೂ ನಾಳೆ ಎಲ್ಲಾ ಸರಿಹೋಗಬಹುದು ಎಂಬ ವಿಶ್ವಾಸದ ಲೆಕ್ಕಾಚಾರ ಯಡಿಯೂರಪ್ಪ ಅವರದ್ದು. ದಾವೋಸ್ ನಿಂದ ಬಂದ ಕೂಡಲೇ ಸಂಪುಟ ವಿಸ್ತರಣೆ ಅಂತ ಖಚಿತ ನುಡಿಗಳಲ್ಲಿ ಹೇಳಿ ಹೋಗಿದ್ದ ಯಡಿಯೂರಪ್ಪ , ಅಲ್ಲಿಂದ ಬಂದ್ಮೇಲೂ ಕೊಟ್ಟ ಮಾತು ಉಳಿಸಿಕೊಳ್ಳಲು ಹೆಣಗುತ್ತಿದ್ದಾರೆ. ಸಂಪುಟ ವಿಸ್ತರಣೆ ಎಂಬ ತಲ್ಲಣ ತಣಿಸಲು ಅವರಿಂದ ಸಾಧ್ಯವಾಗುತ್ತಿಲ್ಲ. ಈ ಕ್ಷಣದವರೆಗೂ ಹೈಕಮಾಂಡ್ ಸಮ್ಮತಿಗೆ ಕಾಯುತ್ತಲೇ ಇದ್ದಾರೆ. ಸೋತವರಿಗೂ ಮಂತ್ರಿ ಪದವಿ ಕೊಡಬೇಕೆಂಬ ಒತ್ತಾಯದ ಬೆನ್ನಲ್ಲೇ ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲರಿಗೂ ಸಚಿವ ಸ್ಥಾನ ಸಿಗಲ್ಲ ಎಂಬ ಮಾತು ಚರ್ವಿತಚರ್ವಣ ರೀತಿ ಕೇಳಿಬರ್ತಿದೆ. ಯಡಿಯೂರಪ್ಪ ಅವರ ವಿರೋಧಿ ಪಡೆಯ ಕುಟಿಲೋಪಾಯದ ಮುಕುಟಮಣಿಗಳು ಇದಕ್ಕೆ ಮಸಾಲೆ ಅರೆಯುತ್ತಿದ್ದಾರೆ.

yeddyurappa

ಇಂಥ ಜಟಿಲ ಹಾಗೂ ಕುಟಿಲ ಸಂದರ್ಭದಲ್ಲೇ.. ವಿಧಿ ವಿಪರೀತ, ವಿಧಿಯಾಘಾತ , ವಿಧಿವಿಲಾಸವೆನೆ ಇದೇನಹಾ..!? ಎಂಬ ಸತ್ಯಹರಿಶ್ಚಂದ್ರ ಚಿತ್ರದ ಹಾಡು ಪದೇ ಪದೇ ಸ್ಮರಣೆಗೆ ಬರುತ್ತಿದೆ.

ಗಾಳಿಪಟ: ಬೆಂಗ್ಳೂರು ಟು ಹುಬ್ಬಳ್ಳಿಯ ‘ಮೇಘರಥ’ ಮೆಗಾ ಮೀಟಿಂಗ್ ನಲ್ಲಿ ಸಚಿವ ಆಕಾಂಕ್ಷಿಗಳ ಪಟ್ಟಿ ನೋಡಿದ ಅಮಿತ್ ಶಾ, ಯಡಿಯೂರಪ್ಪ ಅವರಲ್ಲಿ ಪ್ರಶ್ನೆಯೊಂದನ್ನು ಮುಂದಿಟ್ಟರಂತೆ. “ಯಡಿಯೂರಪ್ಪಾಜಿ. ಈ ಪಟ್ಟಿಯಲ್ಲಿರೋ ಪೈಕಿ ಪಕ್ಕಾ ಮಾಸ್ ಲೀಡರ್ ಯಾರು? ವೋಟ್ ಬ್ಯಾಂಕ್ ವೀರ ಯಾರಾದ್ರೂ ಇದ್ದಾರಾ? ಸ್ಯಾಂಪಲ್ ಗೆ ಒಂದು ಹೆಸರು ಹೇಳಿ” ಅಂದ್ರಂತೆ. ಇದಕ್ಕೆ ಉತ್ತರಿಸಲಾರದೇ ತಬ್ಬಿಬ್ಬಾದ್ರಂತೆ ಯಡಿಯೂರಪ್ಪ.

