ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಾಮನಾಥ ರೈ ಅವರಿಗೆ ಗೃಹ ಇಲಾಖೆ ಸಿಗುತ್ತಿದ್ದರೂ ಕೊನೆಯ ಕ್ಷಣದಲ್ಲಿ ರಾಮಲಿಂಗಾ ರೆಡ್ಡಿ ಅವರಿಗೆ ಸಿಎಂ ಈ ಹುದ್ದೆಯ ಜವಾಬ್ದಾರಿಯನ್ನು ನೀಡಿದ್ದಾರೆ.
ರಮಾನಾಥ ರೈಗೆ ಗೃಹಖಾತೆ ನೀಡಿದರೆ ಉಗ್ರ ಹೋರಾಟ ಮಾಡುವುದಾಗಿ ಬಿಜೆಪಿ ಎಚ್ಚರಿಸಿತ್ತು. ಬಿಜೆಪಿಯ ಬೆದರಿಕೆ ಬಗ್ಗಿ ಸರ್ಕಾರ ಕೊನೇ ಕ್ಷಣದಲ್ಲಿ ರಾಮಲಿಂಗಾರೆಡ್ಡಿ ಅವರಿಗೆ ಗೃಹಖಾತೆ ಜವಾಬ್ದಾರಿ ನೀಡಿದ್ಯಾ ಎನ್ನುವ ಪ್ರಶ್ನೆ ಈಗ ಎದ್ದಿದೆ.
ಇಂದು ಏನಾಯ್ತು?
ಸ್ವತಃ ರಮಾನಾಥ ರೈ ಗೃಹಖಾತೆ ಬೇಡ ಎಂದಿದ್ದರಂತೆ. ನಾನು ಗೃಹ ಸಚಿವನಾದರೆ ಬಿಜೆಪಿ ಹಾಗೂ ಸಂಘ ಪರಿವಾರದ ನಾಯಕರು ಕರಾವಳಿಯ ಅವಳಿ ಜಿಲ್ಲೆಯಲ್ಲಿ ಮತ್ತಷ್ಟು ಕೊಮು ಗಲಭೆಗೆ ಪ್ರಚೋದನೆ ನೀಡಬಹುದು. ಹೀಗಾಗಿ, ಎರಡು ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವುದೇ ಕೆಲಸವಾಗುತ್ತದೆ ಎಂದು ಸಿಎಂ ಬಳಿ ರಮಾನಾಥ್ ರೈ ಹೇಳಿಕೊಂಡಿದ್ದರಂತೆ. ಹೀಗಾಗಿ ಮಧ್ಯಾಹ್ನವೇ ರಾಮಲಿಂಗಾರೆಡ್ಡಿ ಜೊತೆ ಸಿಎಂ ಒಂದು ಸುತ್ತಿನ ಚರ್ಚೆ ನಡೆಸಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ರಮಾನಾಥ ರೈಗೆ ಗೃಹ ಖಾತೆ: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದು ಹೀಗೆ
ಸರ್ಕಾರದ ಸಚಿವ ಸಂಪುಟದ ನೂತನ ಸಂಪುಟ ದರ್ಜೆ ಸಚಿವರಾಗಿ ಹೆಚ್ ಎಂ ರೇವಣ್ಣ,ಆರ್ ಬಿ ತಿಮ್ಮಾಪುರ ಮತ್ತು ಗೀತಾ ಮಹದೇವಪ್ರಸಾದ್ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು pic.twitter.com/ZFrl0un48g
— DIPR Karnataka (@KarnatakaVarthe) September 1, 2017
ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಎಚ್.ಎಂ.ರೇವಣ್ಣ, ಆರ್.ಬಿ.ತಿಮ್ಮಾಪುರ ಮತ್ತು ಗೀತಾ ಮಹದೇವಪ್ರಸಾದ್ ಅವರಿಗೆ ಅಭಿನಂದನೆಗಳು. pic.twitter.com/GFHvA3kP5j
— CM of Karnataka (@CMofKarnataka) September 1, 2017
ಸರ್ಕಾರದ ಸಚಿವ ಸಂಪುಟದ ನೂತನ ಸಂಪುಟ ದರ್ಜೆ ಸಚಿವರಾಗಿ ಹೆಚ್ ಎಂ ರೇವಣ್ಣ,ಆರ್ ಬಿ ತಿಮ್ಮಾಪುರ ಮತ್ತು ಗೀತಾ ಮಹದೇವಪ್ರಸಾದ್ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು pic.twitter.com/ZFrl0un48g
— DIPR Karnataka (@KarnatakaVarthe) September 1, 2017