Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಡಾಯದ ಆಸೆ ಬಣ ಮಾಡುವಷ್ಟರಲ್ಲೇ ನಿರಾಸೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Column | ಬಂಡಾಯದ ಆಸೆ ಬಣ ಮಾಡುವಷ್ಟರಲ್ಲೇ ನಿರಾಸೆ!

Column

ಬಂಡಾಯದ ಆಸೆ ಬಣ ಮಾಡುವಷ್ಟರಲ್ಲೇ ನಿರಾಸೆ!

Public TV
Last updated: February 5, 2020 1:28 pm
Public TV
Share
4 Min Read
Ramesh Jarkiholi BSY
SHARE

ಸುಕೇಶ್ ಡಿಎಚ್
ಅಲ್ಲಿ ಬಂಡಾಯದ ಬಾವುಟ ಹಾರಿಸಿ ಸೈ ಎನ್ನಿಸಿಕೊಂಡವರಿಗೆ ಇಲ್ಲೂ ನಮ್ಮದೆ ಆಟ ಎಂದುಕೊಂಡು ಎಡವಿದ್ದಾರೆ ನೂತನ ಶಾಸಕರುಗಳು. ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಬಂಡಾಯದ ಬಾವುಟವನ್ನೆ ಹಾರಿಸುತ್ತಾ ಕುಳಿತಿದ್ದ ಸಾಹುಕಾರ ರಮೇಶ್ ಜಾರಕಿಹೊಳಿಗೆ ಬಂಡಾಯದ ಬಾವುಟ ಹಾರಿಸುವುದೇ ಖಾಯಂ ಅಭ್ಯಾಸವಾದಂತಿದೆ. ಆದರೆ ಕಂಡ ಕಂಡಲ್ಲಿ ಬಂಡಾಯದ ಬಾವುಟ ಹಾರಿಸೋಕೆ ಇದು ಕಾಂಗ್ರೆಸ್ ಅಲ್ಲ ಬಿಜೆಪಿ ಅನ್ನೋ ಸತ್ಯ ಅಷ್ಟೇ ಬೇಗ ಅರ್ಥವಾದಂತಿದೆ. ಅಲ್ಲಿಗೆ ಸಚಿವ ಸ್ಥಾನಕ್ಕಾಗಿ ಬಂಡಾಯದ ಸಣ್ಣ ಬಾವುಟ ಎತ್ತಿಕಟ್ಟಲು ಮುಂದಾದ ಜಾರಕಿಹೊಳಿಗೆ ಬಂಡಾಯವಿರಲಿ ಕೊನೆ ಪಕ್ಷ ಚಿಕ್ಕದೊಂದು ಬಣ ಸೃಷ್ಟಿಸೋದು ಕಷ್ಟ ಬಿಜೆಪಿಯಲ್ಲಿ ಅನ್ನೋದು ಸ್ಪಷ್ಟವಾಗಿದೆ. ಆದ್ದರಿಂದ ಸಮಾನ ಮನಸ್ಕ 4-5 ಶಾಸಕರನ್ನ ಕಟ್ಟಿಕೊಂಡು ದೇವಸ್ಥಾನ ಸುತ್ತುವುದರಲ್ಲಿ ಸುಸ್ತಾಗಿ ಕುಳಿತಿದ್ದಾರೆ. ಬೇಕೆಂದಾಗ ಬೇಕಾದ ಸಚಿವ ಸ್ಥಾನ ಸಿಕ್ಕಿ ಬಿಡುತ್ತೆ ಇಡೀ ಬಿಜೆಪಿ ಸರ್ಕಾರವೇ ನಮ್ಮ ಕೈಯಲ್ಲಿದೆ ಅನ್ನೋ ಭ್ರಮೆಯೂ ಕಳಚಿದಂತಿದೆ.