CKB BSY

ಆಯ್ತು ಶಾಣಕ್ಯರೇ…ಕರ್ನಾಟಕ ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಬಿಟ್ಟು… ಒಬ್ಬ ಮಾಸ್ ಲೀಡರ್ ಹೆಸರೇಳಿ ನೋಡೋಣ. ಸೂಪರ್ ಮ್ಯಾನ್ , ಶಕ್ತಿಮಾನ್ , ಸ್ಪೈಡರ್ ಮ್ಯಾನ್ , ಹೀ ಮ್ಯಾನ್ , ಬ್ಯಾಟ್ ಮ್ಯಾನ್ ಯಾರಾದರೂ ಇದ್ದಾರಾ ಹೇಳಿ ಅಂತ ಬಿಎಸ್ ವೈ ಶಿಷ್ಯರು ಕೇಳ್ತಿದ್ದಾರಂತೆ. ಈ ಪ್ರಶ್ನೆ ಕಿವಿಮೇಲೆ ಬಿದ್ದರೂ ತುಟಿ ಪಿಟಕ್ ಅನ್ನದ ಅಮಿತ್ ಶಾ , ದಿಲ್ಲಿ ಎಲೆಕ್ಷನ್ ಕೆ ಬಾದ್ ಬೋಲೂಂಗಾ ಅಂತ ನುಣುಚಿಕೊಂಡ್ರಂತೆ.

[ಮೇಲಿನ ಲೇಖನದಲ್ಲಿ ಪ್ರಕಟವಾಗಿರುವುದು ಲೇಖಕರ ವೈಯಕ್ತಿಕ ಅಭಿಪ್ರಾಯ]

TAGGED:bjpcabinetkannada newskarnatakayeddyurappaಕರ್ನಾಟಕಬಿಜೆಪಿಬೆಂಗಳೂರುಯಡಿಯೂರಪ್ಪರಾಜಕೀಯ
Share This Article
Facebook Whatsapp Whatsapp Telegram

Cinema news

Kerala Story 2 is false propaganda poisonous work Chief Minister Pinarayi Vijayan
ಫೆ.27ಕ್ಕೆ ಕೇರಳ ಸ್ಟೋರಿ 2 ಬಿಡುಗಡೆ – ಚಿತ್ರ ಬಹಿಷ್ಕರಿಸುವಂತೆ ಪಿಣರಾಯಿ ಕರೆ
Cinema Latest South cinema Top Stories
MEJESTIC 2 1
ಮೆಜೆಸ್ಟಿಕ್- 2 ಟ್ರೈಲರ್ ರಿಲೀಸ್: ಮಹಾ ಕಲಾವಿದರ ಸಂಗಮ
Cinema Latest Sandalwood
Rakshas kannada Web Series
ತರುಣ್ ಸುಧೀರ್ ನಿರ್ಮಾಣದಲ್ಲಿ ರಾಕ್ಷಸ ವೆಬ್ ಸಿರೀಸ್
Cinema Latest Sandalwood Top Stories
Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood

You Might Also Like

Donald Trump gaza peace inauguration 1
Latest

6,7,8 ಆಯ್ತು ಈಗ ಭಾರತ, ಪಾಕ್‌ ಕಾದಾಟದಲ್ಲಿ 11 ಜೆಟ್‌ ಹೊಡೆದುರುಳಿಸಲಾಗಿದೆ ಎಂದ ಟ್ರಂಪ್‌

Public TV
By Public TV
28 minutes ago
food inspection officer attacked in davangere
Crime

ದಾವಣಗೆರೆ | ಪೊಲೀಸರಿಗೆ ಹೊಡೆದ ಪ್ರಕರಣ ಮಾಸುವ ಮುನ್ನವೇ ಮತ್ತೊಬ್ಬ ಅಧಿಕಾರಿ ಮೇಲೆ ಹಲ್ಲೆ

Public TV
By Public TV
29 minutes ago
dutch prime minister dick schoof arrives bengaluru 1
Bengaluru City

ಬೆಂಗಳೂರಿಗೆ ಆಗಮಿಸಿದ ನೆದರ್ ಲ್ಯಾಂಡ್ಸ್ ಪ್ರಧಾನಿ ಡಿಕ್ ಶೂಫ್  

Public TV
By Public TV
1 hour ago
Chikkamagaluru Police
Chikkamagaluru

ಸ್ನೇಹಿತೆ ಜೊತೆಗಿದ್ದ ಅಪ್ರಾಪ್ತನ ಮೇಲೆ ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್‌ಗಿರಿ – ನಾಲ್ವರು ಅರೆಸ್ಟ್‌

Public TV
By Public TV
1 hour ago
forest officials raid bhatkal 21 kg of deer meat found in fridge
Crime

ಭಟ್ಕಳ | ಅರಣ್ಯಾಧಿಕಾರಿಗಳ ದಾಳಿ – ಫ್ರಿಡ್ಜ್‌ಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ

Public TV
By Public TV
2 hours ago
Contractors Association Manjunath
Belgaum

ಬೆಳಗಾವಿಯಲ್ಲೇ 3,458 ಕೋಟಿ ಬಾಕಿ, ಪಾವತಿಸದಿದ್ರೆ ಬೆಂಗಳೂರಿನಲ್ಲಿ ಕುಟುಂಬದರೊಂದಿಗೆ ಪ್ರತಿಭಟನೆ: ಗುತ್ತಿಗೆದಾರರ ಸಂಘ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?