SUKESH STRAIGHT HIT

ಹಾಗೇ ನೋಡೋದಾದರೆ ಎಲ್ಲಾ ಅನರ್ಹ ಶಾಸಕರು ಗೆದ್ದ 24 ಗಂಟೆಯಲ್ಲಿ ಸಚಿವರಾಗ್ತಾರೆ ಅಂತ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪ ಚುನಾವಣಾ ಪ್ರಚಾರದಲ್ಲಿ ಘೋಷಿಸಿದ್ದರು. ಗೆದ್ದ ಹುಮ್ಮಸ್ಸಿನಲ್ಲಿ ಎಲ್ಲರ ಶಾಸಕರು 24 ಗಂಟೆಯಲ್ಲಿ ಸಚಿವರಾಗುವ ಕನಸು ನೂತನ ಶಾಸಕರದ್ದಾಗಿತ್ತು. ಆದರೆ ಗೆಲುವಿನ ಸಂಭ್ರಮಾಚರಣೆ ಮುಗಿಯುವುದರೊಳಗೆ ನೂತನ ಶಾಸಕರಿಗೆ ಒಂದಂತು ಖಚಿತವಾಗಿತ್ತು. 24 ಗಂಟೆಯೊಳಗಿನ ಸಚಿವ ಸ್ಥಾನದ ಕನಸು ನನಸಾಗಲ್ಲ ಅನ್ನೋದು.

ಹಾಗೆ ನೋಡಿದರೆ ಸಿಎಂ ಯಡಿಯೂರಪ್ಪ ತಮ್ಮ ಸರ್ಕಾರವನ್ನ ಸೇಫ್ ಝೋನ್ ಗೆ ತಂದವರನ್ನ ಕೂಡಲೇ ಸಚಿವರನ್ನಾಗಿ ಮಾಡಲು ತುದಿಗಾಲಲ್ಲಿ ನಿಂತಿದ್ದರು. ಆದರೆ ಬಿಜೆಪಿ ಹೈಕಮಾಂಡ್ ಅಷ್ಟು ಸುಲಭಕ್ಕೆ ಹೊಸಬರ ತಾಳಕ್ಕೆ ಕುಣಿವಷ್ಟು ದುರ್ಬಲವಾಗಿಲ್ಲ ಅನ್ನೋದು ನೂತನ ಶಾಸಕರಿಗೆ ಅರ್ಥವಾಗುವಷ್ಟರಲ್ಲಿ ತಿಂಗಳು ಕಳೆದಿದೆ. ಇದನ್ನ ಬಹುಬೇಗ ಅರ್ಥ ಮಾಡಿಕೊಂಡು ಸೈಲೆಂಟಾದವರು ಎಸ್.ಟಿ.ಸೋಮಶೇಖರ್, ಡಾ.ಸುಧಾಕರ್, ಭೈರತಿ ಬಸವರಾಜು, ಗೋಪಾಲಯ್ಯ ಹಾಗೂ ನಾರಾಯಣಗೌಡ. ಮೌನವಾಗಿದ್ದಷ್ಟು ಅನುಕೂಲಕರ ಅನ್ನೋದು ಅವರಿಗೆ ಅರ್ಥವಾಗಿದ್ದು. ಉಳಿದ ಅನರ್ಹರು ಹಾಗೂ ಅರ್ಹರು ಇಬ್ಬರಿಗು ಅರ್ಥವಾಗಲಿಲ್ಲ ತಾವು ಹೇಗಿರಬೇಕು ಅನ್ನೋದು. ಆದ್ದರಿಂದ ಕೀರಲು ಧ್ವನಿಯಲ್ಲಾದರು ಬೊಬ್ಬೆ ಹೊಡೆದು ಸದ್ದು ಮಾಡಲು ಮುಂದಾಗಿ ಧ್ವನಿ ಹೊರ ಬರದೆ ಗಂಟಲು ಕಟ್ಟಿದಂತಾಗಿ ಉಸಿರು ಎಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.

ಬಂಡಾಯದ ನಾಯಕತ್ವದ ನೇತೃತ್ವ ವಹಿಸಿಕೊಂಡು ಇಲ್ಲೂ ಆಟ ಕಟ್ಟಿದರೆ ಸಚಿವ ಸ್ಥಾನ ಬಹುಬೇಗ ಸಿಕ್ಕಿಬಿಡುತ್ತೆ ಭ್ರಮೆಗೆ ರಮೇಶ್ ಜಾರಕಿಹೋಳಿ ಅಂಡ್ ಟೀಂ ಸಚಿವ ಸ್ಥಾನ ಕೊಡದಿರವುದಕ್ಕೆ ನಮಗು ಅಸಮಧಾನವಿದೆ ಅನ್ನೋದನ್ನ ಬಿಂಬಿಸುವ ಪ್ರಯತ್ನಕ್ಕೆ ಮುಂದಾಯ್ತು. ರಮೇಶ್ ಜಾರಕಿಹೊಳಿ ಅವರನ್ನು ಸದಾ ನೆರಳಿನಂತೆ ಹಿಂಬಾಲಿಸುವ ಮಹೇಶ್ ಕುಮಟಳ್ಳಿ ಹಾಗೂ ಶ್ರೀಮಂತ ಪಾಟೀಲ್ ಬಿಟ್ಟರೆ ಮೂರನೆಯವರನ್ನ ಒಟ್ಟುಗೂಡಿಸಲು ರಮೇಶ್ ಜಾರಕಿಹೊಳಿ ಕೈಯಲ್ಲಿ ಆಗಲಿಲ್ಲ. ಅಂತು ಇಂತು ಜೊತೆ ಸೇರಿದ ಮಾಜಿ ಸಚಿವ ಆರ್.ಶಂಕರ್ ಜೊತೆಯಲ್ಲಿ ದೇವಸ್ಥಾನಕ್ಕೆ ಹೋಗಿ ಬರಲಷ್ಟೇ ಸೀಮಿತವಾದರು. ಆದರೆ ಹಿಂದೆ ಕಾಂಗ್ರೆಸ್ ನಲ್ಲಿ ಇದ್ದಾಗ ಸೇರುತ್ತಿದ್ದ ಹಾಗೆ ಒಂದೇ ಒಂದು ಬಂಡಾಯದ ಸಭೆ ನಡೆಸಲು ಸಾಧ್ಯವಾಗಲೇ ಇಲ್ಲ.

rebel congress jds resigns e 1000x582 2

ಇನ್ನೊಂದು ಕಡೆ ಸೋತ ವಿಶ್ವನಾಥ್ ಹಾಗೂ ಎಂ.ಟಿ.ಬಿ.ನಾಗರಾಜ್ ತಮ್ಮದೆ ನೆಲೆಯಲ್ಲಿ ಸಚಿವ ಸ್ಥಾಕ್ಕಾಗಿ ಲಾಬಿ ಆರಂಭಿಸಿದರು. ಆದರೆ ಯಾವುದೇ ಬಣದ ಚಟುವಟಿಕೆ ನಡೆಸದೇ ಅಂತರ ಕಾಯ್ದುಕೊಂಡರು. ಅಲ್ಲಿಗೆ ಸಾಹುಕಾರನಿಗೆ ಒಂದಂತು ಸ್ಪಷ್ಟವಾಗಿತ್ತು ಅಂದುಕೊಂಡಂತೆ ಶಾಸಕರನ್ನ ಒಟ್ಟುಗೂಡಿಸಿಕೊಂಡು ಹೆದರಿಸಲು ಇದು ಕಾಂಗ್ರೆಸ್ ಅಲ್ಲಾ ಇದು ಬಿಜೆಪಿ ಅನ್ನೋದು. ಗೆದ್ದವರಲ್ಲೆ ಸೈಲೆಂಟಾಗಿ ಕಾದು ನೋಡುವವರ ಬಣ ಒಂದಾದರೆ ಏನಾದರೂ ಮಾಡಿ ಸಚಿವ ಸ್ಥಾನ ಪಡೆಯಬೇಕು ಅದಕ್ಕಾಗಿ ಒಗ್ಗಟ್ಟಿನ ಪ್ರದರ್ಶನ ಮಾಡಬೇಕು ಎಂದು ಸರ್ಕಸ್ ನಡೆಸ ಹೊರಟವರದು ಇನ್ನೊಂದು ಬಣವಾಯ್ತು.

ಚುನಾವಣೆಗೆ ನಿಲ್ಲದ ಶಂಕರ್ ಈ ಹಿಂದೆ ಕಾಂಗ್ರೆಸ್ ಜೊತೆ ಕೈ ಜೋಡಿಸಿದಾಗ ಮಾಡಿಕೊಂಡ ಎಡವಟ್ಟಿನಂತೆ ಈಗಲು ಎಡವಟ್ಟಿನ ಹೆಜ್ಜೆ ಇಡತೊಡಗಿದ್ದಾರೆ ಅನ್ನೋದರಲ್ಲಿ ಅನುಮಾನವೇ ಇಲ್ಲ. ಒಮ್ಮೆ ನನಗೆ ಸಿಎಂ ಯಡಿಯೂರಪ್ಪ ಮಾತು ಕೊಟ್ಟಿದ್ದಾರೆ ನನ್ನನ್ನ ಸಚಿವರನ್ನಾಗಿ ಮಾಡುತ್ತಾರೆ ಆ ನಂಬಿಕೆ ನನಗಿದೆ ಎನ್ನುತ್ತಾ, ಮತ್ತೊಂದು ಕಡೆ ಕದ್ದುಮುಚ್ಚಿ ರಮೇಶ್ ಜಾರಕಿಹೊಳಿ ಭೇಟಿಯಾಗುತ್ತ ಹೀಗಿದ್ದರೆ ಹೇಗೆ, ಬಂಡಾಯದ ಬಾವುಟ ಹಾರಿಸಿದರೆ ಹೇಗೆ ಅಂತ ಗಳಿಗೆಗೊಂದು ಅವತಾರ ತಾಳಿಕೊಂಡು ಓಡಾಡುತ್ತಿದ್ದಾರೆ. ಆದರೆ ಸೋತ ವಿಶ್ವನಾಥ್ ಹಾಗೂ ಎಂಟಿಬಿ ಮಾತ್ರ ನಮ್ಮದೆ ಪ್ರತ್ಯೇಕ ಅಸ್ತಿತ್ವ ಎನ್ನುವಂತೆ ನಡೆದುಕೊಂಡು ತಮ್ನ ಸೀನಿಯಾರಿಟಿ ಮೇಲೆ ಸಚಿವ ಸ್ಥಾನ ಪಡೆಯುವ ಪ್ರತ್ಯೇಕ ಕಸರತ್ತು ಮುಂದುವರಿಸಿದ್ದಾರೆ.

amit shah jp nadda modi

ಮುಖ್ಯಮಂತ್ರಿ ಯಡಿಯೂರಪ್ಪರಿಗೆ ತಮಗಾಗಿ ರಿಸ್ಕ್ ತಗೆದುಕೊಂಡು ರಾಜೀನಾಮೆ ಕೊಟ್ಟು ಗೆದ್ದು ಬಂದ ಎಲ್ಲಾ 11 ಜನರನ್ನು ಮಂತ್ರಿ ಮಾಡಬೇಕು ಅನ್ನೋ ಆಸೆ ಇದ್ದಂತಿದೆ. ಆದರೆ ಬಿಜೆಪಿ ಹೈಕಮಾಂಡ್ ಅಷ್ಟು ಸುಲಭಕ್ಕೆ ಹೊಸಬರಿಗೆ ಮಣೆ ಹಾಕೋದು ಅನುಮಾನ. ಹೊಸಬರಲ್ಲಿ 11ರಲ್ಲಿ 10 ಜನರಿಗೆ ಬಿಜೆಪಿ ಹೈಕಮಾಂಡ್ ಮಣೆ ಹಾಕಲು ನಿರ್ಧರಿಸಿದೆ. ಆದರೆ ಒಂದಂತೂ ಸ್ಪಷ್ಟ ಯಾವ ಜೋಷ್ ನಲ್ಲಿ ಸಮ್ಮಿಶ್ರ ಸರ್ಕಾರ ಕೆಡವಿ ಬಿಜೆಪಿ ಪಾಳಯಕ್ಕೆ ಎಂಟ್ರಿ ಕೊಟ್ಟರೋ ಆ ಜೋಷ್ ಈಗ ಜಾರಕಿಹೊಳಿ ಅಂಡ್ ಟೀಂ ನಲ್ಲಿ ಇಲ್ಲ. ಕಾಂಗ್ರೆಸ್ ನಲ್ಲಿ ಹಾರಿಸಿದಂತೆ ಬಂಡಾಯದ ಬಾವುಟ ಹಾರಿಸಿ ಸವಾಲು ಎಸೆಯುವ ಆಸೆ ಇದ್ದರೂ ಜೊತೆಗಿದ್ದ ಶಾಸಕರೇ ಝಂಡಾ ಹಿಡಿಯಲು ಸಿದ್ಧರಿಲ್ಲ. ಆದರೂ ಬಂಡಾಯ ಶಾಸಕರ ನೇತೃತ್ವ ವಹಿಸಿದ್ದವರಿಗೆ ಈಗ ಅದೆಲ್ಲಾ ಮುಗಿದು ಹೋದ ಕಥೆ ಅನ್ನೋದು ಮನವರಿಕೆ ಆದಂತಿದೆ. ಬಂಡಾಯ ಎದ್ದವರಂತೆ ನಟಿಸುವ ಆಸೆ ಇದ್ದರು ಬಂಡಾಯವಿರಲಿ ಬಣ ತೋರಿಸೋಕು ಜೊತೆಗೆ ಶಾಸಕರಿಲ್ಲ ಅನ್ನುವ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಅಂಗಳದಲ್ಲಿ ಆಡಿದ ಆಟವನ್ನ ಬಿಜೆಪಿ ಅಂಗಳದಲ್ಲಿ ಆಡಲು ಹೋದರೆ ಅಸ್ತಿತ್ವವೇ ಅಲ್ಲಾಡುವ ಭೀತಿಯಲ್ಲಿ ಮಾಜಿ ಬಂಡಾಯಗಾರರು ಒಳಗೊಳಗೆ ಉಗುಳು ನುಂಗಿಕೊಳ್ಳುವಂತಾಗಿರುವುದಂತೂ ಸತ್ಯ.

TAGGED:bjpBJP High Commandkannada newskarnatakaramesh jarkiholiಕಾಂಗ್ರೆಸ್ಬಿಜೆಪಿಬಿಜೆಪಿ ಹೈಕಮಾಂಡ್ಬೆಳಗಾವಿಯಡಿಯೂರಪ್ಪರಮೇಶ್ ಜಾರಕಿಹೊಳಿ
Share This Article
Facebook Whatsapp Whatsapp Telegram

Cinema news

Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood
rashmika vijay devarakonda geetha govindam
ರಶ್ಮಿಕಾ, ವಿಜಯ್‌ ಮದುವೆಗೆ ಬೆಂಗಳೂರಿನಿಂದ ಹೂ ಪೂರೈಕೆ
Bengaluru City Cinema Latest Main Post Sandalwood South cinema Top Stories

You Might Also Like

Narendra Modi breaks protocol goes to airport to welcome UAE President Sheikh Mohamed bin Zayed Al Nahyan
Latest

ಮೋದಿ ಜೊತೆ ಮಾತುಕತೆ ನಡೆದ ಕೆಲ ದಿನಗಳಲ್ಲೇ ಪಾಕ್‌ ವಿಮಾನ ನಿಲ್ದಾಣ ನಿರ್ವಹಣೆಯಿಂದ ಹಿಂದೆ ಸರಿದ ಯುಎಇ

Public TV
By Public TV
37 minutes ago
BMTC bus
Bengaluru City

ಟಿಕೆಟ್ ಇಲ್ಲದೇ ಬಸ್ಸಿನಲ್ಲಿ ಪ್ರಯಾಣಿಸಿದವರಿಗೆ ಬಿಸಿ – 6.34 ಲಕ್ಷ ದಂಡ ವಸೂಲಿ

Public TV
By Public TV
52 minutes ago
Udupi Tourist Boat
Crime

ಉಡುಪಿಯಲ್ಲಿ ಮಗುಚಿದ ಬೋಟ್ – ಮೈಸೂರಿನ ಇಬ್ಬರು ಸಾವು, ಇನ್ನಿಬ್ಬರು ಗಂಭೀರ

Public TV
By Public TV
1 hour ago
𝗙𝗜𝗥𝗦𝗧 𝗛𝗨𝗡𝗗𝗥𝗘𝗗 𝗜𝗡 𝗧𝗛𝗘 𝗪𝗣𝗟 Nat Sciver Brunt makes history for Mumbai Indians against RCB 1
Cricket

WPL ಮೊದಲ ಶತಕ – ಸ್ಫೋಟಕ ಬ್ಯಾಟಿಂಗ್‌, ಇತಿಹಾಸ ಸೃಷ್ಟಿಸಿದ ಸಿವರ್ ಬ್ರಂಟ್

Public TV
By Public TV
2 hours ago
Vijayapura Robbery
Crime

ಹಾಡಹಗಲೇ ಪಿಸ್ತೂಲ್ ತೋರಿಸಿ ದರೋಡೆ – 205 ಗ್ರಾಂ ಚಿನ್ನಾಭರಣ, 1 ಕೆಜಿ ಬೆಳ್ಳಿ ದೋಚಿದ ಖದೀಮರು

Public TV
By Public TV
2 hours ago
Bumper gift from the government to the Prajwal Ritti family of Lakkundi
Districts

ಲಕ್ಕುಂಡಿಯ ನಿಧಿ ಕುಟುಂಬಕ್ಕೆ ಸರ್ಕಾರದಿಂದ ಬಂಪರ್‌ ಗಿಫ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?